Homeಮುಖಪುಟಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಿದ್ರೆ NDA ತೊರೆಯುತ್ತೇವೆ: ಮಿಜೋರಾಂ ಸಿಎಂ ಎಚ್ಚರಿಕೆ

ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಿದ್ರೆ NDA ತೊರೆಯುತ್ತೇವೆ: ಮಿಜೋರಾಂ ಸಿಎಂ ಎಚ್ಚರಿಕೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಮಿಜೋ ನ್ಯಾಷನಲ್ ಫ್ರಂಟ್ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ತೊರೆಯಲಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಶುಕ್ರವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ದೇಶದ ಎಲ್ಲಾ ಸಮುದಾಯಗಳಿಗೆ ಒಂದೇ ವೈಯಕ್ತಿಕ ಕಾನೂನುಗಳನ್ನು ರೂಪಿಸುವ ಉದ್ದೇಶದಿಂದ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಪಿತೃಪ್ರಭುತ್ವದ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ಮದುವೆ, ವಿಚ್ಛೇದನ ಮತ್ತು ಉತ್ತರಾಧಿಕಾರದ ಹಕ್ಕುಗಳನ್ನು ಸಾಮಾನ್ಯವಾಗಿ ನಿರಾಕರಿಸುವ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯವನ್ನು ನೀಡುವ ಉದ್ದೇಶದಿಂದ ಏಕರೂಪ ನಾಗರಿಕ ಸಂಹಿತೆ ಜಾರಿತರುವ ಚಿಂತನೆ ಇದೆ ಎಂದು ಬಿಜೆಪಿ ಹೇಳುತ್ತದೆ.

ಈಶಾನ್ಯ ರಾಜ್ಯಗಳು ಈ ಏಕರೂಪದ ನಾಗರಿಕ ಸಂಹಿತೆಯನ್ನು ಬಲವಾಗಿ ವಿರೋಧಸಿಸುತ್ತವೆ. ಶುಕ್ರವಾರ, ಮಿಜೋರಾಂ ಸಿಎಂ ಝೋರಂತಂಗ ಅವರು ”ಬಿಜೆಪಿ ನೇತೃತ್ವದ ಮೈತ್ರಿಕೂಟವನ್ನು ಬೆಂಬಲಿಸುತ್ತೇವೆ ಎಂದ ಮಾತ್ರಕ್ಕೆ ನಾವು ಅವರ ”ಪ್ರತಿಯೊಂದು ವಿಷಯದಲ್ಲೂ ಅವರನ್ನು ಪಾಲಿಸಬೇಕು” ಎಂದು ಹೇಳಲಾಗದು” ಎಂದು ಹೇಳಿದ್ದಾರೆ.

“ಉದಾಹರಣೆಗೆ, ಮಿಜೋರಾಂನಲ್ಲಿ ಯುಸಿಸಿ [ಏಕರೂಪದ ನಾಗರಿಕ ಸಂಹಿತೆ] ಯನ್ನು ಜಾರಿ ಮಾಡಿದರೆ, ನಾವು ಖಂಡಿತವಾಗಿಯೂ ಎನ್‌ಡಿಎ [ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ]ದಲ್ಲಿ ಇರಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ನಾವು ಎನ್‌ಡಿಎ ತೊರೆಯುವ ರೀತಿಯಲ್ಲಿ ಯಾವುದೇ ಸಮಸ್ಯೆಯನ್ನು ಅವರು ಮಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಜೋರಮ್‌ತಂಗಾ ಹೇಳಿದರು.

ಈ ವಾರದ ಆರಂಭದಲ್ಲಿ ಕೂಡ ಝೋರಂತಂಗ  ಅವರು, ”ತಮ್ಮ ಪಕ್ಷವು ಬಿಜೆಪಿಯ ಎಲ್ಲಾ ನೀತಿಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ” ಎಂದು ಹೇಳಿದ್ದರು.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಹೊಂದಿರುವ ನೆರೆಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆಯೂ ಅವರು ಧ್ವನಿಯೆತ್ತಿದ್ದಾರೆ. ಮಂಗಳವಾರ, ಝೋರಂತಂಗ ಐಜ್ವಾಲ್‌ನಲ್ಲಿ ರ್ಯಾಲಿಯಲ್ಲಿ ಭಾಗವಹಿಸಿ, ಕುಕಿ ಸಮುದಾಯದೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದರು. ಝೋರಂತಂಗ ಅವರ ಈ ಕ್ರಮಕ್ಕೆ ಸಿಂಗ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದರು. ಅವರು ತಮ್ಮ ರಾಜ್ಯದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಂತೆ ಕೇಳಿಕೊಂಡರು.

ಮಣಿಪುರದಲ್ಲಿನ ಮೈತಿ ಮತ್ತು ಕುಕಿಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ ಈವರೆಗೂ 160 ಕ್ಕೂ ಹೆಚ್ಚು ಜನರನ್ನು ಕೊಂದು 60,000 ಜನರನ್ನು ಸ್ಥಳಾಂತರಿಸಿದೆ. ಮಣಿಪುರದಿಂದ ಪಲಾಯನ ಮಾಡಿದ ಸುಮಾರು 13,000 ಕುಕಿ ಜನರಿಗೆ ಮಿಜೋರಾಂ ಸರ್ಕಾರ ಆಶ್ರಯ ನೀಡುತ್ತಿದೆ.

ಇದನ್ನೂ ಓದಿ: ಮುಂದಿನ ವಾರ ಸಂಸತ್‌ನಲ್ಲಿ ವಿವಾದಿತ ದೆಹಲಿ ಸೇವಾ ಮಸೂದೆ ಮಂಡನೆ; ಪ್ರತಿಪಕ್ಷಗಳ ವಿರೋಧದ ಮಧ್ಯೆ ಅಂಗಿಕಾರ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...