Homeಮುಖಪುಟಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

- Advertisement -
- Advertisement -

ಬಿಜೆಪಿ ಪಕ್ಷವು ಇಡಿ ಮತ್ತು ಸಿಬಿಐಯನ್ನು ತನ್ನ ವಿಸ್ತೃತ ಇಲಾಖೆಯಾಗಿ ಪರಿವರ್ತಿಸಿ ವಿರೋಧ ಪಕ್ಷದ ನಾಯಕರ ಮೇಲೆ ದಬ್ಬಾಳಿಕೆಗೆ ಬಳಕೆ ಮಾಡುತ್ತಿದೆ, ನಾವು ಬಿಜೆಪಿಗೆ ನಿರ್ಗಮನ ದಾರಿಯನ್ನು ತೋರಿಸುತ್ತೇವೆ ಎಂದು ಜಾರ್ಖಾಂಡ್‌ನ ರಾಂಚಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪ್ರತಿಪಕ್ಷದ ನಾಯಕರು ಹೇಳಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆ ಇಂಡಿಯಾ ಮೈತ್ರಿ ಪಕ್ಷದ ನಾಯಕರು ಒಟ್ಟಾಗಿ ಶಕ್ತಿ ಪ್ರದರ್ಶನವನ್ನು ಮಾಡಿದ್ದಾರೆ. ಜಾರ್ಖಂಡ್‌ನ  ಪ್ರಭಾತ್ ತಾರಾ ಮೈದಾನದಲ್ಲಿ ನಡೆದ ‘ಉಲ್ಗುಲನ್ ನ್ಯಾಯ್ ರ್ಯಾಲಿ’ಯಲ್ಲಿ ಒಟ್ಟು 28 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ.

ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಳಿ ಭ್ರಷ್ಟಾಚಾರವನ್ನು ತಕ್ಷಣವೇ ಸ್ವಚ್ಛಗೊಳಿಸುವ ವಾಷಿಂಗ್ ಪೌಡರ್ ಇದೆ. ಯಾವುದೇ ಭ್ರಷ್ಟರನ್ನು ಬಿಡುವುದಿಲ್ಲ ಎಂದು ಮೋದಿ ಹೇಳುತ್ತಾರೆ. ಇದು ಮೋದಿಯವರ ಗ್ಯಾರಂಟಿ. ಎಲ್ಲ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರೆ ಅದು ಅವರ ಗ್ಯಾರಂಟಿ. ಇಂದು ಎಲ್ಲಾ ಭ್ರಷ್ಟ ನಾಯಕರು ಬಿಜೆಪಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾತನಾಡಿ, ಕಳೆದ 10 ವರ್ಷಗಳಲ್ಲಿ ದೇಶವನ್ನು ನಾಶಪಡಿಸಿದ ಬಿಜೆಪಿಯನ್ನು ತೊಡೆದುಹಾಕಲು ಈ ಉಲಗುಲನ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ಐಟಿ ಬಿಜೆಪಿಯ ವಿಸ್ತೃತ ಇಲಾಖೆಗಳಾಗಿದ್ದು, ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಹತ್ತಿಕ್ಕಲು ಅವುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಶಿವಸೇನೆಯ ನಾಯಕಿ (ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ದೇಶದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿ ಮತವನ್ನು ಬಳಸಬೇಕು ಎಂದು ಟಿಎಂಸಿ ನಾಯಕ ವಿವೇಕ್ ಗುಪ್ತಾ ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ಜಾರ್ಖಂಡ್ ಹೆಸರನ್ನು ‘ವನಂಚಲ್’ ಎಂದು ಬದಲಾಯಿಸಲು ಬಯಸಿವೆ ಎಂದು ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಾತನಾಡಿ, ಬಿಜೆಪಿ ವಾಸ್ತವವಾಗಿ ‘ಭಾರತೀಯ ಜುಮ್ಲಾ ಪಕ್ಷ’ ಮತ್ತು ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಸರಿ ಪಕ್ಷವನ್ನು ಅಳಿಸಿಹಾಕಲು ಸಮರ್ಥ ನಾಯಕರು. ಐ.ಎನ್.ಡಿ.ಐ.ಎ. ಮೈತ್ರಿ ಕೂಟವು ಏಪ್ರಿಲ್ 19ರಂದು ಮುಕ್ತಾಯಗೊಂಡ ಮೊದಲ ಹಂತದ ಚುನಾವಣೆಯಲ್ಲಿ 80 ರಿಂದ 90 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದ್ದಾರೆ.

ಹೇಮಂತ್‌ ಸೊರೆನ್‌ ಸಂದೇಶ ಓದಿದ ಪತ್ನಿ:

ಬಿಜೆಪಿಯು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಆದರೆ ಪ್ರಜಾಪ್ರಭುತ್ವವನ್ನು ವಿಫಲಗೊಳಿಸಲು ಬಿಡಲಾಗುವುದಿಲ್ಲ ಎಂದು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲಿನಿಂದ ನೀಡಿದ ಸಂದೇಶವನ್ನು ರ್ಯಾಲಿಯಲ್ಲಿ ಅವರ ಪತ್ನಿ ಕಲ್ಪನಾ ಓದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ನನ್ನ ಪತಿ ಹೇಮಂತ್ ಸೋರೆನ್ ಅವರನ್ನು ಚುನಾವಣೆಗೆ ಕೆಲವೇ ತಿಂಗಳ ಮುನ್ನ ಬಂಧಿಸಲಾಗಿದೆ. ಇದು ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದ ಶಕ್ತಿಗಳಿಂದ ನಡೆದ ಪಿತೂರಿ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಆದರೆ ಬಿಜೆಪಿ ಮತ್ತು ಅಂತಹ ಶಕ್ತಿಗಳನ್ನು ಜಾರ್ಖಂಡ್‌ನಿಂದ ಓಡಿಸಲಾಗುವುದು ಎಂದು ಅವರು ಪತಿಯ ಸಂದೇಶವನ್ನು ಓದಿದ್ದಾರೆ. ಬಿಜೆಪಿಗೆ “ನಿರ್ಗಮನ ಬಾಗಿಲು” ತೋರಿಸಲು ಜನರನ್ನು ಒತ್ತಾಯಿಸಿದ ಕಲ್ಪನಾ, ಈ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಅದು ಆದಿವಾಸಿಗಳಿಗೆ “ದೊಡ್ಡ ಅಪಾಯ” ಎದುರಾಗಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...