Homeಕರ್ನಾಟಕನಕ್ಸಲ್ ವಿರೋಧಿ ಪಡೆಯನ್ನು ವಿಸರ್ಜಿಸುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ

ನಕ್ಸಲ್ ವಿರೋಧಿ ಪಡೆಯನ್ನು ವಿಸರ್ಜಿಸುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ

- Advertisement -
- Advertisement -

ನಕ್ಸಲ್ ವಿರೋಧಿ ಪಡೆ (ಎಎನ್‌ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ಶುಕ್ರವಾರ ವರದಿ ಮಾಡಿದೆ. ಅದಾಗ್ಯೂ, ಈ ಪಡೆಗಳ ಬಲವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ನಕ್ಸಲ್ ವಿರೋಧಿ ಪಡೆಯನ್ನು

“ಒಡಿಶಾ, ಅಸ್ಸಾಂನಲ್ಲಿ ನಕ್ಸಲ್ ಚಟುವಟಿಕೆಗಳು ಇನ್ನೂ ಪ್ರಬಲವಾಗಿರುವುದರಿಂದ ಮತ್ತು ವ್ಯಾಪಕವಾಗಿ ಹರಡಿರುವುದರಿಂದ, ಮಾವೋವಾದಿಗಳು ಕರ್ನಾಟಕಕ್ಕೆ ನುಸುಳುವ ಸಾಧ್ಯತೆಗಳಿವೆ. ಅಗತ್ಯವಿದ್ದರೆ, ನಾವು ಎಎನ್‌ಎಫ್ ಅನ್ನು ಸಿದ್ಧವಾಗಿರಿಸುತ್ತೇವೆ” ಎಂದು ಅವರು ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಬಂಟ್ವಾಳದ ಕೊಲತ್ತಮಜಲುವಿನಲ್ಲಿ ಮೇ 27 ರಂದು ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅವರ ಹತ್ಯೆಯ ಹಿಂದಿನ ಕಾರಣದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಹತ್ಯೆಯ ಹಿಂದಿನ ಕಾರಣವನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ಅಗತ್ಯವಿದೆ. ವೈಯಕ್ತಿಕ ದ್ವೇಷ ಮತ್ತು ಕೋಮು ಕಾರಣಗಳ ಆರೋಪಗಳಿವೆ. ವರದಿಗಾಗಿ ಕಾಯೋಣ.” ಎಂದು ಹೇಳಿದ್ದಾರೆ.

ಮೇ 1 ರಂದು ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು NIA ನಡೆಸಲಿದೆ ಎಂಬ ಬಗ್ಗೆ ಮಾತನಾಡಿದ ಅವರು, “ಪ್ರಕರಣವನ್ನು ವಹಿಸಿಕೊಳ್ಳಲು ಕೇಂದ್ರ ಸರ್ಕಾರವು NIA ಗೆ ಪತ್ರ ಬರೆದಿದೆ. ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದ್ದರಿಂದ, ನಾವು ಪ್ರಕರಣವನ್ನು ಹಸ್ತಾಂತರಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಅದಾಗ್ಯೂ, ನಮ್ಮ ಪೊಲೀಸರು ಪ್ರಕರಣದ ತನಿಖೆ ನಡೆಸಲು ಸಮರ್ಥರಾಗಿದ್ದಾರೆ. ಒಂದು ನಿರ್ದಿಷ್ಟ ಪ್ರಕರಣವನ್ನು NIA ಏಕೆ ತನಿಖೆ ನಡೆಸುತ್ತಿದೆ ಎಂದು ನನಗೆ ನಿರ್ದಿಷ್ಟವಾಗಿ ತಿಳಿದಿಲ್ಲ. ಅಗತ್ಯವಿದ್ದರೆ, ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ಅವರ ಹತ್ಯೆಯ ತನಿಖೆಯನ್ನು ನಾವು ತೀವ್ರಗೊಳಿಸುತ್ತೇವೆ.” ಎಂದು ಹೇಳಿದ್ದಾರೆ.

ಹೊಸ ಜಾತಿ ಸಮೀಕ್ಷೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಹಲವಾರು ಸಮುದಾಯಗಳು ಹಿಂದೆ ನಡೆಸಿದ ಜಾತಿ ಸಮೀಕ್ಷೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದವು. ಇದಲ್ಲದೆ, ಕಾಂತರಾಜು ಮತ್ತು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು ಸಿದ್ಧಪಡಿಸಿದ ಜಾತಿ ಸಮೀಕ್ಷೆಯ ವರದಿಯು 10 ವರ್ಷಗಳ ಹಳೆಯ ಡೇಟಾವನ್ನು ಹೊಂದಿದೆ” ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಕಳೆದ 10 ವರ್ಷಗಳಲ್ಲಿ, ಜನಸಂಖ್ಯೆ ಹೆಚ್ಚಾಗಿದೆ. ಇದನ್ನು ಸೇರಿಸಲು ಅನೇಕರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಹೈಕಮಾಂಡ್ ಕೂಡ ನಮ್ಮನ್ನು ಹೊಸ ಸಮೀಕ್ಷೆ ನಡೆಸುವಂತೆ ಹೋಗುವಂತೆ ಕೇಳಿದೆ.” ಎಂದು ಅವರು ಹೇಳಿದ್ದಾರೆ. “ಹಿಂದಿನ ಜಾತಿ ಸಮೀಕ್ಷೆಯ ಸಮಯದಲ್ಲಿ ಗಣತಿಯ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸಮುದಾಯಗಳು ಹಿಂದಿನ ಎಲ್ಲಾ ತಪ್ಪುಗಳನ್ನು ಸರಿಪಡಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ. ನಕ್ಸಲ್ ವಿರೋಧಿ ಪಡೆಯನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ನೆರವಿಗೆ ಉತ್ತರ ಆಫ್ರೀಕಾ ದೇಶಗಳ ಜನರ ಕಾಲ್ನಡಿಗೆ ರ‍್ಯಾಲಿ | ತಡೆದ ಈಜಿಫ್ಟ್‌

ಗಾಝಾ ನೆರವಿಗೆ ಉತ್ತರ ಆಫ್ರೀಕಾ ದೇಶಗಳ ಜನರ ಕಾಲ್ನಡಿಗೆ ರ‍್ಯಾಲಿ | ತಡೆದ ಈಜಿಫ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...