Homeಕರ್ನಾಟಕಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ನಿನ್ನೆ (ಡಿ.22) ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. “ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಹಿಜಾಬ್ ನಿಷೇಧ ಈಗ ಇಲ್ಲ, ಅದನ್ನು ವಾಪಸ್ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉಡುಪು ಧರಿಸುವುದು, ಊಟ ಮಾಡುವುದು ಜನರ ವೈಯುಕ್ತಿಕ ವಿಚಾರ. ನಾನು ಧೋತಿ, ಶರ್ಟ್ ಧರಿಸುತ್ತೇನೆ. ನೀನು ನಿನಗಿಷ್ಟ ಬಂದ ಡ್ರೆಸ್ ಹಾಕು. ಪ್ಯಾಂಟ್ ಶರ್ಟ್‌ ಏನು ಬೇಕಾದರೂ ಹಾಕು. ಉಡುಪು, ಊಟ ಅವರವರ ಇಚ್ಛೆಗೆ ಸೇರಿದ್ದು. ಅದಕ್ಕೆ ನಾನೇಕೆ ಅಡ್ಡಿ ಪಡಿಸಬೇಕು? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮತಕ್ಕಾಗಿ ರಾಜಕಾರಣ ಮಾಡಬಾರದು. ನಾವು ಯಾವುದೇ ಜಾತಿ, ಧರ್ಮ ತಾರತಮ್ಯ ಮಾಡುವುದಿಲ್ಲ. ನಮ್ಮ ಸರ್ಕಾರ ಸಮಾಜದಲ್ಲಿನ ಬಡವರು, ದಲಿತರು, ಹಿಂದುಳಿದವರಿಗೆ ನ್ಯಾಯ ಕೊಡುವ ಕೆಲಸ ಮಾಡಲಿದೆ. ಈ ವಿಚಾರದಲ್ಲಿ ವಿಚಲಿತರಾಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬಿಜೆಪಿಯವರು ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಎಂದು ಹೇಳ್ತಾರೆ. ಆದ್ರೆ ಗಡ್ಡದವರು, ಟೋಪಿ, ಬುರ್ಕಾ ಧರಿಸಿರುವವರನ್ನು ಹತ್ತಿರ ಬರಬೇಡಿ ಎನ್ನುತ್ತಾರೆ. ಹೀಗಿರುವಾಗ ಎಲ್ಲಿದೆ ಸಬ್‌ ಕಾ ವಿಕಾಸ್?. ನಾವು ಹಾಗಿಲ್ಲ, ನಾವು ಎಲ್ಲಾ ಜಾತಿ, ಧರ್ಮ, ಪಕ್ಷದವರಿಗೂ ಸಹಾಯ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಏನಿದು ಪ್ರಕರಣ?

ಜನವರಿ 2022ರಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದಕ್ಕೆ ನಿರ್ಬಂಧ ಹೇರಲಾಗಿತ್ತು. ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಮುಂದೆ ವಾರಗಳ ಕಾಲ ಪ್ರತಿಭಟಿಸಿದ್ದರು.

ಈ ವೇಳೆ ಹಿಂದುತ್ವ ವಿದ್ಯಾರ್ಥಿ ಸಂಘಟನೆ ಎಬಿಪಿವಿ ನೇತೃತ್ವದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿರುದ್ಧ ‘ಕೇಸರಿ ಶಾಲು ಅಭಿಯಾನ’ ಆರಂಭವಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ನೀಡಿದರೆ ನಮಗೆ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು ಎಂದು ಹಿಂದೂ ವಿದ್ಯಾರ್ಥಿಗಳು ಆಗ್ರಹಿಸಿದ್ದರು.

ಈ ನಡುವೆ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣ ನ್ಯಾಯಾಲಯದಲ್ಲಿದ್ದಾಗಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು.

ಬಳಿಕ ವಿದ್ಯಾರ್ಥಿನಿಯರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. 2022 ಮಾರ್ಚ್​ 15ರಂದು 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬಿದ್ದಿತ್ತು. ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ಪೂರ್ಣ ಪೀಠವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿ ಸರ್ವಸಮ್ಮತ ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುದೀರ್ಘ ಸಮಯ ವಿದ್ಯಾರ್ಥಿನಿಯರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ವಿಭಜಿತ ತೀರ್ಪು ನೀಡಿತ್ತು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿತ್ತು. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್​ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದ್ದರು. ಇದರಿಂದ ಹಿಜಾಬ್ ಪ್ರಕರಣ ವಿಸ್ಕೃತ ಪೀಠಕ್ಕೆ ವರ್ಗಾವಣೆಯಾಗಿತ್ತು.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಡಾ. ಎಂ.ಸಿ ಸುಧಾಕರ್ ಉನ್ನತ ಶಿಕ್ಷಣ ಸಚಿವರಾದರು. ಸಚಿವ ಸುಧಾಕರ್ ಅವರು ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರ ಸರ್ಕಾರದ ಗಮನದಲ್ಲಿದೆ ಎಂದು 2023ರ ಅಕ್ಟೋಬರ್‌ನಲ್ಲಿ ಸುಳಿವು ನೀಡಿದ್ದರು.

ಹೈಕೋರ್ಟ್ ತೀರ್ಪಿಗೆ ತಡೆ ಇಲ್ಲದಿದ್ದ ಕಾರಣ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕವೂ ಪರೀಕ್ಷೆಗಳ ವೇಳೆ ಹಿಜಾಬ್ ನಿಷೇಧ ಮುಂದುವರಿಸಲಾಗಿತ್ತು. ಮಾರ್ಚ್, ಏಪ್ರಿಲ್‌ನಲ್ಲಿ ನಡೆದ ಬೋರ್ಡ್‌ ಪರೀಕ್ಷೆಗಳಲ್ಲಿ ಶಾಲಾ, ಕಾಲೇಜು ಈ ನಿಯಮ ಪಾಲಿಸುವಂತೆ ಆದೇಶ ನೀಡಲಾಗಿತ್ತು. ಹಿಜಾಬ್ ಧರಿಸಿ ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ.

ಈ ನಡುವೆ ಸುಪ್ರೀಂ ಕೋರ್ಟ್‌ನ ವಿಸ್ಕೃತ ಪೀಠಕ್ಕೆ ವರ್ಗಾವಣೆಯಾಗಲು ಪ್ರಕರಣ ಬಾಕಿ ಇತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಕರಣದ ವಿಚಾರಣೆ 2023ರ ಮಾರ್ಚ್ 17ರಂದು ನಡೆಸುವುದಾಗಿ ಮಾರ್ಚ್ 3ರಂದು ತಿಳಿಸಿದ್ದರು. ಮಾರ್ಚ್ 9ಕ್ಕೆ ಪರೀಕ್ಷೆ ನಡೆಯಲಿದೆ ಎಂದಾಗ, ಮಾರ್ಚ್ 13ಕ್ಕೆ ನೋಡೋಣ ಎಂದಿದ್ದರು. ಅಲ್ಲದೆ, ಖಚಿತವಾಗಿ ಸಾಂವಿಧಾನಿಕ ಪೀಠ ರಚಿಸುತ್ತೇವೆ ಎಂದು ತಿಳಿಸಿದ್ದರು. ಇನ್ನೂ ಸಾಂವಿಧಾನಿಕ ಪೀಠ ರಚನೆಯಾಗಿ ಪ್ರಕರಣದ ವಿಚಾರಣೆ ಆರಂಭವಾಗಿಲ್ಲ. ಈ ನಡುವೆ ಕರ್ನಾಟಕ ರಾಜ್ಯ ಸರ್ಕಾರ ಹಿಜಾಬ್ ನಿಷೇಧ ವಾಪಸ್ ಪಡೆಯಲು ಮುಂದಾಗಿದೆ.

ಇದನ್ನೂ ಓದಿ: ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...