Homeಮುಖಪುಟಕೇಂದ್ರದಲ್ಲಿ ಸರ್ಕಾರ ರಚನೆಗೆ 'ಇಂಡಿಯಾ ಮೈತ್ರಿಕೂಟ'ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

- Advertisement -
- Advertisement -

ಕೇಂದ್ರದಲ್ಲಿ ಸರ್ಕಾರ ರಚಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ತಮ್ಮ ಪಕ್ಷವು ಬಾಹ್ಯ ಬೆಂಬಲ ನೀಡಲಿದೆ ಪ.ಬಂಗಾಳ ಸಿಎಂ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಹೂಗ್ಲಿಯ ಚಿನ್ಸುರಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿದ ತಕ್ಷಣ ಸಿಎಎ, ಎನ್‌ಆರ್‌ಸಿ ಮತ್ತು ಯುಸಿಸಿಯನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗಳಿಸುವ ಬಿಜೆಪಿಯ ಗುರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಜನರು ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.

400 ಸೀಟು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ, ಆದರೆ ಜನ ಇದು ನಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ. ಬಿಜೆಪಿ ಕಳ್ಳರಿಂದ ತುಂಬಿರುವ ಪಕ್ಷ ಎಂದು ಇಡೀ ದೇಶವೇ ಅರ್ಥ ಮಾಡಿಕೊಂಡಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಾವು ಹೊರಗಿನಿಂದ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುತ್ತೇವೆ. ಆದ್ದರಿಂದ ಪಶ್ಚಿಮ ಬಂಗಾಳದಲ್ಲಿ, ನಮ್ಮ ತಾಯಂದಿರು ಮತ್ತು ಸಹೋದರಿಯರು ಎಂದಿಗೂ ಸಮಸ್ಯೆಯನ್ನು ಎದುರಿಸುವುದಿಲ್ಲ,  100 ದಿನಗಳ ಉದ್ಯೋಗ ಯೋಜನೆಯಲ್ಲಿ ಕೆಲಸ ಮಾಡುವವರು ಸಹ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಐ(ಎಂ)ನ್ನು ಬೆಂಬಲಿಸುವುದಿಲ್ಲ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಈ ಎರಡೂ ಪಕ್ಷಗಳು ರಾಜ್ಯದಲ್ಲಿ ಬಿಜೆಪಿಗೆ ಸಹಾಯ ಮಾಡುತ್ತಿವೆ. ಬಂಗಾಳದಲ್ಲಿ ಸಿಪಿಐ(ಎಂ) ಮತ್ತು ಕಾಂಗ್ರೆಸ್‌ನ್ನು ಲೆಕ್ಕಿಸಬೇಡಿ. ಅವರು ನಮ್ಮೊಂದಿಗಿಲ್ಲ, ಇಲ್ಲಿ ಬಿಜೆಪಿ ಜೊತೆಗಿದ್ದಾರೆ. ನಾನು ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

2004ರ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋಲನ್ನು ಸ್ಮರಿಸಿದ ಬ್ಯಾನರ್ಜಿ, ಬಿಜೆಪಿಯ ‘ಇಂಡಿಯಾ ಶೈನಿಂಗ್’ ಘೋಷಣೆಯ ಹೊರತಾಗಿಯೂ 2004ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಸೋಲನ್ನು ಕಂಡಿದ್ದರು.  ಈ ಸೋಲನ್ನು ಯಾರೂ ಊಹಿಸಿರಲಿಲ್ಲ. ಜನರು ಅವರಿಗೆ ಮತ ಹಾಕಿರಲಿಲ್ಲ ಎಂದು ಹೇಳಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ ಏಳು ಹಂತಗಳಲ್ಲಿ ಚುನಾವಣೆಯನ್ನು ನಿಗದಿಪಡಿಸಿದ್ದಕ್ಕಾಗಿ ಚುನಾವಣಾ ಆಯೋಗವನ್ನು ಟೀಕಿಸಿದ ಮಮತಾ ಬ್ಯಾನರ್ಜಿ, ಈ ನಿರ್ಧಾರವು ಕೇಸರಿ ಪಕ್ಷಕ್ಕೆ ಅನುಕೂಲಕರವಾಗಿದೆ ಮತ್ತು ಅತಿಯಾದ ತಾಪಮಾನದಿಂದ ಸಾಮಾನ್ಯ ಜನರು ಎದುರಿಸುತ್ತಿರುವ ಕಷ್ಟಗಳನ್ನು ಕಡೆಗಣಿಸಿದ್ದಾರೆ. ಚುನಾವಣಾ ಆಯೋಗವು ಕೈಗೊಂಬೆಯಾಗಿದ್ದು, ಮೋದಿಯವರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತದೆ. ಎರಡೂವರೆ ತಿಂಗಳಿನಿಂದ ಚುನಾವಣೆ ನಡೆಯುತ್ತಿದೆ, ಚುನಾವಣಾ ಅಧಿಕಾರಿಗಳು ಎಂದಾದರೂ ಜನಸಾಮಾನ್ಯರ ಕಷ್ಟಗಳನ್ನು ಅರಿತುಕೊಂಡಿದ್ದೀರಾ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಸ್ತರಿಸುವ ಯೋಜನೆಗಳನ್ನು ಘೋಷಿಸುವ ಮೂಲಕ ಮೋದಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ. ಚುನಾವಣೆ ನಡೆಯುತ್ತಿರುವಾಗ ಈಗ ಯಾಕೆ ಹೀಗೆ ಹೇಳುತ್ತಿದ್ದೀರಿ? ನೀವು ಇದನ್ನು ಮೊದಲೇ ಘೋಷಿಸಬೇಕಿತ್ತು, ಮೋದಿ ಅವರೇ, ನೀವು ಚುನಾವಣಾ ನೀತಿ ಸಂಹಿತೆಯ್ನು ಉಲ್ಲಂಘಿಸುತ್ತಿದ್ದೀರಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನು ಓದಿ: ಮೋದಿ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಂದಿರ-ಮಸೀದಿ ಎನ್ನುತ್ತಿದ್ದಾರೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...