Homeಮುಖಪುಟನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಜೆಡಿಯು ಕೋಟಾದ 07 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 04 ಸ್ಥಾನಗಳಲ್ಲಿ ಜಯಗಳಿಸಿ ಎನ್‌ಡಿಎ ಸರಳ ಬಹುಮತ ಮುಟ್ಟಲು ಸಹಕಾರಿಯಾಗಿದೆ.

- Advertisement -
- Advertisement -

ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿಯವರು ಹಿಂದುಸ್ಥಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಪಕ್ಷದ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು ತಾವು ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಂಜಿ ಸೇರಿ ಅವರ ಪಕ್ಷದಿಂದ ನೂತನವಾಗಿ ಆಯ್ಕೆಯಾದ ಇತರ ಮೂವರು ಮಾಂಜಿಯವರ ನಿವಾಸದಲ್ಲಿ ಸಭೆ ಸೇರಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಮೊದಲು ಪಕ್ಷದಿಂದ ಮಾಂಜಿ ಮಾತ್ರ ಶಾಸಕರಾಗಿದ್ದರು. ಈ ಚುನಾವಣೆಯಲ್ಲಿ ಅವರೊಂದಿಗೆ ಇತರ ಮೂವರು ಸೇರ್ಪಡೆಯಾಗಿದ್ದಾರೆ.

“ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಹಾಗಾಗಿ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದಾರೆ.

ನಿತೀಶ್ ಕುಮಾರ್‌ರವರ ಅಭಿವೃದ್ದಿ ಯೋಜನೆಗಳು ಕಾಂಗ್ರೆಸ್‌ಗಿಂತ ಭಿನ್ನವಾಗಿಲ್ಲ. ಆದರೂ ರಾಜ್ಯದ ಹಿತಾಸಕ್ತಿ ವಿಷಯದಲ್ಲಿ ಅವರು ಕೆಲವು ವಿಷಯಗಳಿಂದ ಅಂತರ ಕಾಯ್ದುಕೊಳ್ಳುತ್ತಾರೆ. ಹಾಗಾಗಿ ನೀವು ಎನ್‌ಡಿಎ ಸೇರಿ ರಾಜ್ಯದ ಅಭಿವೃದ್ದಿಗೆ ಸಹಕರಿಸಿ ಮಾಂಜಿ ಮನವಿ ಮಾಡಿದ್ದಾರೆ. 

ಮಾಂಜಿಯವರ ರಾಜಕೀಯ ಪಯಣ

ದಲಿತ ನಾಯಕ ಜತಿನ್ ರಾಮ್ ಮಾಂಜಿ 1980ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಆದರೆ ನಂತರ ಅವರು ಆರ್‌ಜೆಡಿ ಸೇರಿದರು. ಅಲ್ಲಿಂದಲೂ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

2014 ರಲ್ಲಿ ಅವರು ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು. ಆಗ ನಿತೀಶ್‌ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014ರ ಲೋಕಸಭಾ ಚುನಾವಣೆಯನ್ನು ನಿತೀಶ್ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದರು. ನಂತರ ಬಲವಂತವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಆಗ ಮಾಂಜಿ ಜೆಡಿಯು ತೊರೆದು ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷ ಕಟ್ಟಿದರು.

2015ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಮಹಾಘಟಬಂಧನ್‌ ಮೈತ್ರಿಯಲ್ಲಿದ್ದ ಮಾಂಜಿ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಿ ಮಹಾಘಟಬಂಧನ್ ತೊರೆದರು. ಇತ್ತ ಎನ್‌ಡಿಎ ಮೈತ್ರಿಕೂಟದಿಂದ ಮತ್ತೊಬ್ಬ ದಲಿತ ನಾಯಕ ಚಿರಾಗ್ ಪಾಸ್ವಾನ್ ಹೊರನಡೆದ ಕೂಡಲೇ ನಿತೀಶ್ ಕುಮಾರ್‌ರವರು ಮಾಂಜಿಯವರೊಡನೆ ಮಾತುಕತೆ ನಡೆಸಿ ಜೆಡಿಯು ಕೋಟಾದ 07 ಸ್ಥಾನಗಳನ್ನು ಹಿಂದುಸ್ಥಾನಿ ಅವಾಮ್ ಮೋರ್ಚಾಗೆ ಬಿಟ್ಟುಕೊಟ್ಟರು. ಅದರಲ್ಲಿ ಪಕ್ಷ 04 ಸ್ಥಾನಗಳಲ್ಲಿ ಜಯಗಳಿಸಿ ಎನ್‌ಡಿಎ ಸರಳ ಬಹುಮತ ಮುಟ್ಟಲು ಸಹಕಾರಿಯಾಗಿದೆ.


ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...