Homeಮುಖಪುಟಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

- Advertisement -
- Advertisement -

ಬಸವರಾಜ ಬೊಮ್ಮಾಯಿಯವರನ್ನು ನಾನು ಮಾಮ ಎಂದು ಚಿಕ್ಕ ವಯಸ್ಸಿನಿಂದ ಹಾಗೆ ಕರೆದು ಅಭ್ಯಾಸ ಆಗಿದೆ. ಇದರಲ್ಲಿ ನನ್ನ ನಿಲುವು, ರಾಜಕೀಯ ಇಲ್ಲ. ಚಿತ್ರರಂಗದಲ್ಲಿ ನನ್ನ ಕಷ್ಟದ ದಿನಗಳಲ್ಲಿ ಕೆಲವೇ ಕೆಲವರು ನನ್ನ ಜೊತೆ ನಿಂತಿದ್ದರು. ಅವರಲ್ಲಿ ಮಾಮ ಬಸವರಾಜ ಬೊಮ್ಮಾಯಿಯವರು ಒಬ್ಬರು. ನಾನು ಅವರ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಪತ್ರಿಕಾಗೋಷ್ಟಿಯಲ್ಲಿ ಇದ್ದೇನೆ ಎಂದು ಸುದೀಪ್ ಹೇಳಿದ್ದಾರೆ.

ನನಗೆ ಗಾಡ್‌ಫಾದರ್ ಯಾರೂ ಇರಲಿಲ್ಲ. ಆಗ ಮಾಮ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದರು. ಅವರು ನನಗೆ ಬೆಂಬಲ ಕೊಟ್ಟಿದ್ದರು. ಈಗ ನಾನು ನನ್ನ ಬೆಂಬಲವನ್ನು ಅವರಿಗೆ ನೀಡಲು ಬಂದಿದ್ದೇನೆ. ನನ್ನ ಕೆಲವು ಸ್ನೇಹಿತರುಗಳಿದ್ದಾರೆ. ಅವರ ಪರವಾಗಿ ನಿಲ್ಲುತ್ತೇನೆ ಎಂದು ಸುದೀಪ್ ಹೇಳಿದರು.

ನನಗೆ ಪಕ್ಷ ಕರೆದಿಲ್ಲ. ಬೊಮ್ಮಾಯಿ ಸರ್ ಕರೆದಿದ್ದಾರೆ. ಅವರ ಪರವಾಗಿ ಬಂದಿದ್ದೇನೆ ಎಂದು ಸುದೀಪ್ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಮಾಧ್ಯಮಗಳು ಮಾಡಿದ್ದ ಊಹೆ ಸತ್ಯವಾಗಿದೆ. ನಿಮಗೆ ಅಭಿನಂದನೆಗಳು. ಕಿಚ್ಚ ಸುದೀಪ್ ಅವರು ಇವತ್ತು ತಮ್ಮ ವಿಚಾರ ಮತ್ತು ನಿಲುವನ್ನು ಹಂಚಿಕೊಳ್ಳುತ್ತಾರೆ ಎಂದು ಮೊದಲು ಹೇಳಿದ್ದ ಬಸವರಾಜ ಬೊಮ್ಮಾಯಿಯವರು ಆನಂತರ ಅವರು ಯಾವುದೇ ಪಕ್ಷ ಸೇರಿಲ್ಲ. ನನಗೆ ಮೊದಲಿಂದಲೂ ಅವರೊಂದಿಗೆ ಸಂಬಂಧ ಇರುವುದರಿಂದ ಅವರೊಟ್ಟಿಗೆ ಮಾತನಾಡಿ ನಮ್ಮ ಪಕ್ಷ ಸೇರದಿದ್ದರೂ ನಿಮ್ಮ ಪ್ರಚಾರ ಅಗತ್ಯವಿದೆ ಎಂದು ಮನವಿ ಮಾಡಿದ್ದೆ. ಆಗ ಸುದೀಪ್ ರವರು ನಿಮಗೆ ಪ್ರಚಾರ ಮಾಡುತ್ತೇನೆ ಎಂದಿದ್ದರು. ಅದರರ್ಥ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಲವು ಶಕ್ತಿಗಳು ಸೇರಿದರೆ ಒಳ್ಳೆಯದಾಗುತ್ತದೆ ಎಂದರೆ ಮಾಡುತ್ತೇನೆ. ಅವರು ಪಕ್ಷಕ್ಕೆ ಮಾಡಿ ಅಂದರೆ ಅದಕ್ಕೂ ಮಾಡುತ್ತೇನೆ. ಆದರೆ ಇಡೀ ರಾಜ್ಯದಲ್ಲಿ ಮಾಡಲು ಆಗುವುದಿಲ್ಲ. ಎಷ್ಟೊಂದು ಎಸ್‌ಟಿ ಕ್ಷೇತ್ರಗಳು ಇವೆ, ಅಲ್ಲೆಲ್ಲ ಹೋಗಲು ಸಾಧ್ಯವಿಲ್ಲ ಎಂದು ಸುದೀಪ್ ಹೇಳಿದರು.

ಬಸವರಾಜ ಬೊಮ್ಮಾಯಿಯವರು ಯಾವುದೇ ಪಕ್ಷದಲ್ಲಿದ್ದರೂ ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು.

ಪ್ರಕಾಶ್‌ ರಾಜ್‌ರವರು ಸುದೀಪ್ ಮಾರಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂಬುದಕ್ಕೆ ಉತ್ತರಿಸಿದ ಅವರು, “ಪ್ರಕಾಶ್ ರಾಜ್‌ರವರು ಅದ್ಭುತ ಕಲಾವಿದರು. ಅವರೊಟ್ಟಿಗೆ ರನ್ನ ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಮುಂದೆ ಅವರೊಟ್ಟಿಗೆ ಯಾವ ಸಿನಿಮಾದಲ್ಲಿ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದೇನೆ” ಎಂದರು.

ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅನಿವಾರ್ಯಕ್ಕೆ ಚುನಾವಣೆಗೆ ನಿಲ್ಲುವುದಿಲ್ಲ. ಒಂದು ವೇಳೆ ಚುನಾವಣೆಗೆ ಸ್ಪರ್ಧಿಸುವುದಾದರೆ ಮೊದಲೇ ಘೋಷಿಸುತ್ತೇನೆ ಎಂದರು.

ಇದನ್ನೂ ಓದಿ; ಯಾವ ಪಕ್ಷದಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ನೇಹಿತರ ಪರ ಪ್ರಚಾರ ಮಾಡುತ್ತೇನೆ ಅಷ್ಟೇ: ಸುದೀಪ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...