Homeಮುಖಪುಟಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

ಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

- Advertisement -
- Advertisement -

//ನಾನು ಗೌರಿ ಡೆಸ್ಕ್//

ಇಂದು ನರೇಂದ್ರ ಮೋದಿಯವರಿಗೆ ಎರಡೆರಡು ಸವಾಲುಗಳು ಎದುರಾಗಿವೆ. ಒಂದು ಅವರ ಪಕ್ಷಕ್ಕೆ ಸೇರಿದ ಅಭ್ಯರ್ಥಿಗೆ ಸಂಬಂಧಿಸಿದ್ದರೆ, ಇನ್ನೊಂದು ಅವರ ಎದುರಾಳಿ ರಾಹುಲ್‍ಗಾಂಧಿಯದ್ದಾಗಿದೆ.
ಮಹಾತ್ಮಾಗಾಂಧಿಯವರ ಕೊಲೆಗಡುಕ ನಾಥೂರಾಂ ಗೋಡ್ಸೆ ದೇಶಭಕ್ತ ಎಂಬ ಪ್ರಗ್ಯಾ ಠಾಕೂರ್ ಹೇಳಿಕೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಕ್ಷಮೆ ಕೇಳಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಒತ್ತಾಯಿಸಿದ್ದಾರೆ. ಪ್ರಗ್ಯಾರ ಈ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಬಿಜೆಪಿಯ ವಕ್ತಾರ ಜಿವಿಎಲ್ ನರಸಿಂಹರಾವ್ ಅದನ್ನು ಖಂಡಿಸಿದರಲ್ಲದೇ, ಪ್ರಗ್ಯಾ ಇದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದೂ ಹೇಳಿದ್ದರು. ಇದಕ್ಕೂ ಮುಂಚೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆಯ ವಿರುದ್ಧವೂ ಪ್ರಗ್ಯಾ ಹೇಳಿಕೆ ನೀಡಿ ಅವರ ಪಕ್ಷವನ್ನು ಮುಜುಗರಕ್ಕೆ ಸಿಕ್ಕಿಸಿದ್ದರು. ಅದರ ಬಗ್ಗೆಯೂ ಬಿಜೆಪಿಯು ಕ್ಷಮೆ ಕೇಳಲು ಸೂಚಿಸಿದ್ದರಿಂದ ಪ್ರಗ್ಯಾ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಪ್ರಗ್ಯಾ ಹೇಳಿಕೆ ಏನು?
ಆದರೆ, ಈ ಸಾರಿ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಒಪ್ಪಲು ನೆಟ್ಟಿಗರು ಸಿದ್ಧರಿಲ್ಲ. ಅವರ ಪ್ರಕಾರ, ನರೇಂದ್ರ ಮೋದಿ ನಿರ್ದಿಷ್ಟ ಕಾರಣದಿಂದ ಪ್ರಗ್ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಸ್ವತಃ ಅವರೇ ಇದಕ್ಕೆ ಕ್ಷಮೆ ಯಾಚಿಸಬೇಕು ಎಂಬುದಾಗಿದೆ.
ಮೊಟ್ಟ ಮೊದಲಿಗೆ ಇದಕ್ಕೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ನಾಥೂರಾಮ್ ಗೋಡ್ಸೆ ದೇಶಭಕ್ತನಾದರೆ, ಮಹಾತ್ಮಾ ಗಾಂಧಿ ದೇಶವಿರೋಧಿಯೇ ಎಂದು ಟ್ವಿಟ್ಟರ್‍ನಲ್ಲಿ ಕೇಳಿದ್ದರು.

ಇವೆಲ್ಲವೂ ಉದ್ಭವಿಸಿದ್ದು, ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ನಾಥೂರಾಂ ಗೋಡ್ಸೆ ಮತ್ತು ಆತನೊಬ್ಬ ಹಿಂದು ಎಂದು ಹೇಳಿದ ನಂತರ. ಇದಕ್ಕೆ ಪ್ರತಿಕ್ರಿಯಿಸುತ್ತಾ, ಸ್ವತಃ ನರೇಂದ್ರ ಮೋದಿಯವರೂ ‘ಹಿಂದೂ ಒಬ್ಬ ಭಯೋತ್ಪಾದಕ ಆಗಲು ಸಾಧ್ಯವೇ ಇಲ್ಲ’ ಎಂದು ಚುನಾವಣಾ ಭಾಷಣದಲ್ಲೇ ಹೇಳಿದ್ದರು. ಹಾಗಾದರೆ, ನಾಥೂರಾಂ ಗೋಡ್ಸೆಯ ಬಗ್ಗೆ ನಿಮ್ಮ ನಿಲುವೇನು ಎಂಬ ಪ್ರಶ್ನೆ ಉದ್ಭವಿಸಿತ್ತು. ಅದಕ್ಕೆ ಪ್ರಧಾನಿಯವರು ಇನ್ನೂ ಉತ್ತರಿಸಿಲ್ಲ.
ಪತ್ರಕರ್ತೆ ನಿಧಿ ರಾಜ್ದಾನ್ ಸಹಾ ಈ ಬಗ್ಗೆ ಕಿಡಿಕಾರುತ್ತಾ, ಇಂತಹದೊಂದು ಸ್ಥಿತಿ ಬರುತ್ತದೆಂದು ನಾನೆಂದೂ ಬಗೆದಿರಲಿಲ್ಲ ಎಂದಿದ್ದಾರೆ.

ದುರಂತವೆಂದರೆ, ಪ್ರಗ್ಯಾ ಹೇಳಿಕೆಯನ್ನು ಖಂಡಿಸುತ್ತಾ ಎಐಎಂಐಎಂನ ಸಂಸದ ಓವೈಸಿ ಟ್ವೀಟ್ ಮಾಡಿ, ಇದು ಹೀಗೆಯೇ ಮುಂದುವರೆದು ‘ಶ್ರೀ ಶ್ರೀ ಗೋಡ್ಸೆಗೆ’ ಭಾರತರತ್ನ ಕೊಟ್ಟರೂ ಆಶ್ಚರ್ಯವಿಲ್ಲ ಎಂದಿದ್ದಕ್ಕೆ, ಚೌಕೀದಾರ್ ಶಿವಂ ಘಟಕ್ ಎಂಬಾತ, ಹೌದು ಗೋಡ್ಸೆಗೆ ಭಾರತರತ್ನ ಕೊಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಪತ್ರಕರ್ತ ನಿಖಿಲ್ ವಾಗ್ಲೆ ಸಹಾ ಇದನ್ನು ಖಂಡಿಸಿರುವುದಲ್ಲದೇ, ಇದರ ಹಿಂದೆ ಆರೆಸ್ಸೆಸ್‍ನ ಅಜೆಂಡಾ ಕೆಲಸ ಮಾಡುತ್ತಿದ್ದು, ರಾಷ್ಟ್ರದ ಭಾವನೆಗಳನ್ನು ಕೆರಳಿಸುತ್ತಿದ್ದಾರೆಂದು ಹೇಳಿದ್ದಾರೆ.

ಕಾಂಗ್ರೆಸ್‍ನ ಮಾಧ್ಯಮ ಉಸ್ತುವಾರಿ ನರೇಂದ್ರ ಸಲೂಜಾ, ‘ಇದು ಬಿಜೆಪಿಯ ತಾತ್ವಿಕತೆಯನ್ನು ತೋರಿಸುತ್ತದೆ ಮತ್ತು ಬಿಜೆಪಿ ಪಕ್ಷವು ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿದೆ ಎಂಬುದನ್ನು ಬಯಲುಗೊಳಿಸುತ್ತಿದೆ’ ಎಂದಿದ್ದಾರೆ. ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಟುವಾಗಿ ಪ್ರತಿಕ್ರಿಯಿಸಿ ‘ಗೋಡ್ಸೆಯ ಉತ್ತರಾಧಿಕಾರಿಗಳಾದ ಬಿಜೆಪಿಯವರಿಂದ ದೇಶದ ಆತ್ಮವೇ ದಾಳಿಗೊಳಗಾಗುತ್ತಿದೆ’ ಎಂದಿದ್ದಾರೆ. ‘ರಾಷ್ಟ್ರಪಿತನ ಕೊಲೆ ಮಾಡಿದವನನ್ನೇ ರಾಷ್ಟ್ರಭಕ್ತನೆಂದೂ, ದೇಶಕ್ಕಾಗಿ ಪ್ರಾಣತೆತ್ತ ಭಯೋತ್ಪಾದಕ ನಿರೋಧಕ ದಳದ ಮುಖ್ಯಸ್ಥ ಹುತಾತ್ಮ ಕರ್ಕರೆಯನ್ನು ದೇಶವಿರೋಧಿಯೆಂದೂ ಬಿಜೆಪಿಯವರು ಕರೆಯುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಪ್ರಗ್ಯಾ ಠಾಕೂರ್‍ರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್‍ಸಿಂಗ್ ‘ಮೋದಿ ಮತ್ತು ಅಮಿತ್‍ಷಾ ತಮ್ಮ ಹೇಳಿಕೆಗಳನ್ನು ನೀಡಿ ದೇಶದ ಮುಂದೆ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರಗ್ಯಾ ಸಿಂಗ್ ಸಹಚರರಿಗೆ ಗೌರಿ ಲಂಕೇಶ್ ಹಂತಕರ ನಂಟು?

ಪದೇ ಪದೇ ಗೋಡ್ಸೆಯ ವಿಚಾರವನ್ನು ಬಿಜೆಪಿಯ ಕೆಲವರು ಮುಂದೆ ತರುತ್ತಿದ್ದಾಗ್ಯೂ ಪ್ರಧಾನಿ ಮೋದಿ ಬಾಯಿ ಬಿಟ್ಟಿಲ್ಲ. ಈ ಹಿನ್ನೆಲೆಯಲ್ಲಿಯೂ ಮೋದಿ ಕ್ಷಮೆ ಯಾಚಿಸಬೇಕು ಎಂಬ ವಿಚಾರ ಮುನ್ನೆಲೆಗೆ ಬಂದಿದೆ. ಪ್ರಧಾನಿಯವರು ಏನು ಹೇಳುತ್ತಾರೆ ಎಂದು ಕಾದು ನೋಡಬೇಕು.

ಮೋದಿಯವರಿಗೆ ಎದುರಾಗಿರುವ ಇನ್ನೊಂದು ಸಂಗತಿಯೆಂದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರ ಸವಾಲು. ಮೋದಿಯವರಿಗೆ ಧೈರ್ಯವಿದ್ದರೆ ತನ್ನೊಂದಿಗೆ ಮುಖಾಮುಖಿ ಚರ್ಚೆಗೆ ಬರಲಿ. ತಾನು ಕೇವಲ 15 ನಿಮಿಷ ಮಾತಾಡುತ್ತೇನೆ. ಮೋದಿಯವರು 2 ಗಂಟೆ ಮಾತಾಡಲಿ ಎಂಬುದು ರಾಹುಲ್ ಸವಾಲು. ಇದನ್ನು ಈ ಹಿಂದೆಯೂ ಹೇಳಿದ್ದ ರಾಹುಲ್‍ಗಾಂಧಿ, ಕಡೆಯ ಹಂತದ ಚುನಾವಣೆಗೆ ಮುಂಚೆ ಅದನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ರಾಫೇಲ್ ಡೀಲ್‍ಗೆ ಸಂಬಂಧಿಸಿದಂತೆ ರಾಹುಲ್‍ಗಾಂಧಿಯವರ ಬಳಿ ಇನ್ನೂ ದೊಡ್ಡ ಸತ್ಯವೊಂದಿದ್ದು, ಅದನ್ನು ಬಹಿರಂಗ ಪಡಿಸುವ ಅವಕಾಶಕ್ಕಾಗಿ ಅವರು ಹೀಗೆ ಮಾಡುತ್ತಿದ್ದಾರೆಂಬ ಕುತೂಹಲ ದೆಹಲಿಯ ರಾಜಕೀಯ ವಲಯಗಳಲ್ಲಿದೆ.
ಈ ವಿಚಾರಗಳ ಕುರಿತು ಪ್ರಧಾನಿಯವರು ಪ್ರತಿಕ್ರಿಯಿಸದೇ ಮೌನ ತಾಳುವುದು ಹಿಂದಿನಿಂದಲೂ ಟೀಕೆಗೊಳಗಾಗಿದ್ದು, ಈ ಸಾರಿ ಮೋದಿ ಮೌನ ಮುರಿಯುವರೇ ಎಂಬುದಕ್ಕೆ ಮುಂದಿನ ದಿನಗಳೇ ಉತ್ತರ ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...