Homeಮುಖಪುಟ"ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ" : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ...

“ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ” : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಮತ್ತು ಇತರ ಮೂವರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ (ಮಾ.6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿದ್ದಾರೆ.

“ಸಂವಿಧಾನದ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದಾರೆ.

ಧ್ವಂಸ ಕಾರ್ಯಾಚರಣೆಗೆ ಮುನ್ನ ಅನುಸರಿಸಬೇಕಾದ ಕಾರ್ಯವಿಧಾನವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ನ್ಯಾಯಮೂರ್ತಿ ಓಕಾ ಅವರು ಉಲ್ಲೇಖಿಸಿದ್ದು, “ನಿಮ್ಮ ಬುಲ್ಡೋಝರ್ ನ್ಯಾಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಮನ್ವಯ ಪೀಠ ತೀರ್ಪು ನೀಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಓಕಾ ಅವರು, “ಕೆಡವಲಾದ ಕಟ್ಟಡಗಳನ್ನು ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಿಸಲು ಸರ್ಕಾರಕ್ಕೆ ಆದೇಶಿಸುತ್ತೇವೆ. ಅದೊಂದೆ ಮಾರ್ಗ ಈ ಬಾಕಿಯಿರುವುದು” ಎಂದು ಹೇಳಿದ್ದಾರೆ.

ಸರ್ಕಾರದ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ನಂತರ ವಕೀಲ ಝುಲ್ಫಿಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್, ಇಬ್ಬರು ವಿಧವೆಯರು ಮತ್ತು ಇನ್ನೊಬ್ಬ ವ್ಯಕ್ತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

“ಶನಿವಾರ ನೋಟಿಸ್ ನೀಡಿ, ಭಾನುವಾರ ಮನೆಗಳನ್ನು ಸರ್ಕಾರ ಧ್ವಂಸಗೊಳಿಸಿದೆ. ಇದನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡಿಲ್ಲ. ಅರ್ಜಿದಾರರು ಭೂಮಿಯ ಕಾನೂನುಬದ್ಧ ಗುತ್ತಿಗೆದಾರರು. ಅವರ ಗುತ್ತಿಗೆ ಹಕ್ಕುಗಳನ್ನು ಫ್ರೀಹೋಲ್ಡ್ ಆಸ್ತಿಯಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು” ಎಂದು ಅರ್ಜಿದಾರ ಪರ ವಕೀಲರು ವಾದಿಸಿದ್ದಾರೆ.

“ಸರ್ಕಾರ ಅರ್ಜಿದಾರರ ಜಾಗವನ್ನು 2023ರಲ್ಲಿ ಕೊಲ್ಲಲ್ಪಟ್ಟ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ರೊಂದಿಗೆ ತಪ್ಪಾಗಿ ಜೋಡಿಸಿದೆ” ಎಂದು ಆರೋಪಿಸಿದ್ದಾರೆ.

ಅರ್ಜಿದಾರರಿಗೆ ನೋಟಿಸ್ ಉತ್ತರ ನೀಡಲು ಸಾಕಷ್ಟು ಸಮಯ ಇತ್ತು ಎಂದು ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಓಕಾ ಅವರು, ನೋಟಿಸ್ ಜಾರಿ ಮಾಡಿದ ವಿಧಾನವನ್ನು ಪ್ರಶ್ನಿಸಿದ್ದು, ನೋಟಿಸ್ ಕಳುಹಿಸುವ ವಿಧಾನದ ಕುರಿತ ರಾಜ್ಯದ ವಾದದಲ್ಲಿ ಬದ್ದತೆ ಕೊರೆತೆಯನ್ನು ಎತ್ತಿ ತೋರಿಸಿದ್ದಾರೆ.

ಅಟಾರ್ನಿ ಜನರಲ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಬೇಕೆಂದು ಮನವಿ ಮಾಡಿದ್ದು, ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಕರಣವನ್ನು ವಾಪಸ್ ಕಳುಹಿಸುವುದರಿಂದ ಅನಗತ್ಯ ವಿಳಂಬವಾಗುತ್ತದೆ ಎಂದು ಹೇಳಿದೆ.

“ಅರ್ಜಿದಾರರು ತಾವು ಅತಿಕ್ರಮಣಕಾರರಲ್ಲ, ಬದಲಾಗಿ ತಮ್ಮ ಗುತ್ತಿಗೆ ಹಕ್ಕನ್ನು ಫ್ರೀಹೋಲ್ಡಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1, 2021ರಂದು ಅವರ ಮನೆಗಳನ್ನು ಕೆಡವಲು ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 6, 2021 ರಂದು ಅದು ಅವರಿಗೆ ತಲುಪಿದೆ. ಮರುದಿನ ಮಾರ್ಚ್ 7, 2021ರಂದು ಅವರ ಮನೆಗಳನ್ನು ಕೆಡವಲಾಗಿದೆ. ಯುಪಿ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 27(2) ರ ಅಡಿಯಲ್ಲಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಧ್ವಂಸ ಕಾರ್ಯಾಚರಣೆ ಕುರಿತು ಪ್ರಶ್ನಿಸಲು ಅವರಿಗೆ ಸರಿಯಾದ ಅವಕಾಶ ನೀಡಿಲ್ಲ. ಅರ್ಜಿದಾರರಲ್ಲಿ ವಕೀಲರು ಮತ್ತು ಪ್ರಾಧ್ಯಾಪಕರು ಸೇರಿದ್ದಾರೆ, ಅವರ ಸಂಪೂರ್ಣ ಗ್ರಂಥಾಲಯವನ್ನು ಕೆಡವಲಾಗಿದೆ. ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 15, 2020ರಂದು ಬರೆದ ಪತ್ರವನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅವರಿಗೆ ಅದನ್ನು ಸಮರ್ಥಿಸಿಕೊಳ್ಳಲೂ ಅವಕಾಶ ನೀಡಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ಈ ಪ್ರಕರಣ ಪ್ರಯಾಗ್‌ರಾಜ್‌ನಲ್ಲಿರುವ ನಜುಲ್ ಪ್ಲಾಟ್‌ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದೆ. ವಿವಾದಿತ ಭೂಮಿಯನ್ನು 1906 ರಲ್ಲಿ ಗುತ್ತಿಗೆಗೆ ನೀಡಲಾಗಿತ್ತು. ಗುತ್ತಿಗೆ 1996 ರಲ್ಲಿ ಮುಕ್ತಾಯಗೊಂಡಿತ್ತು. ಅದನ್ನು ಫ್ರೀಹೋಲ್ಡ್ ಪರಿವರ್ತನೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು 2015 ಮತ್ತು 2019 ರಲ್ಲಿ ತಿರಸ್ಕರಿಸಲಾಗಿದೆ. ಭೂಮಿಯನ್ನು ಸಾರ್ವಜನಿಕ ಬಳಕೆಗಾಗಿ ಮೀಸಲಿಡಲಾಗಿದೆ ಎಂದು ಸರ್ಕಾರ ವಾದಿಸಿದೆ ಮತ್ತು ಅರ್ಜಿದಾರರು ತಮ್ಮ ವಹಿವಾಟುಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಇಲ್ಲದ ಕಾರಣ ಅವರಿಗೆ ಯಾವುದೇ ಕಾನೂನು ಹಕ್ಕುಗಳಿಲ್ಲ. ಅಲ್ಲಿನ ನಿರ್ಮಾಣಗಳು ಅನಧಿಕೃತವಾಗಿವೆ ಎಂದು ತೀರ್ಮಾನಿಸಿ ಹೈಕೋರ್ಟ್ ಅರ್ಜಿದಾರರ  ಅರ್ಜಿಗಳನ್ನು ವಜಾಗೊಳಿಸಿತ್ತು.

ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಕ್ರಮದ ವಿರುದ್ಧ ದೃಢ ನಿಲುವು ತೆಗೆದುಕೊಂಡಿದೆ ಮತ್ತು ಪ್ರಕರಣ ವಿಚಾರಣೆಯನ್ನು ಮಾರ್ಚ್ 21, 2025 ಕ್ಕೆ ಮುಂದೂಡಿದೆ. ಹಿರಿಯ ವಕೀಲ ಅಭಿಮನ್ಯು ಭಂಡಾರಿ ಜೊತೆಗೆ ವಕೀಲೆ ರೂಹ್-ಎ-ಹಿನಾ ದುವಾ (ಎಆರ್‌ಒ), ವಕೀಲ ಆತಿಫ್ ಸುರ್ಹವರ್ದಿ, ವಕೀಲ ಸೈಯದ್ ಮೆಹದಿ ಇಮಾಮ್ (ಎಆರ್‌ಒ) ಈ ಪ್ರಕರಣದಲ್ಲಿ ವಾದಿಸಿದ್ದಾರೆ.

ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...