HomeUncategorizedಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ, ಭಾರತಿಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, “ಪಶ್ಚಿಮ ಬಂಗಾಳದಲ್ಲಿ ಇತ್ತೀಚಿನ ದಿನಗಳಲ್ಲಿ ಏನು ನಡೆಯುತ್ತಿದೆ ಎಂದು ನೋಡಿ, ರಾಜ್ಯದಲ್ಲಿ ಪೊಲೀಸರ ಸಹಾಯವಿಲ್ಲದೇ ‘ಗೂಂಡಾ ರಾಜ್’ ಮೇಲುಗೈ ಸಾಧಿಸುತ್ತದೆಯೇ?, ಅಂತಹ ಪೊಲೀಸ್ ಸಿಬ್ಬಂದಿಯೊಂದಿಗೆ ಏನು ಮಾಡಬೇಕು..? ಎಂದು ಪ್ರಶ್ನಿಸಿದ್ದಾರೆ.

’ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪೊಲೀಸರನ್ನು ಬೂಟು ನೆಕ್ಕುವಂತೆ ಮಾಡುತ್ತೇವೆ” ಎಂದು ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ರಾಜು ಬ್ಯಾನರ್ಜಿ ದುರ್ಗಾಪುರದಲ್ಲಿ ನಡೆದ ರ್‍ಯಾಲಿ ವೇಳೆ ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

2021 ರ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ, ಬಿಜೆಪಿ ರಾಜ್ಯದಲ್ಲಿ ವಿವಿಧ ರ್‍ಯಾಲಿಗಳಲ್ಲಿ ಮತ್ತು ಪಕ್ಷದ ಹೇಳಿಕೆಗಳಲ್ಲಿ ಆಡಳಿತರೂಢ ಪಕ್ಷದ ಮೇಲೆ “ಕಾನೂನು ಉಲ್ಲಂಘನೆ” ನಡೆಸಿದೆ ಎಂದು ಆರೋಪಿಸಿದೆ. ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಮಹಿಳೆಯರಿಗೆ ರಾಜ್ಯದಲ್ಲಿ ಭದ್ರತೆ ಇಲ್ಲ ಎಂದು ಹೇಳಿದ್ದಾರೆ.

“ಬಂಗಾಳದಲ್ಲಿ ಮಹಿಳಾ ಮುಖ್ಯಮಂತ್ರಿ ಇದ್ದಾರೆ. ಆದರೆ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಇತರ ರಾಜ್ಯಗಳಿಗೆ ಹೋಲಿಸಿದರೆ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಕೆಟ್ಟದಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. 2021 ರ ವಿಧಾನಸಭಾ ಚುನಾವಣೆಯ ನಂತರ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರನ್ನು ಜೈಲಿಗೆ ಕಳುಹಿಸಲಾಗುವುದು” ಎಂದು ಕೈಲಾಶ್ ವಿಜಯವರ್ಗಿಯ ಆರೋಪಿಸಿದ್ದಾರೆ.

 

ಚುನಾವಣೆ ಹಿನ್ನೆಲೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದು ಪ್ರತಿ ರ್‍ಯಾಲಿಯಲ್ಲೂ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಾವುಗಳನ್ನು ತೃಣಮೂಲ ಕಾಂಗ್ರೆಸ್ ಮಾಡಿಸಿದೆ ಎಂದು ಆರೋಪಿಸಲಾಗುತ್ತಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...