Homeಮುಖಪುಟರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ; ಮಮತಾ ಬ್ಯಾನರ್ಜಿ

ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ; ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ. ಆನಂದ ಬೋಸ್ ರಾಜೀನಾಮೆ ನೀಡಬೇಕು, ನಾನು ರಾಜಭವನಕ್ಕೆ ಹೋಗುವುದಿಲ್ಲ ಮತ್ತು ಬೋಸ್ ಅವರ ಪಕ್ಕದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಹೂಗ್ಲಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜಭವನಕ್ಕೆ ತೆರಳಿ ನಾನು ರಾಜ್ಯಪಾಲರನ್ನು ಭೇಟಿ ಮಾಡುವುದಿಲ್ಲ. ಅವರು ನನಗೆ ಕರೆ ಮಾಡಿದರೆ, ನಾನು ರಸ್ತೆಯಲ್ಲಿ ನಿಂತು ಅವರೊಂದಿಗೆ ಮಾತನಾಡುತ್ತೇನೆ, ಗೌರವಾನ್ವಿತ ರಾಜ್ಯಪಾಲರೇ, ನೀವು ರಾಜೀನಾಮೆ ನೀಡಬೇಕು, ಮಹಿಳೆಗೆ ಚಿತ್ರಹಿಂಸೆ ನೀಡಲು ನೀವು ಯಾರು? ಎಲ್ಲವೂ ಇನ್ನೂ ಹೊರಬಿದ್ದಿಲ್ಲ ನನಗೆ ಸಂಪೂರ್ಣ ವೀಡಿಯೊ ಮತ್ತು ಪೆನ್ ಡ್ರೈವ್ ಸಿಕ್ಕಿದೆ. ಇದು ಹಗರಣವಾಗಿದೆ ಎಂದು ಹೇಳಿದ್ದಾರೆ.

ಮೇ 7ರಂದು ಮೂರನೇ ಹಂತದ ಚುನಾವಣೆ ಮುಗಿದ ನಂತರ ಬಿಜೆಪಿ ಚುನಾವಣಾ ದುರಂತದ ವಾಸನೆಯನ್ನು ಗ್ರಹಿಸಿದೆ. ಮೂರನೇ ಹಂತದ ಮತದಾನದ ನಂತರ ಅವರು ಅಳುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಮಮತಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ, ಅವರು ಚುನಾವಣೆಯಿಂದ ಹೊರಗುಳಿಯದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಸಲಾಗುತ್ತಿದೆ. ನಾವು ಯಾರಿಗೂ ಹೆದರುವುದಿಲ್ಲ. ನಾವು ಖಂಡಿತವಾಗಿಯೂ ದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕುತ್ತೇವೆ ಎಂದು ಹೇಳಿದ್ದಾರೆ.

2019ರಿಂದ ರಾಜಭವನದಲ್ಲಿ ಗುತ್ತಿಗೆ ಉದ್ಯೋಗಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಏಪ್ರಿಲ್ 24 ರಂದು ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯದ ಅರೋಪ ಮಾಡಿದ್ದರು. ರಾಜ್ಯಪಾಲರನ್ನು ತನ್ನ ಬಡ್ತಿ ಕುರಿತು ಚರ್ಚಿಸಲು ಭೇಟಿಯಾದಾಗ ಅವರು ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಮಹಿಳೆ ನೀಡಿದ ದೂರಿನ ಬಗ್ಗೆ ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತನಿಖಾ ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ ರಾಜ್ಯಪಾಲರು ತಮ್ಮ ವಿರುದ್ಧದ ತನಿಖೆಗೆ ಪೊಲೀಸರಿಗೆ ಯಾವುದೇ ಸಹಕಾರ ನೀಡದಂತೆ ಮತ್ತು ಯಾವುದೇ ಹೇಳಿಕೆ ನೀಡದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ್ದರು.

ರಾಜಭವನ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿತ್ತು, ಭಾರತದ ಸಂವಿಧಾನದ 361(2) ಮತ್ತು (3)ರ ಪ್ರಕಾರ, ಭಾರತದ ರಾಷ್ಟ್ರಪತಿ ಮತ್ತು ಯಾವುದೇ ರಾಜ್ಯದ ರಾಜ್ಯಪಾಲರು ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯಿಂದ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುತ್ತಾರೆ. ಆದ್ದರಿಂದ ರಾಜ್ಯ ಸರಕಾರವು ರಾಜ್ಯಪಾಲರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...