Homeಮುಖಪುಟಶೀಘ್ರದಲ್ಲೇ ಮತಗಳ್ಳತನ ಕುರಿತ 'ಹೈಡ್ರೋಜನ್ ಬಾಂಬ್' ಬರಲಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಬರಲಿದೆ: ರಾಹುಲ್ ಗಾಂಧಿ

- Advertisement -
- Advertisement -

ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಶೀಘ್ರದಲ್ಲೇ ಬರಲಿದೆ. ಅದು ಬಹಿರಂಗಗೊಂಡ ಬಳಿಕ ಪ್ರಧಾನಿ ಮೋದಿ ದೇಶದ ಜನರಿಗೆ ಮುಖ ತೋರಿಸಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ನಡೆದ ‘ವೋಟರ್ ಅಧಿಕಾರ್’ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತ್ತು 2024 ರ ಸಂಸತ್ ಚುನಾವಣೆಯ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತಗಳತನ ನಡೆದಿದೆ ಎಂಬ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದಾರೆ.

“ಮತ ಕಳ್ಳತನ ಎಂದರೆ ಹಕ್ಕುಗಳ ಕಳ್ಳತನ. ಪ್ರಜಾಪ್ರಭುತ್ವದ ಕಳ್ಳತನ. ಉದ್ಯೋಗದ ಕಳ್ಳತನ. ಬಿಜೆಪಿಯವರು ನಿಮ್ಮ ಪಡಿತರ ಚೀಟಿ ಹಾಗೂ ಇತರ ಹಕ್ಕುಗಳನ್ನು ಕಸಿದುಕೊಳ್ಳಲಿದ್ದಾರೆ” ಎಂದು ರಾಹುಲ್‌ ಹೇಳಿದ್ದಾರೆ.

“ಮಹಾತ್ಮ ಗಾಂಧಿ ಅವರ ಹತ್ಯೆಯ ಹಿಂದಿದ್ದ ಶಕ್ತಿಗಳೇ ಇದೀಗ ಸಂವಿಧಾನದ ಹತ್ಯೆಗೂ ಮುಂದಾಗಿವೆ. ನಾವು ಇದಕ್ಕೆ ಅವಕಾಶ ಕೊಡಲ್ಲ. ಅದಕ್ಕಾಗಿಯೇ ಈ ಯಾತ್ರೆ ನಡೆಸಿದ್ದು, ಜನರಿಂದ ಉತ್ತಮ ಸ್ಪಂದನ ಸಿಕ್ಕಿದೆ. ಅಸಂಖ್ಯಾತ ಜನರು ಮತ ಕಳ್ಳತನದ ವಿರುದ್ಧ ತಮ್ಮ ಧ್ವನಿ ಮೊಳಗಿಸಿದ್ದಾರೆ” ಎಂದಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ‘ಮತ ಕಳ್ಳತನ’ ಹೇಗೆ ನಡೆದಿದೆ ಎಂಬುವುದನ್ನು ನಮ್ಮ ಪಕ್ಷ ತೋರಿಸಿದೆ ಎಂದಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಲೋಕಸಭೆಯ ವಿರೋಧ ಪಕ್ಷದ ನಾಯಕ ‘ಬೇಜವಾಬ್ದಾರಿ’ಯಿಂದ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಸಂಸತ್ತಿನ ಒಳಗೆ ಮತ್ತು ಹೊರಗೆ ರಾಹುಲ್ ಗಾಂಧಿಯವರ ಮಾತುಗಳನ್ನು ಕೇಳಿದಾಗಲೆಲ್ಲ ಅವರು ಏನು ಏನು ಹೇಳಲು ಪ್ರಯತ್ನಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ನನಗೆ ಸಮಯ ಹಿಡಿಯುತ್ತದೆ. ಪರಮಾಣು ಮತ್ತು ಹೈಡ್ರೋಜನ್ ಬಾಂಬ್‌ಗಳಿಗೂ ಚುನಾವಣೆಗೂ ಏನು ಸಂಬಂಧ? ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅವರನ್ನೇ ಅವರು ಏಕೆ ಅವಮಾನಿಸಿಕೊಳ್ಳುತ್ತಿದ್ದಾರೆ?” ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆರು ತಿಂಗಳು ಪರಿಶೀಲಿಸಿದೆ. ಈ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಹೆಸರುಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ಆಗಸ್ಟ್ 7ರಂದು ರಾಹುಲ್ ಗಾಂಧಿ ಹೇಳಿದ್ದರು.

ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂಬುವುದಕ್ಕೆ ಮಹದೇವಪುರದ ಅಕ್ರಮಗಳು ಸಾಕ್ಷಿಯಾಗಿದೆ ಎಂದಿದ್ದರು.

ಮತದಾರರ ಪಟ್ಟಿಯಲ್ಲಿ 11,965 ನಕಲಿ ನೋಂದಣಿಗಳು, ನಕಲಿ ಅಥವಾ ಅಮಾನ್ಯ ವಿಳಾಸಗಳನ್ನು ಹೊಂದಿರುವ 40,009 ಮತದಾರರು, ಒಂದೇ ವಿಳಾಸದಲ್ಲಿ ನೋಂದಾಯಿಸಲಾದ 10,454 ‘ಬೃಹತ್ ಮತದಾರರು’, ಅಮಾನ್ಯ ಫೋಟೋಗಳನ್ನು ಹೊಂದಿರುವ 4,132 ಮತದಾರರು ಮತ್ತು ಫಾರ್ಮ್ 6 ಅನ್ನು ದುರುಪಯೋಗಪಡಿಸಿಕೊಂಡ ಪ್ರಕರಣಗಳಲ್ಲಿ 33,692 ಮತದಾರರು ಕಂಡು ಬಂದಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಚುನಾವಣಾ ಆಯೋಗದ ನಮೂನೆ 6 ಹೊಸ ಮತದಾರರನ್ನು ನೋಂದಾಯಿಸುವ ಅರ್ಜಿ ದಾಖಲೆಯಾಗಿದೆ.

ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಸಂಸ್ಥೆಗಳನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಘಾಡಿ ಒಕ್ಕೂಟವನ್ನು ಮಹಾರಾಷ್ಟರ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿತ್ತು.

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಆರೋಪಗಳನ್ನು ತಿರಸ್ಕರಿಸಿದೆ. ಆಗಸ್ಟ್ 14ರಂದು, ಮಹದೇವಪುರದ ಬಗ್ಗೆ ಮಾಡಿರುವ ಆರೋಪಗಳನ್ನು ‘ಸುಳ್ಳು ಮತ್ತು ದಾರಿತಪ್ಪಿಸುವ’ ಪ್ರಯತ್ನ ಎಂದಿದೆ.

ಇದಕ್ಕೂ ಮೊದಲು ಫೆಬ್ರವರಿಯಲ್ಲಿ, ಚುನಾವಣಾ ಫಲಿತಾಂಶಗಳಿಂದ ನಿರಾಶೆಗೊಂಡ ಪಕ್ಷಗಳು ಆಯೋಗವನ್ನು ದೂಷಿಸುವ ಪ್ರಯತ್ನಗಳನ್ನು ಮಾಡುತ್ತಿರುವುದು ‘ಸಂಪೂರ್ಣ ಅಸಂಬದ್ಧ’ ಎಂದು ಚುನಾವಣಾ ಆಯೋಗ ಹೇಳಿತ್ತು.

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...