Homeಕರ್ನಾಟಕಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗುವುದಿಲ್ಲ: ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಯತ್ನಾಳ್

ಈ ಹಿಂದೆಯೂ ನಾನು ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ- ಯತ್ನಾಳ್

- Advertisement -
- Advertisement -

“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನಾನು ಸಚಿವನಾಗದಿರಲು ಆಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, “ನಾನು ಮಂತ್ರಿ ಆಗಬೇಕೆಂದು ಯಡಿಯೂರಪ್ಪ ಹೇಳುವುದಿಲ್ಲ. ಸಚಿವ ಸ್ಥಾನಕ್ಕಾಗಿ ನಾನು ಎಂದೂ ಒತ್ತಾಯಿಸುವುದಿಲ್ಲ. ಈ ಹಿಂದೆಯೂ ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿ ಆಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿ ಆಗಲು ನಾನು ಎಂದೂ ಪ್ರಯತ್ನಿಸುವುದಿಲ್ಲ. ನನ್ನ ಬಯೋಡೇಟಾ ಪ್ರಧಾನಿಗಳ ಕಚೇರಿಯಲ್ಲಿ, ಗೃಹ ಸಚಿವರ ಕಾರ್ಯಾಲಯದಲ್ಲಿ, ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಲ್ಲಿದೆ” ಎಂದು ಹೇಳಿದರು.

“ನನಗೆ ಸಚಿವ ಸ್ಥಾನ ಸಿಗದೇ ಇದ್ದರೂ ತೊಂದರೆಯಿಲ್ಲ. ಆದರೆ, ರಾಜ್ಯದ ಅಭಿವೃದ್ಧಿಯೇ ನನ್ನ ಕನಸು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಿಯಾಧ್ಯಕ್ಷ ಜೆ.ಪಿ.ನಡ್ಡಾ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

“ಕೇಂದ್ರ ಶಿಸ್ತು ಸಮಿತಿ ನನಗೆ ನೋಟಿಸ್ ಕೊಡುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನಾನು ಈವರೆಗೆ ಪಕ್ಷದ ಶಿಸ್ತನ್ನು ಮೀರಿಲ್ಲ. ಇದುವರೆಗೆ ಯಾರೂ ನನಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ” ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದರು.

“ಜನವರಿ 14 ಕ್ಕೆ ಮಕರ ಸಂಕ್ರಮಣ. ಈ ಬಾರಿ ಉತ್ತರಾಯಣ 20 ಅಥವಾ 21ಕ್ಕೆ ಇದೆ. ಉತ್ತರಾಯಣ ಬದಲಾವಣೆಯ ಪರ್ವಕಾಲ. ಹೀಗಾಗಿ, ಸಚಿವ ಸಂಪುಟದಲ್ಲಿ ಬದಲಾವಣೆಯಾಗಬಹುದು, ಪುನಾರಚನೆಯೂ ಆಗಬಹುದು” ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಹುದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿತ್ತು. ಆದರೆ ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅದೇ ಸಮಯದಲ್ಲಿ ಒಬ್ಬರು ಸಚಿವರನ್ನು ಸಂಪುಟದಿಂದ ಹೊರಗುಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

“ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇದೇ 13 ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. 14 ರಂದು ಸಂಕ್ರಾಂತಿ ಇರುವ ಕಾರಣ 13 ರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯಲಿದೆ” ಎಂದು ಯಡಿಯೂರಪ್ಪ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷಕ್ಕೆ ವಲಸೆ ಬಂದವರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೆಯೇ ಸಂಪುಟದಿಂದ ಹೊರಗುಳಿಯುವ ಆ ಒಬ್ಬ ಸಚಿವರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....