Homeಕರ್ನಾಟಕಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಈ ಹಿಂದೆಯೂ ನಾನು ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ- ಯತ್ನಾಳ್

- Advertisement -
- Advertisement -

“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನಾನು ಸಚಿವನಾಗದಿರಲು ಆಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, “ನಾನು ಮಂತ್ರಿ ಆಗಬೇಕೆಂದು ಯಡಿಯೂರಪ್ಪ ಹೇಳುವುದಿಲ್ಲ. ಸಚಿವ ಸ್ಥಾನಕ್ಕಾಗಿ ನಾನು ಎಂದೂ ಒತ್ತಾಯಿಸುವುದಿಲ್ಲ. ಈ ಹಿಂದೆಯೂ ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ” ಎಂದು ಹೇಳಿದರು.

“ನನಗೆ ಸಚಿವ ಸ್ಥಾನ ಸಿಗದೇ ಇದ್ದರೂ ತೊಂದರೆಯಿಲ್ಲ. ಆದರೆ, ರಾಜ್ಯದ ಅಭಿವೃದ್ಧಿಯೇ ನನ್ನ ಕನಸು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಿಯಾಧ್ಯಕ್ಷ ಜೆ.ಪಿ.ನಡ್ಡಾ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

“ಕೇಂದ್ರ ಶಿಸ್ತು ಸಮಿತಿ ನನಗೆ ನೋಟಿಸ್ ಕೊಡುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನಾನು ಈವರೆಗೆ ಪಕ್ಷದ ಶಿಸ್ತನ್ನು ಮೀರಿಲ್ಲ. ಇದುವರೆಗೆ ಯಾರೂ ನನಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ” ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದರು.

“ಜನವರಿ 14 ಕ್ಕೆ ಮಕರ ಸಂಕ್ರಮಣ. ಈ ಬಾರಿ ಉತ್ತರಾಯಣ 20 ಅಥವಾ 21ಕ್ಕೆ ಇದೆ. ಉತ್ತರಾಯಣ ಬದಲಾವಣೆಯ ಪರ್ವಕಾಲ. ಹೀಗಾಗಿ, ಸಚಿವ ಸಂಪುಟದಲ್ಲಿ ಬದಲಾವಣೆಯಾಗಬಹುದು, ಪುನಾರಚನೆಯೂ ಆಗಬಹುದು” ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಹುದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿತ್ತು. ಆದರೆ ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅದೇ ಸಮಯದಲ್ಲಿ ಒಬ್ಬರು ಸಚಿವರನ್ನು ಸಂಪುಟದಿಂದ ಹೊರಗುಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

“ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇದೇ 13 ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. 14 ರಂದು ಸಂಕ್ರಾಂತಿ ಇರುವ ಕಾರಣ 13 ರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯಲಿದೆ” ಎಂದು ಯಡಿಯೂರಪ್ಪ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷಕ್ಕೆ ವಲಸೆ ಬಂದವರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೆಯೇ ಸಂಪುಟದಿಂದ ಹೊರಗುಳಿಯುವ ಆ ಒಬ್ಬ ಸಚಿವರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...