Homeಅಂಕಣಗಳುಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

ಆಪರೇಷನ್ ಕಮಲಕ್ಕೆ ಬಲಿಯಾಗಲಿದೆಯೇ ಮಹಾ ವಿಕಾಸ್ ಅಘಾಡಿ ಸರ್ಕಾರ?

- Advertisement -
- Advertisement -

ದೇಶದಾದ್ಯಂತ ವಿರೋಧ ಪಕ್ಷಗಳನ್ನು ಕಳ್ಳ ದಾರಿಯ ಮೂಲಕ ನಿರ್ನಾಮ ಮಾಡುವ ತನ್ನ ಕೆಲಸದಿಂದ ಎಂತಹ ಗಂಭೀರ ಪರಿಣಾಮಗಳು ಉಂಟಾದರೂ ಬಿಜೆಪಿ ಪಕ್ಷ ಅದರಿಂದ ಸಣ್ಣ ಪಾಠವನ್ನೂ ಕಲಿತಂತಿಲ್ಲ. ಕೆಲವು ದಿನಗಳ ಹಿಂದೆ ತನ್ನ ವಕ್ತಾರೆ ಟಿವಿ ಶೋವೊಂದರಲ್ಲಿ ಮಾಡಿದ ಒಂದು ದ್ವೇಷಪೂರಿತ ಕಾಮೆಂಟ್‌ಗೆ ಹಲವು ರಾಷ್ಟ್ರಗಳು ಭಾರತಕ್ಕೆ ’ವಾರ್ನಿಂಗ್’ ಕೊಡುವ ರೀತಿಯಲ್ಲಿ ಮಾತನಾಡಿದಾಗ, ’ಇದು ದೇಶದ ಆಂತರಿಕ ವಿಚಾರ, ಸಾರ್ವಭೌಮ ರಾಷ್ಟ್ರವೊಂದರ ಸಮಸ್ಯೆಗಳಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ’ ಎಂದು ಕೇಂದ್ರ ಬಿಜೆಪಿ ಸರ್ಕಾರದ ಜೊತೆಗೆ ನಿಲ್ಲಲು ಯಾವುದೇ ಅನ್ಯ ಪಕ್ಷ ಮುಂದೆ ಬರಲಿಲ್ಲ. ಅದರ ಮಿತ್ರ ಪಕ್ಷಗಳೂ ಕೂಡ ಉಸಿರೆತ್ತಲಿಲ್ಲ. ಸದಾ ದ್ವೇಷದ, ಪ್ರತೀಕಾರದ ಭಾಷೆಯನ್ನಾಡುತ್ತಾ ತನ್ನ ವಿರೋಧಿ ಪಕ್ಷಗಳೇಕೆ ತನ್ನ ಮಿತ್ರ ಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಪ್ರಾಮಾಣಿಕತೆಯನ್ನು ತೋರದ ಪಕ್ಷ ಬಿಜೆಪಿ. ಇದೇ ಕಾರಣಕ್ಕೆ ದೀರ್ಘ ಕಾಲದ ಸಂಗಾತಿಯಾಗಿದ್ದ ಶಿವಸೇನೆ 2019ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವಾಗಿ ಬಿಜೆಪಿ ಜೊತೆಗೆ ಸೆಣೆಸಿದ್ದರೂ, ಚುನಾವಣೆಯ ನಂತರ ಎನ್‌ಡಿಎಯಿಂದ ದೂರವಾಗಿ ಕಾಂಗ್ರೆಸ್ ಹಾಗೂ ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಎಂವಿಎ (ಮಹಾ ವಿಕಾಸ್ ಅಘಾಡಿ) ಮೈತ್ರಿಕೂಟ ರಚಿಸಿಕೊಂಡು, ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಯಾಗಿದ್ದರು.

ಅಂದಿನಿಂದಲೂ ಎಂವಿಎ ಸರ್ಕಾರವನ್ನು ಒಂದಲ್ಲ ಒಂದು ರೀತಿಯಲ್ಲಿ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ ಸಫಲವಾಗಿರಲಿಲ್ಲ. ಸೈದ್ಧಾಂತಿಕವಾಗಿ ಒಂದೇ ಗರಡಿಯಲ್ಲಿ ಬಿಜೆಪಿ ಮತ್ತು ಶಿವಸೇನೆ ಎರಡೂ ಪಕ್ಷಗಳು ಪಳಗಿದ್ದರೂ, ಪ್ರಾದೇಶಿಕ ಅಸ್ಮಿತೆ ಮತ್ತು ಮರಾಠಿ ಗರ್ವ ಶಿವಸೇನೆಗೆ ವಿಶಿಷ್ಟವಾದದ್ದು. ಆ ನಿಟ್ಟಿನಲ್ಲಿ ತೀವ್ರ ಕೇಂದ್ರೀಕರಣದ ಮತ್ತು ರಾಜ್ಯಗಳ ಅಧಿಕಾರವನ್ನು ಕಸಿಯುವ ಬಿಜೆಪಿ ಸಿದ್ಧಾಂತದ ಜೊತೆಗೆ ಸಣ್ಣ ಮಟ್ಟದ ಭಿನ್ನಮತವನ್ನು ಉಳಿಸಿಕೊಂಡ ಪಕ್ಷ ಅದು. ಆದರೆ ಎರಡೂ ಪಕ್ಷಗಳು ಸಾಮಾನ್ಯ ತಳಹದಿಯಲ್ಲಿ ಹಂಚಿಕೊಂಡಿದ್ದ ಹಿಂದುತ್ವ ಸಿದ್ಧಾಂತದ ಕಾರಣಕ್ಕೆ, ಶಿವಸೇನೆಯ ಹಲವು ಶಾಸಕರಿಗೆ ’ಅಕ್ಕಿ ಮೇಲೆ ಆಸೆ, ನಂಟನ ಮೇಲೆ ಪ್ರೀತಿ’ ಎಂಬಂತಾಗಿತ್ತು. ಈ ಸಂಗತಿಯನ್ನು ಬಳಸಿಕೊಂಡು ಯಾವ ದಾರಿ ಹಿಡಿದರೂ ಸರಿ ಅಧಿಕಾರ ಹಿಡಿಯದೆ ಬಿಡುವುದಿಲ್ಲ ಎಂದು ಕಾದಿದ್ದ ಬಿಜೆಪಿಗೆ, ಜೂನ್ ನಾಲ್ಕನೇ ವಾರದ ಮಂಗಳವಾರ ಕಾಲ ಕೂಡಿಬಂದಿದೆ ಎಂಬಂತಾಗಿದೆ. ಸಂಘ ಪರಿವಾರದ ಜೊತೆಗೆ ನಂಟು ಬೆಳೆಸಿಕೊಂಡಿರುವ ಮಾರಿಕೊಂಡ ಮಾಧ್ಯಮಗಳು ತಾವೇ ಜಗತ್ತು ಗೆದ್ದವರಂತೆ ಆಗಲೇ ಸಂಭ್ರಮಿಸಲು ಆರಂಭಿಸಿವೆ.

ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು. ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 106 ಇದ್ದು ಲೆಕ್ಕಾಚಾರದ ಪ್ರಕಾರ ನಾಲ್ಕು ಸ್ಥಾನಗಳನ್ನಷ್ಟೇ ಗೆಲ್ಲಬಹುದಿತ್ತು. ಕೆಲವು ಸ್ವತಂತ್ರ ಶಾಸಕರಲ್ಲದೆ, ಶಿವಸೇನೆಯ ಕೆಲವು ಶಾಸಕರೂ ಅಡ್ಡ ಮತದಾನ ಮಾಡಿರುವ ಶಂಕೆ ಇದರಿಂದ ವ್ಯಕ್ತವಾಗಿತ್ತು. ಎಂವಿಎ ತಾನು ನಿಲ್ಲಿಸಿದ್ದ ಆರು ಅಭ್ಯರ್ಥಿಗಳಲ್ಲಿ ಒಬ್ಬರು ಸೋತಿದ್ದರು. ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಶಾಸಕನ್ನೂ ಸೇರಿಸಿ 169 ಶಾಸಕರ ಬೆಂಬಲವನ್ನು ಪ್ರತಿಪಾದಿಸುವ ಎಂವಿಎಗೆ ಈ ಆಘಾತದ ಜೊತೆಗೆ ಮುಂದಿನ ದಿನ ಸೂರತ್‌ನ ಐಶಾರಾಮಿ ಹೋಟೆಲ್‌ನಲ್ಲಿ ಶಿವಸೇನೆಯ ಸುಮಾರು 30 ಶಾಸಕರು, ಆ ಪಕ್ಷದ ಮುಖಂಡ ಏಕನಾಥ ಶಿಂಧೆ ಜೊತೆಗೆ ಬಿಡಾರ ಹೂಡಿ, ಬಿಜೆಪಿ ಬೆಂಬಲಕ್ಕೆ ನಿಂತಿರುವ ಸುದ್ದಿ ಬರಸಿಡಿಲಿನಿಂತೆ ಬಂದಪ್ಪಳಿಸಿತು. ಅಲ್ಲಿಂದ ರಾತ್ರೋರಾತ್ರಿ ಬಿಜೆಪಿ ಆಡಳಿತದ ಅಸ್ಸಾಂನ ಗೌಹಾತಿಗೆ ಹಾರಿರುವ ಬಂಡಾಯ ಶಾಸಕರು ತಮ್ಮ ಸಂಖ್ಯಾಬಲವನ್ನು 46 ಎಂದು ಹೇಳಿಕೊಂಡಿದ್ದಾರೆ. 287 ಬಲಾಬಲದ ವಿಧಾನಸಭೆಯಲ್ಲಿ 144 ಮ್ಯಾಜಿಕ್ ಸಂಖ್ಯೆ (ಒಬ್ಬ ಶಿವಸೇನೆಯ ಶಾಸಕರು ತೀರಿಕೊಂಡಿದ್ದಾರೆ) ಆಗಿದ್ದರೂ ವಿಶ್ವಾಸಮತ ನಿರ್ಣಯಕ್ಕೆ ರಾಜ್ಯಪಾಲರು ನಿರ್ದೇಶಿಸಿದರೆ ಸರ್ಕಾರದ ಗತಿ ಏನಾಗುತ್ತದೆಂದು ಎಲ್ಲರಿಗೂ ತಿಳಿದಿದ್ದೆ.

ಬಿಜೆಪಿ ತನ್ನ ಎಂದಿನ ಚಾಳಿಯಂತೆ ಪ್ರತಿ ಪಕ್ಷಗಳ ಶಾಸಕರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ ಮುನ್ನುಗ್ಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 2015ರಲ್ಲಿ ಆರ್‌ಜೆಡಿ ಜೊತೆಗೂಡಿ ಸರ್ಕಾರ ರಚಿಸಿದ್ದ ಜೆಡಿಯುವಿನ ನಿತೀಶ್ ಕುಮಾರ್ ಅವರನ್ನು 2017ರಲ್ಲಿ ಅಕ್ರಮವಾಗಿ ಸೆಳೆದು ಅವರ ಜತೆಗೆ ಬಿಜೆಪಿ ಸರ್ಕಾರ ರಚಿಸಿತ್ತು. ಜಯಲಲಿತಾ ಅವರ ನಿಧನದ ನಂತರ ತಮಿಳುನಾಡಿನ ಎಐಎಡಿಎಂಕೆ ಸರ್ಕಾರವನ್ನು ಆ ರಾಜ್ಯದಲ್ಲಿ ನೆಲೆಯೇ ಇಲ್ಲದ ಬಿಜೆಪಿ ತನ್ನ ತೆಕ್ಕೆಯಲ್ಲಿಟ್ಟುಕೊಂಡು ಆಡಳಿತ ನಡೆಸಿತ್ತು. ಕರ್ನಾಟಕದಲ್ಲಿ ಆಪರೇಶನ್ ಕಮಲದಿಂದ ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿತು. (ಈ ಹಿಂದಿನ ಅವಧಿಯಲ್ಲಿ ಆದ ಆಪರೇಷನ್ ಕಮಲ ಬೇರೆಯದ್ದು!) ಮಧ್ಯಪ್ರದೇಶದಲ್ಲಿ ಆಮಿಷಗಳನ್ನು ಒಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಕಮಲನಾಥ್ ಸರ್ಕಾರವನ್ನು ಮುಳುಗಿಸಿತ್ತು. ಗೋವಾ, ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ ಹೀಗೆ ದೇಶದ ಉದ್ದಗಲಕ್ಕೆ ಒಂದಲ್ಲ ಒಂದು ಕುತಂತ್ರ ಬಳಸಿ ಅಧಿಕಾರ ಹಿಡಿಯುವುದನ್ನು ಕರಗತ ಮಾಡಿಕೊಂಡಿರುವ ಬಿಜೆಪಿ ಮಹಾರಾಷ್ಟ್ರದಲ್ಲಿಯೂ ತನ್ನ ದಾಳವನ್ನು ಈಗ ಪರಿಣಾಮಕಾರಿಯಾಗಿ ಬೀಸಿದೆ. ಅಲ್ಲದೆ ತನ್ನ ಶಾಸಕರನ್ನು ಶಿವಸೇನೆ ಸೆಳೆಯದಂತೆ ನೋಡಿಕೊಳ್ಳಲು ಅವರನ್ನೆಲ್ಲಾ ಒಟ್ಟಿಗೆ ಕೂಡಿಹಾಕಿಕೊಂಡು ರೆಸಾರ್ಟ್ ಯಾತ್ರೆ ಬೆಳೆಸಿದೆ. ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳೂ ತಮ್ಮ ಶಾಸಕರನ್ನು ಜೋಪಾನ ಮಾಡಿಕೊಳ್ಳಲು ದಾರಿ ಬೆಳೆಸಿವೆ.

ಒಂದು ಪಕ್ಷ, ಪಕ್ಷಾಂತರ ಕಾಯ್ದೆ ಅನ್ವಯವಾಗದೆ ಶಾಸಕರನ್ನು ಅಸಿಂಧುಗೊಳಿಸದಂತೆ ಆಟ ಆಡಬೇಕಾದರೆ ಶಿವಸೇನೆಯ ಮೂರರ ಎರಡನೇ ಭಾಗದಷ್ಟು ಶಾಸಕರು ಏಕನಾಥ ಶಿಂಧೆ ಜೊತೆಗೆ ಹೋಗಬೇಕಾಗುತ್ತದೆ.
ಅಂದರೆ ಶಿವಸೇನೆಯ 55 ಶಾಸಕರಲ್ಲಿ 37 ಜನ ಪಕ್ಷದಿಂದ ಹೊರಹೋಗಬೇಕಾಗುತ್ತದೆ. ಈಗಾಗಲೇ 40 ಶಿವಸೇನೆ ಶಾಸಕರು ಅವರ ಜೊತೆ ಇದ್ದಾರೆ ಎನ್ನಲಾಗುತ್ತಿದೆ. ಈಗ ಅವರು ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಿ ಸ್ವತಂತ್ರ ಪಕ್ಷ ಘೋಷಿಸಬಹುದು. ಹಣ, ಇಡಿ-ಸಿಬಿಐ ಮುಂತಾದ ಏಜೆನ್ಸಿಗಳ ಅಧಿಕಾರವನ್ನು ಮನಸೋಇಚ್ಛೆ ಬಳಸಿದ್ದರಿಂದ ಇದು ಸಾಧ್ಯಾವಾಯಿತೆ? ಈಗಿನ ಸದ್ಯದ ಸುದ್ದಿಗಳಂತೆ ಹಲವು ಶಿವಸೇನೆ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದರೆ ಮತ್ತು ಅವರ ಶಾಸಕ ಸ್ಥಾನ ಅಸಿಂಧುವಾದರೆ ಕುಸಿಯುವ ವಿಧಾನಸಭಾ ಬಲಾಬಲದಲ್ಲಿ ಬಿಜೆಪಿಗೂ ಸರ್ಕಾರ ರಚಿಸುವುದು ಸುಲಭವೇನಲ್ಲ. ಸ್ವತಂತ್ರ ಶಾಸಕರ ಬೆಂಬಲ ತಪ್ಪಿ ಮತ್ತು ಕಾಂಗ್ರೆಸ್ ಹಾಗೂ ಎನ್‌ಸಿಪಿಯ ಒಂದಷ್ಟು ಶಾಸಕರು ಪಕ್ಷಾಂತರ ಮಾಡಿ ಶಿವಸೇನೆ-ಎಂವಿಎ ಅಧಿಕಾರ ಕಳೆದುಕೊಂಡರೆ ರಾಷ್ಟ್ರಪತಿ ಆಳ್ವಿಕೆ ಮಹಾರಾಷ್ಟ್ರಕ್ಕೆ ಅನಿವಾರ್ಯವಾಗಬಹುದು. ಒಟ್ಟಿನಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು, ಜನರು ಕೊಟ್ಟ ಮ್ಯಾಂಡೇಟ್‌ಗೆ ಕಿಂಚಿತ್ತೂ ಗೌರವ ನೀಡದೆ ಹಿಂಬಾಗಿಲಿನಿಂದಾದರೂ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಈ ಬಾರಿ ’ಗೆಲುವು’ ಒಲಿಯುವುದೇ? ಇದು ಶಿವಸೇನೆಯನ್ನು ಎಲ್ಲಿಗೆ ತಳ್ಳಬಹುದು?
ಒಂದು ಕಡೆ ಅಶಾಂತಿಗೆ ಮತ್ತೊಂದು ಕಡೆ ರಾಜಕೀಯ ಅಸ್ಥಿರತೆಯ ಕಡೆಗೆ ರಾಜ್ಯಗಳನ್ನು ನೂಕಲು ಸದಾ ಸನ್ನದ್ಧವಾಗಿರುವ ಬಿಜೆಪಿಯ ನಿಜ ಬಣ್ಣವನ್ನು ಜನರು ಅರಿತು ಪ್ರಜಾತಾಂತ್ರಿಕವಾಗಿ ಅದಕ್ಕೆ ಪಾಠ ಕಲಿಸಬೇಕಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...