Homeಮುಖಪುಟಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

- Advertisement -
- Advertisement -

ಬಿಜೆಪಿ ಪಕ್ಷವು ಇಡಿ ಮತ್ತು ಸಿಬಿಐಯನ್ನು ತನ್ನ ವಿಸ್ತೃತ ಇಲಾಖೆಯಾಗಿ ಪರಿವರ್ತಿಸಿ ವಿರೋಧ ಪಕ್ಷದ ನಾಯಕರ ಮೇಲೆ ದಬ್ಬಾಳಿಕೆಗೆ ಬಳಕೆ ಮಾಡುತ್ತಿದೆ, ನಾವು ಬಿಜೆಪಿಗೆ ನಿರ್ಗಮನ ದಾರಿಯನ್ನು ತೋರಿಸುತ್ತೇವೆ ಎಂದು ಜಾರ್ಖಾಂಡ್‌ನ ರಾಂಚಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪ್ರತಿಪಕ್ಷದ ನಾಯಕರು ಹೇಳಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆ ಇಂಡಿಯಾ ಮೈತ್ರಿ ಪಕ್ಷದ ನಾಯಕರು ಒಟ್ಟಾಗಿ ಶಕ್ತಿ ಪ್ರದರ್ಶನವನ್ನು ಮಾಡಿದ್ದಾರೆ. ಜಾರ್ಖಂಡ್‌ನ  ಪ್ರಭಾತ್ ತಾರಾ ಮೈದಾನದಲ್ಲಿ ನಡೆದ ‘ಉಲ್ಗುಲನ್ ನ್ಯಾಯ್ ರ್ಯಾಲಿ’ಯಲ್ಲಿ ಒಟ್ಟು 28 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ.

ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಳಿ ಭ್ರಷ್ಟಾಚಾರವನ್ನು ತಕ್ಷಣವೇ ಸ್ವಚ್ಛಗೊಳಿಸುವ ವಾಷಿಂಗ್ ಪೌಡರ್ ಇದೆ. ಯಾವುದೇ ಭ್ರಷ್ಟರನ್ನು ಬಿಡುವುದಿಲ್ಲ ಎಂದು ಮೋದಿ ಹೇಳುತ್ತಾರೆ. ಇದು ಮೋದಿಯವರ ಗ್ಯಾರಂಟಿ. ಎಲ್ಲ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರೆ ಅದು ಅವರ ಗ್ಯಾರಂಟಿ. ಇಂದು ಎಲ್ಲಾ ಭ್ರಷ್ಟ ನಾಯಕರು ಬಿಜೆಪಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾತನಾಡಿ, ಕಳೆದ 10 ವರ್ಷಗಳಲ್ಲಿ ದೇಶವನ್ನು ನಾಶಪಡಿಸಿದ ಬಿಜೆಪಿಯನ್ನು ತೊಡೆದುಹಾಕಲು ಈ ಉಲಗುಲನ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ಐಟಿ ಬಿಜೆಪಿಯ ವಿಸ್ತೃತ ಇಲಾಖೆಗಳಾಗಿದ್ದು, ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಹತ್ತಿಕ್ಕಲು ಅವುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಶಿವಸೇನೆಯ ನಾಯಕಿ (ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ದೇಶದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿ ಮತವನ್ನು ಬಳಸಬೇಕು ಎಂದು ಟಿಎಂಸಿ ನಾಯಕ ವಿವೇಕ್ ಗುಪ್ತಾ ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ಜಾರ್ಖಂಡ್ ಹೆಸರನ್ನು ‘ವನಂಚಲ್’ ಎಂದು ಬದಲಾಯಿಸಲು ಬಯಸಿವೆ ಎಂದು ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಾತನಾಡಿ, ಬಿಜೆಪಿ ವಾಸ್ತವವಾಗಿ ‘ಭಾರತೀಯ ಜುಮ್ಲಾ ಪಕ್ಷ’ ಮತ್ತು ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಸರಿ ಪಕ್ಷವನ್ನು ಅಳಿಸಿಹಾಕಲು ಸಮರ್ಥ ನಾಯಕರು. ಐ.ಎನ್.ಡಿ.ಐ.ಎ. ಮೈತ್ರಿ ಕೂಟವು ಏಪ್ರಿಲ್ 19ರಂದು ಮುಕ್ತಾಯಗೊಂಡ ಮೊದಲ ಹಂತದ ಚುನಾವಣೆಯಲ್ಲಿ 80 ರಿಂದ 90 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದ್ದಾರೆ.

ಹೇಮಂತ್‌ ಸೊರೆನ್‌ ಸಂದೇಶ ಓದಿದ ಪತ್ನಿ:

ಬಿಜೆಪಿಯು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಆದರೆ ಪ್ರಜಾಪ್ರಭುತ್ವವನ್ನು ವಿಫಲಗೊಳಿಸಲು ಬಿಡಲಾಗುವುದಿಲ್ಲ ಎಂದು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲಿನಿಂದ ನೀಡಿದ ಸಂದೇಶವನ್ನು ರ್ಯಾಲಿಯಲ್ಲಿ ಅವರ ಪತ್ನಿ ಕಲ್ಪನಾ ಓದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ನನ್ನ ಪತಿ ಹೇಮಂತ್ ಸೋರೆನ್ ಅವರನ್ನು ಚುನಾವಣೆಗೆ ಕೆಲವೇ ತಿಂಗಳ ಮುನ್ನ ಬಂಧಿಸಲಾಗಿದೆ. ಇದು ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದ ಶಕ್ತಿಗಳಿಂದ ನಡೆದ ಪಿತೂರಿ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಆದರೆ ಬಿಜೆಪಿ ಮತ್ತು ಅಂತಹ ಶಕ್ತಿಗಳನ್ನು ಜಾರ್ಖಂಡ್‌ನಿಂದ ಓಡಿಸಲಾಗುವುದು ಎಂದು ಅವರು ಪತಿಯ ಸಂದೇಶವನ್ನು ಓದಿದ್ದಾರೆ. ಬಿಜೆಪಿಗೆ “ನಿರ್ಗಮನ ಬಾಗಿಲು” ತೋರಿಸಲು ಜನರನ್ನು ಒತ್ತಾಯಿಸಿದ ಕಲ್ಪನಾ, ಈ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಅದು ಆದಿವಾಸಿಗಳಿಗೆ “ದೊಡ್ಡ ಅಪಾಯ” ಎದುರಾಗಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ: ಹೈಕೋರ್ಟ್‌ ಮೊರೆ ಹೋಗಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...