Homeಮುಖಪುಟ"ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ" : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ...

“ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ” : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಮತ್ತು ಇತರ ಮೂವರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ (ಮಾ.6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿದ್ದಾರೆ.

“ಸಂವಿಧಾನದ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದಾರೆ.

ಧ್ವಂಸ ಕಾರ್ಯಾಚರಣೆಗೆ ಮುನ್ನ ಅನುಸರಿಸಬೇಕಾದ ಕಾರ್ಯವಿಧಾನವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ನ್ಯಾಯಮೂರ್ತಿ ಓಕಾ ಅವರು ಉಲ್ಲೇಖಿಸಿದ್ದು, “ನಿಮ್ಮ ಬುಲ್ಡೋಝರ್ ನ್ಯಾಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಮನ್ವಯ ಪೀಠ ತೀರ್ಪು ನೀಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಓಕಾ ಅವರು, “ಕೆಡವಲಾದ ಕಟ್ಟಡಗಳನ್ನು ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಿಸಲು ಸರ್ಕಾರಕ್ಕೆ ಆದೇಶಿಸುತ್ತೇವೆ. ಅದೊಂದೆ ಮಾರ್ಗ ಈ ಬಾಕಿಯಿರುವುದು” ಎಂದು ಹೇಳಿದ್ದಾರೆ.

ಸರ್ಕಾರದ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ನಂತರ ವಕೀಲ ಝುಲ್ಫಿಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್, ಇಬ್ಬರು ವಿಧವೆಯರು ಮತ್ತು ಇನ್ನೊಬ್ಬ ವ್ಯಕ್ತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

“ಶನಿವಾರ ನೋಟಿಸ್ ನೀಡಿ, ಭಾನುವಾರ ಮನೆಗಳನ್ನು ಸರ್ಕಾರ ಧ್ವಂಸಗೊಳಿಸಿದೆ. ಇದನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡಿಲ್ಲ. ಅರ್ಜಿದಾರರು ಭೂಮಿಯ ಕಾನೂನುಬದ್ಧ ಗುತ್ತಿಗೆದಾರರು. ಅವರ ಗುತ್ತಿಗೆ ಹಕ್ಕುಗಳನ್ನು ಫ್ರೀಹೋಲ್ಡ್ ಆಸ್ತಿಯಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು” ಎಂದು ಅರ್ಜಿದಾರ ಪರ ವಕೀಲರು ವಾದಿಸಿದ್ದಾರೆ.

“ಸರ್ಕಾರ ಅರ್ಜಿದಾರರ ಜಾಗವನ್ನು 2023ರಲ್ಲಿ ಕೊಲ್ಲಲ್ಪಟ್ಟ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ರೊಂದಿಗೆ ತಪ್ಪಾಗಿ ಜೋಡಿಸಿದೆ” ಎಂದು ಆರೋಪಿಸಿದ್ದಾರೆ.

ಅರ್ಜಿದಾರರಿಗೆ ನೋಟಿಸ್ ಉತ್ತರ ನೀಡಲು ಸಾಕಷ್ಟು ಸಮಯ ಇತ್ತು ಎಂದು ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಓಕಾ ಅವರು, ನೋಟಿಸ್ ಜಾರಿ ಮಾಡಿದ ವಿಧಾನವನ್ನು ಪ್ರಶ್ನಿಸಿದ್ದು, ನೋಟಿಸ್ ಕಳುಹಿಸುವ ವಿಧಾನದ ಕುರಿತ ರಾಜ್ಯದ ವಾದದಲ್ಲಿ ಬದ್ದತೆ ಕೊರೆತೆಯನ್ನು ಎತ್ತಿ ತೋರಿಸಿದ್ದಾರೆ.

ಅಟಾರ್ನಿ ಜನರಲ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಬೇಕೆಂದು ಮನವಿ ಮಾಡಿದ್ದು, ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಕರಣವನ್ನು ವಾಪಸ್ ಕಳುಹಿಸುವುದರಿಂದ ಅನಗತ್ಯ ವಿಳಂಬವಾಗುತ್ತದೆ ಎಂದು ಹೇಳಿದೆ.

“ಅರ್ಜಿದಾರರು ತಾವು ಅತಿಕ್ರಮಣಕಾರರಲ್ಲ, ಬದಲಾಗಿ ತಮ್ಮ ಗುತ್ತಿಗೆ ಹಕ್ಕನ್ನು ಫ್ರೀಹೋಲ್ಡಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1, 2021ರಂದು ಅವರ ಮನೆಗಳನ್ನು ಕೆಡವಲು ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 6, 2021 ರಂದು ಅದು ಅವರಿಗೆ ತಲುಪಿದೆ. ಮರುದಿನ ಮಾರ್ಚ್ 7, 2021ರಂದು ಅವರ ಮನೆಗಳನ್ನು ಕೆಡವಲಾಗಿದೆ. ಯುಪಿ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 27(2) ರ ಅಡಿಯಲ್ಲಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಧ್ವಂಸ ಕಾರ್ಯಾಚರಣೆ ಕುರಿತು ಪ್ರಶ್ನಿಸಲು ಅವರಿಗೆ ಸರಿಯಾದ ಅವಕಾಶ ನೀಡಿಲ್ಲ. ಅರ್ಜಿದಾರರಲ್ಲಿ ವಕೀಲರು ಮತ್ತು ಪ್ರಾಧ್ಯಾಪಕರು ಸೇರಿದ್ದಾರೆ, ಅವರ ಸಂಪೂರ್ಣ ಗ್ರಂಥಾಲಯವನ್ನು ಕೆಡವಲಾಗಿದೆ. ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 15, 2020ರಂದು ಬರೆದ ಪತ್ರವನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅವರಿಗೆ ಅದನ್ನು ಸಮರ್ಥಿಸಿಕೊಳ್ಳಲೂ ಅವಕಾಶ ನೀಡಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ಈ ಪ್ರಕರಣ ಪ್ರಯಾಗ್‌ರಾಜ್‌ನಲ್ಲಿರುವ ನಜುಲ್ ಪ್ಲಾಟ್‌ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದೆ. ವಿವಾದಿತ ಭೂಮಿಯನ್ನು 1906 ರಲ್ಲಿ ಗುತ್ತಿಗೆಗೆ ನೀಡಲಾಗಿತ್ತು. ಗುತ್ತಿಗೆ 1996 ರಲ್ಲಿ ಮುಕ್ತಾಯಗೊಂಡಿತ್ತು. ಅದನ್ನು ಫ್ರೀಹೋಲ್ಡ್ ಪರಿವರ್ತನೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು 2015 ಮತ್ತು 2019 ರಲ್ಲಿ ತಿರಸ್ಕರಿಸಲಾಗಿದೆ. ಭೂಮಿಯನ್ನು ಸಾರ್ವಜನಿಕ ಬಳಕೆಗಾಗಿ ಮೀಸಲಿಡಲಾಗಿದೆ ಎಂದು ಸರ್ಕಾರ ವಾದಿಸಿದೆ ಮತ್ತು ಅರ್ಜಿದಾರರು ತಮ್ಮ ವಹಿವಾಟುಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಇಲ್ಲದ ಕಾರಣ ಅವರಿಗೆ ಯಾವುದೇ ಕಾನೂನು ಹಕ್ಕುಗಳಿಲ್ಲ. ಅಲ್ಲಿನ ನಿರ್ಮಾಣಗಳು ಅನಧಿಕೃತವಾಗಿವೆ ಎಂದು ತೀರ್ಮಾನಿಸಿ ಹೈಕೋರ್ಟ್ ಅರ್ಜಿದಾರರ  ಅರ್ಜಿಗಳನ್ನು ವಜಾಗೊಳಿಸಿತ್ತು.

ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಕ್ರಮದ ವಿರುದ್ಧ ದೃಢ ನಿಲುವು ತೆಗೆದುಕೊಂಡಿದೆ ಮತ್ತು ಪ್ರಕರಣ ವಿಚಾರಣೆಯನ್ನು ಮಾರ್ಚ್ 21, 2025 ಕ್ಕೆ ಮುಂದೂಡಿದೆ. ಹಿರಿಯ ವಕೀಲ ಅಭಿಮನ್ಯು ಭಂಡಾರಿ ಜೊತೆಗೆ ವಕೀಲೆ ರೂಹ್-ಎ-ಹಿನಾ ದುವಾ (ಎಆರ್‌ಒ), ವಕೀಲ ಆತಿಫ್ ಸುರ್ಹವರ್ದಿ, ವಕೀಲ ಸೈಯದ್ ಮೆಹದಿ ಇಮಾಮ್ (ಎಆರ್‌ಒ) ಈ ಪ್ರಕರಣದಲ್ಲಿ ವಾದಿಸಿದ್ದಾರೆ.

ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...