Homeಕರ್ನಾಟಕಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ನಿನ್ನೆ (ಡಿ.22) ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. “ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಹಿಜಾಬ್ ನಿಷೇಧ ಈಗ ಇಲ್ಲ, ಅದನ್ನು ವಾಪಸ್ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉಡುಪು ಧರಿಸುವುದು, ಊಟ ಮಾಡುವುದು ಜನರ ವೈಯುಕ್ತಿಕ ವಿಚಾರ. ನಾನು ಧೋತಿ, ಶರ್ಟ್ ಧರಿಸುತ್ತೇನೆ. ನೀನು ನಿನಗಿಷ್ಟ ಬಂದ ಡ್ರೆಸ್ ಹಾಕು. ಪ್ಯಾಂಟ್ ಶರ್ಟ್‌ ಏನು ಬೇಕಾದರೂ ಹಾಕು. ಉಡುಪು, ಊಟ ಅವರವರ ಇಚ್ಛೆಗೆ ಸೇರಿದ್ದು. ಅದಕ್ಕೆ ನಾನೇಕೆ ಅಡ್ಡಿ ಪಡಿಸಬೇಕು? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮತಕ್ಕಾಗಿ ರಾಜಕಾರಣ ಮಾಡಬಾರದು. ನಾವು ಯಾವುದೇ ಜಾತಿ, ಧರ್ಮ ತಾರತಮ್ಯ ಮಾಡುವುದಿಲ್ಲ. ನಮ್ಮ ಸರ್ಕಾರ ಸಮಾಜದಲ್ಲಿನ ಬಡವರು, ದಲಿತರು, ಹಿಂದುಳಿದವರಿಗೆ ನ್ಯಾಯ ಕೊಡುವ ಕೆಲಸ ಮಾಡಲಿದೆ. ಈ ವಿಚಾರದಲ್ಲಿ ವಿಚಲಿತರಾಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬಿಜೆಪಿಯವರು ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಎಂದು ಹೇಳ್ತಾರೆ. ಆದ್ರೆ ಗಡ್ಡದವರು, ಟೋಪಿ, ಬುರ್ಕಾ ಧರಿಸಿರುವವರನ್ನು ಹತ್ತಿರ ಬರಬೇಡಿ ಎನ್ನುತ್ತಾರೆ. ಹೀಗಿರುವಾಗ ಎಲ್ಲಿದೆ ಸಬ್‌ ಕಾ ವಿಕಾಸ್?. ನಾವು ಹಾಗಿಲ್ಲ, ನಾವು ಎಲ್ಲಾ ಜಾತಿ, ಧರ್ಮ, ಪಕ್ಷದವರಿಗೂ ಸಹಾಯ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಏನಿದು ಪ್ರಕರಣ?

ಜನವರಿ 2022ರಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದಕ್ಕೆ ನಿರ್ಬಂಧ ಹೇರಲಾಗಿತ್ತು. ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಮುಂದೆ ವಾರಗಳ ಕಾಲ ಪ್ರತಿಭಟಿಸಿದ್ದರು.

ಈ ವೇಳೆ ಹಿಂದುತ್ವ ವಿದ್ಯಾರ್ಥಿ ಸಂಘಟನೆ ಎಬಿಪಿವಿ ನೇತೃತ್ವದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿರುದ್ಧ ‘ಕೇಸರಿ ಶಾಲು ಅಭಿಯಾನ’ ಆರಂಭವಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ನೀಡಿದರೆ ನಮಗೆ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು ಎಂದು ಹಿಂದೂ ವಿದ್ಯಾರ್ಥಿಗಳು ಆಗ್ರಹಿಸಿದ್ದರು.

ಈ ನಡುವೆ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣ ನ್ಯಾಯಾಲಯದಲ್ಲಿದ್ದಾಗಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು.

ಬಳಿಕ ವಿದ್ಯಾರ್ಥಿನಿಯರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. 2022 ಮಾರ್ಚ್​ 15ರಂದು 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬಿದ್ದಿತ್ತು. ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ಪೂರ್ಣ ಪೀಠವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿ ಸರ್ವಸಮ್ಮತ ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುದೀರ್ಘ ಸಮಯ ವಿದ್ಯಾರ್ಥಿನಿಯರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ವಿಭಜಿತ ತೀರ್ಪು ನೀಡಿತ್ತು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿತ್ತು. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್​ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದ್ದರು. ಇದರಿಂದ ಹಿಜಾಬ್ ಪ್ರಕರಣ ವಿಸ್ಕೃತ ಪೀಠಕ್ಕೆ ವರ್ಗಾವಣೆಯಾಗಿತ್ತು.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಡಾ. ಎಂ.ಸಿ ಸುಧಾಕರ್ ಉನ್ನತ ಶಿಕ್ಷಣ ಸಚಿವರಾದರು. ಸಚಿವ ಸುಧಾಕರ್ ಅವರು ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರ ಸರ್ಕಾರದ ಗಮನದಲ್ಲಿದೆ ಎಂದು 2023ರ ಅಕ್ಟೋಬರ್‌ನಲ್ಲಿ ಸುಳಿವು ನೀಡಿದ್ದರು.

ಹೈಕೋರ್ಟ್ ತೀರ್ಪಿಗೆ ತಡೆ ಇಲ್ಲದಿದ್ದ ಕಾರಣ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕವೂ ಪರೀಕ್ಷೆಗಳ ವೇಳೆ ಹಿಜಾಬ್ ನಿಷೇಧ ಮುಂದುವರಿಸಲಾಗಿತ್ತು. ಮಾರ್ಚ್, ಏಪ್ರಿಲ್‌ನಲ್ಲಿ ನಡೆದ ಬೋರ್ಡ್‌ ಪರೀಕ್ಷೆಗಳಲ್ಲಿ ಶಾಲಾ, ಕಾಲೇಜು ಈ ನಿಯಮ ಪಾಲಿಸುವಂತೆ ಆದೇಶ ನೀಡಲಾಗಿತ್ತು. ಹಿಜಾಬ್ ಧರಿಸಿ ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ.

ಈ ನಡುವೆ ಸುಪ್ರೀಂ ಕೋರ್ಟ್‌ನ ವಿಸ್ಕೃತ ಪೀಠಕ್ಕೆ ವರ್ಗಾವಣೆಯಾಗಲು ಪ್ರಕರಣ ಬಾಕಿ ಇತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಕರಣದ ವಿಚಾರಣೆ 2023ರ ಮಾರ್ಚ್ 17ರಂದು ನಡೆಸುವುದಾಗಿ ಮಾರ್ಚ್ 3ರಂದು ತಿಳಿಸಿದ್ದರು. ಮಾರ್ಚ್ 9ಕ್ಕೆ ಪರೀಕ್ಷೆ ನಡೆಯಲಿದೆ ಎಂದಾಗ, ಮಾರ್ಚ್ 13ಕ್ಕೆ ನೋಡೋಣ ಎಂದಿದ್ದರು. ಅಲ್ಲದೆ, ಖಚಿತವಾಗಿ ಸಾಂವಿಧಾನಿಕ ಪೀಠ ರಚಿಸುತ್ತೇವೆ ಎಂದು ತಿಳಿಸಿದ್ದರು. ಇನ್ನೂ ಸಾಂವಿಧಾನಿಕ ಪೀಠ ರಚನೆಯಾಗಿ ಪ್ರಕರಣದ ವಿಚಾರಣೆ ಆರಂಭವಾಗಿಲ್ಲ. ಈ ನಡುವೆ ಕರ್ನಾಟಕ ರಾಜ್ಯ ಸರ್ಕಾರ ಹಿಜಾಬ್ ನಿಷೇಧ ವಾಪಸ್ ಪಡೆಯಲು ಮುಂದಾಗಿದೆ.

ಇದನ್ನೂ ಓದಿ: ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...