Homeಕರ್ನಾಟಕಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ನಿನ್ನೆ (ಡಿ.22) ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. “ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಹಿಜಾಬ್ ನಿಷೇಧ ಈಗ ಇಲ್ಲ, ಅದನ್ನು ವಾಪಸ್ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉಡುಪು ಧರಿಸುವುದು, ಊಟ ಮಾಡುವುದು ಜನರ ವೈಯುಕ್ತಿಕ ವಿಚಾರ. ನಾನು ಧೋತಿ, ಶರ್ಟ್ ಧರಿಸುತ್ತೇನೆ. ನೀನು ನಿನಗಿಷ್ಟ ಬಂದ ಡ್ರೆಸ್ ಹಾಕು. ಪ್ಯಾಂಟ್ ಶರ್ಟ್‌ ಏನು ಬೇಕಾದರೂ ಹಾಕು. ಉಡುಪು, ಊಟ ಅವರವರ ಇಚ್ಛೆಗೆ ಸೇರಿದ್ದು. ಅದಕ್ಕೆ ನಾನೇಕೆ ಅಡ್ಡಿ ಪಡಿಸಬೇಕು? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮತಕ್ಕಾಗಿ ರಾಜಕಾರಣ ಮಾಡಬಾರದು. ನಾವು ಯಾವುದೇ ಜಾತಿ, ಧರ್ಮ ತಾರತಮ್ಯ ಮಾಡುವುದಿಲ್ಲ. ನಮ್ಮ ಸರ್ಕಾರ ಸಮಾಜದಲ್ಲಿನ ಬಡವರು, ದಲಿತರು, ಹಿಂದುಳಿದವರಿಗೆ ನ್ಯಾಯ ಕೊಡುವ ಕೆಲಸ ಮಾಡಲಿದೆ. ಈ ವಿಚಾರದಲ್ಲಿ ವಿಚಲಿತರಾಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬಿಜೆಪಿಯವರು ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಎಂದು ಹೇಳ್ತಾರೆ. ಆದ್ರೆ ಗಡ್ಡದವರು, ಟೋಪಿ, ಬುರ್ಕಾ ಧರಿಸಿರುವವರನ್ನು ಹತ್ತಿರ ಬರಬೇಡಿ ಎನ್ನುತ್ತಾರೆ. ಹೀಗಿರುವಾಗ ಎಲ್ಲಿದೆ ಸಬ್‌ ಕಾ ವಿಕಾಸ್?. ನಾವು ಹಾಗಿಲ್ಲ, ನಾವು ಎಲ್ಲಾ ಜಾತಿ, ಧರ್ಮ, ಪಕ್ಷದವರಿಗೂ ಸಹಾಯ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಏನಿದು ಪ್ರಕರಣ?

ಜನವರಿ 2022ರಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದಕ್ಕೆ ನಿರ್ಬಂಧ ಹೇರಲಾಗಿತ್ತು. ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಮುಂದೆ ವಾರಗಳ ಕಾಲ ಪ್ರತಿಭಟಿಸಿದ್ದರು.

ಈ ವೇಳೆ ಹಿಂದುತ್ವ ವಿದ್ಯಾರ್ಥಿ ಸಂಘಟನೆ ಎಬಿಪಿವಿ ನೇತೃತ್ವದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿರುದ್ಧ ‘ಕೇಸರಿ ಶಾಲು ಅಭಿಯಾನ’ ಆರಂಭವಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ನೀಡಿದರೆ ನಮಗೆ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು ಎಂದು ಹಿಂದೂ ವಿದ್ಯಾರ್ಥಿಗಳು ಆಗ್ರಹಿಸಿದ್ದರು.

ಈ ನಡುವೆ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣ ನ್ಯಾಯಾಲಯದಲ್ಲಿದ್ದಾಗಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು.

ಬಳಿಕ ವಿದ್ಯಾರ್ಥಿನಿಯರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. 2022 ಮಾರ್ಚ್​ 15ರಂದು 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬಿದ್ದಿತ್ತು. ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ಪೂರ್ಣ ಪೀಠವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿ ಸರ್ವಸಮ್ಮತ ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುದೀರ್ಘ ಸಮಯ ವಿದ್ಯಾರ್ಥಿನಿಯರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ವಿಭಜಿತ ತೀರ್ಪು ನೀಡಿತ್ತು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿತ್ತು. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್​ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದ್ದರು. ಇದರಿಂದ ಹಿಜಾಬ್ ಪ್ರಕರಣ ವಿಸ್ಕೃತ ಪೀಠಕ್ಕೆ ವರ್ಗಾವಣೆಯಾಗಿತ್ತು.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಡಾ. ಎಂ.ಸಿ ಸುಧಾಕರ್ ಉನ್ನತ ಶಿಕ್ಷಣ ಸಚಿವರಾದರು. ಸಚಿವ ಸುಧಾಕರ್ ಅವರು ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರ ಸರ್ಕಾರದ ಗಮನದಲ್ಲಿದೆ ಎಂದು 2023ರ ಅಕ್ಟೋಬರ್‌ನಲ್ಲಿ ಸುಳಿವು ನೀಡಿದ್ದರು.

ಹೈಕೋರ್ಟ್ ತೀರ್ಪಿಗೆ ತಡೆ ಇಲ್ಲದಿದ್ದ ಕಾರಣ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕವೂ ಪರೀಕ್ಷೆಗಳ ವೇಳೆ ಹಿಜಾಬ್ ನಿಷೇಧ ಮುಂದುವರಿಸಲಾಗಿತ್ತು. ಮಾರ್ಚ್, ಏಪ್ರಿಲ್‌ನಲ್ಲಿ ನಡೆದ ಬೋರ್ಡ್‌ ಪರೀಕ್ಷೆಗಳಲ್ಲಿ ಶಾಲಾ, ಕಾಲೇಜು ಈ ನಿಯಮ ಪಾಲಿಸುವಂತೆ ಆದೇಶ ನೀಡಲಾಗಿತ್ತು. ಹಿಜಾಬ್ ಧರಿಸಿ ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ.

ಈ ನಡುವೆ ಸುಪ್ರೀಂ ಕೋರ್ಟ್‌ನ ವಿಸ್ಕೃತ ಪೀಠಕ್ಕೆ ವರ್ಗಾವಣೆಯಾಗಲು ಪ್ರಕರಣ ಬಾಕಿ ಇತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಕರಣದ ವಿಚಾರಣೆ 2023ರ ಮಾರ್ಚ್ 17ರಂದು ನಡೆಸುವುದಾಗಿ ಮಾರ್ಚ್ 3ರಂದು ತಿಳಿಸಿದ್ದರು. ಮಾರ್ಚ್ 9ಕ್ಕೆ ಪರೀಕ್ಷೆ ನಡೆಯಲಿದೆ ಎಂದಾಗ, ಮಾರ್ಚ್ 13ಕ್ಕೆ ನೋಡೋಣ ಎಂದಿದ್ದರು. ಅಲ್ಲದೆ, ಖಚಿತವಾಗಿ ಸಾಂವಿಧಾನಿಕ ಪೀಠ ರಚಿಸುತ್ತೇವೆ ಎಂದು ತಿಳಿಸಿದ್ದರು. ಇನ್ನೂ ಸಾಂವಿಧಾನಿಕ ಪೀಠ ರಚನೆಯಾಗಿ ಪ್ರಕರಣದ ವಿಚಾರಣೆ ಆರಂಭವಾಗಿಲ್ಲ. ಈ ನಡುವೆ ಕರ್ನಾಟಕ ರಾಜ್ಯ ಸರ್ಕಾರ ಹಿಜಾಬ್ ನಿಷೇಧ ವಾಪಸ್ ಪಡೆಯಲು ಮುಂದಾಗಿದೆ.

ಇದನ್ನೂ ಓದಿ: ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...