Homeಕರ್ನಾಟಕಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಈ ಹಿಂದೆಯೂ ನಾನು ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ- ಯತ್ನಾಳ್

- Advertisement -
- Advertisement -

“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನಾನು ಸಚಿವನಾಗದಿರಲು ಆಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, “ನಾನು ಮಂತ್ರಿ ಆಗಬೇಕೆಂದು ಯಡಿಯೂರಪ್ಪ ಹೇಳುವುದಿಲ್ಲ. ಸಚಿವ ಸ್ಥಾನಕ್ಕಾಗಿ ನಾನು ಎಂದೂ ಒತ್ತಾಯಿಸುವುದಿಲ್ಲ. ಈ ಹಿಂದೆಯೂ ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ” ಎಂದು ಹೇಳಿದರು.

“ನನಗೆ ಸಚಿವ ಸ್ಥಾನ ಸಿಗದೇ ಇದ್ದರೂ ತೊಂದರೆಯಿಲ್ಲ. ಆದರೆ, ರಾಜ್ಯದ ಅಭಿವೃದ್ಧಿಯೇ ನನ್ನ ಕನಸು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಿಯಾಧ್ಯಕ್ಷ ಜೆ.ಪಿ.ನಡ್ಡಾ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

“ಕೇಂದ್ರ ಶಿಸ್ತು ಸಮಿತಿ ನನಗೆ ನೋಟಿಸ್ ಕೊಡುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನಾನು ಈವರೆಗೆ ಪಕ್ಷದ ಶಿಸ್ತನ್ನು ಮೀರಿಲ್ಲ. ಇದುವರೆಗೆ ಯಾರೂ ನನಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ” ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದರು.

“ಜನವರಿ 14 ಕ್ಕೆ ಮಕರ ಸಂಕ್ರಮಣ. ಈ ಬಾರಿ ಉತ್ತರಾಯಣ 20 ಅಥವಾ 21ಕ್ಕೆ ಇದೆ. ಉತ್ತರಾಯಣ ಬದಲಾವಣೆಯ ಪರ್ವಕಾಲ. ಹೀಗಾಗಿ, ಸಚಿವ ಸಂಪುಟದಲ್ಲಿ ಬದಲಾವಣೆಯಾಗಬಹುದು, ಪುನಾರಚನೆಯೂ ಆಗಬಹುದು” ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಹುದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿತ್ತು. ಆದರೆ ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅದೇ ಸಮಯದಲ್ಲಿ ಒಬ್ಬರು ಸಚಿವರನ್ನು ಸಂಪುಟದಿಂದ ಹೊರಗುಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

“ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇದೇ 13 ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. 14 ರಂದು ಸಂಕ್ರಾಂತಿ ಇರುವ ಕಾರಣ 13 ರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯಲಿದೆ” ಎಂದು ಯಡಿಯೂರಪ್ಪ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷಕ್ಕೆ ವಲಸೆ ಬಂದವರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೆಯೇ ಸಂಪುಟದಿಂದ ಹೊರಗುಳಿಯುವ ಆ ಒಬ್ಬ ಸಚಿವರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...