HomeUncategorizedಅದಾನಿ ಅಕ್ರಮ: ಮೋದಿಗಾಗಿ ನಿದ್ರೆಗೆ ಜಾರಿರುವ SEBI ಈಗಲಾದರೂ ಎಚ್ಚರಗೊಳ್ಳುವುದೇ?; ಜೈರಾಮ್ ರಮೇಶ್

ಅದಾನಿ ಅಕ್ರಮ: ಮೋದಿಗಾಗಿ ನಿದ್ರೆಗೆ ಜಾರಿರುವ SEBI ಈಗಲಾದರೂ ಎಚ್ಚರಗೊಳ್ಳುವುದೇ?; ಜೈರಾಮ್ ರಮೇಶ್

- Advertisement -
- Advertisement -

”ಅದಾನಿ ಗ್ರೂಪ್‌ನ ಘಟಕಗಳ ವಿರುದ್ಧ ಮತ್ತೆ ಅಕ್ರಮ ಹಣ ವರ್ಗಾವಣೆಯ ಆರೋಪಗಳು ಕೇಳಿಬರುತ್ತಿದ್ದು, ಈ ವಿಚಾರದಲ್ಲಿ ಕ್ರಮ ಕೈಗೊಳ್ಳದ ಸೆಬಿಯ ಕ್ರಮವನ್ನು ಕಾಂಗ್ರೆಸ್ ಶನಿವಾರ ಪ್ರಶ್ನಿಸಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸುವಂತೆ ಕರೆ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಅದಾನಿ ಗ್ರೂಪ್ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಆರೋಪಗಳ ಸುತ್ತ ಮತ್ತಷ್ಟು ದುರ್ನಾತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಮಾರಿಷಸ್ ಹಣಕಾಸು ನಿಯಂತ್ರಕವು ಅದಾನಿ ಗ್ರೂಪ್‌ನ ಎರಡು ಘಟಕಗಳ ಪರವಾನಗಿಯನ್ನು ರದ್ದುಗೊಳಿಸಿರುವುದರಿಂದ ಈಗ ಸೆಬಿ ಕಾರ್ಯನಿರ್ವಹಿಸುತ್ತದೆಯೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬಂಡವಾಳ ಮಾರುಕಟ್ಟೆಗಳ ನ್ಯಾಯಯುತ ನಿಯಂತ್ರಕರಾಗಿ ವಿಶ್ವಾಸವನ್ನು ಹೆಚ್ಚಿಸಲು ಸೆಬಿ ಏಕೆ ವಿಫಲವಾಗಿದೆ? ಎಂದು ಕೇಳಿದರು.

ಹಣಕಾಸು ಸೇವಾ ಕಾಯ್ದೆ, ಸೆಕ್ಯುರಿಟೀಸ್ ಆಕ್ಟ್, ಫೈನಾನ್ಷಿಯಲ್ ಇಂಟೆಲಿಜೆನ್ಸ್ ಸೇರಿದಂತೆ ಹಲವು ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸೆಬಿಗೆ ಸಮಾನವಾದ ಮಾರಿಷಸ್‌ನ ಹಣಕಾಸು ಸೇವಾ ಆಯೋಗವು (ಎಫ್‌ಎಸ್‌ಸಿ) ಮೇ 2022 ರಲ್ಲಿ ಅದಾನಿ-ಗ್ರೂಪ್‌ನ ಷೇರುದಾರರ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ರಮೇಶ್ ಹೇಳಿದರು. Anti-Money Laundering ನಿಯಮಗಳು (2003 ಮತ್ತು 2018), ಮತ್ತು ಮನಿ ಲಾಂಡರಿಂಗ್ ಮತ್ತು ಭಯೋತ್ಪಾದಕ ಹಣಕಾಸು ತಡೆಗಟ್ಟುವಿಕೆಯ ಸಂಹಿತೆಯಡಿ ಅದಾನಿ-ಗ್ರೂಪ್‌ನ ಷೇರುದಾರರ ಪರವಾನಗಿಯನ್ನು ಎಫ್‌ಎಸ್‌ಸಿ ರದ್ದುಗೊಳಿಸಿದೆ.

”ಮಾರಿಷಸ್ ನಿಯಂತ್ರಕರು ಶಂಕಿತ ಅದಾನಿ-ಸಂಬಂಧಿತ ಘಟಕಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೆ ಸೆಬಿ ಅಸಹಾಯಕತೆಯನ್ನು ಪ್ರತಿಪಾದಿಸುತ್ತಿದೆ” ಎಂದು ಹೇಳಿದರು.

”ಎಮರ್ಜಿಂಗ್ ಇಂಡಿಯಾ ಫಂಡ್ ಮ್ಯಾನೇಜ್‌ಮೆಂಟ್, ಈ ಗಂಭೀರ ಕಾರಣಗಳ ಮೇಲೆ ಪರವಾನಗಿಯನ್ನು ರದ್ದುಗೊಳಿಸಿದೆ. ವಿನೋದ್ ಅದಾನಿ ಸಹವರ್ತಿಗಳಾದ ನಾಸರ್ ಅಲಿ ಶಾಬನ್ ಅಹ್ಲಿ ಮತ್ತು ಚಾಂಗ್ ಚುಂಗ್-ಲಿಂಗ್‌ಗೆ ಮಾರ್ಗಗಳಾಗಿದ್ದ ಎರಡು ಘಟಕಗಳ ಷೇರುಗಳನ್ನು ನಿಯಂತ್ರಿಸಿದೆ. ಅಹ್ಲಿ ಮತ್ತು ಚಾಂಗ್ ಈ ನಿಧಿಗಳ ಮೂಲಕ ಅದಾನಿ ಕಂಪನಿಗಳಿಗೆ ಸಂಶಯಾಸ್ಪದ ಹೂಡಿಕೆಗಳನ್ನು ಮಾಡಿದ್ದರು.

”ಮೋದಿಗಾಗಿ ನಿದ್ರೆಗೆ ಜಾರಿರುವ ಸೆಬಿ ಈಗಲಾದರೂ ಎಚ್ಚರಗೊಳ್ಳುವುದೇ?” ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸಂಸತ್ತಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಮತ್ತು ಈ ಪ್ರಕರಣದ ತನಿಖೆಗಾಗಿ ಜೆಪಿಸಿಯನ್ನು ಸ್ಥಾಪಿಸಬೇಕು. ಇಲ್ಲವಾದರೆ ಅದಾನಿಯ ಬೃಹತ್ ಭ್ರಷ್ಟಾಚಾರದ ವಿರುದ್ಧ ಕ್ರಮ ಸಾಧ್ಯವಾಗುವುದಿಲ್ಲ ಎಂಬುದಕ್ಕೆ ಇದು ಹೆಚ್ಚು ಸಾಕ್ಷಿಯಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...