Homeಮುಖಪುಟಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

ಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

- Advertisement -
- Advertisement -

“ಎಐಎಡಿಎಂಕೆ ಪಕ್ಷದ ಜೊತೆಯಲ್ಲಿ ಮೈತ್ರಿ ಮುಂದುವರಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತಾ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಅವರು, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು” ಎಂದು ಆಶಿಸಿದ್ದಾರೆ.

ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ. “ಕೇಂದ್ರ ನಾಯಕತ್ವವು ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಲು ನಿರ್ಧರಿಸಿದರೆ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಅವರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಣ್ಣಾಮಲೈ ಹೇಳಿಕೆಗಳು ಕೋಲಾಹಲವನ್ನು ಸೃಷ್ಟಿಸಿದ್ದು, ಸಭೆಯಲ್ಲಿದ್ದ ಕನಿಷ್ಠ ಇಬ್ಬರು ನಾಯಕರು ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. “ರಾಜ್ಯ ಘಟಕದ ಸಭೆಯಲ್ಲಿ ಮೈತ್ರಿ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಅಂತಹ ನಿರ್ಧಾರಗಳನ್ನು ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ” ಎಂದು ಹರಿಹಾಯ್ದಿದ್ದಾರೆ.

ದ್ರಾವಿಡ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ಅಣ್ಣಾಮಲೈ ವಿರೋಧಿಸಿರುವ ಕುರಿತು ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ, ಕೊಯಮತ್ತೂರು (ದಕ್ಷಿಣ) ಶಾಸಕಿ ವನತಿ ಶ್ರೀನಿವಾಸನ್ ಮತ್ತು ಉಪಾಧ್ಯಕ್ಷ ನಾರಾಯಣನ್ ತಿರುಪತಿ ಒತ್ತಾಯಿಸಿರುವಾಗಿ ಮೂಲಗಳು ಹೇಳಿವೆ.

ಆದರೆ ಅಣ್ಣಾಮಲೈ ಅವರ ಮಾತುಗಳಿಗೆ ಇತರ ಕಾರ್ಯಕರ್ತರಿಂದ ಬೆಂಬಲ ದೊರೆತಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಸ್ವಂತ ಬಲದಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಅಣ್ಣಾಮಲೈ ಬೆಂಬಲಿಗರು ಆಶಿಸಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್‌’ (ಡಿಎಚ್‌) ವರದಿ ಮಾಡಿದೆ.

ಬಿಜೆಪಿ ಸ್ವತಂತ್ರ ಪಕ್ಷವಾಗಿ ಹೊರಹೊಮ್ಮಬೇಕಾದರೆ ಸ್ವಂತ ಬಲದಲ್ಲಿ ಚುನಾವಣೆ ಎದುರಿಸಬೇಕು ಎಂಬುದು ಅಣ್ಣಾಮಲೈ ಅವರ ಉದ್ದೇಶವಾಗಿತ್ತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು ತಿಳಿಸಿರುವುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

“ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿದಾಗ ಮಾತ್ರ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಉತ್ತಮ ಆಡಳಿತದ ಬಗೆಗಿನ ನಮ್ಮ ನಿಲುವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಅಣ್ಣಾಮಲೈ ಹೇಳಿದರು. ಪಕ್ಷವನ್ನು ಕಟ್ಟುವಾಗ ತೊಂದರೆಗಳು ಎದುರಾಗುತ್ತವೆ; ಕೆಲವು ವರ್ಷಗಳ ಕಾಲ ಎಲ್ಲರೂ ಅಸಾಧಾರಣ ನೋವನ್ನು ಅನುಭವಿಸಬೇಕಾಗುತ್ತದೆ ಎಂಬುದು ರಾಜ್ಯಾಧ್ಯಕ್ಷರ ನಿಲುವಾಗಿದೆ” ಎಂದು ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ನಾಯಕತ್ವವು ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದರೆ ರಾಜ್ಯ ಮುಖ್ಯಸ್ಥ ಸ್ಥಾನವನ್ನು ತ್ಯಜಿಸುತ್ತೇನೆ, ಪಕ್ಷಕ್ಕಾಗಿ ‘ಸಾಮಾನ್ಯ ಕೇಡರ್’ ಆಗಿ ಕೆಲಸ ಮಾಡುತ್ತೇನೆಂದು ಅಣ್ಣಾಮಲೈ ಸಭೆಯಲ್ಲಿ ಸ್ಪಷ್ಟಪಡಿಸಿದರು ಎಂದು ಮತ್ತೊಬ್ಬ ಮುಖಂಡರು ತಿಳಿಸಿದ್ದಾರೆ.

“ನಾಯಕತ್ವ ವಹಿಸಿದ್ದೇನೆ. ತಮಿಳುನಾಡಿನಲ್ಲಿ ಬದಲಾವಣೆಯನ್ನು ತರಲು ನಾನು ರಾಜಕೀಯ ಬಂದಿದ್ದೇನೆ ಹೊರತು, ಎಐಎಡಿಎಂಕೆ ಜೊತೆ ಸೇರಿಕೊಂಡು ಎರಡನೇ ಪಿಟೀಲು ನುಡಿಸಲು ಅಲ್ಲ” ಎಂದು ಅಣ್ಣಾ ಮಲೈ ಹೇಳಿರುವುದಾಗಿ ಮುಖಂಡರು ಮಾಹಿತಿ ನೀಡಿದ್ದಾರೆ.

ಮೈತ್ರಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಪಾಯಿಂಟ್‌ಮೆಂಟ್ ಕೇಳಿರುವುದಾಗಿ ಅಣ್ಣಾಮಲೈ ಅವರು ಸಭೆಯಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿರಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಅಣ್ಣಾಮಲೈ ಅವರನ್ನು ಟೀಕಿಸಿ ಬಿಜೆಪಿ ತೊರೆದ ಸಿಟಿಆರ್ ನಿರ್ಮಲ್ ಕುಮಾರ್ ಅವರನ್ನು ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿಯವರು ತಮ್ಮ ಪಕ್ಷಕ್ಕೆ ಸ್ವಾಗತಿಸಿದ ಹಿನ್ನೆಲೆಯಲ್ಲಿ ಅಣ್ಣಾಮಲೈ ಹೇಳಿಕೆಗಳು ಹೊರಬಿದ್ದಿವೆ. ಈ ಬೆಳವಣಿಗೆಗೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಮೈತ್ರಿ ಪಾಲುದಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಮೈತ್ರಿ ಕುರಿತು ಅಣ್ಣಾಮಲೈ ನೀಡಿರುವ ಹೇಳಿಕೆಗಳನ್ನು ಎರಡನೇ ಹಂತದ ಎಐಎಡಿಎಂಕೆ ನಾಯಕರು ಸ್ವಾಗತಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ನೈನಾರ್ ನಾಗೇಂದ್ರನ್ ಪ್ರತಿಕ್ರಿಯಿಸಿ, “ಇದು ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ ಜಯಕುಮಾರ್ ಅವರು ಪ್ರತಿಕ್ರಿಯಿಸಿ, “ಆಂತರಿಕ ಸಭೆಯಲ್ಲಿ ಆಡಿದ ಮಾತುಗಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆದರೆ ರಾಜ್ಯದಲ್ಲಿ ತಮ್ಮ ಪಕ್ಷವು ಮೈತ್ರಿಕೂಟದ ನಾಯಕತ್ವ ವಹಿಸಲಿದ” ಎಂದು ಸ್ಪಷ್ಟಪಡಿಸಿದ್ದಾರೆ.

ಎಐಎಡಿಎಂಕೆ ಮತ್ತು ಬಿಜೆಪಿಯ ಮೈತ್ರಿ 2024 ರ ಲೋಕಸಭೆ ಚುನಾವಣೆಗೂ ಮುಂದುವರಿಯುತ್ತದೆ ಎಂದು ಹೇಳಲಾಗುತ್ತಿರುವುದರಿಂದ ಅಣ್ಣಾಮಲೈ ಅವರ ನಿಲುವು ಮಹತ್ವ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....