Homeಮುಖಪುಟಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

- Advertisement -
- Advertisement -

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಮತ್ತಷ್ಟು ಉಪವರ್ಗೀಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂಬ 2004ರ ತೀರ್ಪಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಸಂವಿಧಾನ ಪೀಠವು, ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪವರ್ಗೀಕರಣ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳು ಹೊಂದಿವೆಯೇ ಎಂಬ ಕಾನೂನಿನ ಪ್ರಶ್ನೆಯ ಬಗ್ಗೆ ಪರಿಶೀಲನೆ ಆರಂಭಿಸಿದೆ. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಮಿಶ್ರಾ ಅವರನ್ನೊಳಗೊಂಡ ಪೀಠವು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಪ್ರಮುಖ ಅರ್ಜಿ ಸೇರಿದಂತೆ 23 ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಅದು ‘ವಾಲ್ಮೀಕಿಗಳು’ ಮತ್ತು ‘ಮಝಬಿ ಸಿಖ್’ ಜಾತಿಗಳಿಗೆ ಸಾರ್ವಜನಿಕ ಉದ್ಯೋಗಗಳಲ್ಲಿ ಎಸ್ಸಿ ಕೋಟಾದೊಳಗೆ 50% ಮೀಸಲಾತಿಗೆ  ಆದ್ಯತೆ ನೀಡುತ್ತಿತ್ತು. ಇವಿ ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನ 2004ರ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ತೀರ್ಪನ್ನು ಈ ನಿಬಂಧನೆ ಉಲ್ಲಂಘಿಸಿದೆ ಎಂಬುದನ್ನೂ ಒಳಗೊಂಡಂತೆ, ಈ ನಿಬಂಧನೆಯು ಅಸಂವಿಧಾನಿಕ ಎಂದು ಹೈಕೋರ್ಟ್ ಹೇಳಿತ್ತು.

ಪರಿಶಿಷ್ಟ ಜಾತಿಗಳು ಎಂದು ಪರಿಗಣಿತವಾಗಿರುವ ಜಾತಿಗಳನ್ನು, ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತೆಗೆಯುವ ಅಧಿಕಾರ ಇರುವುದು ಸಂಸತ್ತಿಗೆ ಮಾತ್ರವೇ ವಿನಾ ವಿಧಾನಸಭೆಗಳಿಗೆ ಇಲ್ಲ ಎಂದು 2004ರ ತೀರ್ಪಿನಲ್ಲಿ ಹೇಳಲಾಗಿದೆ. 2004ರ ತೀರ್ಪು ತಮಗೆ ಅನ್ವಯಿಸುವುದಿಲ್ಲ ಎಂದು ಕೂಡ ಪಂಜಾಬ್ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿತ್ತು. ಪಂಜಾಬ್ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠವು, ಚಿನ್ನಯ್ಯ ತೀರ್ಪಿನಲ್ಲಿ ಹೇಳಿದ್ದಕ್ಕೆ ಭಿನ್ನವಾದ ನಿಲುವು ತಾಳಿತು. ಇಡೀ ವಿಚಾರವನ್ನು 7 ಅಥವಾ ಅದಕ್ಕೂ ಹೆಚ್ಚಿನ ಸಂಖ್ಯೆಯ ನ್ಯಾಯಮೂರ್ತಿಗಳನ್ನು ಹೊಂದಿರುವ ವಿಸ್ತೃತವಾದ ನ್ಯಾಯಪೀಠವು ವಿಚಾರಣೆ ನಡೆಸಿ ತೀರ್ಪು ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಕರಣದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ಒಳಗೆ ಉಪ-ವರ್ಗೀಕರಣಕ್ಕೆ ಅನುಮತಿಸಲಾಗಿದೆಯೇ ಎಂಬುವುದನ್ನು ಕೋರ್ಟ್‌ ಗಮನಿಸಿದೆ. ಒಬಿಸಿಗಳ ವಿಷಯದಲ್ಲಿ ಇಂದ್ರ ಸ್ವಾಹ್ನಿ (ಮಂಡಲ್ ಪ್ರಕರಣ) ತೀರ್ಪು ಪ್ರಕಾರ ಹೆಚ್ಚು ಹಿಂದುಳಿದವರು ಮೀಸಲಾತಿಯ ಪ್ರಯೋಜನವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಉಪ-ವರ್ಗೀಕರಣ ಮಾಡಬಹುದು ಎಂದು ಪೀಠ ಹೇಳಿದೆ. ಆದರೆ ಇದನ್ನು ಎಸ್‌ಸಿ ಮತ್ತು ಎಸ್‌ಟಿಗಳಿಗೆ ವಿಸ್ತರಿಸಲಾಗಿಲ್ಲ ಎಂದು ಕೋರ್ಟ್‌ ಗಮನಿಸಿದೆ.

SC ವರ್ಗದೊಳಗೆ ಉಪ-ಜಾತಿಗಳನ್ನು ಗುರುತಿಸಲು ಮತ್ತು ತುಲನಾತ್ಮಕವಾಗಿ ಅಂಚಿನಲ್ಲಿರುವವರು ಮತ್ತು ತುಲನಾತ್ಮಕವಾಗಿ ಹೆಚ್ಚು ಅಂಚಿನಲ್ಲಿರುವವರು ಎಂಬ ಕಾರಣಕ್ಕಾಗಿ ಅವರಿಗೆ ಹೆಚ್ಚಿನ ಮೀಸಲಾತಿ ನೀಡಲು ರಾಜ್ಯಗಳಿಗೆ ಅಧಿಕಾರ ನೀಡಲಾಗಿದೆ ಪಂಜಾಬ್‌ ಸರ್ಕಾರವು ವಾದವನ್ನು ಮಂಡಿಸಿದೆ.

ಪಂಜಾಬ್‌ನ ಹೆಚ್ಚುವರಿ ಅಡ್ವೊಕೇಟ್-ಜನರಲ್ ಶದನ್ ಫರಾಸತ್ ಅವರು ಉಪವರ್ಗೀಕರಣವು ಮೀಸಲಾತಿಯ ಪರಿಣಾಮಕಾರಿತ್ವದ ಒಂದು ವಿಧಾನವಾಗಿದೆ, ಇದರಿಂದ ಎಲ್ಲಾ ಹಿಂದುಳಿದ ವರ್ಗಗಳಿಗೆ ಯೋಜನೆಯ ಪ್ರಯೋಜನಗಳು ತಲುಪಬಹುದು. ನಿಜವಾದ ದಕ್ಷತೆ ಏನೆಂದು ನಾವು ಇನ್ನೂ ನೋಡಿಲ್ಲ ಏಕೆಂದರೆ ನಾವು ಇನ್ನೂ ನಿಜವಾದ ಸಮಾನತೆಯನ್ನು ತಲುಪಿಲ್ಲ, ರಾಜ್ಯವು ದುರ್ಬಲ ವ್ಯಕ್ತಿಗೆ ಸಹಾಯ ಮಾಡುತ್ತಿದೆ. ರಾಜ್ಯವು ಎಲ್ಲರನ್ನೂ ಒಳಗೊಳ್ಳಬೇಕು ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳಿಗೆ 50% ಮೀಸಲಾತಿ ನೀಡುವ ಮೂಲಕ, ನೀವು ಸಾಮಾನ್ಯ ವರ್ಗದ ಜನರನ್ನು 50% ಮೀಸಲಾತಿಯಿಂದ ಹೊರಗಿಡಲಿಲ್ಲವೇ? ಎಂದು ನ್ಯಾಯಮೂರ್ತಿ ಗವಾಯಿ ಈ ವೇಳೆ ಪ್ರಶ್ನಿಸಿದ್ದಾರೆ.

ಒಮ್ಮೆ ಒಬ್ಬ ವ್ಯಕ್ತಿಯು IPS ಅಥವಾ IAS ಆದರೆ, ಅವನ ಮಕ್ಕಳು ಹಳ್ಳಿಯಲ್ಲಿ ವಾಸಿಸುವ ಅವನ ಸಮುದಾಯದ ಇತರ ಮಕ್ಕಳು ಎದುರಿಸುವಂತಹ ಅನಾನುಕೂಲತೆಗಳನ್ನು ಎದುರಿಸುವುದಿಲ್ಲ, ಆದರೂ ಅವನ ಕುಟುಂಬವು ಮೀಸಲಾತಿಯ ಪ್ರಯೋಜನಗಳನ್ನು ಪಡೆಯುತ್ತದೆ ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಪೀಠವು ಅಭಿಪ್ರಾಯ ವ್ಯಕ್ತಡಿಸಿದೆ. ಪ್ರಬಲ ಅಥವಾ ಪ್ರಭಾವಿ ಗುಂಪನ್ನು ಪಟ್ಟಿಯಿಂದ ಹೊರಗಿಡಬೇಕೇ ಅಥವಾ ಬೇಡವೇ ಎಂಬುದನ್ನು ಸಂಸತ್ತು ನಿರ್ಧರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...