Homeಅಂಕಣಗಳುಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

ಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

- Advertisement -
- Advertisement -

ದೇಶದಾದ್ಯಂತ ವಿರೋಧ ಪಕ್ಷಗಳನ್ನು ಕಳ್ಳ ದಾರಿಯ ಮೂಲಕ ನಿರ್ನಾಮ ಮಾಡುವ ತನ್ನ ಕೆಲಸದಿಂದ ಎಂತಹ ಗಂಭೀರ ಪರಿಣಾಮಗಳು ಉಂಟಾದರೂ ಬಿಜೆಪಿ ಪಕ್ಷ ಅದರಿಂದ ಸಣ್ಣ ಪಾಠವನ್ನೂ ಕಲಿತಂತಿಲ್ಲ. ಕೆಲವು ದಿನಗಳ ಹಿಂದೆ ತನ್ನ ವಕ್ತಾರೆ ಟಿವಿ ಶೋವೊಂದರಲ್ಲಿ ಮಾಡಿದ ಒಂದು ದ್ವೇಷಪೂರಿತ ಕಾಮೆಂಟ್‌ಗೆ ಹಲವು ರಾಷ್ಟ್ರಗಳು ಭಾರತಕ್ಕೆ ’ವಾರ್ನಿಂಗ್’ ಕೊಡುವ ರೀತಿಯಲ್ಲಿ ಮಾತನಾಡಿದಾಗ, ’ಇದು ದೇಶದ ಆಂತರಿಕ ವಿಚಾರ, ಸಾರ್ವಭೌಮ ರಾಷ್ಟ್ರವೊಂದರ ಸಮಸ್ಯೆಗಳಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ’ ಎಂದು ಕೇಂದ್ರ ಬಿಜೆಪಿ ಸರ್ಕಾರದ ಜೊತೆಗೆ ನಿಲ್ಲಲು ಯಾವುದೇ ಅನ್ಯ ಪಕ್ಷ ಮುಂದೆ ಬರಲಿಲ್ಲ. ಅದರ ಮಿತ್ರ ಪಕ್ಷಗಳೂ ಕೂಡ ಉಸಿರೆತ್ತಲಿಲ್ಲ. ಸದಾ ದ್ವೇಷದ, ಪ್ರತೀಕಾರದ ಭಾಷೆಯನ್ನಾಡುತ್ತಾ ತನ್ನ ವಿರೋಧಿ ಪಕ್ಷಗಳೇಕೆ ತನ್ನ ಮಿತ್ರ ಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಪ್ರಾಮಾಣಿಕತೆಯನ್ನು ತೋರದ ಪಕ್ಷ ಬಿಜೆಪಿ. ಇದೇ ಕಾರಣಕ್ಕೆ ದೀರ್ಘ ಕಾಲದ ಸಂಗಾತಿಯಾಗಿದ್ದ ಶಿವಸೇನೆ 2019ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವಾಗಿ ಬಿಜೆಪಿ ಜೊತೆಗೆ ಸೆಣೆಸಿದ್ದರೂ, ಚುನಾವಣೆಯ ನಂತರ ಎನ್‌ಡಿಎಯಿಂದ ದೂರವಾಗಿ ಕಾಂಗ್ರೆಸ್ ಹಾಗೂ ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಎಂವಿಎ (ಮಹಾ ವಿಕಾಸ್ ಅಘಾಡಿ) ಮೈತ್ರಿಕೂಟ ರಚಿಸಿಕೊಂಡು, ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಯಾಗಿದ್ದರು.

ಅಂದಿನಿಂದಲೂ ಎಂವಿಎ ಸರ್ಕಾರವನ್ನು ಒಂದಲ್ಲ ಒಂದು ರೀತಿಯಲ್ಲಿ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ ಸಫಲವಾಗಿರಲಿಲ್ಲ. ಸೈದ್ಧಾಂತಿಕವಾಗಿ ಒಂದೇ ಗರಡಿಯಲ್ಲಿ ಬಿಜೆಪಿ ಮತ್ತು ಶಿವಸೇನೆ ಎರಡೂ ಪಕ್ಷಗಳು ಪಳಗಿದ್ದರೂ, ಪ್ರಾದೇಶಿಕ ಅಸ್ಮಿತೆ ಮತ್ತು ಮರಾಠಿ ಗರ್ವ ಶಿವಸೇನೆಗೆ ವಿಶಿಷ್ಟವಾದದ್ದು. ಆ ನಿಟ್ಟಿನಲ್ಲಿ ತೀವ್ರ ಕೇಂದ್ರೀಕರಣದ ಮತ್ತು ರಾಜ್ಯಗಳ ಅಧಿಕಾರವನ್ನು ಕಸಿಯುವ ಬಿಜೆಪಿ ಸಿದ್ಧಾಂತದ ಜೊತೆಗೆ ಸಣ್ಣ ಮಟ್ಟದ ಭಿನ್ನಮತವನ್ನು ಉಳಿಸಿಕೊಂಡ ಪಕ್ಷ ಅದು. ಆದರೆ ಎರಡೂ ಪಕ್ಷಗಳು ಸಾಮಾನ್ಯ ತಳಹದಿಯಲ್ಲಿ ಹಂಚಿಕೊಂಡಿದ್ದ ಹಿಂದುತ್ವ ಸಿದ್ಧಾಂತದ ಕಾರಣಕ್ಕೆ, ಶಿವಸೇನೆಯ ಹಲವು ಶಾಸಕರಿಗೆ ’ಅಕ್ಕಿ ಮೇಲೆ ಆಸೆ, ನಂಟನ ಮೇಲೆ ಪ್ರೀತಿ’ ಎಂಬಂತಾಗಿತ್ತು. ಈ ಸಂಗತಿಯನ್ನು ಬಳಸಿಕೊಂಡು ಯಾವ ದಾರಿ ಹಿಡಿದರೂ ಸರಿ ಅಧಿಕಾರ ಹಿಡಿಯದೆ ಬಿಡುವುದಿಲ್ಲ ಎಂದು ಕಾದಿದ್ದ ಬಿಜೆಪಿಗೆ, ಜೂನ್ ನಾಲ್ಕನೇ ವಾರದ ಮಂಗಳವಾರ ಕಾಲ ಕೂಡಿಬಂದಿದೆ ಎಂಬಂತಾಗಿದೆ. ಸಂಘ ಪರಿವಾರದ ಜೊತೆಗೆ ನಂಟು ಬೆಳೆಸಿಕೊಂಡಿರುವ ಮಾರಿಕೊಂಡ ಮಾಧ್ಯಮಗಳು ತಾವೇ ಜಗತ್ತು ಗೆದ್ದವರಂತೆ ಆಗಲೇ ಸಂಭ್ರಮಿಸಲು ಆರಂಭಿಸಿವೆ.

ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು. ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 106 ಇದ್ದು ಲೆಕ್ಕಾಚಾರದ ಪ್ರಕಾರ ನಾಲ್ಕು ಸ್ಥಾನಗಳನ್ನಷ್ಟೇ ಗೆಲ್ಲಬಹುದಿತ್ತು. ಕೆಲವು ಸ್ವತಂತ್ರ ಶಾಸಕರಲ್ಲದೆ, ಶಿವಸೇನೆಯ ಕೆಲವು ಶಾಸಕರೂ ಅಡ್ಡ ಮತದಾನ ಮಾಡಿರುವ ಶಂಕೆ ಇದರಿಂದ ವ್ಯಕ್ತವಾಗಿತ್ತು. ಎಂವಿಎ ತಾನು ನಿಲ್ಲಿಸಿದ್ದ ಆರು ಅಭ್ಯರ್ಥಿಗಳಲ್ಲಿ ಒಬ್ಬರು ಸೋತಿದ್ದರು. ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಶಾಸಕನ್ನೂ ಸೇರಿಸಿ 169 ಶಾಸಕರ ಬೆಂಬಲವನ್ನು ಪ್ರತಿಪಾದಿಸುವ ಎಂವಿಎಗೆ ಈ ಆಘಾತದ ಜೊತೆಗೆ ಮುಂದಿನ ದಿನ ಸೂರತ್‌ನ ಐಶಾರಾಮಿ ಹೋಟೆಲ್‌ನಲ್ಲಿ ಶಿವಸೇನೆಯ ಸುಮಾರು 30 ಶಾಸಕರು, ಆ ಪಕ್ಷದ ಮುಖಂಡ ಏಕನಾಥ ಶಿಂಧೆ ಜೊತೆಗೆ ಬಿಡಾರ ಹೂಡಿ, ಬಿಜೆಪಿ ಬೆಂಬಲಕ್ಕೆ ನಿಂತಿರುವ ಸುದ್ದಿ ಬರಸಿಡಿಲಿನಿಂತೆ ಬಂದಪ್ಪಳಿಸಿತು. ಅಲ್ಲಿಂದ ರಾತ್ರೋರಾತ್ರಿ ಬಿಜೆಪಿ ಆಡಳಿತದ ಅಸ್ಸಾಂನ ಗೌಹಾತಿಗೆ ಹಾರಿರುವ ಬಂಡಾಯ ಶಾಸಕರು ತಮ್ಮ ಸಂಖ್ಯಾಬಲವನ್ನು 46 ಎಂದು ಹೇಳಿಕೊಂಡಿದ್ದಾರೆ. 287 ಬಲಾಬಲದ ವಿಧಾನಸಭೆಯಲ್ಲಿ 144 ಮ್ಯಾಜಿಕ್ ಸಂಖ್ಯೆ (ಒಬ್ಬ ಶಿವಸೇನೆಯ ಶಾಸಕರು ತೀರಿಕೊಂಡಿದ್ದಾರೆ) ಆಗಿದ್ದರೂ ವಿಶ್ವಾಸಮತ ನಿರ್ಣಯಕ್ಕೆ ರಾಜ್ಯಪಾಲರು ನಿರ್ದೇಶಿಸಿದರೆ ಸರ್ಕಾರದ ಗತಿ ಏನಾಗುತ್ತದೆಂದು ಎಲ್ಲರಿಗೂ ತಿಳಿದಿದ್ದೆ.

ಬಿಜೆಪಿ ತನ್ನ ಎಂದಿನ ಚಾಳಿಯಂತೆ ಪ್ರತಿ ಪಕ್ಷಗಳ ಶಾಸಕರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ ಮುನ್ನುಗ್ಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 2015ರಲ್ಲಿ ಆರ್‌ಜೆಡಿ ಜೊತೆಗೂಡಿ ಸರ್ಕಾರ ರಚಿಸಿದ್ದ ಜೆಡಿಯುವಿನ ನಿತೀಶ್ ಕುಮಾರ್ ಅವರನ್ನು 2017ರಲ್ಲಿ ಅಕ್ರಮವಾಗಿ ಸೆಳೆದು ಅವರ ಜತೆಗೆ ಬಿಜೆಪಿ ಸರ್ಕಾರ ರಚಿಸಿತ್ತು. ಜಯಲಲಿತಾ ಅವರ ನಿಧನದ ನಂತರ ತಮಿಳುನಾಡಿನ ಎಐಎಡಿಎಂಕೆ ಸರ್ಕಾರವನ್ನು ಆ ರಾಜ್ಯದಲ್ಲಿ ನೆಲೆಯೇ ಇಲ್ಲದ ಬಿಜೆಪಿ ತನ್ನ ತೆಕ್ಕೆಯಲ್ಲಿಟ್ಟುಕೊಂಡು ಆಡಳಿತ ನಡೆಸಿತ್ತು. ಕರ್ನಾಟಕದಲ್ಲಿ ಆಪರೇಶನ್ ಕಮಲದಿಂದ ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿತು. (ಈ ಹಿಂದಿನ ಅವಧಿಯಲ್ಲಿ ಆದ ಆಪರೇಷನ್ ಕಮಲ ಬೇರೆಯದ್ದು!) ಮಧ್ಯಪ್ರದೇಶದಲ್ಲಿ ಆಮಿಷಗಳನ್ನು ಒಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಕಮಲನಾಥ್ ಸರ್ಕಾರವನ್ನು ಮುಳುಗಿಸಿತ್ತು. ಗೋವಾ, ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ ಹೀಗೆ ದೇಶದ ಉದ್ದಗಲಕ್ಕೆ ಒಂದಲ್ಲ ಒಂದು ಕುತಂತ್ರ ಬಳಸಿ ಅಧಿಕಾರ ಹಿಡಿಯುವುದನ್ನು ಕರಗತ ಮಾಡಿಕೊಂಡಿರುವ ಬಿಜೆಪಿ ಮಹಾರಾಷ್ಟ್ರದಲ್ಲಿಯೂ ತನ್ನ ದಾಳವನ್ನು ಈಗ ಪರಿಣಾಮಕಾರಿಯಾಗಿ ಬೀಸಿದೆ. ಅಲ್ಲದೆ ತನ್ನ ಶಾಸಕರನ್ನು ಶಿವಸೇನೆ ಸೆಳೆಯದಂತೆ ನೋಡಿಕೊಳ್ಳಲು ಅವರನ್ನೆಲ್ಲಾ ಒಟ್ಟಿಗೆ ಕೂಡಿಹಾಕಿಕೊಂಡು ರೆಸಾರ್ಟ್ ಯಾತ್ರೆ ಬೆಳೆಸಿದೆ. ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳೂ ತಮ್ಮ ಶಾಸಕರನ್ನು ಜೋಪಾನ ಮಾಡಿಕೊಳ್ಳಲು ದಾರಿ ಬೆಳೆಸಿವೆ.

ಒಂದು ಪಕ್ಷ, ಪಕ್ಷಾಂತರ ಕಾಯ್ದೆ ಅನ್ವಯವಾಗದೆ ಶಾಸಕರನ್ನು ಅಸಿಂಧುಗೊಳಿಸದಂತೆ ಆಟ ಆಡಬೇಕಾದರೆ ಶಿವಸೇನೆಯ ಮೂರರ ಎರಡನೇ ಭಾಗದಷ್ಟು ಶಾಸಕರು ಏಕನಾಥ ಶಿಂಧೆ ಜೊತೆಗೆ ಹೋಗಬೇಕಾಗುತ್ತದೆ.
ಅಂದರೆ ಶಿವಸೇನೆಯ 55 ಶಾಸಕರಲ್ಲಿ 37 ಜನ ಪಕ್ಷದಿಂದ ಹೊರಹೋಗಬೇಕಾಗುತ್ತದೆ. ಈಗಾಗಲೇ 40 ಶಿವಸೇನೆ ಶಾಸಕರು ಅವರ ಜೊತೆ ಇದ್ದಾರೆ ಎನ್ನಲಾಗುತ್ತಿದೆ. ಈಗ ಅವರು ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಿ ಸ್ವತಂತ್ರ ಪಕ್ಷ ಘೋಷಿಸಬಹುದು. ಹಣ, ಇಡಿ-ಸಿಬಿಐ ಮುಂತಾದ ಏಜೆನ್ಸಿಗಳ ಅಧಿಕಾರವನ್ನು ಮನಸೋಇಚ್ಛೆ ಬಳಸಿದ್ದರಿಂದ ಇದು ಸಾಧ್ಯಾವಾಯಿತೆ? ಈಗಿನ ಸದ್ಯದ ಸುದ್ದಿಗಳಂತೆ ಹಲವು ಶಿವಸೇನೆ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದರೆ ಮತ್ತು ಅವರ ಶಾಸಕ ಸ್ಥಾನ ಅಸಿಂಧುವಾದರೆ ಕುಸಿಯುವ ವಿಧಾನಸಭಾ ಬಲಾಬಲದಲ್ಲಿ ಬಿಜೆಪಿಗೂ ಸರ್ಕಾರ ರಚಿಸುವುದು ಸುಲಭವೇನಲ್ಲ. ಸ್ವತಂತ್ರ ಶಾಸಕರ ಬೆಂಬಲ ತಪ್ಪಿ ಮತ್ತು ಕಾಂಗ್ರೆಸ್ ಹಾಗೂ ಎನ್‌ಸಿಪಿಯ ಒಂದಷ್ಟು ಶಾಸಕರು ಪಕ್ಷಾಂತರ ಮಾಡಿ ಶಿವಸೇನೆ-ಎಂವಿಎ ಅಧಿಕಾರ ಕಳೆದುಕೊಂಡರೆ ರಾಷ್ಟ್ರಪತಿ ಆಳ್ವಿಕೆ ಮಹಾರಾಷ್ಟ್ರಕ್ಕೆ ಅನಿವಾರ್ಯವಾಗಬಹುದು. ಒಟ್ಟಿನಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು, ಜನರು ಕೊಟ್ಟ ಮ್ಯಾಂಡೇಟ್‌ಗೆ ಕಿಂಚಿತ್ತೂ ಗೌರವ ನೀಡದೆ ಹಿಂಬಾಗಿಲಿನಿಂದಾದರೂ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಈ ಬಾರಿ ’ಗೆಲುವು’ ಒಲಿಯುವುದೇ? ಇದು ಶಿವಸೇನೆಯನ್ನು ಎಲ್ಲಿಗೆ ತಳ್ಳಬಹುದು?
ಒಂದು ಕಡೆ ಅಶಾಂತಿಗೆ ಮತ್ತೊಂದು ಕಡೆ ರಾಜಕೀಯ ಅಸ್ಥಿರತೆಯ ಕಡೆಗೆ ರಾಜ್ಯಗಳನ್ನು ನೂಕಲು ಸದಾ ಸನ್ನದ್ಧವಾಗಿರುವ ಬಿಜೆಪಿಯ ನಿಜ ಬಣ್ಣವನ್ನು ಜನರು ಅರಿತು ಪ್ರಜಾತಾಂತ್ರಿಕವಾಗಿ ಅದಕ್ಕೆ ಪಾಠ ಕಲಿಸಬೇಕಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...