Homeಅಂಕಣಗಳುಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

ಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

- Advertisement -
- Advertisement -

ದೇಶದಾದ್ಯಂತ ವಿರೋಧ ಪಕ್ಷಗಳನ್ನು ಕಳ್ಳ ದಾರಿಯ ಮೂಲಕ ನಿರ್ನಾಮ ಮಾಡುವ ತನ್ನ ಕೆಲಸದಿಂದ ಎಂತಹ ಗಂಭೀರ ಪರಿಣಾಮಗಳು ಉಂಟಾದರೂ ಬಿಜೆಪಿ ಪಕ್ಷ ಅದರಿಂದ ಸಣ್ಣ ಪಾಠವನ್ನೂ ಕಲಿತಂತಿಲ್ಲ. ಕೆಲವು ದಿನಗಳ ಹಿಂದೆ ತನ್ನ ವಕ್ತಾರೆ ಟಿವಿ ಶೋವೊಂದರಲ್ಲಿ ಮಾಡಿದ ಒಂದು ದ್ವೇಷಪೂರಿತ ಕಾಮೆಂಟ್‌ಗೆ ಹಲವು ರಾಷ್ಟ್ರಗಳು ಭಾರತಕ್ಕೆ ’ವಾರ್ನಿಂಗ್’ ಕೊಡುವ ರೀತಿಯಲ್ಲಿ ಮಾತನಾಡಿದಾಗ, ’ಇದು ದೇಶದ ಆಂತರಿಕ ವಿಚಾರ, ಸಾರ್ವಭೌಮ ರಾಷ್ಟ್ರವೊಂದರ ಸಮಸ್ಯೆಗಳಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ’ ಎಂದು ಕೇಂದ್ರ ಬಿಜೆಪಿ ಸರ್ಕಾರದ ಜೊತೆಗೆ ನಿಲ್ಲಲು ಯಾವುದೇ ಅನ್ಯ ಪಕ್ಷ ಮುಂದೆ ಬರಲಿಲ್ಲ. ಅದರ ಮಿತ್ರ ಪಕ್ಷಗಳೂ ಕೂಡ ಉಸಿರೆತ್ತಲಿಲ್ಲ. ಸದಾ ದ್ವೇಷದ, ಪ್ರತೀಕಾರದ ಭಾಷೆಯನ್ನಾಡುತ್ತಾ ತನ್ನ ವಿರೋಧಿ ಪಕ್ಷಗಳೇಕೆ ತನ್ನ ಮಿತ್ರ ಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಪ್ರಾಮಾಣಿಕತೆಯನ್ನು ತೋರದ ಪಕ್ಷ ಬಿಜೆಪಿ. ಇದೇ ಕಾರಣಕ್ಕೆ ದೀರ್ಘ ಕಾಲದ ಸಂಗಾತಿಯಾಗಿದ್ದ ಶಿವಸೇನೆ 2019ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವಾಗಿ ಬಿಜೆಪಿ ಜೊತೆಗೆ ಸೆಣೆಸಿದ್ದರೂ, ಚುನಾವಣೆಯ ನಂತರ ಎನ್‌ಡಿಎಯಿಂದ ದೂರವಾಗಿ ಕಾಂಗ್ರೆಸ್ ಹಾಗೂ ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಎಂವಿಎ (ಮಹಾ ವಿಕಾಸ್ ಅಘಾಡಿ) ಮೈತ್ರಿಕೂಟ ರಚಿಸಿಕೊಂಡು, ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಯಾಗಿದ್ದರು.

ಅಂದಿನಿಂದಲೂ ಎಂವಿಎ ಸರ್ಕಾರವನ್ನು ಒಂದಲ್ಲ ಒಂದು ರೀತಿಯಲ್ಲಿ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ ಸಫಲವಾಗಿರಲಿಲ್ಲ. ಸೈದ್ಧಾಂತಿಕವಾಗಿ ಒಂದೇ ಗರಡಿಯಲ್ಲಿ ಬಿಜೆಪಿ ಮತ್ತು ಶಿವಸೇನೆ ಎರಡೂ ಪಕ್ಷಗಳು ಪಳಗಿದ್ದರೂ, ಪ್ರಾದೇಶಿಕ ಅಸ್ಮಿತೆ ಮತ್ತು ಮರಾಠಿ ಗರ್ವ ಶಿವಸೇನೆಗೆ ವಿಶಿಷ್ಟವಾದದ್ದು. ಆ ನಿಟ್ಟಿನಲ್ಲಿ ತೀವ್ರ ಕೇಂದ್ರೀಕರಣದ ಮತ್ತು ರಾಜ್ಯಗಳ ಅಧಿಕಾರವನ್ನು ಕಸಿಯುವ ಬಿಜೆಪಿ ಸಿದ್ಧಾಂತದ ಜೊತೆಗೆ ಸಣ್ಣ ಮಟ್ಟದ ಭಿನ್ನಮತವನ್ನು ಉಳಿಸಿಕೊಂಡ ಪಕ್ಷ ಅದು. ಆದರೆ ಎರಡೂ ಪಕ್ಷಗಳು ಸಾಮಾನ್ಯ ತಳಹದಿಯಲ್ಲಿ ಹಂಚಿಕೊಂಡಿದ್ದ ಹಿಂದುತ್ವ ಸಿದ್ಧಾಂತದ ಕಾರಣಕ್ಕೆ, ಶಿವಸೇನೆಯ ಹಲವು ಶಾಸಕರಿಗೆ ’ಅಕ್ಕಿ ಮೇಲೆ ಆಸೆ, ನಂಟನ ಮೇಲೆ ಪ್ರೀತಿ’ ಎಂಬಂತಾಗಿತ್ತು. ಈ ಸಂಗತಿಯನ್ನು ಬಳಸಿಕೊಂಡು ಯಾವ ದಾರಿ ಹಿಡಿದರೂ ಸರಿ ಅಧಿಕಾರ ಹಿಡಿಯದೆ ಬಿಡುವುದಿಲ್ಲ ಎಂದು ಕಾದಿದ್ದ ಬಿಜೆಪಿಗೆ, ಜೂನ್ ನಾಲ್ಕನೇ ವಾರದ ಮಂಗಳವಾರ ಕಾಲ ಕೂಡಿಬಂದಿದೆ ಎಂಬಂತಾಗಿದೆ. ಸಂಘ ಪರಿವಾರದ ಜೊತೆಗೆ ನಂಟು ಬೆಳೆಸಿಕೊಂಡಿರುವ ಮಾರಿಕೊಂಡ ಮಾಧ್ಯಮಗಳು ತಾವೇ ಜಗತ್ತು ಗೆದ್ದವರಂತೆ ಆಗಲೇ ಸಂಭ್ರಮಿಸಲು ಆರಂಭಿಸಿವೆ.

ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು. ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 106 ಇದ್ದು ಲೆಕ್ಕಾಚಾರದ ಪ್ರಕಾರ ನಾಲ್ಕು ಸ್ಥಾನಗಳನ್ನಷ್ಟೇ ಗೆಲ್ಲಬಹುದಿತ್ತು. ಕೆಲವು ಸ್ವತಂತ್ರ ಶಾಸಕರಲ್ಲದೆ, ಶಿವಸೇನೆಯ ಕೆಲವು ಶಾಸಕರೂ ಅಡ್ಡ ಮತದಾನ ಮಾಡಿರುವ ಶಂಕೆ ಇದರಿಂದ ವ್ಯಕ್ತವಾಗಿತ್ತು. ಎಂವಿಎ ತಾನು ನಿಲ್ಲಿಸಿದ್ದ ಆರು ಅಭ್ಯರ್ಥಿಗಳಲ್ಲಿ ಒಬ್ಬರು ಸೋತಿದ್ದರು. ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಶಾಸಕನ್ನೂ ಸೇರಿಸಿ 169 ಶಾಸಕರ ಬೆಂಬಲವನ್ನು ಪ್ರತಿಪಾದಿಸುವ ಎಂವಿಎಗೆ ಈ ಆಘಾತದ ಜೊತೆಗೆ ಮುಂದಿನ ದಿನ ಸೂರತ್‌ನ ಐಶಾರಾಮಿ ಹೋಟೆಲ್‌ನಲ್ಲಿ ಶಿವಸೇನೆಯ ಸುಮಾರು 30 ಶಾಸಕರು, ಆ ಪಕ್ಷದ ಮುಖಂಡ ಏಕನಾಥ ಶಿಂಧೆ ಜೊತೆಗೆ ಬಿಡಾರ ಹೂಡಿ, ಬಿಜೆಪಿ ಬೆಂಬಲಕ್ಕೆ ನಿಂತಿರುವ ಸುದ್ದಿ ಬರಸಿಡಿಲಿನಿಂತೆ ಬಂದಪ್ಪಳಿಸಿತು. ಅಲ್ಲಿಂದ ರಾತ್ರೋರಾತ್ರಿ ಬಿಜೆಪಿ ಆಡಳಿತದ ಅಸ್ಸಾಂನ ಗೌಹಾತಿಗೆ ಹಾರಿರುವ ಬಂಡಾಯ ಶಾಸಕರು ತಮ್ಮ ಸಂಖ್ಯಾಬಲವನ್ನು 46 ಎಂದು ಹೇಳಿಕೊಂಡಿದ್ದಾರೆ. 287 ಬಲಾಬಲದ ವಿಧಾನಸಭೆಯಲ್ಲಿ 144 ಮ್ಯಾಜಿಕ್ ಸಂಖ್ಯೆ (ಒಬ್ಬ ಶಿವಸೇನೆಯ ಶಾಸಕರು ತೀರಿಕೊಂಡಿದ್ದಾರೆ) ಆಗಿದ್ದರೂ ವಿಶ್ವಾಸಮತ ನಿರ್ಣಯಕ್ಕೆ ರಾಜ್ಯಪಾಲರು ನಿರ್ದೇಶಿಸಿದರೆ ಸರ್ಕಾರದ ಗತಿ ಏನಾಗುತ್ತದೆಂದು ಎಲ್ಲರಿಗೂ ತಿಳಿದಿದ್ದೆ.

ಬಿಜೆಪಿ ತನ್ನ ಎಂದಿನ ಚಾಳಿಯಂತೆ ಪ್ರತಿ ಪಕ್ಷಗಳ ಶಾಸಕರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ ಮುನ್ನುಗ್ಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 2015ರಲ್ಲಿ ಆರ್‌ಜೆಡಿ ಜೊತೆಗೂಡಿ ಸರ್ಕಾರ ರಚಿಸಿದ್ದ ಜೆಡಿಯುವಿನ ನಿತೀಶ್ ಕುಮಾರ್ ಅವರನ್ನು 2017ರಲ್ಲಿ ಅಕ್ರಮವಾಗಿ ಸೆಳೆದು ಅವರ ಜತೆಗೆ ಬಿಜೆಪಿ ಸರ್ಕಾರ ರಚಿಸಿತ್ತು. ಜಯಲಲಿತಾ ಅವರ ನಿಧನದ ನಂತರ ತಮಿಳುನಾಡಿನ ಎಐಎಡಿಎಂಕೆ ಸರ್ಕಾರವನ್ನು ಆ ರಾಜ್ಯದಲ್ಲಿ ನೆಲೆಯೇ ಇಲ್ಲದ ಬಿಜೆಪಿ ತನ್ನ ತೆಕ್ಕೆಯಲ್ಲಿಟ್ಟುಕೊಂಡು ಆಡಳಿತ ನಡೆಸಿತ್ತು. ಕರ್ನಾಟಕದಲ್ಲಿ ಆಪರೇಶನ್ ಕಮಲದಿಂದ ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿತು. (ಈ ಹಿಂದಿನ ಅವಧಿಯಲ್ಲಿ ಆದ ಆಪರೇಷನ್ ಕಮಲ ಬೇರೆಯದ್ದು!) ಮಧ್ಯಪ್ರದೇಶದಲ್ಲಿ ಆಮಿಷಗಳನ್ನು ಒಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಕಮಲನಾಥ್ ಸರ್ಕಾರವನ್ನು ಮುಳುಗಿಸಿತ್ತು. ಗೋವಾ, ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ ಹೀಗೆ ದೇಶದ ಉದ್ದಗಲಕ್ಕೆ ಒಂದಲ್ಲ ಒಂದು ಕುತಂತ್ರ ಬಳಸಿ ಅಧಿಕಾರ ಹಿಡಿಯುವುದನ್ನು ಕರಗತ ಮಾಡಿಕೊಂಡಿರುವ ಬಿಜೆಪಿ ಮಹಾರಾಷ್ಟ್ರದಲ್ಲಿಯೂ ತನ್ನ ದಾಳವನ್ನು ಈಗ ಪರಿಣಾಮಕಾರಿಯಾಗಿ ಬೀಸಿದೆ. ಅಲ್ಲದೆ ತನ್ನ ಶಾಸಕರನ್ನು ಶಿವಸೇನೆ ಸೆಳೆಯದಂತೆ ನೋಡಿಕೊಳ್ಳಲು ಅವರನ್ನೆಲ್ಲಾ ಒಟ್ಟಿಗೆ ಕೂಡಿಹಾಕಿಕೊಂಡು ರೆಸಾರ್ಟ್ ಯಾತ್ರೆ ಬೆಳೆಸಿದೆ. ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳೂ ತಮ್ಮ ಶಾಸಕರನ್ನು ಜೋಪಾನ ಮಾಡಿಕೊಳ್ಳಲು ದಾರಿ ಬೆಳೆಸಿವೆ.

ಒಂದು ಪಕ್ಷ, ಪಕ್ಷಾಂತರ ಕಾಯ್ದೆ ಅನ್ವಯವಾಗದೆ ಶಾಸಕರನ್ನು ಅಸಿಂಧುಗೊಳಿಸದಂತೆ ಆಟ ಆಡಬೇಕಾದರೆ ಶಿವಸೇನೆಯ ಮೂರರ ಎರಡನೇ ಭಾಗದಷ್ಟು ಶಾಸಕರು ಏಕನಾಥ ಶಿಂಧೆ ಜೊತೆಗೆ ಹೋಗಬೇಕಾಗುತ್ತದೆ.
ಅಂದರೆ ಶಿವಸೇನೆಯ 55 ಶಾಸಕರಲ್ಲಿ 37 ಜನ ಪಕ್ಷದಿಂದ ಹೊರಹೋಗಬೇಕಾಗುತ್ತದೆ. ಈಗಾಗಲೇ 40 ಶಿವಸೇನೆ ಶಾಸಕರು ಅವರ ಜೊತೆ ಇದ್ದಾರೆ ಎನ್ನಲಾಗುತ್ತಿದೆ. ಈಗ ಅವರು ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಿ ಸ್ವತಂತ್ರ ಪಕ್ಷ ಘೋಷಿಸಬಹುದು. ಹಣ, ಇಡಿ-ಸಿಬಿಐ ಮುಂತಾದ ಏಜೆನ್ಸಿಗಳ ಅಧಿಕಾರವನ್ನು ಮನಸೋಇಚ್ಛೆ ಬಳಸಿದ್ದರಿಂದ ಇದು ಸಾಧ್ಯಾವಾಯಿತೆ? ಈಗಿನ ಸದ್ಯದ ಸುದ್ದಿಗಳಂತೆ ಹಲವು ಶಿವಸೇನೆ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದರೆ ಮತ್ತು ಅವರ ಶಾಸಕ ಸ್ಥಾನ ಅಸಿಂಧುವಾದರೆ ಕುಸಿಯುವ ವಿಧಾನಸಭಾ ಬಲಾಬಲದಲ್ಲಿ ಬಿಜೆಪಿಗೂ ಸರ್ಕಾರ ರಚಿಸುವುದು ಸುಲಭವೇನಲ್ಲ. ಸ್ವತಂತ್ರ ಶಾಸಕರ ಬೆಂಬಲ ತಪ್ಪಿ ಮತ್ತು ಕಾಂಗ್ರೆಸ್ ಹಾಗೂ ಎನ್‌ಸಿಪಿಯ ಒಂದಷ್ಟು ಶಾಸಕರು ಪಕ್ಷಾಂತರ ಮಾಡಿ ಶಿವಸೇನೆ-ಎಂವಿಎ ಅಧಿಕಾರ ಕಳೆದುಕೊಂಡರೆ ರಾಷ್ಟ್ರಪತಿ ಆಳ್ವಿಕೆ ಮಹಾರಾಷ್ಟ್ರಕ್ಕೆ ಅನಿವಾರ್ಯವಾಗಬಹುದು. ಒಟ್ಟಿನಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು, ಜನರು ಕೊಟ್ಟ ಮ್ಯಾಂಡೇಟ್‌ಗೆ ಕಿಂಚಿತ್ತೂ ಗೌರವ ನೀಡದೆ ಹಿಂಬಾಗಿಲಿನಿಂದಾದರೂ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಈ ಬಾರಿ ’ಗೆಲುವು’ ಒಲಿಯುವುದೇ? ಇದು ಶಿವಸೇನೆಯನ್ನು ಎಲ್ಲಿಗೆ ತಳ್ಳಬಹುದು?
ಒಂದು ಕಡೆ ಅಶಾಂತಿಗೆ ಮತ್ತೊಂದು ಕಡೆ ರಾಜಕೀಯ ಅಸ್ಥಿರತೆಯ ಕಡೆಗೆ ರಾಜ್ಯಗಳನ್ನು ನೂಕಲು ಸದಾ ಸನ್ನದ್ಧವಾಗಿರುವ ಬಿಜೆಪಿಯ ನಿಜ ಬಣ್ಣವನ್ನು ಜನರು ಅರಿತು ಪ್ರಜಾತಾಂತ್ರಿಕವಾಗಿ ಅದಕ್ಕೆ ಪಾಠ ಕಲಿಸಬೇಕಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...