Homeಕರ್ನಾಟಕವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ

ವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿಯವರು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಮೂರು ದಿನದ ಹಿಂದೆ ಹೇಳಿದ್ದರು.

- Advertisement -
- Advertisement -

ನಿಮ್ಮ ಮೇಲಿನ ಎಲ್ಲಾ ಕೇಸುಗಳನ್ನು ತೆಗೆದುಹಾಕುತ್ತೇವೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಇಂದು ವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದಾರೆ.


ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು! 


ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲಿಸಲು ಗೃಹಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಹೇಳಿದ್ದರು. ಅದರ ವಿಡಿಯೋ ಕೆಳಗಿದೆ.

ಆ ವಿವಾದಾತ್ಮಕ ವಿಡಿಯೋವೊಂದನ್ನು ಗೃಹ ಸಚಿವರಿಗೆ ಮನವಿ ಕೊಟ್ಟಿದ್ದ ಅದೇ ಆರೋಪಿ ಶರಣ್ ಪಂಪ್‌ವೆಲ್ ಅಕಸ್ಮಾತ್ತಾಗಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿತ್ತು.

ನಾನುಗೌರಿ.ಕಾಂ ಈ ವಿಷಯವನ್ನು ಬಯಲಿಗೆಳೆದು ವಿಸೃತ ವರದಿ ಮಾಡಿದ ನಂತರ ಶರಣ್‌ ಪಂಪ್‌ವೆಲ್‌ ಆ ಟ್ವೀಟ್‌ ಅನ್ನು ಡಿಲಿಟ್‌ ಮಾಡಿದ್ದಾರೆ. (ಆದರೆ ಅದರಲ್ಲಿದ್ದ ವಿಡಿಯೋದ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ಕಿಸಿ)

ಒಂದು ಕಡೆ ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈಬಿಟ್ಟ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸದಾ ಟೀಕಿಸುವ ಬಿಜೆಪಿ ಸರ್ಕಾರ ಮತ್ತು ಅದರ ಸದಸ್ಯರು ಈಗ ಬಲಪಂಥೀಯ ಕಾರ್ಯಕರ್ತರು ಭಾಗಿಯಾದ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಅದೇ ಪಕ್ಷಕ್ಕೆ ಸೇರಿದ ಗೃಹ ಸಚಿವರೇ ಹೇಳುತ್ತಿದ್ದಾರೆ. ಹಾಗಾಗಿ ಈ ವಿಡಿಯೋಗೆ ವಿಶೇಷ ಮಹತ್ವ ಬಂದಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿಯವರ ಈ ಹೇಳಿಕೆ ಖಂಡಿಸಿ ಅವರು ರಾಜಿನಾಮೆ ನೀಡುವಂತೆ ಆಗ್ರಹಿಸಿ ಟ್ವಿಟ್ಟರ್‌ನಲ್ಲಿ #ResignBSBommai ಟ್ರಂಡ್ ಆಗಿತ್ತು.

“ಅತ್ಯಂತ ಸಮರ್ಥ ಗೃಹಸಚಿವರುಗಳನ್ನು ಕಂಡ ಕರ್ನಾಟಕ ರಾಜ್ಯಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವರು ಸಿಕ್ಕಿರುವುದು ದುರಾದೃಷ್ಟಕರ. ತಕ್ಷಣ ರಾಜೀನಾಮೆ ನೀಡಿ” ಎಂದು ಹಲವರು ಆಗ್ರಹಿಸಿದ್ದರು.


ಇದನ್ನೂ ಓದಿ: #ResignBSBommai; ರಾಜ್ಯ ಗೃಹಸಚಿವರು ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...