Homeಮುಖಪುಟಪುರಾವೆ ಸಹಿತ ಬಿಜೆಪಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ: ಅಭಿಷೇಕ್ ಬ್ಯಾನರ್ಜಿ

ಪುರಾವೆ ಸಹಿತ ಬಿಜೆಪಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನಾಯಕ ಮತ್ತು ಎನ್‌ಐಎ ಅಧಿಕಾರಿಯ ನಡುವೆ ಪಾರ್ಸೆಲ್ ವಿನಿಮಯವಾಗಿರುವ ಬಗ್ಗೆ ಪುರಾವೆಯೊಂದಿಗೆ ಪಕ್ಷವು ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ ಎಂದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಮಂಗಳವಾರ ಹೇಳಿದ್ದಾರೆ.

ಬಿಜೆಪಿ ನಾಯಕ ಜಿತೇಂದ್ರ ತಿವಾರಿ ಅವರು ಎನ್‌ಐಎ ಎಸ್‌ಪಿ ಧನ್ ರಾಮ್ ಸಿಂಗ್ ಅವರನ್ನು ಅವರ ಕೋಲ್ಕತ್ತಾ ನಿವಾಸದಲ್ಲಿ ಪಾರ್ಸೆಲ್‌ನೊಂದಿಗೆ ಭೇಟಿ ಮಾಡಿದ್ದಾರೆ ಎಂದು ಆರೋಪಿಸಿದ ಕೆಲವು ದಿನಗಳ ನಂತರ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ.

“ನಾವು (ಸುಪ್ರೀಂ) ನ್ಯಾಯಾಲಯಕ್ಕೆ ಹೋಗುತ್ತೇವೆ, ಖಂಡಿತವಾಗಿಯೂ ನಾವು ಹೋಗುತ್ತೇವೆ. ಬಿಜೆಪಿ ನಾಯಕ ಎನ್‌ಐಎ ಎಸ್‌ಪಿಯ ನಿವಾಸಕ್ಕೆ ಬಿಳಿ ಪ್ಯಾಕೆಟ್ ತೆಗೆದುಕೊಂಡು ಹೋಗಿರುವ ಉತ್ತಮ ಗುಣಮಟ್ಟದ ದೃಶ್ಯಗಳನ್ನು ನಾವು ನೀಡುತ್ತೇವೆ. ನಾವು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಾಜರುಪಡಿಸುತ್ತೇವೆ” ಎಂದು ಬ್ಯಾನರ್ಜಿ ಹೇಳಿದರು.

ಬಿಜೆಪಿ ನಾಯಕ ಮತ್ತು ಮಾಜಿ ಅಸನ್ಸೋಲ್ ಮೇಯರ್ ಜಿತೇಂದ್ರ ತಿವಾರಿ ಅವರು ಮಾರ್ಚ್ 26 ರಂದು ಕೋಲ್ಕತ್ತಾದ ಎನ್‌ಐಎ ಎಸ್‌ಪಿ ಧನ್ ರಾಮ್ ಸಿಂಗ್ ಅವರ ನಿವಾಸಕ್ಕೆ ಪಾರ್ಸೆಲ್‌ನೊಂದಿಗೆ ಪ್ರವೇಶಿಸಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಈ ಹಿಂದೆ ಆರೋಪಿಸಿದ್ದರು. ಕೇವಲ ಒಂದು ದಿನದ ನಂತರ ಎನ್‌ಐಎ ಹಲವಾರು ಟಿಎಂಸಿ ನಾಯಕರಿಗೆ ನೋಟಿಸ್ ಕಳುಹಿಸಿದೆ ಎಂದು ಅವರು ಹೇಳಿದರು.

ಎಸ್‌ಪಿ ವಾಸಿಸುವ ವಸತಿ ಸಂಕೀರ್ಣದ ಪ್ರವೇಶ ಮತ್ತು ನಿರ್ಗಮನದ ದಾಖಲೆಯನ್ನು ನಿರ್ವಹಿಸುವ ರಿಜಿಸ್ಟರ್‌ನ ಪುಟಗಳನ್ನು ಟಿಎಂಸಿ ಸಾರ್ವಜನಿಕಗೊಳಿಸಿದೆ. ಬಿಜೆಪಿ ನಾಯಕ ಮತ್ತು ಎನ್‌ಐಎ ಅಧಿಕಾರಿಯ ನಡುವಿನ ಸಭೆಯಲ್ಲಿ ತನ್ನ ಪಕ್ಷದ ನಾಯಕರ ವಿರುದ್ಧ “ದೊಡ್ಡ ಸಂಚು ರೂಪಿಸಲಾಗಿದೆ” ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

“ಹೆಚ್ಚುವರಿಯಾಗಿ ಜಿತೇಂದ್ರ ತಿವಾರಿ ಅವರು ಪಾರ್ಸೆಲ್‌ನೊಂದಿಗೆ ಬಂದರು, 52 ನಿಮಿಷಗಳ ನಂತರ ಬರಿಗೈಯಲ್ಲಿ ಹೊರಟರು ಎಂದು ಸೂಚಿಸುವ ಮಾಹಿತಿಯನ್ನು ನಾವು ಹೊಂದಿದ್ದೇವೆ” ಎಂದು ಬ್ಯಾನರ್ಜಿ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಸಂವಿಧಾನ ಬದಲಾಯಿಸುವ ಯಾವುದೇ ಪ್ರಯತ್ನವಿದ್ದಲ್ಲಿ ರಾಜೀನಾಮೆ ನೀಡುತ್ತೇನೆ: ಅಠವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...