Homeಮುಖಪುಟಶೀಘ್ರದಲ್ಲೇ ಮತಗಳ್ಳತನ ಕುರಿತ 'ಹೈಡ್ರೋಜನ್ ಬಾಂಬ್' ಬರಲಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಬರಲಿದೆ: ರಾಹುಲ್ ಗಾಂಧಿ

- Advertisement -
- Advertisement -

ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಶೀಘ್ರದಲ್ಲೇ ಬರಲಿದೆ. ಅದು ಬಹಿರಂಗಗೊಂಡ ಬಳಿಕ ಪ್ರಧಾನಿ ಮೋದಿ ದೇಶದ ಜನರಿಗೆ ಮುಖ ತೋರಿಸಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ನಡೆದ ‘ವೋಟರ್ ಅಧಿಕಾರ್’ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತ್ತು 2024 ರ ಸಂಸತ್ ಚುನಾವಣೆಯ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತಗಳತನ ನಡೆದಿದೆ ಎಂಬ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದಾರೆ.

“ಮತ ಕಳ್ಳತನ ಎಂದರೆ ಹಕ್ಕುಗಳ ಕಳ್ಳತನ. ಪ್ರಜಾಪ್ರಭುತ್ವದ ಕಳ್ಳತನ. ಉದ್ಯೋಗದ ಕಳ್ಳತನ. ಬಿಜೆಪಿಯವರು ನಿಮ್ಮ ಪಡಿತರ ಚೀಟಿ ಹಾಗೂ ಇತರ ಹಕ್ಕುಗಳನ್ನು ಕಸಿದುಕೊಳ್ಳಲಿದ್ದಾರೆ” ಎಂದು ರಾಹುಲ್‌ ಹೇಳಿದ್ದಾರೆ.

“ಮಹಾತ್ಮ ಗಾಂಧಿ ಅವರ ಹತ್ಯೆಯ ಹಿಂದಿದ್ದ ಶಕ್ತಿಗಳೇ ಇದೀಗ ಸಂವಿಧಾನದ ಹತ್ಯೆಗೂ ಮುಂದಾಗಿವೆ. ನಾವು ಇದಕ್ಕೆ ಅವಕಾಶ ಕೊಡಲ್ಲ. ಅದಕ್ಕಾಗಿಯೇ ಈ ಯಾತ್ರೆ ನಡೆಸಿದ್ದು, ಜನರಿಂದ ಉತ್ತಮ ಸ್ಪಂದನ ಸಿಕ್ಕಿದೆ. ಅಸಂಖ್ಯಾತ ಜನರು ಮತ ಕಳ್ಳತನದ ವಿರುದ್ಧ ತಮ್ಮ ಧ್ವನಿ ಮೊಳಗಿಸಿದ್ದಾರೆ” ಎಂದಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ‘ಮತ ಕಳ್ಳತನ’ ಹೇಗೆ ನಡೆದಿದೆ ಎಂಬುವುದನ್ನು ನಮ್ಮ ಪಕ್ಷ ತೋರಿಸಿದೆ ಎಂದಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಲೋಕಸಭೆಯ ವಿರೋಧ ಪಕ್ಷದ ನಾಯಕ ‘ಬೇಜವಾಬ್ದಾರಿ’ಯಿಂದ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಸಂಸತ್ತಿನ ಒಳಗೆ ಮತ್ತು ಹೊರಗೆ ರಾಹುಲ್ ಗಾಂಧಿಯವರ ಮಾತುಗಳನ್ನು ಕೇಳಿದಾಗಲೆಲ್ಲ ಅವರು ಏನು ಏನು ಹೇಳಲು ಪ್ರಯತ್ನಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ನನಗೆ ಸಮಯ ಹಿಡಿಯುತ್ತದೆ. ಪರಮಾಣು ಮತ್ತು ಹೈಡ್ರೋಜನ್ ಬಾಂಬ್‌ಗಳಿಗೂ ಚುನಾವಣೆಗೂ ಏನು ಸಂಬಂಧ? ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅವರನ್ನೇ ಅವರು ಏಕೆ ಅವಮಾನಿಸಿಕೊಳ್ಳುತ್ತಿದ್ದಾರೆ?” ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆರು ತಿಂಗಳು ಪರಿಶೀಲಿಸಿದೆ. ಈ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಹೆಸರುಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ಆಗಸ್ಟ್ 7ರಂದು ರಾಹುಲ್ ಗಾಂಧಿ ಹೇಳಿದ್ದರು.

ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂಬುವುದಕ್ಕೆ ಮಹದೇವಪುರದ ಅಕ್ರಮಗಳು ಸಾಕ್ಷಿಯಾಗಿದೆ ಎಂದಿದ್ದರು.

ಮತದಾರರ ಪಟ್ಟಿಯಲ್ಲಿ 11,965 ನಕಲಿ ನೋಂದಣಿಗಳು, ನಕಲಿ ಅಥವಾ ಅಮಾನ್ಯ ವಿಳಾಸಗಳನ್ನು ಹೊಂದಿರುವ 40,009 ಮತದಾರರು, ಒಂದೇ ವಿಳಾಸದಲ್ಲಿ ನೋಂದಾಯಿಸಲಾದ 10,454 ‘ಬೃಹತ್ ಮತದಾರರು’, ಅಮಾನ್ಯ ಫೋಟೋಗಳನ್ನು ಹೊಂದಿರುವ 4,132 ಮತದಾರರು ಮತ್ತು ಫಾರ್ಮ್ 6 ಅನ್ನು ದುರುಪಯೋಗಪಡಿಸಿಕೊಂಡ ಪ್ರಕರಣಗಳಲ್ಲಿ 33,692 ಮತದಾರರು ಕಂಡು ಬಂದಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಚುನಾವಣಾ ಆಯೋಗದ ನಮೂನೆ 6 ಹೊಸ ಮತದಾರರನ್ನು ನೋಂದಾಯಿಸುವ ಅರ್ಜಿ ದಾಖಲೆಯಾಗಿದೆ.

ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಸಂಸ್ಥೆಗಳನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಘಾಡಿ ಒಕ್ಕೂಟವನ್ನು ಮಹಾರಾಷ್ಟರ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿತ್ತು.

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಆರೋಪಗಳನ್ನು ತಿರಸ್ಕರಿಸಿದೆ. ಆಗಸ್ಟ್ 14ರಂದು, ಮಹದೇವಪುರದ ಬಗ್ಗೆ ಮಾಡಿರುವ ಆರೋಪಗಳನ್ನು ‘ಸುಳ್ಳು ಮತ್ತು ದಾರಿತಪ್ಪಿಸುವ’ ಪ್ರಯತ್ನ ಎಂದಿದೆ.

ಇದಕ್ಕೂ ಮೊದಲು ಫೆಬ್ರವರಿಯಲ್ಲಿ, ಚುನಾವಣಾ ಫಲಿತಾಂಶಗಳಿಂದ ನಿರಾಶೆಗೊಂಡ ಪಕ್ಷಗಳು ಆಯೋಗವನ್ನು ದೂಷಿಸುವ ಪ್ರಯತ್ನಗಳನ್ನು ಮಾಡುತ್ತಿರುವುದು ‘ಸಂಪೂರ್ಣ ಅಸಂಬದ್ಧ’ ಎಂದು ಚುನಾವಣಾ ಆಯೋಗ ಹೇಳಿತ್ತು.

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...