Homeಮುಖಪುಟಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಮಹಾಮೈತ್ರಿಕೂಟವನ್ನು ರಚಿಸುವುದಕ್ಕಾಗಿ ವಿರೋಧ ಪಕ್ಷಗಳು ಪ್ರಯತ್ನಿಸುತ್ತಿರುವಾಗಲೇ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನದೇ ಆದ ಹಾದಿಯನ್ನು ಕಂಡುಕೊಳ್ಳುವ ಸೂಚನೆಗಳನ್ನು ನೀಡುತ್ತಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮಾಯಾವತಿಯವರನ್ನು ಬಿಂಬಿಸಬೇಕೆಂದು ಬಿಎಸ್‌ಪಿ ನಿರ್ಧರಿಸಿದೆ.

ಜೂನ್ 23ರಂದು ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷ ನಾಯಕರ ಸಭೆಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಯಾವುದೇ ಆಹ್ವಾನವನ್ನು ಕಳುಹಿಸಲಾಗಿಲ್ಲ ಎಂದು ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಕೆ.ಸಿ.ತ್ಯಾಗಿ ಇತ್ತೀಚೆಗೆ ಹೇಳಿದ್ದಾರೆ.

ಜೆಡಿಯು ನಾಯಕರ ಹೇಳಿಕೆಯ ಸ್ವಲ್ಪ ಸಮಯದ ನಂತರ, ಬಿಎಸ್‌ಪಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. 2024ರ ಚುನಾವಣೆಯಲ್ಲಿ ಇತರ ಪಕ್ಷಗಳು ರೂಪಿಸಿದ ಕಾರ್ಯತಂತ್ರದ ಭಾಗವಾಗಲು ಬಿಎಸ್‌ಪಿ ಬಯಸುವುದಿಲ್ಲ. ಬದಲಿಗೆ ತನ್ನದೇ ಆದ ಹಾದಿಯನ್ನು ಕಂಡುಕೊಳ್ಳಲಾಗುವುದು ಎಂದು ಬಿಎಸ್‌ಪಿ ಹೇಳಿದೆ.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿಯ ಹಿರಿಯ ನಾಯಕರೊಬ್ಬರು, “ಬಿಜೆಪಿ ವಿರುದ್ಧ ವೇದಿಕೆಯನ್ನು ಸಜ್ಜುಗೊಳಿಸಲು ವಿವಿಧ ವಿರೋಧ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡುವುದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಸುತ್ತಿನ ತಿರುಗಾಟ ನಡೆಸಿದ್ದಾರೆ. ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಯಾರನ್ನು ಬಿಂಬಿಸಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ಮಾಯಾವತಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್‌ಪಿ ನಿರ್ಧರಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಹಾರದಲ್ಲಿ ಜೂನ್ 23ರಂದು ಪಾಟ್ನಾದಲ್ಲಿ ನಡೆಯಲಿರುವ ಬಿಜೆಪಿಯೇತರ ಪಕ್ಷಗಳ ಸಭೆಗೆ ತಮ್ಮನ್ನು ಆಹ್ವಾನಿಸದಿರುವ ಬಗ್ಗೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ವರಿಷ್ಠರಾದ ಜಿತನ್ ರಾಮ್ ಮಾಂಝಿ ಅಸಮಾಧಾನ ಹೊಂದಿದ್ದಾರೆ.

ಶುಕ್ರವಾರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿರುವ ಜಿತನ್ ರಾಮ್‌ ಮಾಂಝಿ, “ಜೂನ್ 23ರಂದು ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ನಮ್ಮ ಪಕ್ಷವನ್ನು ಆಹ್ವಾನಿಸಲಾಗಿಲ್ಲ. ಆದಾಗ್ಯೂ, ರಾಷ್ಟ್ರಮಟ್ಟದಲ್ಲಿ ಪ್ರತಿಪಕ್ಷಗಳ ಏಕತೆಯನ್ನು ಮುನ್ನಡೆಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮುಂದುವರಿಯಲಾಗುವುದು” ಎಂದಿದ್ದಾರೆ.

ಇದಕ್ಕೂ ಮುನ್ನ ಅವರು ಪಕ್ಷದ ಶಾಸಕರೊಂದಿಗೆ ನಿತೀಶ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಐದು ಲೋಕಸಭಾ ಸ್ಥಾನಗಳನ್ನು ಎಚ್‌ಎಎಂಗೆ ಬಿಟ್ಟುಕೊಡಬೇಕು ಎಂಬ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ. “ಮಹಾಮೈತ್ರಿಕೂಟದ ನಾಯಕರು ಪಕ್ಷದ ಬೇಡಿಕೆಯನ್ನು ಪರಿಗಣಿಸಿ ಸೀಟು ಹಂಚಿಕೆಯ ಅಡಿಯಲ್ಲಿ ಸ್ಥಾನಗಳನ್ನು ನೀಡಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ದಲಿತರು, ಮುಸ್ಲಿಮರ ಕುರಿತ ರಾಹುಲ್ ಮಾತಿನಲ್ಲಿ ಕಹಿಸತ್ಯವಿದೆ: ಮಾಯಾವತಿ

ಎಚ್‌ಎಎಂನ ಐದು ಲೋಕಸಭಾ ಸ್ಥಾನಗಳ ಬೇಡಿಕೆಯು ರಾಜ್ಯದ ಮಹಾಮೈತ್ರಿಕೂಟದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳನ್ನು ಉಂಟುಮಾಡುವ ಸಾಧ್ಯತೆಯಿದೆ. ಮಾಂಝಿಯವರ ಎಚ್‌ಎಎಂ ರಾಜ್ಯ ವಿಧಾನಸಭೆಯಲ್ಲಿ ನಾಲ್ಕು ಶಾಸಕರನ್ನು ಹೊಂದಿದೆ.

ಮಾಂಝಿಯವರ ಪಕ್ಷಕ್ಕೆ ಹೋಲಿಸಿದರೆ ಮಾಯಾವತಿಯವರ ವಿಚಾರವು ತುಸು ವಿಭಿನ್ನವಾಗಿದೆ. ವಿಶೇಷವಾಗಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಕುಸಿತ ಕಂಡಿದೆ. ಪಂಜಾಬ್‌ನಂತಹ ರಾಜ್ಯಗಳಲ್ಲಿ ಯಾವುದೇ ಸಾಧನೆಯನ್ನು ಮಾಡಿಲ್ಲ.

ಲೋಕಸಭಾ ಚುನಾವಣೆಯ ಅಂತಿಮ ಕಾರ್ಯತಂತ್ರವನ್ನು ರೂಪಿಸಲು ಪ್ರತಿಪಕ್ಷಗಳು ಒಟ್ಟಾಗಿ ಕುಳಿತುಕೊಳ್ಳುತ್ತಿವೆ. ಮಾಯಾವತಿಯವರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕೆಂಬ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಮೇಲೆ ಒತ್ತಡ ಹೇರುವ ತಂತ್ರವನ್ನು ಬಿಎಸ್‌ಪಿ ಅನುಸರಿಸುತ್ತಿದೆಯೇ ಎಂಬ ರಾಜಕೀಯ ಚರ್ಚೆಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...