Homeಮುಖಪುಟಎಲೆಕ್ಟ್ರಿಕ್ ವಾಹನಗಳ ಹಬ್ ಆಗಲಿದೆಯೇ ಭಾರತ?

ಎಲೆಕ್ಟ್ರಿಕ್ ವಾಹನಗಳ ಹಬ್ ಆಗಲಿದೆಯೇ ಭಾರತ?

- Advertisement -
- Advertisement -

ಭಾರತ ವಿಶ್ವದ 4ನೇ ಅತಿದೊಡ್ಡ ವಾಹನದ ಮಾರುಕಟ್ಟೆ. ಆಟೋಮೊಬೈಲ್ ಕ್ಷೇತ್ರ ಭಾರತದ ರಸ್ತೆಗಳಿಗೆ ಪ್ರತಿವರ್ಷ ಹೊಸಹೊಸ ವಾಹನಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಪರಿಣಾಮ ಭಾರತದ ಪ್ರತಿದಿನದ ಅಂದಾಜು ಇಂಧನದ ಬಳಕೆ ಕನಿಷ್ಠ 5,154 ಬ್ಯಾರೆಲ್ ಎನ್ನುತ್ತಿವೆ ಅಂಕಿಅಂಶಗಳು. ಭಾರತದಲ್ಲಿ ಪ್ರತಿ ವರ್ಷ ಲಕ್ಷಾಂತರ ಲೀಟರ್ ಪಳೆಯುಳಿಕೆ ಇಂಧನ (ಪೆಟ್ರೋಲ್-ಡೀಸೆಲ್) ದಹನವಾಗುತ್ತಲೇ ಇದೆ. ವಾಯುಮಾಲಿನ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಎಚ್ಚರಿಕೆಯ ಘಂಟೆ ಬಾರಿಸುತ್ತಲೇ ಇದೆ.

ಆದರೆ, ಕೊರೊನೋತ್ತರ ಕಾಲದಲ್ಲಿ ಜಗತ್ತಿನ ಹಲವು ರಾಷ್ಟ್ರಗಳು ನಿಜಕ್ಕೂ ವಾಯುಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿವೆ ಎಂದೇ ಹೇಳಬೇಕು. ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆಗೆ ಅನೇಕ ಹೆಚ್ಚೆಚ್ಚು ಒತ್ತುನೀಡುತ್ತಿವೆ. ಜಾಗತಿಕ ತಾಪಮಾನ ಹೆಚ್ಚಿ ಹವಾಮಾನ ಬದಲಾವಣೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿಯೂ ’ಕ್ಲೀನ್ ಎನರ್ಜಿ’ ಎಂದು ಕರೆಯಲಾಗುವ ಇಂಧನಗಳಿಂದ ಚಾಲನೆಯಾಗುವ ವಾಹನಗಳ ಅಭಿವೃದ್ಧಿ ಮತ್ತು ಉತ್ಪಾದನೆಗೆ ಒತ್ತುನೀಡಲಾಗುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಹೀಗಾಗಿ ಭಾರತವೂ ಎಲೆಕ್ಟ್ರಿಕ್ ವಾಹನಗಳ ಕ್ರಾಂತಿಗೆ ಅಣಿಯಾಗುತ್ತಿದೆ ಎಂದರೆ ತಪ್ಪಾಗಲಾರದು.

ಎಕ್ಟ್ರಿಕ್ ವಾಹನಗಳ ಹಬ್ ಆಗುತ್ತಿದೆಯೇ ಭಾರತ?

ಕಳೆದ ಐದಾರು ವರ್ಷಗಳ ಅವಧಿಯಲ್ಲಿ ದೇಶದ ಇಪ್ಪತ್ತೊಂದಕ್ಕೂ ಹೆಚ್ಚು ರಾಜ್ಯಗಳು ಎಲೆಕ್ಟ್ರಿಕ್ ವಾಹನ ನೀತಿ ರೂಪಿಸಿದ್ದು, ಹೊಗೆ ಉಗುಳುವ ದ್ವಿಚಕ್ರ, ತ್ರಿಚಕ್ರ ವಾಹನಗಳನ್ನು ರಸ್ತೆಯಿಂದ ಹೊರಹಾಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿವೆ. ಗ್ಲಾಸ್ಗೊ ಒಪ್ಪಂದಕ್ಕೆ ಸಹಿ ಹಾಕಿರುವ ಭಾರತ ಸರ್ಕಾರ, 2030ರ ವೇಳೆಗೆ ನೂರು ಕೋಟಿ ಟನ್ ಇಂಗಾಲದ ಹೊಮ್ಮುವಿಕೆಯನ್ನು ಕಡಿಮೆ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ದೇಶದ ಪ್ರತೀ ನಗರಕ್ಕೂ ತನ್ನದೇ ಆದ ಶುದ್ಧ ಗಾಳಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಆ ದಿಸೆಯಲ್ಲಿ 132 ನಗರಗಳು ಈಗಾಗಲೇ ಕಾರ್ಯಪ್ರವೃತ್ತವಾಗಿವೆ.

ಭಾರತದ ಪಾಲಿಗೆ ದೊಡ್ಡ ಪ್ರಮಾಣದಲ್ಲಿ ಇಂಗಾಲವನ್ನು ಉಗುಳುತ್ತಿರುವುದು ಸಾರ್ವಜನಿಕ ಸಾರಿಗೆ ವ್ಯವಸ್ಥೆಯೇ. ಹೀಗಾಗಿ ಆಂಧ್ರಪ್ರದೇಶ, ಕೇರಳ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ದಶಕದ ಕೊನೆಯ ವೇಳೆಗೆ ತಲಾ ಹತ್ತು ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಯೋಜನೆ ತಯಾರಿಸಿವೆ. ಮೇಘಾಲಯ, ಗೋವಾ, ಹರಿಯಾಣ, ದೆಹಲಿ, ಒಡಿಶಾ, ಅಸ್ಸಾಂ, ಪಂಜಾಬ್ ಮತ್ತು ಮಹಾರಾಷ್ಟ್ರ ರಾಜ್ಯಗಳು ಇನ್ನೈದು ವರ್ಷಗಳಲ್ಲಿ ತಮ್ಮ ರಾಜ್ಯದ ರಸ್ತೆಗಳ ಮೇಲೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳು ಸಂಚರಿಸಲಿವೆ ಎಂದಿವೆ.

ಕೇಂದ್ರ ಸರ್ಕಾರ ಇದಕ್ಕಾಗಿ -10 ಸಾವಿರ ಕೋಟಿ ಬಂಡವಾಳ ಮೀಸಲಿಟ್ಟಿದೆ. ಇದರಿಂದ 10 ಲಕ್ಷ ದ್ವಿಚಕ್ರ, 5 ಲಕ್ಷ ತ್ರಿಚಕ್ರ ವಾಹನಗಳು, 55 ಸಾವಿರ ಕಾರು ಹಾಗೂ 70,000 ಎಲೆಕ್ಟ್ರಿಕ್ ಬಸ್‌ಗಳು ರಸ್ತೆಗೆ ಇಳಿಯಲಿವೆ. ಸತತ ವಾಯುಮಾಲಿನ್ಯದಿಂದ ಕಂಗಾಲಾಗಿರುವ ದೆಹಲಿ ಸರ್ಕಾರ ಮುಂದಿನ ವರ್ಷದ ಕೊನೆಯ ವೇಳೆಗೆ 5 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಗುರಿ ಇಟ್ಟುಕೊಂಡಿದ್ದು, ಈ ವರ್ಷಾಂತ್ಯಕ್ಕೆ, ಡೀಸೆಲ್‌ನಿಂದ ಓಡುವ ಎಲ್ಲ ತ್ರಿಚಕ್ರ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸುವ ತೀರ್ಮಾನ ಮಾಡಿದೆ.

ಒಡಿಶಾ ತನ್ನ ರಾಜ್ಯದ ಪೆಟ್ರೋಲ್, ಡೀಸೆಲ್, ಗ್ಯಾಸ್‌ನಿಂದ ಓಡುವ ಆಟೊರಿಕ್ಷಾಗಳನ್ನು ಎಲೆಕ್ಟ್ರಿಕ್‌ಗೆ ಬದಲಾಯಿಸುವ ಕೆಲಸಕ್ಕೆ ಕೈ ಹಾಕಿದೆ. ಕೊಚ್ಚಿನ್ ನಗರದಲ್ಲಿ ಚಾಲಕರು ಕೈನೆಟಿಕ್ ಗ್ರೀನ್ ಕಂಪನಿಯಿಂದ ಇ-ಆಟೊ ರಿಕ್ಷಾಗಳನ್ನು ಬಾಡಿಗೆಗೆ ಪಡೆದು ಓಡಿಸುತ್ತಿದ್ದಾರೆ.

ನಮ್ಮ ರಾಜ್ಯದಲ್ಲಿ ಒಂದೂವರೆ ಲಕ್ಷ ಇ-ವಾಹನಗಳಿವೆ. ಇವುಗಳಿಗಾಗಿ 2016ರಲ್ಲೇ ನೀತಿ ರೂಪಿಸಿದ್ದ ದೇಶದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಸರ್ಕಾರ ಅಂದಿನಿಂದಲೇ ಇ-ವಾಹನಗಳ ರಸ್ತೆ ತೆರಿಗೆಯನ್ನು ಸಂಪೂರ್ಣ ತೆಗೆದುಹಾಕಿತ್ತು. ಇತರ ರಾಜ್ಯಗಳು ಶೂನ್ಯ ರಸ್ತೆ ತೆರಿಗೆಯ ಜೊತೆ ಹಲವು ರಿಯಾಯಿತಿಗಳನ್ನೂ ನೀಡುತ್ತಿವೆ. ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯವು 2021ರ ಆಗಸ್ಟ್‌ನಲ್ಲಿ ಇ-ವಾಹನಗಳ ನೋಂದಣಿ ಹಾಗೂ ನವೀಕರಣ ಶುಲ್ಕ ಎರಡನ್ನೂ ತೆಗೆದುಹಾಕಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸರ್ಕಾರಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿವೆ.

ಭಾರತ ಮಾರುಕಟ್ಟೆಗೆ ಪೈಪೋಟಿ

ಎಲೆಕ್ಟ್ರಿಕ್ ವಾಹನಗಳು ಅಭಿವೃದ್ಧಿಯಾಗುತ್ತಿದ್ದಂತೆ ವಿಶ್ವದ ಅನೇಕ ವಾಹನ ಕಂಪನಿಗಳು ಡೀಸೆಲ್ ಎಂಜಿನ್ ಅಭಿವೃದ್ಧಿಯನ್ನು ನಿಲ್ಲಿಸಿ ಅಥವಾ ಕಡಿತಗೊಳಿಸಿ ಇ ಮತ್ತು ಹೈಬ್ರಿಡ್ ಕಾರುಗಳ ತಯಾರಿಕೆಗೆ ಮುಂದಾಗಿವೆ. ಪರಿಣಾಮ ಭಾರತ ಇದೀಗ ಅಂತಹ ವಾಹನಗಳ ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿ ಬದಲಾಗುತ್ತಿದೆ.

ಬೆಂಗಳೂರಿನ ನವೋದ್ಯಮ ಏಥರ್ ಎನರ್ಜಿ ಕಳೆದ ನಾಲ್ಕೈದು ವರ್ಷಗಳಿಂದ ದೇಶದ ಆಯ್ದ ನಗರಗಳಲ್ಲಿ ಇ-ಸ್ಕೂಟರ್ ಬಿಡುಗಡೆ ಮಾಡಿ ಯಶಸ್ವಿಯಾಗಿದೆ. ರಾವಿನ್, ಮಹೀಂದ್ರ, ಟಾಟಾ ಕಾರು ಕಂಪನಿಗಳು ಇ-ಕಾರುಗಳನ್ನು ಪರಿಚಯಿಸಿ ಈಗಾಗಲೇ ದಶಕಗಳೇ ಕಳೆದಿವೆ.

ಇದಲ್ಲದೆ, ದೇಶದ ಗ್ರೀನ್ ಮೊಬಿಲಿಟಿ ವಲಯದ ಅತಿದೊಡ್ಡ ಒಪ್ಪಂದವೊಂದಕ್ಕೆ ಟಾಟಾ ಮೋಟಾರ್ಸ್ ಮತ್ತು ಉಬರ್ ಇತ್ತೀಚೆಗೆ ಸಹಿ ಹಾಕಿರುವುದು ಭಾರತದ ಆಟೋಮೊಬೈಲ್ ಕ್ಷೇತ್ರದ ಪಾಲಿಗೆ ಗಮನಾರ್ಹ ಬೆಳವಣಿಗೆ. ಈ ಒಪ್ಪಂದದ ಪ್ರಕಾರ ಉಬರ್‌ಗೆ 25,000 ಎಕ್ಸ್‌ಪ್ರೆಸ್-ಟಿ ಎಲೆಕ್ಟ್ರಿಕ್ ವಾಹನಗಳನ್ನು ಟಾಟಾ ಮೊಟಾರ್ಸ್ ಪೂರೈಸಲಿದೆ.

ಈ ಎರಡು ಕಂಪನಿಗಳ ನಡುವಿನ ಒಪ್ಪಂದದ ಪ್ರಕಾರ ಉಬರ್ ತನ್ನ ಪ್ರೀಮಿಯಂ ವರ್ಗದ ಸೇವೆಯಲ್ಲಿ ಎಲೆಕ್ಟ್ರಿಕ್ ಸೆಡಾನ್ ವಾಹನಗಳನ್ನು ಬಳಸಿಕೊಳ್ಳಲಿದೆ. ಈ ಎಲೆಕ್ಟ್ರಿಕ್ ವಾಹನಗಳು ದಿಲ್ಲಿ ಎನ್‌ಸಿಆರ್, ಮುಂಬೈ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಈ ಒಪ್ಪಂದ ಯಶಸ್ವಿಯಾದರೆ ಭಾರತದ ಆಟೋಮೊಬೈಲ್ ಕ್ಷೇತ್ರದ ಪಾಲಿಗೆ “ಗೇಮ್ ಚೇಂಜರ್” ಆಗಲಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ವಿಶ್ವದ ಪ್ರಮುಖ ಕಾರ್ ತಯಾರಿಕಾ ಕಂಪೆನಿಗಳಲ್ಲಿ ಒಂದಾದ ನಿಸ್ಸಾನ್ ಸಹ, 2026ರ ವೇಳೆಗೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಅತಿದೊಡ್ಡ ಮಾರುಕಟ್ಟೆ ಸೃಷ್ಟಿಯಾಗಲಿರುವುದನ್ನು ಊಹಿಸಿ, ಅತೀ ಶೀಘ್ರದಲ್ಲಿ ತಮ್ಮ ಕಂಪೆನಿ ಭಾರತದಲ್ಲಿ ಎಲೆಕ್ಟ್ರಿಕ್ ಕಾರ್‌ಗಳನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ. ನಿಸ್ಸಾನ್ ಕಂಪೆನಿ ಈಗಾಗಲೇ ಯೂರೋಪ್ ಮತ್ತು ಜಪಾನ್ ದೇಶಗಳಲ್ಲಿ ತಮ್ಮ ಕಂಪೆನಿಯ ಎಲೆಕ್ಟ್ರಿಕ್ ಕಾರ್‌ಗಳನ್ನು ಪರಿಚಯಿಸಿ ಯಶಸ್ವಿಯಾಗಿದೆ ಎಂಬುದು ಉಲ್ಲೇಖಾರ್ಹ.

ಇನ್ನು ವಿಶ್ವದಲ್ಲೇ ಅತ್ಯಂತ ಯಶಸ್ವಿ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪೆನಿಯಾದ ಟೆಸ್ಲಾ ಸಹ ಭಾರತ ಮಾರುಕಟ್ಟೆ ಪ್ರವೇಶಿಸಿದೆ. ವರದಿಗಳ ಪ್ರಕಾರ ಕರ್ನಾಟಕ ಸರಕಾರದ ಅಧಿಕಾರಿಗಳ ಜೊತೆ ಟೆಸ್ಲಾ ಪ್ರತಿನಿಧಿಗಳ ಮೊದಲ ಸಭೆ 2021 ಸೆಪ್ಟೆಂಬರ್ 10 ರಂದೇ ನಡೆದಿತ್ತು.

ಸಭೆಗೆ ಮುನ್ನವೇ ಅಂದರೆ 2021 ಜನವರಿ 8ರಂದೇ ಟೆಸ್ಲಾ ಕಂಪೆನಿ ಬೆಂಗಳೂರಿನಲ್ಲಿ ತನ್ನ ಅಂಗಸಂಸ್ಥೆಯಾಗಿ ಟೆಸ್ಲಾ ಇಂಡಿಯಾ ಮೊಟರ್ಸ್ ಆಂಡ್ ಎನರ್ಜಿ ಪ್ರೈ. ಲಿ. ಎಂಬ ಹೆಸರಿನಲ್ಲಿ ಕಚೇರಿ ತೆರೆದಿತ್ತು. ಆದರೆ, ಮುಂದಿನ ಸಭೆ ಏನಾಯ್ತು? ಬೆಂಗಳೂರಿನಲ್ಲಿ ಟೆಸ್ಲಾ ಕಂಪೆನಿಯ ಭವಿಷ್ಯವೇನು? ಎಂಬ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಒಂದು ವೇಳೆ ಟೆಸ್ಲಾ ಭಾರತಕ್ಕೆ ಕಾಲಿಟ್ಟರೆ ಎಲೆಕ್ಟ್ರಿಕ್ ವಾಹನಗಳ ಉದ್ಯಮ ಮತ್ತೊಂದು ಮೈಲುಗಲ್ಲಿಗೆ ಏರಲಿರುವುದು ಖಚಿತ.

ಭಾರತದಲ್ಲಿ ಸದ್ಯಕ್ಕೆ ಎಷ್ಟು ಎಲೆಕ್ಟ್ರಿಕ್ ವಾಹನಗಳಿವೆ?

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಅನೇಕ ರಾಜ್ಯಗಳು ನಾನಾ ನೀತಿಗಳನ್ನು ರೂಪಿಸಿವೆ. ಆದರೂ, ದೇಶದಾದ್ಯಂತ ನೋಂದಣಿಯಾಗಿರುವ ಇ-ವಾಹನಗಳ ಸಂಖ್ಯೆ ಕೇವಲ 18 ಲಕ್ಷ ಮಾತ್ರ. ಉತ್ತರಪ್ರದೇಶದಲ್ಲಿ ಅತಿ ಹೆಚ್ಚು 4.1 ಲಕ್ಷ, ದೆಹಲಿ 1.8 ಲಕ್ಷ, ಮಹಾರಾಷ್ಟ್ರ 1.7 ಲಕ್ಷ, ಕರ್ನಾಟಕ 1.5 ಲಕ್ಷ, ರಾಜಸ್ಥಾನ 1.2 ಲಕ್ಷ, ಬಿಹಾರ 1.1 ಲಕ್ಷ ಮತ್ತು ತಮಿಳುನಾಡಿನಲ್ಲಿ 1 ಲಕ್ಷ ಇ-ವಾಹನಗಳಿವೆ. ಆದರೆ, ಇಷ್ಟೇ ಪ್ರಮಾಣದ ವಾಹನಗಳ ಬಳಕೆಯಿಂದ 107 ಲಕ್ಷ ಲೀಟರ್ ಇಂಧನವನ್ನು ಉಳಿಸಲಾಗಿದೆ ಎಂಬುದು ಆಶಾದಾಯಕ ಬೆಳವಣಿಗೆ.

ಆದರೂ, ಮೇಲಿನ ಅಂಕಿಅಂಶಗನ್ನು ಗಮನಿಸಿದರೆ ಭಾರತದ ಮಟ್ಟಿಗೆ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಕಡೆಗೆ ನಿರೀಕ್ಷಿತ ಮಟ್ಟದಲ್ಲಿ ಆಕರ್ಷಿತರಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಇದಕ್ಕೆ ಪ್ರಮುಖ ಕಾರಣ ಎಲೆಕ್ಟ್ರಿಕ್ ವಾಹನಗಳ ಬೆಲೆ ಹೆಚ್ಚಿರುವುದು ಮತ್ತು ಇ-ಚಾರ್ಜಿಂಗ್ ಘಟಕಗಳ ಕೊರತೆ. ಭಾರತದಲ್ಲಿರುವ ಒಟ್ಟಾರೆ ಇ-ಚಾಜಿಂಗ್ ಘಟಕಗಳ ಸಂಖ್ಯೆ ಕೇವಲ 6,000 ಮಾತ್ರ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಅಧಿಕವಾಗಿರಲು ಕಾರಣ ಲಿಥಿಯಂ. ಈ ಮಾದರಿ ವಾಹನಗಳ ಬ್ಯಾಟರಿಯನ್ನು ಲಿಥಿಯಂನಿಂದಲೇ ತಯಾರಿಸಲಾಗುತ್ತದೆ. ಲಿಥಿಯಂಅನ್ನು ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾ ಸೇರಿದಂತೆ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದು, ಅದು ಸಾಕಷ್ಟು ದುಬಾರಿಯಾಗಿದೆ. ಅದರ ನೇರ ಪರಿಣಾಮವನ್ನು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಹಾಗೂ ನೂತನ ಖರೀದಿದಾರರು ಎದುರಿಸಬೇಕಾಗಿದೆ.

ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಪ್ರಮಾಣದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಕಳೆದ ವಾರವಷ್ಟೇ ಮಾಹಿತಿ ನೀಡಿದೆ. ಭಾರತೀಯ ಭೂಗರ್ಭಶಾಸ್ತ್ರ ಇಲಾಖೆಯು ಇಲ್ಲಿನ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನಾ ಎಂಬಲ್ಲಿ 59 ಲಕ್ಷ ಟನ್ ಲಿಥಿಯಂ ನಿಕ್ಷೇಪವಿರುವುದನ್ನು ಶೋಧಿಸಿದೆ. ಇಲ್ಲಿಂದ ಲಿಥಿಯಂಅನ್ನು ಪಡೆಯಲು ಸಾಧ್ಯವಾದರೆ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಕಾರುಗಳ ಬೆಲೆ ಇಳಿಕೆಯಾಗಬಹುದೆಂದು ಅಂದಾಜಿಸಲಾಗಿದೆ.

ಇದರ ಜೊತೆಗೆ “ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಲಿಥಿಯಂ-ಐಯಾನ್ ಬ್ಯಾಟರಿ ಸೆಲ್‌ಗಳನ್ನು ತಯಾರಿಸಲು ಬೇಕಾಗಿರುವ ಕಚ್ಚಾವಸ್ತುಗಳ ಆಮದಿಗೆ ಸುಂಕ ವಿನಾಯಿತಿ ವಿಸ್ತರಿಸಲಾಗಿದೆ” ಎಂದು ಕಳೆದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಘೋಷಿಸಿದ್ದರು ಎಂಬುದು ಉಲ್ಲೇಖಾರ್ಹ.

ಈ ನಡುವೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪೆನಿಗಳು ಇ-ಚಾರ್ಜಿಂಗ್ ಘಟಕಗಳನ್ನು ಹೆಚ್ಚಿಸುವ ಕಡೆಗೆ ಗಮನ ಹರಿಸಿರುವುದು ಮತ್ತು ದ್ವಿಚಕ್ರ ವಾಹನಗಳ ಬ್ಯಾಟರಿಗಳನ್ನು ಕಡಿಮೆ ಖರ್ಚಿನಲ್ಲಿ ಮನೆಯಲ್ಲೇ ಚಾರ್ಚ್ ಮಾಡಿಕೊಳ್ಳಲು ಅನುವಾಗುವಂತೆ ಅಭಿವೃದ್ಧಿ ಪಡಿಸಿರುವುದು ಗಮನಾರ್ಹ ಬೆಳವಣಿಗೆ. ಒಟ್ಟಾರೆ ಪ್ರಸ್ತುತ ಭಾರತದ ಆಟೋಮೊಬೈಲ್ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಎಲ್ಲ ಮಹತ್ವದ ಬೆಳವಣಿಗೆಗಳ ಕಡೆಗೆ ಒಮ್ಮೆ ಕಣ್ಣಾಯಿಸಿದರೆ ಮುಂಬರುವ ದಿನಗಳಲ್ಲಿ ಭಾರತದ ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಪಾರಮ್ಯ ಸಾಧಿಸುವ ಸಾಧ್ಯತೆ ದಟ್ಟವಾಗಿದೆ.

ಅಶೋಕ್ ಕುಮಾರ್

ಅಶೋಕ್ ಕುಮಾರ್
ಮೂಲತಃ ಭದ್ರಾವತಿಯವರಾದ ಅಶೋಕ್, ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವಿ ಯುವ ಪತ್ರಕರ್ತರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...