Homeಮುಖಪುಟಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

ಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

- Advertisement -
- Advertisement -

“ಎಐಎಡಿಎಂಕೆ ಪಕ್ಷದ ಜೊತೆಯಲ್ಲಿ ಮೈತ್ರಿ ಮುಂದುವರಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತಾ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಅವರು, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು” ಎಂದು ಆಶಿಸಿದ್ದಾರೆ.

ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ. “ಕೇಂದ್ರ ನಾಯಕತ್ವವು ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಲು ನಿರ್ಧರಿಸಿದರೆ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಅವರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಣ್ಣಾಮಲೈ ಹೇಳಿಕೆಗಳು ಕೋಲಾಹಲವನ್ನು ಸೃಷ್ಟಿಸಿದ್ದು, ಸಭೆಯಲ್ಲಿದ್ದ ಕನಿಷ್ಠ ಇಬ್ಬರು ನಾಯಕರು ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. “ರಾಜ್ಯ ಘಟಕದ ಸಭೆಯಲ್ಲಿ ಮೈತ್ರಿ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಅಂತಹ ನಿರ್ಧಾರಗಳನ್ನು ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ” ಎಂದು ಹರಿಹಾಯ್ದಿದ್ದಾರೆ.

ದ್ರಾವಿಡ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ಅಣ್ಣಾಮಲೈ ವಿರೋಧಿಸಿರುವ ಕುರಿತು ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ, ಕೊಯಮತ್ತೂರು (ದಕ್ಷಿಣ) ಶಾಸಕಿ ವನತಿ ಶ್ರೀನಿವಾಸನ್ ಮತ್ತು ಉಪಾಧ್ಯಕ್ಷ ನಾರಾಯಣನ್ ತಿರುಪತಿ ಒತ್ತಾಯಿಸಿರುವಾಗಿ ಮೂಲಗಳು ಹೇಳಿವೆ.

ಆದರೆ ಅಣ್ಣಾಮಲೈ ಅವರ ಮಾತುಗಳಿಗೆ ಇತರ ಕಾರ್ಯಕರ್ತರಿಂದ ಬೆಂಬಲ ದೊರೆತಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಸ್ವಂತ ಬಲದಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಅಣ್ಣಾಮಲೈ ಬೆಂಬಲಿಗರು ಆಶಿಸಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್‌’ (ಡಿಎಚ್‌) ವರದಿ ಮಾಡಿದೆ.

ಬಿಜೆಪಿ ಸ್ವತಂತ್ರ ಪಕ್ಷವಾಗಿ ಹೊರಹೊಮ್ಮಬೇಕಾದರೆ ಸ್ವಂತ ಬಲದಲ್ಲಿ ಚುನಾವಣೆ ಎದುರಿಸಬೇಕು ಎಂಬುದು ಅಣ್ಣಾಮಲೈ ಅವರ ಉದ್ದೇಶವಾಗಿತ್ತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು ತಿಳಿಸಿರುವುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

“ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿದಾಗ ಮಾತ್ರ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಉತ್ತಮ ಆಡಳಿತದ ಬಗೆಗಿನ ನಮ್ಮ ನಿಲುವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಅಣ್ಣಾಮಲೈ ಹೇಳಿದರು. ಪಕ್ಷವನ್ನು ಕಟ್ಟುವಾಗ ತೊಂದರೆಗಳು ಎದುರಾಗುತ್ತವೆ; ಕೆಲವು ವರ್ಷಗಳ ಕಾಲ ಎಲ್ಲರೂ ಅಸಾಧಾರಣ ನೋವನ್ನು ಅನುಭವಿಸಬೇಕಾಗುತ್ತದೆ ಎಂಬುದು ರಾಜ್ಯಾಧ್ಯಕ್ಷರ ನಿಲುವಾಗಿದೆ” ಎಂದು ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ನಾಯಕತ್ವವು ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದರೆ ರಾಜ್ಯ ಮುಖ್ಯಸ್ಥ ಸ್ಥಾನವನ್ನು ತ್ಯಜಿಸುತ್ತೇನೆ, ಪಕ್ಷಕ್ಕಾಗಿ ‘ಸಾಮಾನ್ಯ ಕೇಡರ್’ ಆಗಿ ಕೆಲಸ ಮಾಡುತ್ತೇನೆಂದು ಅಣ್ಣಾಮಲೈ ಸಭೆಯಲ್ಲಿ ಸ್ಪಷ್ಟಪಡಿಸಿದರು ಎಂದು ಮತ್ತೊಬ್ಬ ಮುಖಂಡರು ತಿಳಿಸಿದ್ದಾರೆ.

“ನಾಯಕತ್ವ ವಹಿಸಿದ್ದೇನೆ. ತಮಿಳುನಾಡಿನಲ್ಲಿ ಬದಲಾವಣೆಯನ್ನು ತರಲು ನಾನು ರಾಜಕೀಯ ಬಂದಿದ್ದೇನೆ ಹೊರತು, ಎಐಎಡಿಎಂಕೆ ಜೊತೆ ಸೇರಿಕೊಂಡು ಎರಡನೇ ಪಿಟೀಲು ನುಡಿಸಲು ಅಲ್ಲ” ಎಂದು ಅಣ್ಣಾ ಮಲೈ ಹೇಳಿರುವುದಾಗಿ ಮುಖಂಡರು ಮಾಹಿತಿ ನೀಡಿದ್ದಾರೆ.

ಮೈತ್ರಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಪಾಯಿಂಟ್‌ಮೆಂಟ್ ಕೇಳಿರುವುದಾಗಿ ಅಣ್ಣಾಮಲೈ ಅವರು ಸಭೆಯಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿರಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಅಣ್ಣಾಮಲೈ ಅವರನ್ನು ಟೀಕಿಸಿ ಬಿಜೆಪಿ ತೊರೆದ ಸಿಟಿಆರ್ ನಿರ್ಮಲ್ ಕುಮಾರ್ ಅವರನ್ನು ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿಯವರು ತಮ್ಮ ಪಕ್ಷಕ್ಕೆ ಸ್ವಾಗತಿಸಿದ ಹಿನ್ನೆಲೆಯಲ್ಲಿ ಅಣ್ಣಾಮಲೈ ಹೇಳಿಕೆಗಳು ಹೊರಬಿದ್ದಿವೆ. ಈ ಬೆಳವಣಿಗೆಗೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಮೈತ್ರಿ ಪಾಲುದಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಮೈತ್ರಿ ಕುರಿತು ಅಣ್ಣಾಮಲೈ ನೀಡಿರುವ ಹೇಳಿಕೆಗಳನ್ನು ಎರಡನೇ ಹಂತದ ಎಐಎಡಿಎಂಕೆ ನಾಯಕರು ಸ್ವಾಗತಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ನೈನಾರ್ ನಾಗೇಂದ್ರನ್ ಪ್ರತಿಕ್ರಿಯಿಸಿ, “ಇದು ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ ಜಯಕುಮಾರ್ ಅವರು ಪ್ರತಿಕ್ರಿಯಿಸಿ, “ಆಂತರಿಕ ಸಭೆಯಲ್ಲಿ ಆಡಿದ ಮಾತುಗಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆದರೆ ರಾಜ್ಯದಲ್ಲಿ ತಮ್ಮ ಪಕ್ಷವು ಮೈತ್ರಿಕೂಟದ ನಾಯಕತ್ವ ವಹಿಸಲಿದ” ಎಂದು ಸ್ಪಷ್ಟಪಡಿಸಿದ್ದಾರೆ.

ಎಐಎಡಿಎಂಕೆ ಮತ್ತು ಬಿಜೆಪಿಯ ಮೈತ್ರಿ 2024 ರ ಲೋಕಸಭೆ ಚುನಾವಣೆಗೂ ಮುಂದುವರಿಯುತ್ತದೆ ಎಂದು ಹೇಳಲಾಗುತ್ತಿರುವುದರಿಂದ ಅಣ್ಣಾಮಲೈ ಅವರ ನಿಲುವು ಮಹತ್ವ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...