Homeಮುಖಪುಟಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

- Advertisement -
- Advertisement -

ಬಿಜೆಪಿ ಪಕ್ಷವು ಇಡಿ ಮತ್ತು ಸಿಬಿಐಯನ್ನು ತನ್ನ ವಿಸ್ತೃತ ಇಲಾಖೆಯಾಗಿ ಪರಿವರ್ತಿಸಿ ವಿರೋಧ ಪಕ್ಷದ ನಾಯಕರ ಮೇಲೆ ದಬ್ಬಾಳಿಕೆಗೆ ಬಳಕೆ ಮಾಡುತ್ತಿದೆ, ನಾವು ಬಿಜೆಪಿಗೆ ನಿರ್ಗಮನ ದಾರಿಯನ್ನು ತೋರಿಸುತ್ತೇವೆ ಎಂದು ಜಾರ್ಖಾಂಡ್‌ನ ರಾಂಚಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪ್ರತಿಪಕ್ಷದ ನಾಯಕರು ಹೇಳಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆ ಇಂಡಿಯಾ ಮೈತ್ರಿ ಪಕ್ಷದ ನಾಯಕರು ಒಟ್ಟಾಗಿ ಶಕ್ತಿ ಪ್ರದರ್ಶನವನ್ನು ಮಾಡಿದ್ದಾರೆ. ಜಾರ್ಖಂಡ್‌ನ  ಪ್ರಭಾತ್ ತಾರಾ ಮೈದಾನದಲ್ಲಿ ನಡೆದ ‘ಉಲ್ಗುಲನ್ ನ್ಯಾಯ್ ರ್ಯಾಲಿ’ಯಲ್ಲಿ ಒಟ್ಟು 28 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ.

ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಳಿ ಭ್ರಷ್ಟಾಚಾರವನ್ನು ತಕ್ಷಣವೇ ಸ್ವಚ್ಛಗೊಳಿಸುವ ವಾಷಿಂಗ್ ಪೌಡರ್ ಇದೆ. ಯಾವುದೇ ಭ್ರಷ್ಟರನ್ನು ಬಿಡುವುದಿಲ್ಲ ಎಂದು ಮೋದಿ ಹೇಳುತ್ತಾರೆ. ಇದು ಮೋದಿಯವರ ಗ್ಯಾರಂಟಿ. ಎಲ್ಲ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರೆ ಅದು ಅವರ ಗ್ಯಾರಂಟಿ. ಇಂದು ಎಲ್ಲಾ ಭ್ರಷ್ಟ ನಾಯಕರು ಬಿಜೆಪಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾತನಾಡಿ, ಕಳೆದ 10 ವರ್ಷಗಳಲ್ಲಿ ದೇಶವನ್ನು ನಾಶಪಡಿಸಿದ ಬಿಜೆಪಿಯನ್ನು ತೊಡೆದುಹಾಕಲು ಈ ಉಲಗುಲನ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ಐಟಿ ಬಿಜೆಪಿಯ ವಿಸ್ತೃತ ಇಲಾಖೆಗಳಾಗಿದ್ದು, ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಹತ್ತಿಕ್ಕಲು ಅವುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಶಿವಸೇನೆಯ ನಾಯಕಿ (ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ದೇಶದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿ ಮತವನ್ನು ಬಳಸಬೇಕು ಎಂದು ಟಿಎಂಸಿ ನಾಯಕ ವಿವೇಕ್ ಗುಪ್ತಾ ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ಜಾರ್ಖಂಡ್ ಹೆಸರನ್ನು ‘ವನಂಚಲ್’ ಎಂದು ಬದಲಾಯಿಸಲು ಬಯಸಿವೆ ಎಂದು ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಾತನಾಡಿ, ಬಿಜೆಪಿ ವಾಸ್ತವವಾಗಿ ‘ಭಾರತೀಯ ಜುಮ್ಲಾ ಪಕ್ಷ’ ಮತ್ತು ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಸರಿ ಪಕ್ಷವನ್ನು ಅಳಿಸಿಹಾಕಲು ಸಮರ್ಥ ನಾಯಕರು. ಐ.ಎನ್.ಡಿ.ಐ.ಎ. ಮೈತ್ರಿ ಕೂಟವು ಏಪ್ರಿಲ್ 19ರಂದು ಮುಕ್ತಾಯಗೊಂಡ ಮೊದಲ ಹಂತದ ಚುನಾವಣೆಯಲ್ಲಿ 80 ರಿಂದ 90 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದ್ದಾರೆ.

ಹೇಮಂತ್‌ ಸೊರೆನ್‌ ಸಂದೇಶ ಓದಿದ ಪತ್ನಿ:

ಬಿಜೆಪಿಯು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಆದರೆ ಪ್ರಜಾಪ್ರಭುತ್ವವನ್ನು ವಿಫಲಗೊಳಿಸಲು ಬಿಡಲಾಗುವುದಿಲ್ಲ ಎಂದು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲಿನಿಂದ ನೀಡಿದ ಸಂದೇಶವನ್ನು ರ್ಯಾಲಿಯಲ್ಲಿ ಅವರ ಪತ್ನಿ ಕಲ್ಪನಾ ಓದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ನನ್ನ ಪತಿ ಹೇಮಂತ್ ಸೋರೆನ್ ಅವರನ್ನು ಚುನಾವಣೆಗೆ ಕೆಲವೇ ತಿಂಗಳ ಮುನ್ನ ಬಂಧಿಸಲಾಗಿದೆ. ಇದು ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದ ಶಕ್ತಿಗಳಿಂದ ನಡೆದ ಪಿತೂರಿ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಆದರೆ ಬಿಜೆಪಿ ಮತ್ತು ಅಂತಹ ಶಕ್ತಿಗಳನ್ನು ಜಾರ್ಖಂಡ್‌ನಿಂದ ಓಡಿಸಲಾಗುವುದು ಎಂದು ಅವರು ಪತಿಯ ಸಂದೇಶವನ್ನು ಓದಿದ್ದಾರೆ. ಬಿಜೆಪಿಗೆ “ನಿರ್ಗಮನ ಬಾಗಿಲು” ತೋರಿಸಲು ಜನರನ್ನು ಒತ್ತಾಯಿಸಿದ ಕಲ್ಪನಾ, ಈ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಅದು ಆದಿವಾಸಿಗಳಿಗೆ “ದೊಡ್ಡ ಅಪಾಯ” ಎದುರಾಗಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...