Homeಮುಖಪುಟ'ಭಾರತ್ ಮಾತಾ ಕಿ ಜೈ’ ಘೋಷಣೆ ಮೊದಲು ಕೂಗಿದ್ದು ಮುಸ್ಲಿಮರು ಎಂದು ಸಂಘಪರಿವಾರಕ್ಕೆ ಗೊತ್ತಿಲ್ಲದಂತಿದೆ: ಸಿಎಂ...

‘ಭಾರತ್ ಮಾತಾ ಕಿ ಜೈ’ ಘೋಷಣೆ ಮೊದಲು ಕೂಗಿದ್ದು ಮುಸ್ಲಿಮರು ಎಂದು ಸಂಘಪರಿವಾರಕ್ಕೆ ಗೊತ್ತಿಲ್ಲದಂತಿದೆ: ಸಿಎಂ ಪಿಣರಾಯ್‌ ವಿಜಯನ್

- Advertisement -
- Advertisement -

‘ಭಾರತ್ ಮಾತಾ ಕಿ ಜೈ’ ಮತ್ತು ‘ಜೈ ಹಿಂದ್’ ಘೋಷಣೆಗಳನ್ನು ಮೊದಲು ಇಬ್ಬರು ಮುಸ್ಲಿಮರು ಕೂಗಿದ್ದು, ಸಂಘ ಪರಿವಾರವು ಅವರನ್ನು ಕೈಬಿಡಲು ಸಿದ್ಧವಾಗಿದೆಯೇ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ.

ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಸಿಪಿಐ(ಎಂ) ರಾಜ್ಯದಲ್ಲಿ ಆಯೋಜಿಸಿದ್ದ  ನಾಲ್ಕನೇ ರ್ಯಾಲಿಯನ್ನು ಉದ್ದೇಶಿಸಿ ಮುಸ್ಲಿಂ ಪ್ರಾಬಲ್ಯದ ಉತ್ತರ ಕೇರಳ ಜಿಲ್ಲೆಯಲ್ಲಿ ಮಾತನಾಡಿದ ಪಿಣರಾಯ್‌ ವಿಜಯನ್‌, ಮುಸ್ಲಿಂ ಆಡಳಿತಗಾರರು ಮತ್ತು ಸಾಂಸ್ಕೃತಿಕ ಪ್ರತಿಭೆಗಳು ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಅಜೀಮುಲ್ಲಾ ಖಾನ್ ಎಂಬ ಮುಸ್ಲಿಂ ವ್ಯಕ್ತಿ ‘ಭಾರತ್ ಮಾತಾ ಕಿ ಜೈ’ ಘೋಷಣೆಯನ್ನು ಮೊದಲು ಕೂಗಿದ್ದಾರೆ. ಇಲ್ಲಿಗೆ ಬಂದ ಕೆಲವು ಸಂಘಪರಿವಾರದ ಮುಖಂಡರು ತಮ್ಮ ಮುಂದೆ ಕುಳಿತವರಿಗೆ ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗುವಂತೆ ಹೇಳಿದ್ದಾರೆ. ಘೋಷಣೆಯನ್ನು ರೂಪಿಸಿದವರು ಯಾರು? ಅವರ ಹೆಸರು ಅಜೀಮುಲ್ಲಾ ಖಾನ್ ಎಂಬುವುದು ಸಂಘಪರಿವಾರಕ್ಕೆ ಗೊತ್ತಿದೆಯೋ ಇಲ್ಲವೋ ಗೊತ್ತಿಲ್ಲ ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಈ ಘೋಷಣೆಯನ್ನು ರೂಪಿಸಿದವರು ಮುಸ್ಲಿಮರು ಎಂದು ಗೊತ್ತಾದರೆ ಅವರು ಆ ಘೋಷಣೆಯನ್ನು ಬಳಸುವುದನ್ನು ನಿಲ್ಲಿಸುತ್ತಾರೆಯೇ ಎಂದು ನನಗೆ ತಿಳಿದಿಲ್ಲ. ‘ಜೈ ಹಿಂದ್’ ಘೋಷಣೆಯನ್ನು ಮೊದಲು ಘೋಷಿಸಿದವರು ಅಬಿದ್ ಹಸನ್ ಎಂಬವರಾಗಿದ್ದಾರೆ. ಮೊಘಲ್ ಚಕ್ರವರ್ತಿ ಷಹಜಹಾನ್ ಅವರ ಮಗ ದಾರಾ ಶಿಕೋ ಅವರು ಮಾಡಿದ ಮೂಲ ಸಂಸ್ಕೃತ ಪಠ್ಯದಿಂದ ಪರ್ಷಿಯನ್ ಭಾಷೆಗೆ 50ಕ್ಕೂ ಹೆಚ್ಚು ಉಪನಿಷತ್ತುಗಳ ಅನುವಾದಗಳು ಭಾರತೀಯ ಪಠ್ಯಗಳು ಪ್ರಪಂಚದಾದ್ಯಂತ ತಲುಪಲು ಸಹಾಯ ಮಾಡಿದೆ ಎಂದು ಪಿಣರಾಯ್‌ ವಿಜಯನ್ ಹೇಳಿದ್ದಾರೆ.

ಭಾರತದಿಂದ ಪಾಕಿಸ್ತಾನಕ್ಕೆ ಮುಸ್ಲಿಮರನ್ನು ಕಳುಹಿಸಬೇಕು ಎಂದು ಪ್ರತಿಪಾದಿಸುವ ಸಂಘಪರಿವಾರದ ನಾಯಕರು ಮತ್ತು ಕಾರ್ಯಕರ್ತರು ಈ ಐತಿಹಾಸಿಕ ಸಂದರ್ಭವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ ಸಿಎಂ ಪಿಣರಾಯ್‌ ವಿಜಯನ್‌, ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಇತರರೊಂದಿಗೆ ಮುಸ್ಲಿಮರೂ ಕೂಡ ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಅಲ್ಪಸಂಖ್ಯಾತರನ್ನು ರಕ್ಷಿಸುವವರಿಗೆ ಮತ ನೀಡಿ’: ಸಿರೊ ಮಲಬಾರ್ ಚರ್ಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...