Homeಮುಖಪುಟ'ಕೊನೆ ಉಸಿರಿನವರೆಗೂ ಹೋರಾಡುತ್ತೇನೆ': ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

ಜೆಎನ್‌ಯು ವಿದ್ಯಾರ್ಥಿಯಾಗಿದ್ದ ನಜೀಬ್ ನಾಪತ್ತೆಯಾಗಿ 9 ವರ್ಷ ಕಳೆದರೂ ಸುಳಿವು ಸಿಕ್ಕಿಲ್ಲ. ಪ್ರಕರಣ ಮುಚ್ಚಲು ಸಿಬಿಐಗೆ ಕೋರ್ಟ್ ಅನುಮತಿ ನೀಡಿದೆ.

- Advertisement -
- Advertisement -

“ನನ್ನ ಮಗನನ್ನು ಹುಡುಕಲು ಕೊನೆ ಉಸಿರಿನವರೆಗೆ ಹೋರಾಡುತ್ತೇನೆ. ಇದಕ್ಕಾಗಿ ದೇಶದ ಯಾವುದೇ ನ್ಯಾಯಾಲದ ಮೆಟ್ಟಿಲೇರಲು ನಾನು ಸಿದ್ದ. ನಾನು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇನೆ” ಎಂದು 9 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸ್ ಮಂಗಳವಾರ (ಜುಲೈ 1, 2025) ಹೇಳಿದ್ದಾರೆ.

ಅಕ್ಟೋಬರ್ 15,2016ರಂದು ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಜೀಬ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಪ್ರಕರಣದ ಮುಕ್ತಾಯ ವರದಿಯನ್ನು 2018ರಲ್ಲಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್ 30,2025) ಸ್ವೀಕರಿಸಿದೆ.

“ಇಲ್ಲಿಯವರೆಗೆ, ದೆಹಲಿ ಪೊಲೀಸರು ಅಥವಾ ಸಿಬಿಐಗೆ ನನ್ನ ಮಗನನ್ನು ಥಳಿಸಿ ನಂತರ ಅವನು ಕಣ್ಮರೆಯಾಗುವಂತೆ ಮಾಡಿದ ಎಬಿವಿಪಿ ಗೂಂಡಾಗಳನ್ನು ಬಂಧಿಸಲು ಅಥವಾ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ” ಎಂದು ಫಾತಿಮಾ ಬೇಸರ ವ್ಯಕ್ತಪಡಿಸಿದ್ದಾರೆ.

“ವರ್ಷಗಳಿಂದ ನನ್ನ ಮಗನ ಬಗ್ಗೆ ವದಂತಿಗಳು ಮತ್ತು ಸುಳ್ಳುಗಳನ್ನು ಹರಡಲಾಗುತ್ತಿತ್ತು. ದೆಹಲಿ ಹೈಕೋರ್ಟ್ ಆದೇಶದ ನಂತರ ಅವುಗಳನ್ನು ಎಲ್ಲಾ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಲಾಯಿತು. ಆದರೆ, ಸತ್ಯವೆಂದರೆ ಇಷ್ಟು ದೊಡ್ಡ ತನಿಖಾ ಸಂಸ್ಥೆಗಳು ಮತ್ತು ಇಡೀ ನ್ಯಾಯಾಂಗ ವ್ಯವಸ್ಥೆಗೆ ಇಲ್ಲಿಯವರೆಗೆ ನನ್ನ ನಜೀಬ್ ಎಲ್ಲಿದ್ದಾನೆಂದು ಹೇಳಲು ಸಾಧ್ಯವಾಗಿಲ್ಲ,” ಎಂದು ಫಾತಿಮಾ ನೋವು ಹೊರಹಾಕಿದ್ದಾರೆ.

2018 ರಲ್ಲಿ, ನಜೀಬ್ ಇಸ್ಲಾಮಿಕ್ ಸ್ಟೇಟ್ ಸೇರಲು ತೆರಳಿದ್ದಾರೆ ಎಂಬ ಆಧಾರರಹಿತ ಸುದ್ದಿಗಳನ್ನು ತಮ್ಮ ವೆಬ್‌ಸೈಟ್‌ಗಳಿಂದ ತೆಗೆದುಹಾಕುವಂತೆ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ಗಳಿಗೆ ಹೈಕೋರ್ಟ್ ಆದೇಶಿಸಿತ್ತು.

ಕಳೆದ 9 ವರ್ಷಗಳ ಕಾಲ ನಾನು ನಜೀಬ್‌ಗಾಗಿ ಹೋರಾಡುವಾಗ ಈ ವ್ಯವಸ್ಥೆ ನನ್ನನ್ನು ಮೌನವಾಗಿಸಲು ಪ್ರಯತ್ನಿಸಿತು. ಆದರೆ, ಜೆಎನ್‌ಯು, ಎಎಂಯು, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಮುಂತಾದ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿಗಳು ನನಗೆ ಬೆಂಬಲ ನೀಡಿದರು. ಈ ಕಾರಣಕ್ಕೆ ಆ ಮಕ್ಕಳು ಬೀದಿಗಳಲ್ಲಿ ಲಾಠಿ ಏಟು ತಿನ್ನಬೇಕಾಯಿತು. ವಿದ್ಯಾರ್ಥಿಗಳ ಬೆಂಬಲ ಮತ್ತು ಹೋರಾಟ ನನಗೆ ಧೈರ್ಯ ನೀಡಿತು” ಎಂದು ಫಾತಿಮಾ ಹೇಳಿಕೊಂಡಿದ್ದಾರೆ.

2017ರಲ್ಲಿ ಕನಿಷ್ಠ ಎರಡು ಸಂದರ್ಭಗಳಲ್ಲಿ, ಜೆಎನ್‌ಯುನ ಮಹಿ ಮಾಂಡವಿ ಹಾಸ್ಟೆಲ್ ನಿವಾಸಿ ಮತ್ತು ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿಯಾಗಿದ್ದ ನಜೀಬ್ ಕಣ್ಮರೆಯಾದದ್ದನ್ನು ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದರು.

ನಜೀಬ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಬಿವಿಪಿ ಸದಸ್ಯರಿಗೆ ಹಾಸ್ಟೆಲ್ ವರ್ಗಾವಣೆಯ ಶಿಕ್ಷೆ ವಿಧಿಸಿದ ಜೆಎನ್‌ಯು ಮಾಜಿ ಉಪಕುಲಪತಿ ಎಂ. ಜಗದೀಶ್ ಕುಮಾರ್ ಅವರನ್ನು ವಿದ್ಯಾರ್ಥಿಗಳು ಆರು ದಿನಗಳ ಕಾಲ ಘೇರಾವ್ ಮಾಡಿದ್ದರು. ನಂತರ ಅವರು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷರಾದರು.

“ನಾನು ನನ್ನ ಭರವಸೆಯನ್ನು ಹೇಗೆ ಬಿಟ್ಟುಕೊಡಲಿ? ಧೈರ್ಯವನ್ನು ಹೇಗೆ ಕಳೆದುಕೊಳ್ಳಲಿ ಎಂದು ಹಲವು ಬಾರಿ ಅನಿಸಿದೆ. ಏಕೆಂದರೆ, ನಜೀಬ್ ನನ್ನ ಮಗ. ನನಗೆ ನನ್ನ ಮಗ ಬೇಕು. ಇದಕ್ಕಾಗಿ ನಾನು ದೇಶದ ಯಾವುದೇ ನ್ಯಾಯಾಲಕ್ಕೆ ಹೋಗಲು ಸಿದ್ದ. ನನ್ನ ಕೊನೆಯ ಉಸಿರಿನವರೆಗೂ ಹೋರಾಡುತ್ತೇನೆ” ಎಂದು ಫಾತಿಮಾ ಮನದಾಳ ಹಂಚಿಕೊಂಡಿದ್ದಾರೆ.

“ಮುಂಬರುವ ದಿನಗಳಲ್ಲಿ ಹೆಚ್ಚಿನ ಜನರು ನನ್ನೊಂದಿಗೆ ಸೇರುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಹೋರಾಟ ನನ್ನ ಮಗನಿಗಾಗಿ ಮಾತ್ರವಲ್ಲ, ತನ್ನ ಮಗುವಿಗೆ ನ್ಯಾಯ ಬಯಸುವ ಪ್ರತಿಯೊಬ್ಬ ತಾಯಿಗಾಗಿ. ನಾನು ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದರೆ, ಅಲ್ಲಿಗೂ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಪ್ರಕರಣ ಮುಚ್ಚುವ ಕೆಳ ನ್ಯಾಯಾಲಯದ ಆದೇಶವನ್ನು ‘ನ್ಯಾಯ ನಿರಾಕರಣೆ’ ಎಂದು ಕರೆದಿರುವ ಜೆಎನ್‌ಯು ವಿದ್ಯಾರ್ಥಿ ಸಂಘ, ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ದೆಹಲಿ ಪೊಲೀಸರ ಪ್ರತಿಕೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದೆ.

“ಸಿಬಿಐ ಸಲ್ಲಿಸಿರುವ ಪ್ರಕರಣ ಮುಕ್ತಾಯದ ವರದಿಯನ್ನು ಹೊಣೆಗಾರಿಕೆಯಿಲ್ಲದೆ ಒಪ್ಪಿಕೊಂಡಿರುವ ದೆಹಲಿ ನ್ಯಾಯಾಲಯದ ಬಗ್ಗೆ ನಾವು ನಮ್ಮ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಎಬಿವಿಪಿ ಸಂಬಂಧಿತ ವಿದ್ಯಾರ್ಥಿಗಳ ವ್ಯವಸ್ಥಿತ ರಕ್ಷಣೆಯನ್ನು ನಾವು ಖಂಡಿಸುತ್ತೇವೆ. ಆಡಳಿತಾತ್ಮಕ ಅಥವಾ ರಾಜಕೀಯ ಹಸ್ತಕ್ಷೇಪವಿಲ್ಲದೆ ಪೂರ್ಣ ಪಾರದರ್ಶಕತೆಯೊಂದಿಗೆ ಪ್ರಕರಣದ ಮರುತನಿಖೆ ಮಾಡಬೇಕು ಎಂಬ ನಮ್ಮ ಬೇಡಿಕೆಯನ್ನು ಪುನರುಚ್ಚರಿಸುತ್ತೇವೆ” ಎಂದು ಒಕ್ಕೂಟವು ಹೇಳಿಕೆಯಲ್ಲಿ ತಿಳಿಸಿದೆ.

ನಜೀಬ್ ನಿಗೂಢ ನಾಪತ್ತೆ ಪ್ರಕರಣದ ಮುಕ್ತಾಯ ವರದಿಯನ್ನು ಸಿಬಿಐ 2018ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಫಾತಿಮಾ ನಫೀಸ್ ಪ್ರತಿಭಟನಾ ಅರ್ಜಿಯೊಂದಿಗೆ ಸಿಬಿಐ ವರದಿಯನ್ನು ಪ್ರಶ್ನಿಸಿದ್ದರು. ಫಾತಿಮಾ ವಾದಗಳನ್ನು ತಿರಸ್ಕರಿಸಿರುವ ನ್ಯಾಯಾಲಯ ಪ್ರಕರಣ ಮುಕ್ತಾಯಗೊಳಿಸು ಸಿಬಿಐಗೆ ಸಮ್ಮತಿ ನೀಡಿದೆ.

ಆದರೆ, ಈ ವಿಷಯವನ್ನು ವಿಲೇವಾರಿ ಮಾಡುವಾಗ ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ಸೂಚಿಸಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...