Homeಮುಖಪುಟ'ಕೊನೆ ಉಸಿರಿನವರೆಗೂ ಹೋರಾಡುತ್ತೇನೆ': ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

ಜೆಎನ್‌ಯು ವಿದ್ಯಾರ್ಥಿಯಾಗಿದ್ದ ನಜೀಬ್ ನಾಪತ್ತೆಯಾಗಿ 9 ವರ್ಷ ಕಳೆದರೂ ಸುಳಿವು ಸಿಕ್ಕಿಲ್ಲ. ಪ್ರಕರಣ ಮುಚ್ಚಲು ಸಿಬಿಐಗೆ ಕೋರ್ಟ್ ಅನುಮತಿ ನೀಡಿದೆ.

- Advertisement -
- Advertisement -

“ನನ್ನ ಮಗನನ್ನು ಹುಡುಕಲು ಕೊನೆ ಉಸಿರಿನವರೆಗೆ ಹೋರಾಡುತ್ತೇನೆ. ಇದಕ್ಕಾಗಿ ದೇಶದ ಯಾವುದೇ ನ್ಯಾಯಾಲದ ಮೆಟ್ಟಿಲೇರಲು ನಾನು ಸಿದ್ದ. ನಾನು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇನೆ” ಎಂದು 9 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸ್ ಮಂಗಳವಾರ (ಜುಲೈ 1, 2025) ಹೇಳಿದ್ದಾರೆ.

ಅಕ್ಟೋಬರ್ 15,2016ರಂದು ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಜೀಬ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಪ್ರಕರಣದ ಮುಕ್ತಾಯ ವರದಿಯನ್ನು 2018ರಲ್ಲಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್ 30,2025) ಸ್ವೀಕರಿಸಿದೆ.

“ಇಲ್ಲಿಯವರೆಗೆ, ದೆಹಲಿ ಪೊಲೀಸರು ಅಥವಾ ಸಿಬಿಐಗೆ ನನ್ನ ಮಗನನ್ನು ಥಳಿಸಿ ನಂತರ ಅವನು ಕಣ್ಮರೆಯಾಗುವಂತೆ ಮಾಡಿದ ಎಬಿವಿಪಿ ಗೂಂಡಾಗಳನ್ನು ಬಂಧಿಸಲು ಅಥವಾ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ” ಎಂದು ಫಾತಿಮಾ ಬೇಸರ ವ್ಯಕ್ತಪಡಿಸಿದ್ದಾರೆ.

“ವರ್ಷಗಳಿಂದ ನನ್ನ ಮಗನ ಬಗ್ಗೆ ವದಂತಿಗಳು ಮತ್ತು ಸುಳ್ಳುಗಳನ್ನು ಹರಡಲಾಗುತ್ತಿತ್ತು. ದೆಹಲಿ ಹೈಕೋರ್ಟ್ ಆದೇಶದ ನಂತರ ಅವುಗಳನ್ನು ಎಲ್ಲಾ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಲಾಯಿತು. ಆದರೆ, ಸತ್ಯವೆಂದರೆ ಇಷ್ಟು ದೊಡ್ಡ ತನಿಖಾ ಸಂಸ್ಥೆಗಳು ಮತ್ತು ಇಡೀ ನ್ಯಾಯಾಂಗ ವ್ಯವಸ್ಥೆಗೆ ಇಲ್ಲಿಯವರೆಗೆ ನನ್ನ ನಜೀಬ್ ಎಲ್ಲಿದ್ದಾನೆಂದು ಹೇಳಲು ಸಾಧ್ಯವಾಗಿಲ್ಲ,” ಎಂದು ಫಾತಿಮಾ ನೋವು ಹೊರಹಾಕಿದ್ದಾರೆ.

2018 ರಲ್ಲಿ, ನಜೀಬ್ ಇಸ್ಲಾಮಿಕ್ ಸ್ಟೇಟ್ ಸೇರಲು ತೆರಳಿದ್ದಾರೆ ಎಂಬ ಆಧಾರರಹಿತ ಸುದ್ದಿಗಳನ್ನು ತಮ್ಮ ವೆಬ್‌ಸೈಟ್‌ಗಳಿಂದ ತೆಗೆದುಹಾಕುವಂತೆ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ಗಳಿಗೆ ಹೈಕೋರ್ಟ್ ಆದೇಶಿಸಿತ್ತು.

ಕಳೆದ 9 ವರ್ಷಗಳ ಕಾಲ ನಾನು ನಜೀಬ್‌ಗಾಗಿ ಹೋರಾಡುವಾಗ ಈ ವ್ಯವಸ್ಥೆ ನನ್ನನ್ನು ಮೌನವಾಗಿಸಲು ಪ್ರಯತ್ನಿಸಿತು. ಆದರೆ, ಜೆಎನ್‌ಯು, ಎಎಂಯು, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಮುಂತಾದ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿಗಳು ನನಗೆ ಬೆಂಬಲ ನೀಡಿದರು. ಈ ಕಾರಣಕ್ಕೆ ಆ ಮಕ್ಕಳು ಬೀದಿಗಳಲ್ಲಿ ಲಾಠಿ ಏಟು ತಿನ್ನಬೇಕಾಯಿತು. ವಿದ್ಯಾರ್ಥಿಗಳ ಬೆಂಬಲ ಮತ್ತು ಹೋರಾಟ ನನಗೆ ಧೈರ್ಯ ನೀಡಿತು” ಎಂದು ಫಾತಿಮಾ ಹೇಳಿಕೊಂಡಿದ್ದಾರೆ.

2017ರಲ್ಲಿ ಕನಿಷ್ಠ ಎರಡು ಸಂದರ್ಭಗಳಲ್ಲಿ, ಜೆಎನ್‌ಯುನ ಮಹಿ ಮಾಂಡವಿ ಹಾಸ್ಟೆಲ್ ನಿವಾಸಿ ಮತ್ತು ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿಯಾಗಿದ್ದ ನಜೀಬ್ ಕಣ್ಮರೆಯಾದದ್ದನ್ನು ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದರು.

ನಜೀಬ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಬಿವಿಪಿ ಸದಸ್ಯರಿಗೆ ಹಾಸ್ಟೆಲ್ ವರ್ಗಾವಣೆಯ ಶಿಕ್ಷೆ ವಿಧಿಸಿದ ಜೆಎನ್‌ಯು ಮಾಜಿ ಉಪಕುಲಪತಿ ಎಂ. ಜಗದೀಶ್ ಕುಮಾರ್ ಅವರನ್ನು ವಿದ್ಯಾರ್ಥಿಗಳು ಆರು ದಿನಗಳ ಕಾಲ ಘೇರಾವ್ ಮಾಡಿದ್ದರು. ನಂತರ ಅವರು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷರಾದರು.

“ನಾನು ನನ್ನ ಭರವಸೆಯನ್ನು ಹೇಗೆ ಬಿಟ್ಟುಕೊಡಲಿ? ಧೈರ್ಯವನ್ನು ಹೇಗೆ ಕಳೆದುಕೊಳ್ಳಲಿ ಎಂದು ಹಲವು ಬಾರಿ ಅನಿಸಿದೆ. ಏಕೆಂದರೆ, ನಜೀಬ್ ನನ್ನ ಮಗ. ನನಗೆ ನನ್ನ ಮಗ ಬೇಕು. ಇದಕ್ಕಾಗಿ ನಾನು ದೇಶದ ಯಾವುದೇ ನ್ಯಾಯಾಲಕ್ಕೆ ಹೋಗಲು ಸಿದ್ದ. ನನ್ನ ಕೊನೆಯ ಉಸಿರಿನವರೆಗೂ ಹೋರಾಡುತ್ತೇನೆ” ಎಂದು ಫಾತಿಮಾ ಮನದಾಳ ಹಂಚಿಕೊಂಡಿದ್ದಾರೆ.

“ಮುಂಬರುವ ದಿನಗಳಲ್ಲಿ ಹೆಚ್ಚಿನ ಜನರು ನನ್ನೊಂದಿಗೆ ಸೇರುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಹೋರಾಟ ನನ್ನ ಮಗನಿಗಾಗಿ ಮಾತ್ರವಲ್ಲ, ತನ್ನ ಮಗುವಿಗೆ ನ್ಯಾಯ ಬಯಸುವ ಪ್ರತಿಯೊಬ್ಬ ತಾಯಿಗಾಗಿ. ನಾನು ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದರೆ, ಅಲ್ಲಿಗೂ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಪ್ರಕರಣ ಮುಚ್ಚುವ ಕೆಳ ನ್ಯಾಯಾಲಯದ ಆದೇಶವನ್ನು ‘ನ್ಯಾಯ ನಿರಾಕರಣೆ’ ಎಂದು ಕರೆದಿರುವ ಜೆಎನ್‌ಯು ವಿದ್ಯಾರ್ಥಿ ಸಂಘ, ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ದೆಹಲಿ ಪೊಲೀಸರ ಪ್ರತಿಕೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದೆ.

“ಸಿಬಿಐ ಸಲ್ಲಿಸಿರುವ ಪ್ರಕರಣ ಮುಕ್ತಾಯದ ವರದಿಯನ್ನು ಹೊಣೆಗಾರಿಕೆಯಿಲ್ಲದೆ ಒಪ್ಪಿಕೊಂಡಿರುವ ದೆಹಲಿ ನ್ಯಾಯಾಲಯದ ಬಗ್ಗೆ ನಾವು ನಮ್ಮ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಎಬಿವಿಪಿ ಸಂಬಂಧಿತ ವಿದ್ಯಾರ್ಥಿಗಳ ವ್ಯವಸ್ಥಿತ ರಕ್ಷಣೆಯನ್ನು ನಾವು ಖಂಡಿಸುತ್ತೇವೆ. ಆಡಳಿತಾತ್ಮಕ ಅಥವಾ ರಾಜಕೀಯ ಹಸ್ತಕ್ಷೇಪವಿಲ್ಲದೆ ಪೂರ್ಣ ಪಾರದರ್ಶಕತೆಯೊಂದಿಗೆ ಪ್ರಕರಣದ ಮರುತನಿಖೆ ಮಾಡಬೇಕು ಎಂಬ ನಮ್ಮ ಬೇಡಿಕೆಯನ್ನು ಪುನರುಚ್ಚರಿಸುತ್ತೇವೆ” ಎಂದು ಒಕ್ಕೂಟವು ಹೇಳಿಕೆಯಲ್ಲಿ ತಿಳಿಸಿದೆ.

ನಜೀಬ್ ನಿಗೂಢ ನಾಪತ್ತೆ ಪ್ರಕರಣದ ಮುಕ್ತಾಯ ವರದಿಯನ್ನು ಸಿಬಿಐ 2018ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಫಾತಿಮಾ ನಫೀಸ್ ಪ್ರತಿಭಟನಾ ಅರ್ಜಿಯೊಂದಿಗೆ ಸಿಬಿಐ ವರದಿಯನ್ನು ಪ್ರಶ್ನಿಸಿದ್ದರು. ಫಾತಿಮಾ ವಾದಗಳನ್ನು ತಿರಸ್ಕರಿಸಿರುವ ನ್ಯಾಯಾಲಯ ಪ್ರಕರಣ ಮುಕ್ತಾಯಗೊಳಿಸು ಸಿಬಿಐಗೆ ಸಮ್ಮತಿ ನೀಡಿದೆ.

ಆದರೆ, ಈ ವಿಷಯವನ್ನು ವಿಲೇವಾರಿ ಮಾಡುವಾಗ ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ಸೂಚಿಸಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...