Homeಮುಖಪುಟಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

ಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

- Advertisement -
- Advertisement -

//ನಾನು ಗೌರಿ ಡೆಸ್ಕ್//

ಇಂದು ನರೇಂದ್ರ ಮೋದಿಯವರಿಗೆ ಎರಡೆರಡು ಸವಾಲುಗಳು ಎದುರಾಗಿವೆ. ಒಂದು ಅವರ ಪಕ್ಷಕ್ಕೆ ಸೇರಿದ ಅಭ್ಯರ್ಥಿಗೆ ಸಂಬಂಧಿಸಿದ್ದರೆ, ಇನ್ನೊಂದು ಅವರ ಎದುರಾಳಿ ರಾಹುಲ್‍ಗಾಂಧಿಯದ್ದಾಗಿದೆ.
ಮಹಾತ್ಮಾಗಾಂಧಿಯವರ ಕೊಲೆಗಡುಕ ನಾಥೂರಾಂ ಗೋಡ್ಸೆ ದೇಶಭಕ್ತ ಎಂಬ ಪ್ರಗ್ಯಾ ಠಾಕೂರ್ ಹೇಳಿಕೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಕ್ಷಮೆ ಕೇಳಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಒತ್ತಾಯಿಸಿದ್ದಾರೆ. ಪ್ರಗ್ಯಾರ ಈ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಬಿಜೆಪಿಯ ವಕ್ತಾರ ಜಿವಿಎಲ್ ನರಸಿಂಹರಾವ್ ಅದನ್ನು ಖಂಡಿಸಿದರಲ್ಲದೇ, ಪ್ರಗ್ಯಾ ಇದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದೂ ಹೇಳಿದ್ದರು. ಇದಕ್ಕೂ ಮುಂಚೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆಯ ವಿರುದ್ಧವೂ ಪ್ರಗ್ಯಾ ಹೇಳಿಕೆ ನೀಡಿ ಅವರ ಪಕ್ಷವನ್ನು ಮುಜುಗರಕ್ಕೆ ಸಿಕ್ಕಿಸಿದ್ದರು. ಅದರ ಬಗ್ಗೆಯೂ ಬಿಜೆಪಿಯು ಕ್ಷಮೆ ಕೇಳಲು ಸೂಚಿಸಿದ್ದರಿಂದ ಪ್ರಗ್ಯಾ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಪ್ರಗ್ಯಾ ಹೇಳಿಕೆ ಏನು?
ಆದರೆ, ಈ ಸಾರಿ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಒಪ್ಪಲು ನೆಟ್ಟಿಗರು ಸಿದ್ಧರಿಲ್ಲ. ಅವರ ಪ್ರಕಾರ, ನರೇಂದ್ರ ಮೋದಿ ನಿರ್ದಿಷ್ಟ ಕಾರಣದಿಂದ ಪ್ರಗ್ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಸ್ವತಃ ಅವರೇ ಇದಕ್ಕೆ ಕ್ಷಮೆ ಯಾಚಿಸಬೇಕು ಎಂಬುದಾಗಿದೆ.
ಮೊಟ್ಟ ಮೊದಲಿಗೆ ಇದಕ್ಕೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ನಾಥೂರಾಮ್ ಗೋಡ್ಸೆ ದೇಶಭಕ್ತನಾದರೆ, ಮಹಾತ್ಮಾ ಗಾಂಧಿ ದೇಶವಿರೋಧಿಯೇ ಎಂದು ಟ್ವಿಟ್ಟರ್‍ನಲ್ಲಿ ಕೇಳಿದ್ದರು.

ಇವೆಲ್ಲವೂ ಉದ್ಭವಿಸಿದ್ದು, ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ನಾಥೂರಾಂ ಗೋಡ್ಸೆ ಮತ್ತು ಆತನೊಬ್ಬ ಹಿಂದು ಎಂದು ಹೇಳಿದ ನಂತರ. ಇದಕ್ಕೆ ಪ್ರತಿಕ್ರಿಯಿಸುತ್ತಾ, ಸ್ವತಃ ನರೇಂದ್ರ ಮೋದಿಯವರೂ ‘ಹಿಂದೂ ಒಬ್ಬ ಭಯೋತ್ಪಾದಕ ಆಗಲು ಸಾಧ್ಯವೇ ಇಲ್ಲ’ ಎಂದು ಚುನಾವಣಾ ಭಾಷಣದಲ್ಲೇ ಹೇಳಿದ್ದರು. ಹಾಗಾದರೆ, ನಾಥೂರಾಂ ಗೋಡ್ಸೆಯ ಬಗ್ಗೆ ನಿಮ್ಮ ನಿಲುವೇನು ಎಂಬ ಪ್ರಶ್ನೆ ಉದ್ಭವಿಸಿತ್ತು. ಅದಕ್ಕೆ ಪ್ರಧಾನಿಯವರು ಇನ್ನೂ ಉತ್ತರಿಸಿಲ್ಲ.
ಪತ್ರಕರ್ತೆ ನಿಧಿ ರಾಜ್ದಾನ್ ಸಹಾ ಈ ಬಗ್ಗೆ ಕಿಡಿಕಾರುತ್ತಾ, ಇಂತಹದೊಂದು ಸ್ಥಿತಿ ಬರುತ್ತದೆಂದು ನಾನೆಂದೂ ಬಗೆದಿರಲಿಲ್ಲ ಎಂದಿದ್ದಾರೆ.

ದುರಂತವೆಂದರೆ, ಪ್ರಗ್ಯಾ ಹೇಳಿಕೆಯನ್ನು ಖಂಡಿಸುತ್ತಾ ಎಐಎಂಐಎಂನ ಸಂಸದ ಓವೈಸಿ ಟ್ವೀಟ್ ಮಾಡಿ, ಇದು ಹೀಗೆಯೇ ಮುಂದುವರೆದು ‘ಶ್ರೀ ಶ್ರೀ ಗೋಡ್ಸೆಗೆ’ ಭಾರತರತ್ನ ಕೊಟ್ಟರೂ ಆಶ್ಚರ್ಯವಿಲ್ಲ ಎಂದಿದ್ದಕ್ಕೆ, ಚೌಕೀದಾರ್ ಶಿವಂ ಘಟಕ್ ಎಂಬಾತ, ಹೌದು ಗೋಡ್ಸೆಗೆ ಭಾರತರತ್ನ ಕೊಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಪತ್ರಕರ್ತ ನಿಖಿಲ್ ವಾಗ್ಲೆ ಸಹಾ ಇದನ್ನು ಖಂಡಿಸಿರುವುದಲ್ಲದೇ, ಇದರ ಹಿಂದೆ ಆರೆಸ್ಸೆಸ್‍ನ ಅಜೆಂಡಾ ಕೆಲಸ ಮಾಡುತ್ತಿದ್ದು, ರಾಷ್ಟ್ರದ ಭಾವನೆಗಳನ್ನು ಕೆರಳಿಸುತ್ತಿದ್ದಾರೆಂದು ಹೇಳಿದ್ದಾರೆ.

ಕಾಂಗ್ರೆಸ್‍ನ ಮಾಧ್ಯಮ ಉಸ್ತುವಾರಿ ನರೇಂದ್ರ ಸಲೂಜಾ, ‘ಇದು ಬಿಜೆಪಿಯ ತಾತ್ವಿಕತೆಯನ್ನು ತೋರಿಸುತ್ತದೆ ಮತ್ತು ಬಿಜೆಪಿ ಪಕ್ಷವು ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿದೆ ಎಂಬುದನ್ನು ಬಯಲುಗೊಳಿಸುತ್ತಿದೆ’ ಎಂದಿದ್ದಾರೆ. ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಟುವಾಗಿ ಪ್ರತಿಕ್ರಿಯಿಸಿ ‘ಗೋಡ್ಸೆಯ ಉತ್ತರಾಧಿಕಾರಿಗಳಾದ ಬಿಜೆಪಿಯವರಿಂದ ದೇಶದ ಆತ್ಮವೇ ದಾಳಿಗೊಳಗಾಗುತ್ತಿದೆ’ ಎಂದಿದ್ದಾರೆ. ‘ರಾಷ್ಟ್ರಪಿತನ ಕೊಲೆ ಮಾಡಿದವನನ್ನೇ ರಾಷ್ಟ್ರಭಕ್ತನೆಂದೂ, ದೇಶಕ್ಕಾಗಿ ಪ್ರಾಣತೆತ್ತ ಭಯೋತ್ಪಾದಕ ನಿರೋಧಕ ದಳದ ಮುಖ್ಯಸ್ಥ ಹುತಾತ್ಮ ಕರ್ಕರೆಯನ್ನು ದೇಶವಿರೋಧಿಯೆಂದೂ ಬಿಜೆಪಿಯವರು ಕರೆಯುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಪ್ರಗ್ಯಾ ಠಾಕೂರ್‍ರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್‍ಸಿಂಗ್ ‘ಮೋದಿ ಮತ್ತು ಅಮಿತ್‍ಷಾ ತಮ್ಮ ಹೇಳಿಕೆಗಳನ್ನು ನೀಡಿ ದೇಶದ ಮುಂದೆ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರಗ್ಯಾ ಸಿಂಗ್ ಸಹಚರರಿಗೆ ಗೌರಿ ಲಂಕೇಶ್ ಹಂತಕರ ನಂಟು?

ಪದೇ ಪದೇ ಗೋಡ್ಸೆಯ ವಿಚಾರವನ್ನು ಬಿಜೆಪಿಯ ಕೆಲವರು ಮುಂದೆ ತರುತ್ತಿದ್ದಾಗ್ಯೂ ಪ್ರಧಾನಿ ಮೋದಿ ಬಾಯಿ ಬಿಟ್ಟಿಲ್ಲ. ಈ ಹಿನ್ನೆಲೆಯಲ್ಲಿಯೂ ಮೋದಿ ಕ್ಷಮೆ ಯಾಚಿಸಬೇಕು ಎಂಬ ವಿಚಾರ ಮುನ್ನೆಲೆಗೆ ಬಂದಿದೆ. ಪ್ರಧಾನಿಯವರು ಏನು ಹೇಳುತ್ತಾರೆ ಎಂದು ಕಾದು ನೋಡಬೇಕು.

ಮೋದಿಯವರಿಗೆ ಎದುರಾಗಿರುವ ಇನ್ನೊಂದು ಸಂಗತಿಯೆಂದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರ ಸವಾಲು. ಮೋದಿಯವರಿಗೆ ಧೈರ್ಯವಿದ್ದರೆ ತನ್ನೊಂದಿಗೆ ಮುಖಾಮುಖಿ ಚರ್ಚೆಗೆ ಬರಲಿ. ತಾನು ಕೇವಲ 15 ನಿಮಿಷ ಮಾತಾಡುತ್ತೇನೆ. ಮೋದಿಯವರು 2 ಗಂಟೆ ಮಾತಾಡಲಿ ಎಂಬುದು ರಾಹುಲ್ ಸವಾಲು. ಇದನ್ನು ಈ ಹಿಂದೆಯೂ ಹೇಳಿದ್ದ ರಾಹುಲ್‍ಗಾಂಧಿ, ಕಡೆಯ ಹಂತದ ಚುನಾವಣೆಗೆ ಮುಂಚೆ ಅದನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ರಾಫೇಲ್ ಡೀಲ್‍ಗೆ ಸಂಬಂಧಿಸಿದಂತೆ ರಾಹುಲ್‍ಗಾಂಧಿಯವರ ಬಳಿ ಇನ್ನೂ ದೊಡ್ಡ ಸತ್ಯವೊಂದಿದ್ದು, ಅದನ್ನು ಬಹಿರಂಗ ಪಡಿಸುವ ಅವಕಾಶಕ್ಕಾಗಿ ಅವರು ಹೀಗೆ ಮಾಡುತ್ತಿದ್ದಾರೆಂಬ ಕುತೂಹಲ ದೆಹಲಿಯ ರಾಜಕೀಯ ವಲಯಗಳಲ್ಲಿದೆ.
ಈ ವಿಚಾರಗಳ ಕುರಿತು ಪ್ರಧಾನಿಯವರು ಪ್ರತಿಕ್ರಿಯಿಸದೇ ಮೌನ ತಾಳುವುದು ಹಿಂದಿನಿಂದಲೂ ಟೀಕೆಗೊಳಗಾಗಿದ್ದು, ಈ ಸಾರಿ ಮೋದಿ ಮೌನ ಮುರಿಯುವರೇ ಎಂಬುದಕ್ಕೆ ಮುಂದಿನ ದಿನಗಳೇ ಉತ್ತರ ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....