Homeಅಂಕಣಗಳುಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

ಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

- Advertisement -
- Advertisement -

ದೇಶದಾದ್ಯಂತ ವಿರೋಧ ಪಕ್ಷಗಳನ್ನು ಕಳ್ಳ ದಾರಿಯ ಮೂಲಕ ನಿರ್ನಾಮ ಮಾಡುವ ತನ್ನ ಕೆಲಸದಿಂದ ಎಂತಹ ಗಂಭೀರ ಪರಿಣಾಮಗಳು ಉಂಟಾದರೂ ಬಿಜೆಪಿ ಪಕ್ಷ ಅದರಿಂದ ಸಣ್ಣ ಪಾಠವನ್ನೂ ಕಲಿತಂತಿಲ್ಲ. ಕೆಲವು ದಿನಗಳ ಹಿಂದೆ ತನ್ನ ವಕ್ತಾರೆ ಟಿವಿ ಶೋವೊಂದರಲ್ಲಿ ಮಾಡಿದ ಒಂದು ದ್ವೇಷಪೂರಿತ ಕಾಮೆಂಟ್‌ಗೆ ಹಲವು ರಾಷ್ಟ್ರಗಳು ಭಾರತಕ್ಕೆ ’ವಾರ್ನಿಂಗ್’ ಕೊಡುವ ರೀತಿಯಲ್ಲಿ ಮಾತನಾಡಿದಾಗ, ’ಇದು ದೇಶದ ಆಂತರಿಕ ವಿಚಾರ, ಸಾರ್ವಭೌಮ ರಾಷ್ಟ್ರವೊಂದರ ಸಮಸ್ಯೆಗಳಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ’ ಎಂದು ಕೇಂದ್ರ ಬಿಜೆಪಿ ಸರ್ಕಾರದ ಜೊತೆಗೆ ನಿಲ್ಲಲು ಯಾವುದೇ ಅನ್ಯ ಪಕ್ಷ ಮುಂದೆ ಬರಲಿಲ್ಲ. ಅದರ ಮಿತ್ರ ಪಕ್ಷಗಳೂ ಕೂಡ ಉಸಿರೆತ್ತಲಿಲ್ಲ. ಸದಾ ದ್ವೇಷದ, ಪ್ರತೀಕಾರದ ಭಾಷೆಯನ್ನಾಡುತ್ತಾ ತನ್ನ ವಿರೋಧಿ ಪಕ್ಷಗಳೇಕೆ ತನ್ನ ಮಿತ್ರ ಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಪ್ರಾಮಾಣಿಕತೆಯನ್ನು ತೋರದ ಪಕ್ಷ ಬಿಜೆಪಿ. ಇದೇ ಕಾರಣಕ್ಕೆ ದೀರ್ಘ ಕಾಲದ ಸಂಗಾತಿಯಾಗಿದ್ದ ಶಿವಸೇನೆ 2019ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವಾಗಿ ಬಿಜೆಪಿ ಜೊತೆಗೆ ಸೆಣೆಸಿದ್ದರೂ, ಚುನಾವಣೆಯ ನಂತರ ಎನ್‌ಡಿಎಯಿಂದ ದೂರವಾಗಿ ಕಾಂಗ್ರೆಸ್ ಹಾಗೂ ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಎಂವಿಎ (ಮಹಾ ವಿಕಾಸ್ ಅಘಾಡಿ) ಮೈತ್ರಿಕೂಟ ರಚಿಸಿಕೊಂಡು, ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಯಾಗಿದ್ದರು.

ಅಂದಿನಿಂದಲೂ ಎಂವಿಎ ಸರ್ಕಾರವನ್ನು ಒಂದಲ್ಲ ಒಂದು ರೀತಿಯಲ್ಲಿ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ ಸಫಲವಾಗಿರಲಿಲ್ಲ. ಸೈದ್ಧಾಂತಿಕವಾಗಿ ಒಂದೇ ಗರಡಿಯಲ್ಲಿ ಬಿಜೆಪಿ ಮತ್ತು ಶಿವಸೇನೆ ಎರಡೂ ಪಕ್ಷಗಳು ಪಳಗಿದ್ದರೂ, ಪ್ರಾದೇಶಿಕ ಅಸ್ಮಿತೆ ಮತ್ತು ಮರಾಠಿ ಗರ್ವ ಶಿವಸೇನೆಗೆ ವಿಶಿಷ್ಟವಾದದ್ದು. ಆ ನಿಟ್ಟಿನಲ್ಲಿ ತೀವ್ರ ಕೇಂದ್ರೀಕರಣದ ಮತ್ತು ರಾಜ್ಯಗಳ ಅಧಿಕಾರವನ್ನು ಕಸಿಯುವ ಬಿಜೆಪಿ ಸಿದ್ಧಾಂತದ ಜೊತೆಗೆ ಸಣ್ಣ ಮಟ್ಟದ ಭಿನ್ನಮತವನ್ನು ಉಳಿಸಿಕೊಂಡ ಪಕ್ಷ ಅದು. ಆದರೆ ಎರಡೂ ಪಕ್ಷಗಳು ಸಾಮಾನ್ಯ ತಳಹದಿಯಲ್ಲಿ ಹಂಚಿಕೊಂಡಿದ್ದ ಹಿಂದುತ್ವ ಸಿದ್ಧಾಂತದ ಕಾರಣಕ್ಕೆ, ಶಿವಸೇನೆಯ ಹಲವು ಶಾಸಕರಿಗೆ ’ಅಕ್ಕಿ ಮೇಲೆ ಆಸೆ, ನಂಟನ ಮೇಲೆ ಪ್ರೀತಿ’ ಎಂಬಂತಾಗಿತ್ತು. ಈ ಸಂಗತಿಯನ್ನು ಬಳಸಿಕೊಂಡು ಯಾವ ದಾರಿ ಹಿಡಿದರೂ ಸರಿ ಅಧಿಕಾರ ಹಿಡಿಯದೆ ಬಿಡುವುದಿಲ್ಲ ಎಂದು ಕಾದಿದ್ದ ಬಿಜೆಪಿಗೆ, ಜೂನ್ ನಾಲ್ಕನೇ ವಾರದ ಮಂಗಳವಾರ ಕಾಲ ಕೂಡಿಬಂದಿದೆ ಎಂಬಂತಾಗಿದೆ. ಸಂಘ ಪರಿವಾರದ ಜೊತೆಗೆ ನಂಟು ಬೆಳೆಸಿಕೊಂಡಿರುವ ಮಾರಿಕೊಂಡ ಮಾಧ್ಯಮಗಳು ತಾವೇ ಜಗತ್ತು ಗೆದ್ದವರಂತೆ ಆಗಲೇ ಸಂಭ್ರಮಿಸಲು ಆರಂಭಿಸಿವೆ.

ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು. ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 106 ಇದ್ದು ಲೆಕ್ಕಾಚಾರದ ಪ್ರಕಾರ ನಾಲ್ಕು ಸ್ಥಾನಗಳನ್ನಷ್ಟೇ ಗೆಲ್ಲಬಹುದಿತ್ತು. ಕೆಲವು ಸ್ವತಂತ್ರ ಶಾಸಕರಲ್ಲದೆ, ಶಿವಸೇನೆಯ ಕೆಲವು ಶಾಸಕರೂ ಅಡ್ಡ ಮತದಾನ ಮಾಡಿರುವ ಶಂಕೆ ಇದರಿಂದ ವ್ಯಕ್ತವಾಗಿತ್ತು. ಎಂವಿಎ ತಾನು ನಿಲ್ಲಿಸಿದ್ದ ಆರು ಅಭ್ಯರ್ಥಿಗಳಲ್ಲಿ ಒಬ್ಬರು ಸೋತಿದ್ದರು. ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಶಾಸಕನ್ನೂ ಸೇರಿಸಿ 169 ಶಾಸಕರ ಬೆಂಬಲವನ್ನು ಪ್ರತಿಪಾದಿಸುವ ಎಂವಿಎಗೆ ಈ ಆಘಾತದ ಜೊತೆಗೆ ಮುಂದಿನ ದಿನ ಸೂರತ್‌ನ ಐಶಾರಾಮಿ ಹೋಟೆಲ್‌ನಲ್ಲಿ ಶಿವಸೇನೆಯ ಸುಮಾರು 30 ಶಾಸಕರು, ಆ ಪಕ್ಷದ ಮುಖಂಡ ಏಕನಾಥ ಶಿಂಧೆ ಜೊತೆಗೆ ಬಿಡಾರ ಹೂಡಿ, ಬಿಜೆಪಿ ಬೆಂಬಲಕ್ಕೆ ನಿಂತಿರುವ ಸುದ್ದಿ ಬರಸಿಡಿಲಿನಿಂತೆ ಬಂದಪ್ಪಳಿಸಿತು. ಅಲ್ಲಿಂದ ರಾತ್ರೋರಾತ್ರಿ ಬಿಜೆಪಿ ಆಡಳಿತದ ಅಸ್ಸಾಂನ ಗೌಹಾತಿಗೆ ಹಾರಿರುವ ಬಂಡಾಯ ಶಾಸಕರು ತಮ್ಮ ಸಂಖ್ಯಾಬಲವನ್ನು 46 ಎಂದು ಹೇಳಿಕೊಂಡಿದ್ದಾರೆ. 287 ಬಲಾಬಲದ ವಿಧಾನಸಭೆಯಲ್ಲಿ 144 ಮ್ಯಾಜಿಕ್ ಸಂಖ್ಯೆ (ಒಬ್ಬ ಶಿವಸೇನೆಯ ಶಾಸಕರು ತೀರಿಕೊಂಡಿದ್ದಾರೆ) ಆಗಿದ್ದರೂ ವಿಶ್ವಾಸಮತ ನಿರ್ಣಯಕ್ಕೆ ರಾಜ್ಯಪಾಲರು ನಿರ್ದೇಶಿಸಿದರೆ ಸರ್ಕಾರದ ಗತಿ ಏನಾಗುತ್ತದೆಂದು ಎಲ್ಲರಿಗೂ ತಿಳಿದಿದ್ದೆ.

ಬಿಜೆಪಿ ತನ್ನ ಎಂದಿನ ಚಾಳಿಯಂತೆ ಪ್ರತಿ ಪಕ್ಷಗಳ ಶಾಸಕರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ ಮುನ್ನುಗ್ಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 2015ರಲ್ಲಿ ಆರ್‌ಜೆಡಿ ಜೊತೆಗೂಡಿ ಸರ್ಕಾರ ರಚಿಸಿದ್ದ ಜೆಡಿಯುವಿನ ನಿತೀಶ್ ಕುಮಾರ್ ಅವರನ್ನು 2017ರಲ್ಲಿ ಅಕ್ರಮವಾಗಿ ಸೆಳೆದು ಅವರ ಜತೆಗೆ ಬಿಜೆಪಿ ಸರ್ಕಾರ ರಚಿಸಿತ್ತು. ಜಯಲಲಿತಾ ಅವರ ನಿಧನದ ನಂತರ ತಮಿಳುನಾಡಿನ ಎಐಎಡಿಎಂಕೆ ಸರ್ಕಾರವನ್ನು ಆ ರಾಜ್ಯದಲ್ಲಿ ನೆಲೆಯೇ ಇಲ್ಲದ ಬಿಜೆಪಿ ತನ್ನ ತೆಕ್ಕೆಯಲ್ಲಿಟ್ಟುಕೊಂಡು ಆಡಳಿತ ನಡೆಸಿತ್ತು. ಕರ್ನಾಟಕದಲ್ಲಿ ಆಪರೇಶನ್ ಕಮಲದಿಂದ ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿತು. (ಈ ಹಿಂದಿನ ಅವಧಿಯಲ್ಲಿ ಆದ ಆಪರೇಷನ್ ಕಮಲ ಬೇರೆಯದ್ದು!) ಮಧ್ಯಪ್ರದೇಶದಲ್ಲಿ ಆಮಿಷಗಳನ್ನು ಒಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಕಮಲನಾಥ್ ಸರ್ಕಾರವನ್ನು ಮುಳುಗಿಸಿತ್ತು. ಗೋವಾ, ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ ಹೀಗೆ ದೇಶದ ಉದ್ದಗಲಕ್ಕೆ ಒಂದಲ್ಲ ಒಂದು ಕುತಂತ್ರ ಬಳಸಿ ಅಧಿಕಾರ ಹಿಡಿಯುವುದನ್ನು ಕರಗತ ಮಾಡಿಕೊಂಡಿರುವ ಬಿಜೆಪಿ ಮಹಾರಾಷ್ಟ್ರದಲ್ಲಿಯೂ ತನ್ನ ದಾಳವನ್ನು ಈಗ ಪರಿಣಾಮಕಾರಿಯಾಗಿ ಬೀಸಿದೆ. ಅಲ್ಲದೆ ತನ್ನ ಶಾಸಕರನ್ನು ಶಿವಸೇನೆ ಸೆಳೆಯದಂತೆ ನೋಡಿಕೊಳ್ಳಲು ಅವರನ್ನೆಲ್ಲಾ ಒಟ್ಟಿಗೆ ಕೂಡಿಹಾಕಿಕೊಂಡು ರೆಸಾರ್ಟ್ ಯಾತ್ರೆ ಬೆಳೆಸಿದೆ. ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳೂ ತಮ್ಮ ಶಾಸಕರನ್ನು ಜೋಪಾನ ಮಾಡಿಕೊಳ್ಳಲು ದಾರಿ ಬೆಳೆಸಿವೆ.

ಒಂದು ಪಕ್ಷ, ಪಕ್ಷಾಂತರ ಕಾಯ್ದೆ ಅನ್ವಯವಾಗದೆ ಶಾಸಕರನ್ನು ಅಸಿಂಧುಗೊಳಿಸದಂತೆ ಆಟ ಆಡಬೇಕಾದರೆ ಶಿವಸೇನೆಯ ಮೂರರ ಎರಡನೇ ಭಾಗದಷ್ಟು ಶಾಸಕರು ಏಕನಾಥ ಶಿಂಧೆ ಜೊತೆಗೆ ಹೋಗಬೇಕಾಗುತ್ತದೆ.
ಅಂದರೆ ಶಿವಸೇನೆಯ 55 ಶಾಸಕರಲ್ಲಿ 37 ಜನ ಪಕ್ಷದಿಂದ ಹೊರಹೋಗಬೇಕಾಗುತ್ತದೆ. ಈಗಾಗಲೇ 40 ಶಿವಸೇನೆ ಶಾಸಕರು ಅವರ ಜೊತೆ ಇದ್ದಾರೆ ಎನ್ನಲಾಗುತ್ತಿದೆ. ಈಗ ಅವರು ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಿ ಸ್ವತಂತ್ರ ಪಕ್ಷ ಘೋಷಿಸಬಹುದು. ಹಣ, ಇಡಿ-ಸಿಬಿಐ ಮುಂತಾದ ಏಜೆನ್ಸಿಗಳ ಅಧಿಕಾರವನ್ನು ಮನಸೋಇಚ್ಛೆ ಬಳಸಿದ್ದರಿಂದ ಇದು ಸಾಧ್ಯಾವಾಯಿತೆ? ಈಗಿನ ಸದ್ಯದ ಸುದ್ದಿಗಳಂತೆ ಹಲವು ಶಿವಸೇನೆ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದರೆ ಮತ್ತು ಅವರ ಶಾಸಕ ಸ್ಥಾನ ಅಸಿಂಧುವಾದರೆ ಕುಸಿಯುವ ವಿಧಾನಸಭಾ ಬಲಾಬಲದಲ್ಲಿ ಬಿಜೆಪಿಗೂ ಸರ್ಕಾರ ರಚಿಸುವುದು ಸುಲಭವೇನಲ್ಲ. ಸ್ವತಂತ್ರ ಶಾಸಕರ ಬೆಂಬಲ ತಪ್ಪಿ ಮತ್ತು ಕಾಂಗ್ರೆಸ್ ಹಾಗೂ ಎನ್‌ಸಿಪಿಯ ಒಂದಷ್ಟು ಶಾಸಕರು ಪಕ್ಷಾಂತರ ಮಾಡಿ ಶಿವಸೇನೆ-ಎಂವಿಎ ಅಧಿಕಾರ ಕಳೆದುಕೊಂಡರೆ ರಾಷ್ಟ್ರಪತಿ ಆಳ್ವಿಕೆ ಮಹಾರಾಷ್ಟ್ರಕ್ಕೆ ಅನಿವಾರ್ಯವಾಗಬಹುದು. ಒಟ್ಟಿನಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು, ಜನರು ಕೊಟ್ಟ ಮ್ಯಾಂಡೇಟ್‌ಗೆ ಕಿಂಚಿತ್ತೂ ಗೌರವ ನೀಡದೆ ಹಿಂಬಾಗಿಲಿನಿಂದಾದರೂ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಈ ಬಾರಿ ’ಗೆಲುವು’ ಒಲಿಯುವುದೇ? ಇದು ಶಿವಸೇನೆಯನ್ನು ಎಲ್ಲಿಗೆ ತಳ್ಳಬಹುದು?
ಒಂದು ಕಡೆ ಅಶಾಂತಿಗೆ ಮತ್ತೊಂದು ಕಡೆ ರಾಜಕೀಯ ಅಸ್ಥಿರತೆಯ ಕಡೆಗೆ ರಾಜ್ಯಗಳನ್ನು ನೂಕಲು ಸದಾ ಸನ್ನದ್ಧವಾಗಿರುವ ಬಿಜೆಪಿಯ ನಿಜ ಬಣ್ಣವನ್ನು ಜನರು ಅರಿತು ಪ್ರಜಾತಾಂತ್ರಿಕವಾಗಿ ಅದಕ್ಕೆ ಪಾಠ ಕಲಿಸಬೇಕಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...