Homeಮುಖಪುಟಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

ಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

- Advertisement -
- Advertisement -

“ಎಐಎಡಿಎಂಕೆ ಪಕ್ಷದ ಜೊತೆಯಲ್ಲಿ ಮೈತ್ರಿ ಮುಂದುವರಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತಾ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಅವರು, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು” ಎಂದು ಆಶಿಸಿದ್ದಾರೆ.

ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ. “ಕೇಂದ್ರ ನಾಯಕತ್ವವು ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಲು ನಿರ್ಧರಿಸಿದರೆ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಅವರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಣ್ಣಾಮಲೈ ಹೇಳಿಕೆಗಳು ಕೋಲಾಹಲವನ್ನು ಸೃಷ್ಟಿಸಿದ್ದು, ಸಭೆಯಲ್ಲಿದ್ದ ಕನಿಷ್ಠ ಇಬ್ಬರು ನಾಯಕರು ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. “ರಾಜ್ಯ ಘಟಕದ ಸಭೆಯಲ್ಲಿ ಮೈತ್ರಿ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಅಂತಹ ನಿರ್ಧಾರಗಳನ್ನು ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ” ಎಂದು ಹರಿಹಾಯ್ದಿದ್ದಾರೆ.

ದ್ರಾವಿಡ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ಅಣ್ಣಾಮಲೈ ವಿರೋಧಿಸಿರುವ ಕುರಿತು ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ, ಕೊಯಮತ್ತೂರು (ದಕ್ಷಿಣ) ಶಾಸಕಿ ವನತಿ ಶ್ರೀನಿವಾಸನ್ ಮತ್ತು ಉಪಾಧ್ಯಕ್ಷ ನಾರಾಯಣನ್ ತಿರುಪತಿ ಒತ್ತಾಯಿಸಿರುವಾಗಿ ಮೂಲಗಳು ಹೇಳಿವೆ.

ಆದರೆ ಅಣ್ಣಾಮಲೈ ಅವರ ಮಾತುಗಳಿಗೆ ಇತರ ಕಾರ್ಯಕರ್ತರಿಂದ ಬೆಂಬಲ ದೊರೆತಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಸ್ವಂತ ಬಲದಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಅಣ್ಣಾಮಲೈ ಬೆಂಬಲಿಗರು ಆಶಿಸಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್‌’ (ಡಿಎಚ್‌) ವರದಿ ಮಾಡಿದೆ.

ಬಿಜೆಪಿ ಸ್ವತಂತ್ರ ಪಕ್ಷವಾಗಿ ಹೊರಹೊಮ್ಮಬೇಕಾದರೆ ಸ್ವಂತ ಬಲದಲ್ಲಿ ಚುನಾವಣೆ ಎದುರಿಸಬೇಕು ಎಂಬುದು ಅಣ್ಣಾಮಲೈ ಅವರ ಉದ್ದೇಶವಾಗಿತ್ತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು ತಿಳಿಸಿರುವುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

“ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿದಾಗ ಮಾತ್ರ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಉತ್ತಮ ಆಡಳಿತದ ಬಗೆಗಿನ ನಮ್ಮ ನಿಲುವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಅಣ್ಣಾಮಲೈ ಹೇಳಿದರು. ಪಕ್ಷವನ್ನು ಕಟ್ಟುವಾಗ ತೊಂದರೆಗಳು ಎದುರಾಗುತ್ತವೆ; ಕೆಲವು ವರ್ಷಗಳ ಕಾಲ ಎಲ್ಲರೂ ಅಸಾಧಾರಣ ನೋವನ್ನು ಅನುಭವಿಸಬೇಕಾಗುತ್ತದೆ ಎಂಬುದು ರಾಜ್ಯಾಧ್ಯಕ್ಷರ ನಿಲುವಾಗಿದೆ” ಎಂದು ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ನಾಯಕತ್ವವು ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದರೆ ರಾಜ್ಯ ಮುಖ್ಯಸ್ಥ ಸ್ಥಾನವನ್ನು ತ್ಯಜಿಸುತ್ತೇನೆ, ಪಕ್ಷಕ್ಕಾಗಿ ‘ಸಾಮಾನ್ಯ ಕೇಡರ್’ ಆಗಿ ಕೆಲಸ ಮಾಡುತ್ತೇನೆಂದು ಅಣ್ಣಾಮಲೈ ಸಭೆಯಲ್ಲಿ ಸ್ಪಷ್ಟಪಡಿಸಿದರು ಎಂದು ಮತ್ತೊಬ್ಬ ಮುಖಂಡರು ತಿಳಿಸಿದ್ದಾರೆ.

“ನಾಯಕತ್ವ ವಹಿಸಿದ್ದೇನೆ. ತಮಿಳುನಾಡಿನಲ್ಲಿ ಬದಲಾವಣೆಯನ್ನು ತರಲು ನಾನು ರಾಜಕೀಯ ಬಂದಿದ್ದೇನೆ ಹೊರತು, ಎಐಎಡಿಎಂಕೆ ಜೊತೆ ಸೇರಿಕೊಂಡು ಎರಡನೇ ಪಿಟೀಲು ನುಡಿಸಲು ಅಲ್ಲ” ಎಂದು ಅಣ್ಣಾ ಮಲೈ ಹೇಳಿರುವುದಾಗಿ ಮುಖಂಡರು ಮಾಹಿತಿ ನೀಡಿದ್ದಾರೆ.

ಮೈತ್ರಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಪಾಯಿಂಟ್‌ಮೆಂಟ್ ಕೇಳಿರುವುದಾಗಿ ಅಣ್ಣಾಮಲೈ ಅವರು ಸಭೆಯಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿರಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಅಣ್ಣಾಮಲೈ ಅವರನ್ನು ಟೀಕಿಸಿ ಬಿಜೆಪಿ ತೊರೆದ ಸಿಟಿಆರ್ ನಿರ್ಮಲ್ ಕುಮಾರ್ ಅವರನ್ನು ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿಯವರು ತಮ್ಮ ಪಕ್ಷಕ್ಕೆ ಸ್ವಾಗತಿಸಿದ ಹಿನ್ನೆಲೆಯಲ್ಲಿ ಅಣ್ಣಾಮಲೈ ಹೇಳಿಕೆಗಳು ಹೊರಬಿದ್ದಿವೆ. ಈ ಬೆಳವಣಿಗೆಗೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಮೈತ್ರಿ ಪಾಲುದಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಮೈತ್ರಿ ಕುರಿತು ಅಣ್ಣಾಮಲೈ ನೀಡಿರುವ ಹೇಳಿಕೆಗಳನ್ನು ಎರಡನೇ ಹಂತದ ಎಐಎಡಿಎಂಕೆ ನಾಯಕರು ಸ್ವಾಗತಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ನೈನಾರ್ ನಾಗೇಂದ್ರನ್ ಪ್ರತಿಕ್ರಿಯಿಸಿ, “ಇದು ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ ಜಯಕುಮಾರ್ ಅವರು ಪ್ರತಿಕ್ರಿಯಿಸಿ, “ಆಂತರಿಕ ಸಭೆಯಲ್ಲಿ ಆಡಿದ ಮಾತುಗಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆದರೆ ರಾಜ್ಯದಲ್ಲಿ ತಮ್ಮ ಪಕ್ಷವು ಮೈತ್ರಿಕೂಟದ ನಾಯಕತ್ವ ವಹಿಸಲಿದ” ಎಂದು ಸ್ಪಷ್ಟಪಡಿಸಿದ್ದಾರೆ.

ಎಐಎಡಿಎಂಕೆ ಮತ್ತು ಬಿಜೆಪಿಯ ಮೈತ್ರಿ 2024 ರ ಲೋಕಸಭೆ ಚುನಾವಣೆಗೂ ಮುಂದುವರಿಯುತ್ತದೆ ಎಂದು ಹೇಳಲಾಗುತ್ತಿರುವುದರಿಂದ ಅಣ್ಣಾಮಲೈ ಅವರ ನಿಲುವು ಮಹತ್ವ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...