Homeಕರ್ನಾಟಕವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ

ವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿಯವರು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಮೂರು ದಿನದ ಹಿಂದೆ ಹೇಳಿದ್ದರು.

- Advertisement -
- Advertisement -

ನಿಮ್ಮ ಮೇಲಿನ ಎಲ್ಲಾ ಕೇಸುಗಳನ್ನು ತೆಗೆದುಹಾಕುತ್ತೇವೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಇಂದು ವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದಾರೆ.


ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು! 


ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲಿಸಲು ಗೃಹಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಹೇಳಿದ್ದರು. ಅದರ ವಿಡಿಯೋ ಕೆಳಗಿದೆ.

ಆ ವಿವಾದಾತ್ಮಕ ವಿಡಿಯೋವೊಂದನ್ನು ಗೃಹ ಸಚಿವರಿಗೆ ಮನವಿ ಕೊಟ್ಟಿದ್ದ ಅದೇ ಆರೋಪಿ ಶರಣ್ ಪಂಪ್‌ವೆಲ್ ಅಕಸ್ಮಾತ್ತಾಗಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿತ್ತು.

ನಾನುಗೌರಿ.ಕಾಂ ಈ ವಿಷಯವನ್ನು ಬಯಲಿಗೆಳೆದು ವಿಸೃತ ವರದಿ ಮಾಡಿದ ನಂತರ ಶರಣ್‌ ಪಂಪ್‌ವೆಲ್‌ ಆ ಟ್ವೀಟ್‌ ಅನ್ನು ಡಿಲಿಟ್‌ ಮಾಡಿದ್ದಾರೆ. (ಆದರೆ ಅದರಲ್ಲಿದ್ದ ವಿಡಿಯೋದ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ಕಿಸಿ)

ಒಂದು ಕಡೆ ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈಬಿಟ್ಟ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸದಾ ಟೀಕಿಸುವ ಬಿಜೆಪಿ ಸರ್ಕಾರ ಮತ್ತು ಅದರ ಸದಸ್ಯರು ಈಗ ಬಲಪಂಥೀಯ ಕಾರ್ಯಕರ್ತರು ಭಾಗಿಯಾದ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಅದೇ ಪಕ್ಷಕ್ಕೆ ಸೇರಿದ ಗೃಹ ಸಚಿವರೇ ಹೇಳುತ್ತಿದ್ದಾರೆ. ಹಾಗಾಗಿ ಈ ವಿಡಿಯೋಗೆ ವಿಶೇಷ ಮಹತ್ವ ಬಂದಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿಯವರ ಈ ಹೇಳಿಕೆ ಖಂಡಿಸಿ ಅವರು ರಾಜಿನಾಮೆ ನೀಡುವಂತೆ ಆಗ್ರಹಿಸಿ ಟ್ವಿಟ್ಟರ್‌ನಲ್ಲಿ #ResignBSBommai ಟ್ರಂಡ್ ಆಗಿತ್ತು.

“ಅತ್ಯಂತ ಸಮರ್ಥ ಗೃಹಸಚಿವರುಗಳನ್ನು ಕಂಡ ಕರ್ನಾಟಕ ರಾಜ್ಯಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವರು ಸಿಕ್ಕಿರುವುದು ದುರಾದೃಷ್ಟಕರ. ತಕ್ಷಣ ರಾಜೀನಾಮೆ ನೀಡಿ” ಎಂದು ಹಲವರು ಆಗ್ರಹಿಸಿದ್ದರು.


ಇದನ್ನೂ ಓದಿ: #ResignBSBommai; ರಾಜ್ಯ ಗೃಹಸಚಿವರು ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...