Homeಕರ್ನಾಟಕಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಈ ಹಿಂದೆಯೂ ನಾನು ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ- ಯತ್ನಾಳ್

- Advertisement -
- Advertisement -

“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನಾನು ಸಚಿವನಾಗದಿರಲು ಆಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, “ನಾನು ಮಂತ್ರಿ ಆಗಬೇಕೆಂದು ಯಡಿಯೂರಪ್ಪ ಹೇಳುವುದಿಲ್ಲ. ಸಚಿವ ಸ್ಥಾನಕ್ಕಾಗಿ ನಾನು ಎಂದೂ ಒತ್ತಾಯಿಸುವುದಿಲ್ಲ. ಈ ಹಿಂದೆಯೂ ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ” ಎಂದು ಹೇಳಿದರು.

“ನನಗೆ ಸಚಿವ ಸ್ಥಾನ ಸಿಗದೇ ಇದ್ದರೂ ತೊಂದರೆಯಿಲ್ಲ. ಆದರೆ, ರಾಜ್ಯದ ಅಭಿವೃದ್ಧಿಯೇ ನನ್ನ ಕನಸು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಿಯಾಧ್ಯಕ್ಷ ಜೆ.ಪಿ.ನಡ್ಡಾ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

“ಕೇಂದ್ರ ಶಿಸ್ತು ಸಮಿತಿ ನನಗೆ ನೋಟಿಸ್ ಕೊಡುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನಾನು ಈವರೆಗೆ ಪಕ್ಷದ ಶಿಸ್ತನ್ನು ಮೀರಿಲ್ಲ. ಇದುವರೆಗೆ ಯಾರೂ ನನಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ” ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದರು.

“ಜನವರಿ 14 ಕ್ಕೆ ಮಕರ ಸಂಕ್ರಮಣ. ಈ ಬಾರಿ ಉತ್ತರಾಯಣ 20 ಅಥವಾ 21ಕ್ಕೆ ಇದೆ. ಉತ್ತರಾಯಣ ಬದಲಾವಣೆಯ ಪರ್ವಕಾಲ. ಹೀಗಾಗಿ, ಸಚಿವ ಸಂಪುಟದಲ್ಲಿ ಬದಲಾವಣೆಯಾಗಬಹುದು, ಪುನಾರಚನೆಯೂ ಆಗಬಹುದು” ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಹುದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿತ್ತು. ಆದರೆ ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅದೇ ಸಮಯದಲ್ಲಿ ಒಬ್ಬರು ಸಚಿವರನ್ನು ಸಂಪುಟದಿಂದ ಹೊರಗುಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

“ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇದೇ 13 ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. 14 ರಂದು ಸಂಕ್ರಾಂತಿ ಇರುವ ಕಾರಣ 13 ರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯಲಿದೆ” ಎಂದು ಯಡಿಯೂರಪ್ಪ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷಕ್ಕೆ ವಲಸೆ ಬಂದವರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೆಯೇ ಸಂಪುಟದಿಂದ ಹೊರಗುಳಿಯುವ ಆ ಒಬ್ಬ ಸಚಿವರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...