Homeಮುಖಪುಟಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

- Advertisement -
- Advertisement -

ಬಸವರಾಜ ಬೊಮ್ಮಾಯಿಯವರನ್ನು ನಾನು ಮಾಮ ಎಂದು ಚಿಕ್ಕ ವಯಸ್ಸಿನಿಂದ ಹಾಗೆ ಕರೆದು ಅಭ್ಯಾಸ ಆಗಿದೆ. ಇದರಲ್ಲಿ ನನ್ನ ನಿಲುವು, ರಾಜಕೀಯ ಇಲ್ಲ. ಚಿತ್ರರಂಗದಲ್ಲಿ ನನ್ನ ಕಷ್ಟದ ದಿನಗಳಲ್ಲಿ ಕೆಲವೇ ಕೆಲವರು ನನ್ನ ಜೊತೆ ನಿಂತಿದ್ದರು. ಅವರಲ್ಲಿ ಮಾಮ ಬಸವರಾಜ ಬೊಮ್ಮಾಯಿಯವರು ಒಬ್ಬರು. ನಾನು ಅವರ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಪತ್ರಿಕಾಗೋಷ್ಟಿಯಲ್ಲಿ ಇದ್ದೇನೆ ಎಂದು ಸುದೀಪ್ ಹೇಳಿದ್ದಾರೆ.

ನನಗೆ ಗಾಡ್‌ಫಾದರ್ ಯಾರೂ ಇರಲಿಲ್ಲ. ಆಗ ಮಾಮ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದರು. ಅವರು ನನಗೆ ಬೆಂಬಲ ಕೊಟ್ಟಿದ್ದರು. ಈಗ ನಾನು ನನ್ನ ಬೆಂಬಲವನ್ನು ಅವರಿಗೆ ನೀಡಲು ಬಂದಿದ್ದೇನೆ. ನನ್ನ ಕೆಲವು ಸ್ನೇಹಿತರುಗಳಿದ್ದಾರೆ. ಅವರ ಪರವಾಗಿ ನಿಲ್ಲುತ್ತೇನೆ ಎಂದು ಸುದೀಪ್ ಹೇಳಿದರು.

ನನಗೆ ಪಕ್ಷ ಕರೆದಿಲ್ಲ. ಬೊಮ್ಮಾಯಿ ಸರ್ ಕರೆದಿದ್ದಾರೆ. ಅವರ ಪರವಾಗಿ ಬಂದಿದ್ದೇನೆ ಎಂದು ಸುದೀಪ್ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಮಾಧ್ಯಮಗಳು ಮಾಡಿದ್ದ ಊಹೆ ಸತ್ಯವಾಗಿದೆ. ನಿಮಗೆ ಅಭಿನಂದನೆಗಳು. ಕಿಚ್ಚ ಸುದೀಪ್ ಅವರು ಇವತ್ತು ತಮ್ಮ ವಿಚಾರ ಮತ್ತು ನಿಲುವನ್ನು ಹಂಚಿಕೊಳ್ಳುತ್ತಾರೆ ಎಂದು ಮೊದಲು ಹೇಳಿದ್ದ ಬಸವರಾಜ ಬೊಮ್ಮಾಯಿಯವರು ಆನಂತರ ಅವರು ಯಾವುದೇ ಪಕ್ಷ ಸೇರಿಲ್ಲ. ನನಗೆ ಮೊದಲಿಂದಲೂ ಅವರೊಂದಿಗೆ ಸಂಬಂಧ ಇರುವುದರಿಂದ ಅವರೊಟ್ಟಿಗೆ ಮಾತನಾಡಿ ನಮ್ಮ ಪಕ್ಷ ಸೇರದಿದ್ದರೂ ನಿಮ್ಮ ಪ್ರಚಾರ ಅಗತ್ಯವಿದೆ ಎಂದು ಮನವಿ ಮಾಡಿದ್ದೆ. ಆಗ ಸುದೀಪ್ ರವರು ನಿಮಗೆ ಪ್ರಚಾರ ಮಾಡುತ್ತೇನೆ ಎಂದಿದ್ದರು. ಅದರರ್ಥ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಲವು ಶಕ್ತಿಗಳು ಸೇರಿದರೆ ಒಳ್ಳೆಯದಾಗುತ್ತದೆ ಎಂದರೆ ಮಾಡುತ್ತೇನೆ. ಅವರು ಪಕ್ಷಕ್ಕೆ ಮಾಡಿ ಅಂದರೆ ಅದಕ್ಕೂ ಮಾಡುತ್ತೇನೆ. ಆದರೆ ಇಡೀ ರಾಜ್ಯದಲ್ಲಿ ಮಾಡಲು ಆಗುವುದಿಲ್ಲ. ಎಷ್ಟೊಂದು ಎಸ್‌ಟಿ ಕ್ಷೇತ್ರಗಳು ಇವೆ, ಅಲ್ಲೆಲ್ಲ ಹೋಗಲು ಸಾಧ್ಯವಿಲ್ಲ ಎಂದು ಸುದೀಪ್ ಹೇಳಿದರು.

ಬಸವರಾಜ ಬೊಮ್ಮಾಯಿಯವರು ಯಾವುದೇ ಪಕ್ಷದಲ್ಲಿದ್ದರೂ ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು.

ಪ್ರಕಾಶ್‌ ರಾಜ್‌ರವರು ಸುದೀಪ್ ಮಾರಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂಬುದಕ್ಕೆ ಉತ್ತರಿಸಿದ ಅವರು, “ಪ್ರಕಾಶ್ ರಾಜ್‌ರವರು ಅದ್ಭುತ ಕಲಾವಿದರು. ಅವರೊಟ್ಟಿಗೆ ರನ್ನ ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಮುಂದೆ ಅವರೊಟ್ಟಿಗೆ ಯಾವ ಸಿನಿಮಾದಲ್ಲಿ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದೇನೆ” ಎಂದರು.

ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅನಿವಾರ್ಯಕ್ಕೆ ಚುನಾವಣೆಗೆ ನಿಲ್ಲುವುದಿಲ್ಲ. ಒಂದು ವೇಳೆ ಚುನಾವಣೆಗೆ ಸ್ಪರ್ಧಿಸುವುದಾದರೆ ಮೊದಲೇ ಘೋಷಿಸುತ್ತೇನೆ ಎಂದರು.

ಇದನ್ನೂ ಓದಿ; ಯಾವ ಪಕ್ಷದಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ನೇಹಿತರ ಪರ ಪ್ರಚಾರ ಮಾಡುತ್ತೇನೆ ಅಷ್ಟೇ: ಸುದೀಪ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...