Homeಮುಖಪುಟಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

ಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

- Advertisement -
- Advertisement -

//ನಾನು ಗೌರಿ ಡೆಸ್ಕ್//

ಇಂದು ನರೇಂದ್ರ ಮೋದಿಯವರಿಗೆ ಎರಡೆರಡು ಸವಾಲುಗಳು ಎದುರಾಗಿವೆ. ಒಂದು ಅವರ ಪಕ್ಷಕ್ಕೆ ಸೇರಿದ ಅಭ್ಯರ್ಥಿಗೆ ಸಂಬಂಧಿಸಿದ್ದರೆ, ಇನ್ನೊಂದು ಅವರ ಎದುರಾಳಿ ರಾಹುಲ್‍ಗಾಂಧಿಯದ್ದಾಗಿದೆ.
ಮಹಾತ್ಮಾಗಾಂಧಿಯವರ ಕೊಲೆಗಡುಕ ನಾಥೂರಾಂ ಗೋಡ್ಸೆ ದೇಶಭಕ್ತ ಎಂಬ ಪ್ರಗ್ಯಾ ಠಾಕೂರ್ ಹೇಳಿಕೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಕ್ಷಮೆ ಕೇಳಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಒತ್ತಾಯಿಸಿದ್ದಾರೆ. ಪ್ರಗ್ಯಾರ ಈ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಬಿಜೆಪಿಯ ವಕ್ತಾರ ಜಿವಿಎಲ್ ನರಸಿಂಹರಾವ್ ಅದನ್ನು ಖಂಡಿಸಿದರಲ್ಲದೇ, ಪ್ರಗ್ಯಾ ಇದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದೂ ಹೇಳಿದ್ದರು. ಇದಕ್ಕೂ ಮುಂಚೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆಯ ವಿರುದ್ಧವೂ ಪ್ರಗ್ಯಾ ಹೇಳಿಕೆ ನೀಡಿ ಅವರ ಪಕ್ಷವನ್ನು ಮುಜುಗರಕ್ಕೆ ಸಿಕ್ಕಿಸಿದ್ದರು. ಅದರ ಬಗ್ಗೆಯೂ ಬಿಜೆಪಿಯು ಕ್ಷಮೆ ಕೇಳಲು ಸೂಚಿಸಿದ್ದರಿಂದ ಪ್ರಗ್ಯಾ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಪ್ರಗ್ಯಾ ಹೇಳಿಕೆ ಏನು?
ಆದರೆ, ಈ ಸಾರಿ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಒಪ್ಪಲು ನೆಟ್ಟಿಗರು ಸಿದ್ಧರಿಲ್ಲ. ಅವರ ಪ್ರಕಾರ, ನರೇಂದ್ರ ಮೋದಿ ನಿರ್ದಿಷ್ಟ ಕಾರಣದಿಂದ ಪ್ರಗ್ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಸ್ವತಃ ಅವರೇ ಇದಕ್ಕೆ ಕ್ಷಮೆ ಯಾಚಿಸಬೇಕು ಎಂಬುದಾಗಿದೆ.
ಮೊಟ್ಟ ಮೊದಲಿಗೆ ಇದಕ್ಕೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ನಾಥೂರಾಮ್ ಗೋಡ್ಸೆ ದೇಶಭಕ್ತನಾದರೆ, ಮಹಾತ್ಮಾ ಗಾಂಧಿ ದೇಶವಿರೋಧಿಯೇ ಎಂದು ಟ್ವಿಟ್ಟರ್‍ನಲ್ಲಿ ಕೇಳಿದ್ದರು.

ಇವೆಲ್ಲವೂ ಉದ್ಭವಿಸಿದ್ದು, ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ನಾಥೂರಾಂ ಗೋಡ್ಸೆ ಮತ್ತು ಆತನೊಬ್ಬ ಹಿಂದು ಎಂದು ಹೇಳಿದ ನಂತರ. ಇದಕ್ಕೆ ಪ್ರತಿಕ್ರಿಯಿಸುತ್ತಾ, ಸ್ವತಃ ನರೇಂದ್ರ ಮೋದಿಯವರೂ ‘ಹಿಂದೂ ಒಬ್ಬ ಭಯೋತ್ಪಾದಕ ಆಗಲು ಸಾಧ್ಯವೇ ಇಲ್ಲ’ ಎಂದು ಚುನಾವಣಾ ಭಾಷಣದಲ್ಲೇ ಹೇಳಿದ್ದರು. ಹಾಗಾದರೆ, ನಾಥೂರಾಂ ಗೋಡ್ಸೆಯ ಬಗ್ಗೆ ನಿಮ್ಮ ನಿಲುವೇನು ಎಂಬ ಪ್ರಶ್ನೆ ಉದ್ಭವಿಸಿತ್ತು. ಅದಕ್ಕೆ ಪ್ರಧಾನಿಯವರು ಇನ್ನೂ ಉತ್ತರಿಸಿಲ್ಲ.
ಪತ್ರಕರ್ತೆ ನಿಧಿ ರಾಜ್ದಾನ್ ಸಹಾ ಈ ಬಗ್ಗೆ ಕಿಡಿಕಾರುತ್ತಾ, ಇಂತಹದೊಂದು ಸ್ಥಿತಿ ಬರುತ್ತದೆಂದು ನಾನೆಂದೂ ಬಗೆದಿರಲಿಲ್ಲ ಎಂದಿದ್ದಾರೆ.

ದುರಂತವೆಂದರೆ, ಪ್ರಗ್ಯಾ ಹೇಳಿಕೆಯನ್ನು ಖಂಡಿಸುತ್ತಾ ಎಐಎಂಐಎಂನ ಸಂಸದ ಓವೈಸಿ ಟ್ವೀಟ್ ಮಾಡಿ, ಇದು ಹೀಗೆಯೇ ಮುಂದುವರೆದು ‘ಶ್ರೀ ಶ್ರೀ ಗೋಡ್ಸೆಗೆ’ ಭಾರತರತ್ನ ಕೊಟ್ಟರೂ ಆಶ್ಚರ್ಯವಿಲ್ಲ ಎಂದಿದ್ದಕ್ಕೆ, ಚೌಕೀದಾರ್ ಶಿವಂ ಘಟಕ್ ಎಂಬಾತ, ಹೌದು ಗೋಡ್ಸೆಗೆ ಭಾರತರತ್ನ ಕೊಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಪತ್ರಕರ್ತ ನಿಖಿಲ್ ವಾಗ್ಲೆ ಸಹಾ ಇದನ್ನು ಖಂಡಿಸಿರುವುದಲ್ಲದೇ, ಇದರ ಹಿಂದೆ ಆರೆಸ್ಸೆಸ್‍ನ ಅಜೆಂಡಾ ಕೆಲಸ ಮಾಡುತ್ತಿದ್ದು, ರಾಷ್ಟ್ರದ ಭಾವನೆಗಳನ್ನು ಕೆರಳಿಸುತ್ತಿದ್ದಾರೆಂದು ಹೇಳಿದ್ದಾರೆ.

ಕಾಂಗ್ರೆಸ್‍ನ ಮಾಧ್ಯಮ ಉಸ್ತುವಾರಿ ನರೇಂದ್ರ ಸಲೂಜಾ, ‘ಇದು ಬಿಜೆಪಿಯ ತಾತ್ವಿಕತೆಯನ್ನು ತೋರಿಸುತ್ತದೆ ಮತ್ತು ಬಿಜೆಪಿ ಪಕ್ಷವು ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿದೆ ಎಂಬುದನ್ನು ಬಯಲುಗೊಳಿಸುತ್ತಿದೆ’ ಎಂದಿದ್ದಾರೆ. ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಟುವಾಗಿ ಪ್ರತಿಕ್ರಿಯಿಸಿ ‘ಗೋಡ್ಸೆಯ ಉತ್ತರಾಧಿಕಾರಿಗಳಾದ ಬಿಜೆಪಿಯವರಿಂದ ದೇಶದ ಆತ್ಮವೇ ದಾಳಿಗೊಳಗಾಗುತ್ತಿದೆ’ ಎಂದಿದ್ದಾರೆ. ‘ರಾಷ್ಟ್ರಪಿತನ ಕೊಲೆ ಮಾಡಿದವನನ್ನೇ ರಾಷ್ಟ್ರಭಕ್ತನೆಂದೂ, ದೇಶಕ್ಕಾಗಿ ಪ್ರಾಣತೆತ್ತ ಭಯೋತ್ಪಾದಕ ನಿರೋಧಕ ದಳದ ಮುಖ್ಯಸ್ಥ ಹುತಾತ್ಮ ಕರ್ಕರೆಯನ್ನು ದೇಶವಿರೋಧಿಯೆಂದೂ ಬಿಜೆಪಿಯವರು ಕರೆಯುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಪ್ರಗ್ಯಾ ಠಾಕೂರ್‍ರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್‍ಸಿಂಗ್ ‘ಮೋದಿ ಮತ್ತು ಅಮಿತ್‍ಷಾ ತಮ್ಮ ಹೇಳಿಕೆಗಳನ್ನು ನೀಡಿ ದೇಶದ ಮುಂದೆ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರಗ್ಯಾ ಸಿಂಗ್ ಸಹಚರರಿಗೆ ಗೌರಿ ಲಂಕೇಶ್ ಹಂತಕರ ನಂಟು?

ಪದೇ ಪದೇ ಗೋಡ್ಸೆಯ ವಿಚಾರವನ್ನು ಬಿಜೆಪಿಯ ಕೆಲವರು ಮುಂದೆ ತರುತ್ತಿದ್ದಾಗ್ಯೂ ಪ್ರಧಾನಿ ಮೋದಿ ಬಾಯಿ ಬಿಟ್ಟಿಲ್ಲ. ಈ ಹಿನ್ನೆಲೆಯಲ್ಲಿಯೂ ಮೋದಿ ಕ್ಷಮೆ ಯಾಚಿಸಬೇಕು ಎಂಬ ವಿಚಾರ ಮುನ್ನೆಲೆಗೆ ಬಂದಿದೆ. ಪ್ರಧಾನಿಯವರು ಏನು ಹೇಳುತ್ತಾರೆ ಎಂದು ಕಾದು ನೋಡಬೇಕು.

ಮೋದಿಯವರಿಗೆ ಎದುರಾಗಿರುವ ಇನ್ನೊಂದು ಸಂಗತಿಯೆಂದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರ ಸವಾಲು. ಮೋದಿಯವರಿಗೆ ಧೈರ್ಯವಿದ್ದರೆ ತನ್ನೊಂದಿಗೆ ಮುಖಾಮುಖಿ ಚರ್ಚೆಗೆ ಬರಲಿ. ತಾನು ಕೇವಲ 15 ನಿಮಿಷ ಮಾತಾಡುತ್ತೇನೆ. ಮೋದಿಯವರು 2 ಗಂಟೆ ಮಾತಾಡಲಿ ಎಂಬುದು ರಾಹುಲ್ ಸವಾಲು. ಇದನ್ನು ಈ ಹಿಂದೆಯೂ ಹೇಳಿದ್ದ ರಾಹುಲ್‍ಗಾಂಧಿ, ಕಡೆಯ ಹಂತದ ಚುನಾವಣೆಗೆ ಮುಂಚೆ ಅದನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ರಾಫೇಲ್ ಡೀಲ್‍ಗೆ ಸಂಬಂಧಿಸಿದಂತೆ ರಾಹುಲ್‍ಗಾಂಧಿಯವರ ಬಳಿ ಇನ್ನೂ ದೊಡ್ಡ ಸತ್ಯವೊಂದಿದ್ದು, ಅದನ್ನು ಬಹಿರಂಗ ಪಡಿಸುವ ಅವಕಾಶಕ್ಕಾಗಿ ಅವರು ಹೀಗೆ ಮಾಡುತ್ತಿದ್ದಾರೆಂಬ ಕುತೂಹಲ ದೆಹಲಿಯ ರಾಜಕೀಯ ವಲಯಗಳಲ್ಲಿದೆ.
ಈ ವಿಚಾರಗಳ ಕುರಿತು ಪ್ರಧಾನಿಯವರು ಪ್ರತಿಕ್ರಿಯಿಸದೇ ಮೌನ ತಾಳುವುದು ಹಿಂದಿನಿಂದಲೂ ಟೀಕೆಗೊಳಗಾಗಿದ್ದು, ಈ ಸಾರಿ ಮೋದಿ ಮೌನ ಮುರಿಯುವರೇ ಎಂಬುದಕ್ಕೆ ಮುಂದಿನ ದಿನಗಳೇ ಉತ್ತರ ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...