Homeಮುಖಪುಟಎಲೆಕ್ಟ್ರಿಕ್ ವಾಹನಗಳ ಹಬ್ ಆಗಲಿದೆಯೇ ಭಾರತ?

ಎಲೆಕ್ಟ್ರಿಕ್ ವಾಹನಗಳ ಹಬ್ ಆಗಲಿದೆಯೇ ಭಾರತ?

- Advertisement -
- Advertisement -

ಭಾರತ ವಿಶ್ವದ 4ನೇ ಅತಿದೊಡ್ಡ ವಾಹನದ ಮಾರುಕಟ್ಟೆ. ಆಟೋಮೊಬೈಲ್ ಕ್ಷೇತ್ರ ಭಾರತದ ರಸ್ತೆಗಳಿಗೆ ಪ್ರತಿವರ್ಷ ಹೊಸಹೊಸ ವಾಹನಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಪರಿಣಾಮ ಭಾರತದ ಪ್ರತಿದಿನದ ಅಂದಾಜು ಇಂಧನದ ಬಳಕೆ ಕನಿಷ್ಠ 5,154 ಬ್ಯಾರೆಲ್ ಎನ್ನುತ್ತಿವೆ ಅಂಕಿಅಂಶಗಳು. ಭಾರತದಲ್ಲಿ ಪ್ರತಿ ವರ್ಷ ಲಕ್ಷಾಂತರ ಲೀಟರ್ ಪಳೆಯುಳಿಕೆ ಇಂಧನ (ಪೆಟ್ರೋಲ್-ಡೀಸೆಲ್) ದಹನವಾಗುತ್ತಲೇ ಇದೆ. ವಾಯುಮಾಲಿನ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಎಚ್ಚರಿಕೆಯ ಘಂಟೆ ಬಾರಿಸುತ್ತಲೇ ಇದೆ.

ಆದರೆ, ಕೊರೊನೋತ್ತರ ಕಾಲದಲ್ಲಿ ಜಗತ್ತಿನ ಹಲವು ರಾಷ್ಟ್ರಗಳು ನಿಜಕ್ಕೂ ವಾಯುಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿವೆ ಎಂದೇ ಹೇಳಬೇಕು. ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆಗೆ ಅನೇಕ ಹೆಚ್ಚೆಚ್ಚು ಒತ್ತುನೀಡುತ್ತಿವೆ. ಜಾಗತಿಕ ತಾಪಮಾನ ಹೆಚ್ಚಿ ಹವಾಮಾನ ಬದಲಾವಣೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿಯೂ ’ಕ್ಲೀನ್ ಎನರ್ಜಿ’ ಎಂದು ಕರೆಯಲಾಗುವ ಇಂಧನಗಳಿಂದ ಚಾಲನೆಯಾಗುವ ವಾಹನಗಳ ಅಭಿವೃದ್ಧಿ ಮತ್ತು ಉತ್ಪಾದನೆಗೆ ಒತ್ತುನೀಡಲಾಗುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಹೀಗಾಗಿ ಭಾರತವೂ ಎಲೆಕ್ಟ್ರಿಕ್ ವಾಹನಗಳ ಕ್ರಾಂತಿಗೆ ಅಣಿಯಾಗುತ್ತಿದೆ ಎಂದರೆ ತಪ್ಪಾಗಲಾರದು.

ಎಕ್ಟ್ರಿಕ್ ವಾಹನಗಳ ಹಬ್ ಆಗುತ್ತಿದೆಯೇ ಭಾರತ?

ಕಳೆದ ಐದಾರು ವರ್ಷಗಳ ಅವಧಿಯಲ್ಲಿ ದೇಶದ ಇಪ್ಪತ್ತೊಂದಕ್ಕೂ ಹೆಚ್ಚು ರಾಜ್ಯಗಳು ಎಲೆಕ್ಟ್ರಿಕ್ ವಾಹನ ನೀತಿ ರೂಪಿಸಿದ್ದು, ಹೊಗೆ ಉಗುಳುವ ದ್ವಿಚಕ್ರ, ತ್ರಿಚಕ್ರ ವಾಹನಗಳನ್ನು ರಸ್ತೆಯಿಂದ ಹೊರಹಾಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿವೆ. ಗ್ಲಾಸ್ಗೊ ಒಪ್ಪಂದಕ್ಕೆ ಸಹಿ ಹಾಕಿರುವ ಭಾರತ ಸರ್ಕಾರ, 2030ರ ವೇಳೆಗೆ ನೂರು ಕೋಟಿ ಟನ್ ಇಂಗಾಲದ ಹೊಮ್ಮುವಿಕೆಯನ್ನು ಕಡಿಮೆ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ದೇಶದ ಪ್ರತೀ ನಗರಕ್ಕೂ ತನ್ನದೇ ಆದ ಶುದ್ಧ ಗಾಳಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಆ ದಿಸೆಯಲ್ಲಿ 132 ನಗರಗಳು ಈಗಾಗಲೇ ಕಾರ್ಯಪ್ರವೃತ್ತವಾಗಿವೆ.

ಭಾರತದ ಪಾಲಿಗೆ ದೊಡ್ಡ ಪ್ರಮಾಣದಲ್ಲಿ ಇಂಗಾಲವನ್ನು ಉಗುಳುತ್ತಿರುವುದು ಸಾರ್ವಜನಿಕ ಸಾರಿಗೆ ವ್ಯವಸ್ಥೆಯೇ. ಹೀಗಾಗಿ ಆಂಧ್ರಪ್ರದೇಶ, ಕೇರಳ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ದಶಕದ ಕೊನೆಯ ವೇಳೆಗೆ ತಲಾ ಹತ್ತು ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಯೋಜನೆ ತಯಾರಿಸಿವೆ. ಮೇಘಾಲಯ, ಗೋವಾ, ಹರಿಯಾಣ, ದೆಹಲಿ, ಒಡಿಶಾ, ಅಸ್ಸಾಂ, ಪಂಜಾಬ್ ಮತ್ತು ಮಹಾರಾಷ್ಟ್ರ ರಾಜ್ಯಗಳು ಇನ್ನೈದು ವರ್ಷಗಳಲ್ಲಿ ತಮ್ಮ ರಾಜ್ಯದ ರಸ್ತೆಗಳ ಮೇಲೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳು ಸಂಚರಿಸಲಿವೆ ಎಂದಿವೆ.

ಕೇಂದ್ರ ಸರ್ಕಾರ ಇದಕ್ಕಾಗಿ -10 ಸಾವಿರ ಕೋಟಿ ಬಂಡವಾಳ ಮೀಸಲಿಟ್ಟಿದೆ. ಇದರಿಂದ 10 ಲಕ್ಷ ದ್ವಿಚಕ್ರ, 5 ಲಕ್ಷ ತ್ರಿಚಕ್ರ ವಾಹನಗಳು, 55 ಸಾವಿರ ಕಾರು ಹಾಗೂ 70,000 ಎಲೆಕ್ಟ್ರಿಕ್ ಬಸ್‌ಗಳು ರಸ್ತೆಗೆ ಇಳಿಯಲಿವೆ. ಸತತ ವಾಯುಮಾಲಿನ್ಯದಿಂದ ಕಂಗಾಲಾಗಿರುವ ದೆಹಲಿ ಸರ್ಕಾರ ಮುಂದಿನ ವರ್ಷದ ಕೊನೆಯ ವೇಳೆಗೆ 5 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಗುರಿ ಇಟ್ಟುಕೊಂಡಿದ್ದು, ಈ ವರ್ಷಾಂತ್ಯಕ್ಕೆ, ಡೀಸೆಲ್‌ನಿಂದ ಓಡುವ ಎಲ್ಲ ತ್ರಿಚಕ್ರ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸುವ ತೀರ್ಮಾನ ಮಾಡಿದೆ.

ಒಡಿಶಾ ತನ್ನ ರಾಜ್ಯದ ಪೆಟ್ರೋಲ್, ಡೀಸೆಲ್, ಗ್ಯಾಸ್‌ನಿಂದ ಓಡುವ ಆಟೊರಿಕ್ಷಾಗಳನ್ನು ಎಲೆಕ್ಟ್ರಿಕ್‌ಗೆ ಬದಲಾಯಿಸುವ ಕೆಲಸಕ್ಕೆ ಕೈ ಹಾಕಿದೆ. ಕೊಚ್ಚಿನ್ ನಗರದಲ್ಲಿ ಚಾಲಕರು ಕೈನೆಟಿಕ್ ಗ್ರೀನ್ ಕಂಪನಿಯಿಂದ ಇ-ಆಟೊ ರಿಕ್ಷಾಗಳನ್ನು ಬಾಡಿಗೆಗೆ ಪಡೆದು ಓಡಿಸುತ್ತಿದ್ದಾರೆ.

ನಮ್ಮ ರಾಜ್ಯದಲ್ಲಿ ಒಂದೂವರೆ ಲಕ್ಷ ಇ-ವಾಹನಗಳಿವೆ. ಇವುಗಳಿಗಾಗಿ 2016ರಲ್ಲೇ ನೀತಿ ರೂಪಿಸಿದ್ದ ದೇಶದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಸರ್ಕಾರ ಅಂದಿನಿಂದಲೇ ಇ-ವಾಹನಗಳ ರಸ್ತೆ ತೆರಿಗೆಯನ್ನು ಸಂಪೂರ್ಣ ತೆಗೆದುಹಾಕಿತ್ತು. ಇತರ ರಾಜ್ಯಗಳು ಶೂನ್ಯ ರಸ್ತೆ ತೆರಿಗೆಯ ಜೊತೆ ಹಲವು ರಿಯಾಯಿತಿಗಳನ್ನೂ ನೀಡುತ್ತಿವೆ. ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯವು 2021ರ ಆಗಸ್ಟ್‌ನಲ್ಲಿ ಇ-ವಾಹನಗಳ ನೋಂದಣಿ ಹಾಗೂ ನವೀಕರಣ ಶುಲ್ಕ ಎರಡನ್ನೂ ತೆಗೆದುಹಾಕಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸರ್ಕಾರಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿವೆ.

ಭಾರತ ಮಾರುಕಟ್ಟೆಗೆ ಪೈಪೋಟಿ

ಎಲೆಕ್ಟ್ರಿಕ್ ವಾಹನಗಳು ಅಭಿವೃದ್ಧಿಯಾಗುತ್ತಿದ್ದಂತೆ ವಿಶ್ವದ ಅನೇಕ ವಾಹನ ಕಂಪನಿಗಳು ಡೀಸೆಲ್ ಎಂಜಿನ್ ಅಭಿವೃದ್ಧಿಯನ್ನು ನಿಲ್ಲಿಸಿ ಅಥವಾ ಕಡಿತಗೊಳಿಸಿ ಇ ಮತ್ತು ಹೈಬ್ರಿಡ್ ಕಾರುಗಳ ತಯಾರಿಕೆಗೆ ಮುಂದಾಗಿವೆ. ಪರಿಣಾಮ ಭಾರತ ಇದೀಗ ಅಂತಹ ವಾಹನಗಳ ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿ ಬದಲಾಗುತ್ತಿದೆ.

ಬೆಂಗಳೂರಿನ ನವೋದ್ಯಮ ಏಥರ್ ಎನರ್ಜಿ ಕಳೆದ ನಾಲ್ಕೈದು ವರ್ಷಗಳಿಂದ ದೇಶದ ಆಯ್ದ ನಗರಗಳಲ್ಲಿ ಇ-ಸ್ಕೂಟರ್ ಬಿಡುಗಡೆ ಮಾಡಿ ಯಶಸ್ವಿಯಾಗಿದೆ. ರಾವಿನ್, ಮಹೀಂದ್ರ, ಟಾಟಾ ಕಾರು ಕಂಪನಿಗಳು ಇ-ಕಾರುಗಳನ್ನು ಪರಿಚಯಿಸಿ ಈಗಾಗಲೇ ದಶಕಗಳೇ ಕಳೆದಿವೆ.

ಇದಲ್ಲದೆ, ದೇಶದ ಗ್ರೀನ್ ಮೊಬಿಲಿಟಿ ವಲಯದ ಅತಿದೊಡ್ಡ ಒಪ್ಪಂದವೊಂದಕ್ಕೆ ಟಾಟಾ ಮೋಟಾರ್ಸ್ ಮತ್ತು ಉಬರ್ ಇತ್ತೀಚೆಗೆ ಸಹಿ ಹಾಕಿರುವುದು ಭಾರತದ ಆಟೋಮೊಬೈಲ್ ಕ್ಷೇತ್ರದ ಪಾಲಿಗೆ ಗಮನಾರ್ಹ ಬೆಳವಣಿಗೆ. ಈ ಒಪ್ಪಂದದ ಪ್ರಕಾರ ಉಬರ್‌ಗೆ 25,000 ಎಕ್ಸ್‌ಪ್ರೆಸ್-ಟಿ ಎಲೆಕ್ಟ್ರಿಕ್ ವಾಹನಗಳನ್ನು ಟಾಟಾ ಮೊಟಾರ್ಸ್ ಪೂರೈಸಲಿದೆ.

ಈ ಎರಡು ಕಂಪನಿಗಳ ನಡುವಿನ ಒಪ್ಪಂದದ ಪ್ರಕಾರ ಉಬರ್ ತನ್ನ ಪ್ರೀಮಿಯಂ ವರ್ಗದ ಸೇವೆಯಲ್ಲಿ ಎಲೆಕ್ಟ್ರಿಕ್ ಸೆಡಾನ್ ವಾಹನಗಳನ್ನು ಬಳಸಿಕೊಳ್ಳಲಿದೆ. ಈ ಎಲೆಕ್ಟ್ರಿಕ್ ವಾಹನಗಳು ದಿಲ್ಲಿ ಎನ್‌ಸಿಆರ್, ಮುಂಬೈ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಈ ಒಪ್ಪಂದ ಯಶಸ್ವಿಯಾದರೆ ಭಾರತದ ಆಟೋಮೊಬೈಲ್ ಕ್ಷೇತ್ರದ ಪಾಲಿಗೆ “ಗೇಮ್ ಚೇಂಜರ್” ಆಗಲಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ವಿಶ್ವದ ಪ್ರಮುಖ ಕಾರ್ ತಯಾರಿಕಾ ಕಂಪೆನಿಗಳಲ್ಲಿ ಒಂದಾದ ನಿಸ್ಸಾನ್ ಸಹ, 2026ರ ವೇಳೆಗೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಅತಿದೊಡ್ಡ ಮಾರುಕಟ್ಟೆ ಸೃಷ್ಟಿಯಾಗಲಿರುವುದನ್ನು ಊಹಿಸಿ, ಅತೀ ಶೀಘ್ರದಲ್ಲಿ ತಮ್ಮ ಕಂಪೆನಿ ಭಾರತದಲ್ಲಿ ಎಲೆಕ್ಟ್ರಿಕ್ ಕಾರ್‌ಗಳನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ. ನಿಸ್ಸಾನ್ ಕಂಪೆನಿ ಈಗಾಗಲೇ ಯೂರೋಪ್ ಮತ್ತು ಜಪಾನ್ ದೇಶಗಳಲ್ಲಿ ತಮ್ಮ ಕಂಪೆನಿಯ ಎಲೆಕ್ಟ್ರಿಕ್ ಕಾರ್‌ಗಳನ್ನು ಪರಿಚಯಿಸಿ ಯಶಸ್ವಿಯಾಗಿದೆ ಎಂಬುದು ಉಲ್ಲೇಖಾರ್ಹ.

ಇನ್ನು ವಿಶ್ವದಲ್ಲೇ ಅತ್ಯಂತ ಯಶಸ್ವಿ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪೆನಿಯಾದ ಟೆಸ್ಲಾ ಸಹ ಭಾರತ ಮಾರುಕಟ್ಟೆ ಪ್ರವೇಶಿಸಿದೆ. ವರದಿಗಳ ಪ್ರಕಾರ ಕರ್ನಾಟಕ ಸರಕಾರದ ಅಧಿಕಾರಿಗಳ ಜೊತೆ ಟೆಸ್ಲಾ ಪ್ರತಿನಿಧಿಗಳ ಮೊದಲ ಸಭೆ 2021 ಸೆಪ್ಟೆಂಬರ್ 10 ರಂದೇ ನಡೆದಿತ್ತು.

ಸಭೆಗೆ ಮುನ್ನವೇ ಅಂದರೆ 2021 ಜನವರಿ 8ರಂದೇ ಟೆಸ್ಲಾ ಕಂಪೆನಿ ಬೆಂಗಳೂರಿನಲ್ಲಿ ತನ್ನ ಅಂಗಸಂಸ್ಥೆಯಾಗಿ ಟೆಸ್ಲಾ ಇಂಡಿಯಾ ಮೊಟರ್ಸ್ ಆಂಡ್ ಎನರ್ಜಿ ಪ್ರೈ. ಲಿ. ಎಂಬ ಹೆಸರಿನಲ್ಲಿ ಕಚೇರಿ ತೆರೆದಿತ್ತು. ಆದರೆ, ಮುಂದಿನ ಸಭೆ ಏನಾಯ್ತು? ಬೆಂಗಳೂರಿನಲ್ಲಿ ಟೆಸ್ಲಾ ಕಂಪೆನಿಯ ಭವಿಷ್ಯವೇನು? ಎಂಬ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಒಂದು ವೇಳೆ ಟೆಸ್ಲಾ ಭಾರತಕ್ಕೆ ಕಾಲಿಟ್ಟರೆ ಎಲೆಕ್ಟ್ರಿಕ್ ವಾಹನಗಳ ಉದ್ಯಮ ಮತ್ತೊಂದು ಮೈಲುಗಲ್ಲಿಗೆ ಏರಲಿರುವುದು ಖಚಿತ.

ಭಾರತದಲ್ಲಿ ಸದ್ಯಕ್ಕೆ ಎಷ್ಟು ಎಲೆಕ್ಟ್ರಿಕ್ ವಾಹನಗಳಿವೆ?

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಅನೇಕ ರಾಜ್ಯಗಳು ನಾನಾ ನೀತಿಗಳನ್ನು ರೂಪಿಸಿವೆ. ಆದರೂ, ದೇಶದಾದ್ಯಂತ ನೋಂದಣಿಯಾಗಿರುವ ಇ-ವಾಹನಗಳ ಸಂಖ್ಯೆ ಕೇವಲ 18 ಲಕ್ಷ ಮಾತ್ರ. ಉತ್ತರಪ್ರದೇಶದಲ್ಲಿ ಅತಿ ಹೆಚ್ಚು 4.1 ಲಕ್ಷ, ದೆಹಲಿ 1.8 ಲಕ್ಷ, ಮಹಾರಾಷ್ಟ್ರ 1.7 ಲಕ್ಷ, ಕರ್ನಾಟಕ 1.5 ಲಕ್ಷ, ರಾಜಸ್ಥಾನ 1.2 ಲಕ್ಷ, ಬಿಹಾರ 1.1 ಲಕ್ಷ ಮತ್ತು ತಮಿಳುನಾಡಿನಲ್ಲಿ 1 ಲಕ್ಷ ಇ-ವಾಹನಗಳಿವೆ. ಆದರೆ, ಇಷ್ಟೇ ಪ್ರಮಾಣದ ವಾಹನಗಳ ಬಳಕೆಯಿಂದ 107 ಲಕ್ಷ ಲೀಟರ್ ಇಂಧನವನ್ನು ಉಳಿಸಲಾಗಿದೆ ಎಂಬುದು ಆಶಾದಾಯಕ ಬೆಳವಣಿಗೆ.

ಆದರೂ, ಮೇಲಿನ ಅಂಕಿಅಂಶಗನ್ನು ಗಮನಿಸಿದರೆ ಭಾರತದ ಮಟ್ಟಿಗೆ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಕಡೆಗೆ ನಿರೀಕ್ಷಿತ ಮಟ್ಟದಲ್ಲಿ ಆಕರ್ಷಿತರಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಇದಕ್ಕೆ ಪ್ರಮುಖ ಕಾರಣ ಎಲೆಕ್ಟ್ರಿಕ್ ವಾಹನಗಳ ಬೆಲೆ ಹೆಚ್ಚಿರುವುದು ಮತ್ತು ಇ-ಚಾರ್ಜಿಂಗ್ ಘಟಕಗಳ ಕೊರತೆ. ಭಾರತದಲ್ಲಿರುವ ಒಟ್ಟಾರೆ ಇ-ಚಾಜಿಂಗ್ ಘಟಕಗಳ ಸಂಖ್ಯೆ ಕೇವಲ 6,000 ಮಾತ್ರ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಅಧಿಕವಾಗಿರಲು ಕಾರಣ ಲಿಥಿಯಂ. ಈ ಮಾದರಿ ವಾಹನಗಳ ಬ್ಯಾಟರಿಯನ್ನು ಲಿಥಿಯಂನಿಂದಲೇ ತಯಾರಿಸಲಾಗುತ್ತದೆ. ಲಿಥಿಯಂಅನ್ನು ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾ ಸೇರಿದಂತೆ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದು, ಅದು ಸಾಕಷ್ಟು ದುಬಾರಿಯಾಗಿದೆ. ಅದರ ನೇರ ಪರಿಣಾಮವನ್ನು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಹಾಗೂ ನೂತನ ಖರೀದಿದಾರರು ಎದುರಿಸಬೇಕಾಗಿದೆ.

ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಪ್ರಮಾಣದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಕಳೆದ ವಾರವಷ್ಟೇ ಮಾಹಿತಿ ನೀಡಿದೆ. ಭಾರತೀಯ ಭೂಗರ್ಭಶಾಸ್ತ್ರ ಇಲಾಖೆಯು ಇಲ್ಲಿನ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನಾ ಎಂಬಲ್ಲಿ 59 ಲಕ್ಷ ಟನ್ ಲಿಥಿಯಂ ನಿಕ್ಷೇಪವಿರುವುದನ್ನು ಶೋಧಿಸಿದೆ. ಇಲ್ಲಿಂದ ಲಿಥಿಯಂಅನ್ನು ಪಡೆಯಲು ಸಾಧ್ಯವಾದರೆ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಕಾರುಗಳ ಬೆಲೆ ಇಳಿಕೆಯಾಗಬಹುದೆಂದು ಅಂದಾಜಿಸಲಾಗಿದೆ.

ಇದರ ಜೊತೆಗೆ “ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಲಿಥಿಯಂ-ಐಯಾನ್ ಬ್ಯಾಟರಿ ಸೆಲ್‌ಗಳನ್ನು ತಯಾರಿಸಲು ಬೇಕಾಗಿರುವ ಕಚ್ಚಾವಸ್ತುಗಳ ಆಮದಿಗೆ ಸುಂಕ ವಿನಾಯಿತಿ ವಿಸ್ತರಿಸಲಾಗಿದೆ” ಎಂದು ಕಳೆದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಘೋಷಿಸಿದ್ದರು ಎಂಬುದು ಉಲ್ಲೇಖಾರ್ಹ.

ಈ ನಡುವೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪೆನಿಗಳು ಇ-ಚಾರ್ಜಿಂಗ್ ಘಟಕಗಳನ್ನು ಹೆಚ್ಚಿಸುವ ಕಡೆಗೆ ಗಮನ ಹರಿಸಿರುವುದು ಮತ್ತು ದ್ವಿಚಕ್ರ ವಾಹನಗಳ ಬ್ಯಾಟರಿಗಳನ್ನು ಕಡಿಮೆ ಖರ್ಚಿನಲ್ಲಿ ಮನೆಯಲ್ಲೇ ಚಾರ್ಚ್ ಮಾಡಿಕೊಳ್ಳಲು ಅನುವಾಗುವಂತೆ ಅಭಿವೃದ್ಧಿ ಪಡಿಸಿರುವುದು ಗಮನಾರ್ಹ ಬೆಳವಣಿಗೆ. ಒಟ್ಟಾರೆ ಪ್ರಸ್ತುತ ಭಾರತದ ಆಟೋಮೊಬೈಲ್ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಎಲ್ಲ ಮಹತ್ವದ ಬೆಳವಣಿಗೆಗಳ ಕಡೆಗೆ ಒಮ್ಮೆ ಕಣ್ಣಾಯಿಸಿದರೆ ಮುಂಬರುವ ದಿನಗಳಲ್ಲಿ ಭಾರತದ ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಪಾರಮ್ಯ ಸಾಧಿಸುವ ಸಾಧ್ಯತೆ ದಟ್ಟವಾಗಿದೆ.

ಅಶೋಕ್ ಕುಮಾರ್

ಅಶೋಕ್ ಕುಮಾರ್
ಮೂಲತಃ ಭದ್ರಾವತಿಯವರಾದ ಅಶೋಕ್, ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವಿ ಯುವ ಪತ್ರಕರ್ತರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...