Homeಮುಖಪುಟತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಆರ್‌ಎಸ್‌ ನೀಡಿರುವ ಮುಸ್ಲಿಂ ಮೀಸಲಾತಿಯನ್ನು ಬಿಜೆಪಿ ಕೊನೆಗೊಳಿಸಲಿದೆ ಮತ್ತು ಅದನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುಸ್ಲಿಮರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ರಕ್ಷಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈ ಮೊದಲು ಹೇಳಿದ್ದರು. ಅವಿಭಜಿತ ರಾಜ್ಯದಲ್ಲಿ ಅಂದಿನ ಕಾಂಗ್ರೆಸ್ ಸಿಎಂ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರು ಪ್ರಾರಂಭಿಸಿದ 4% ಮುಸ್ಲಿಂ ಕೋಟಾವನ್ನು ಷಾ ಅಥವಾ ಪ್ರಧಾನಿ ನರೇಂದ್ರ ಮೋದಿ ರದ್ದುಗೊಳಿಸಲು ಸಾಧ್ಯವಿಲ್ಲ. ಬಿಜೆಪಿಯ ಟೀಕೆಗಳ ನಡುವೆ ರಾಜ್ಯದ ಹಿಂದಿನ ಬಿಆರ್‌ಎಸ್ ಸರ್ಕಾರವೂ ಮೀಸಲಾತಿಯನ್ನು ತೆಗೆದುಹಾಕಲು ನಿರಾಕರಿಸಿತ್ತು. 4% ಮುಸ್ಲಿಂ ಮೀಸಲಾತಿ ಧರ್ಮದ ಆಧಾರದ ಮೇಲೆ ಅಲ್ಲ. ಅದು ಸಾಮಾಜಿಕ-ಆರ್ಥಿಕ ಸ್ಥಾನಮಾನದ ಆಧಾರದ ಮೇಲೆ ಎಂದು ನವೆಂಬರ್‌ನಲ್ಲಿ ಅಂದಿನ ರಾಜ್ಯ ಸಚಿವ ಕೆ.ಟಿ.ರಾಮರಾವ್ ಹೇಳಿದ್ದರು.

ಮೇದಕ್ ಲೋಕಸಭಾ ಕ್ಷೇತ್ರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಕಾಂಗ್ರೆಸ್ ಮತ್ತು ಬಿಆರ್‌ಎಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಇಲ್ಲಿ ಬಿಆರ್‌ಎಸ್ ಮತ್ತು ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಂಗ್ರೆಸ್ ತೆಲಂಗಾಣ ಮತ್ತು ದೆಹಲಿಯನ್ನು ಎಟಿಎಂ ಮಾಡಿದೆ. ಕಾಳೇಶ್ವರಂ ಹಗರಣವಾಗಲಿ, ಭೂ ಹಗರಣವಾಗಲಿ ಕಾಂಗ್ರೆಸ್ ಪಕ್ಷವು ಬಿಆರ್‌ಎಸ್ ಆಡಳಿತದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ. ಬಿಆರ್‌ಎಸ್ ಮತ್ತು ಕಾಂಗ್ರೆಸ್ ಎರಡೂ ಕೈಜೋಡಿಸಿವೆ. ಮೋದಿ ಜಿ ಅವರನ್ನು ಮೂರನೇ ಅವಧಿಗೆ ಆಯ್ಕೆ ಮಾಡಿ ಮೋದಿ ಜಿ ತೆಲಂಗಾಣವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್‌ ಶಾ, ಕಾಂಗ್ರೆಸ್ ಮತ್ತು ಬಿಆರ್‌ಎಸ್ ಮಜ್ಲಿಸ್‌ಗೆ ಹೆದರಿ ತೆಲಂಗಾಣ ವಿಮೋಚನಾ ದಿನವನ್ನು ಎಂದಿಗೂ ಆಚರಿಸುವುದಿಲ್ಲ. ನಾವು ಮಜ್ಲಿಸ್‌ಗೆ ಹೆದರುವುದಿಲ್ಲ, ತೆಲಂಗಾಣ ವಿಮೋಚನಾ ದಿನವನ್ನು ಆಚರಿಸಲು ಬಿಜೆಪಿ ನಿರ್ಧರಿಸಿದೆ. ಕಾಂಗ್ರೆಸ್ ಮತ್ತು ಬಿಆರ್‌ಎಸ್ ವಿಸ್ತರಿಸಿದ ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಆರ್‌ಎಸ್‌ ಎಂದಿಗೂ ರಾಮಮಂದಿರ ನಿರ್ಮಾಣವನ್ನು ಬಯಸಲಿಲ್ಲ. ನರೇಂದ್ರ ಮೋದಿ  ಅವರು 370ನೇ ವಿಧಿಯನ್ನು ರದ್ದುಗೊಳಿಸಿದ್ದಾರೆ ಮತ್ತು ಕಾಶ್ಮೀರವನ್ನು ಶಾಶ್ವತವಾಗಿ ಭಾರತದೊಂದಿಗೆ ಸಂಯೋಜಿಸಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು 10 ವರ್ಷಗಳಲ್ಲಿ ದೇಶವನ್ನು ದೀರ್ಘಕಾಲದಿಂದ ಕಾಡುತ್ತಿದ್ದ ಸಮಸ್ಯೆಗಳನ್ನು ಪರಿಹರಿಸಿದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಲ್ಲಿ ಮೇ 13ರಂದು ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂ.4ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಇದನ್ನು ಓದಿ: ಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...