Homeಮುಖಪುಟರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ; ಮಮತಾ ಬ್ಯಾನರ್ಜಿ

ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ; ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ. ಆನಂದ ಬೋಸ್ ರಾಜೀನಾಮೆ ನೀಡಬೇಕು, ನಾನು ರಾಜಭವನಕ್ಕೆ ಹೋಗುವುದಿಲ್ಲ ಮತ್ತು ಬೋಸ್ ಅವರ ಪಕ್ಕದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಹೂಗ್ಲಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜಭವನಕ್ಕೆ ತೆರಳಿ ನಾನು ರಾಜ್ಯಪಾಲರನ್ನು ಭೇಟಿ ಮಾಡುವುದಿಲ್ಲ. ಅವರು ನನಗೆ ಕರೆ ಮಾಡಿದರೆ, ನಾನು ರಸ್ತೆಯಲ್ಲಿ ನಿಂತು ಅವರೊಂದಿಗೆ ಮಾತನಾಡುತ್ತೇನೆ, ಗೌರವಾನ್ವಿತ ರಾಜ್ಯಪಾಲರೇ, ನೀವು ರಾಜೀನಾಮೆ ನೀಡಬೇಕು, ಮಹಿಳೆಗೆ ಚಿತ್ರಹಿಂಸೆ ನೀಡಲು ನೀವು ಯಾರು? ಎಲ್ಲವೂ ಇನ್ನೂ ಹೊರಬಿದ್ದಿಲ್ಲ ನನಗೆ ಸಂಪೂರ್ಣ ವೀಡಿಯೊ ಮತ್ತು ಪೆನ್ ಡ್ರೈವ್ ಸಿಕ್ಕಿದೆ. ಇದು ಹಗರಣವಾಗಿದೆ ಎಂದು ಹೇಳಿದ್ದಾರೆ.

ಮೇ 7ರಂದು ಮೂರನೇ ಹಂತದ ಚುನಾವಣೆ ಮುಗಿದ ನಂತರ ಬಿಜೆಪಿ ಚುನಾವಣಾ ದುರಂತದ ವಾಸನೆಯನ್ನು ಗ್ರಹಿಸಿದೆ. ಮೂರನೇ ಹಂತದ ಮತದಾನದ ನಂತರ ಅವರು ಅಳುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಮಮತಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ, ಅವರು ಚುನಾವಣೆಯಿಂದ ಹೊರಗುಳಿಯದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಸಲಾಗುತ್ತಿದೆ. ನಾವು ಯಾರಿಗೂ ಹೆದರುವುದಿಲ್ಲ. ನಾವು ಖಂಡಿತವಾಗಿಯೂ ದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕುತ್ತೇವೆ ಎಂದು ಹೇಳಿದ್ದಾರೆ.

2019ರಿಂದ ರಾಜಭವನದಲ್ಲಿ ಗುತ್ತಿಗೆ ಉದ್ಯೋಗಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಏಪ್ರಿಲ್ 24 ರಂದು ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯದ ಅರೋಪ ಮಾಡಿದ್ದರು. ರಾಜ್ಯಪಾಲರನ್ನು ತನ್ನ ಬಡ್ತಿ ಕುರಿತು ಚರ್ಚಿಸಲು ಭೇಟಿಯಾದಾಗ ಅವರು ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಮಹಿಳೆ ನೀಡಿದ ದೂರಿನ ಬಗ್ಗೆ ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತನಿಖಾ ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ ರಾಜ್ಯಪಾಲರು ತಮ್ಮ ವಿರುದ್ಧದ ತನಿಖೆಗೆ ಪೊಲೀಸರಿಗೆ ಯಾವುದೇ ಸಹಕಾರ ನೀಡದಂತೆ ಮತ್ತು ಯಾವುದೇ ಹೇಳಿಕೆ ನೀಡದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ್ದರು.

ರಾಜಭವನ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿತ್ತು, ಭಾರತದ ಸಂವಿಧಾನದ 361(2) ಮತ್ತು (3)ರ ಪ್ರಕಾರ, ಭಾರತದ ರಾಷ್ಟ್ರಪತಿ ಮತ್ತು ಯಾವುದೇ ರಾಜ್ಯದ ರಾಜ್ಯಪಾಲರು ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯಿಂದ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುತ್ತಾರೆ. ಆದ್ದರಿಂದ ರಾಜ್ಯ ಸರಕಾರವು ರಾಜ್ಯಪಾಲರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...