Homeಮುಖಪುಟಉದ್ಧವ್‌ ಠಾಕ್ರೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ-ಶಾಗೆ ಆಹ್ವಾನ??

ಉದ್ಧವ್‌ ಠಾಕ್ರೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ-ಶಾಗೆ ಆಹ್ವಾನ??

- Advertisement -
- Advertisement -

ಮಹಾರಾಷ್ಟ್ರದ ನಾಟಕೀಯ ಬೆಳವಣಿಗೆಗಳು ಒಂದು ಹಂತಕ್ಕೆ ಮುಗಿದಿದ್ದರೂ ಮುಂದೆ ಏನೇನಾಗಲಿದೆ ಎಂಬ ಕುತೂಹಲ ಮಾತ್ರ ಎಲ್ಲರಲ್ಲಿದೆ. ಈ ನಡುವೆ ಡಿಸೆಂಬರ್‌ 1 ರಂದು ಶಿವಸೇನೆಯ ಮುಖ್ಯಸ್ಥ ಉದ್ಧವ್‌ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವಿಕರಿಸಲಿದ್ದು ಕಾರ್ಯಕ್ರಮಕ್ಕೆ ಯಾರೆಲ್ಲ ಭಾಗವಹಿಸುತ್ತಾರೆ ಎಂಬುದು ನಿಗೂಢವಾಗಿದೆ.

ಮಹಾರಾಷ್ಟ್ರ ವಿಕಾಸ್ ಅಘಾಡಿಯ ಮೂವರು ಪ್ರತಿನಿಧಿಗಳು ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಇಂದು ಬೆಳಿಗ್ಗೆಯೇ ಉದ್ಧವ್‌ ಠಾಕ್ರೆಯವರು ಸಹ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಡಿಸೆಂಬರ್ 1 ರಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸುತ್ತೀರಾ? ಎಂದು ಶಿವಸೇನೆಯ ಸಂಸದ ಸಂಜಯ್‌ ರಾವತ್‌ರವರನ್ನು ಮಾಧ್ಯಮದವರು ಪ್ರಶ್ನಿಸಿದ್ದಾರೆ. ಅದಕ್ಕವರು ಹೌದು ಮೋದಿಯವರನ್ನು ಜೊತೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಆಹ್ವಾನಿಸುತ್ತೇವೆ. ನಾವು ಎಲ್ಲರನ್ನು ಕರೆಯುತ್ತೇವೆ ಎಂದು ಸಂಜಯ್‌ ರಾವತ್‌ ಉತ್ತರಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಕಾಸ್ ಅಘಾಡಿ ಅಸ್ತಿತ್ವಕ್ಕೆ: ಡಿಸೆಂಬರ್‌ 1 ರಂದು ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ..

ಇದೇ ಸಮಯದಲ್ಲಿ ಉದ್ಧವ್‌ ಠಾಕ್ರೆಯವರು “ನಾನು ಮಹಾರಾಷ್ಟ್ರವನ್ನು ಮುನ್ನೆಡೆಸುತ್ತೇನೆ ಎಂದು ಊಹಿಸಿರಲಿಲ್ಲ. ಇದಕ್ಕಾಗಿ ನಾನು ಸೋನಿಯಾ ಗಾಂಧಿ ಮತ್ತು ಇತರರಿಗೆ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಹಾಗಾದರೆ ಸೋನಿಯಾ ಗಾಂಧಿ, ಶರದ್‌ ಪವಾರ್‌ ಸೇರಿದಂತೆ ಹಲವು ಜನ ಭಾಗವಹಿಸುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೋದಿ-ಶಾ ಬರಲಿದ್ದಾರೆಯೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಇನ್ನೊಂದೆಡೆ ಬಿಜೆಪಿ ಜೊತೆ ಸೇರಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನಂತರ ರಾಜಿನಾಮೆ ನೀಡಿದ ಅಜಿತ್‌ ಪವಾರ್‌ರವರು ಸಹ ಎನ್‌ಸಿಪಿ ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಶರದ್‌ ಪವಾರ್‌ ಪುತ್ರಿ ಸುಪ್ರಿಯ ಸುಳೆ ಪ್ರೀತಿಯಿಂದ ಅಪ್ಪಿಕೊಳ್ಳುವ ಮೂಲಕ ಸ್ವಾಗತಿಸಿ ಅವರ ಪಾದಕ್ಕೆರಗಿ ಆರ್ಶಿವಾದ ಕೂಡ ಪಡೆದಿದ್ದಾರೆ.

ಹಾಗಾಗಿ ಅಜಿತ್‌ ಪವಾರ್‌ ಕೂಡ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ನೀರಿಕ್ಷೆ ಇರುವುದರಿಂದ ಆಗಲೂ ಮೋದಿ-ಶಾ ಭಾಗವಹಿಸುವರೆ ಎಂಬ ಪ್ರಶ್ನೆಗಳು ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...