Homeಮುಖಪುಟಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಮೆಹಬೂಬಾ ಮುಫ್ತಿ ಅವರ ಬಂಧನದ ಅವಧಿಯನ್ನು ಪದೇ ಪದೇ ವಿಸ್ತರಣೆ ಮಾಡುವುದನ್ನು ಪ್ರಶ್ನಿಸಿ ಅವರ ಮಗಳು ಇಲ್ತಿಜಾ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್‌ ಕಾರ್ಪಸ್‌ ರಿಟ್‌ ಅರ್ಜಿ ಸಲ್ಲಿಸಿದ್ದರು. 

- Advertisement -
- Advertisement -

ಕಳೆದ ಒಂದು ವರ್ಷದಿಂದ ಗೃಹ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಮಂಗಳವಾರ (ಅ.13) ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಮುಫ್ತಿ ಅವರನ್ನು ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ (ಪಿಎಸ್‌ಎ) ಬಂಧಿಸಲಾಗಿತ್ತು.

ಬಂಧನದಿಂದ ಬಿಡುಗಡೆಯಾದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ, ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರದಿಂದ ಉಂಟಾದ ಅವಮಾನವನ್ನು ಕಾಶ್ಮೀರದ ನಾಯಕರು ಮತ್ತು ಜನರು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

“ಒಂದು ವರ್ಷದ ನಂತರ ನಾನು ಇಂದು ಬಿಡುಗಡೆಯಾಗಿದ್ದೇನೆ” ಎಂದು ಮುಫ್ತಿ ಬಿಡುಗಡೆಯಾದ ನಂತರ ಆಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. “ಬಂಧನದ ಸಮಯದಲ್ಲಿ, ಆಗಸ್ಟ್ 5 ರ ’ಕಪ್ಪು ದಿನ’ ನನ್ನನ್ನು ಗಾಯಗೊಳಿಸುತ್ತಲೇ ಇತ್ತು. ಜಮ್ಮು ಮತ್ತು ಕಾಶ್ಮೀರದ ಜನರು ಸಹ ಈ ರೀತಿಯ ತೊಂದರೆ ಅನುಭವಿಸಿದ್ದಾರೆ. ಆ ದಿನದ ಅವಮಾನವನ್ನು ನಮ್ಮಲ್ಲಿ ಯಾರೂ ಮರೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

’ಕೇಂದ್ರ ಸರ್ಕಾರ ನಮ್ಮಿಂದ ಪ್ರಜಾಪ್ರಭುತ್ವ ವಿರೋಧಿ ಮತ್ತು ಕಾನೂನುಬಾಹಿರ ರೀತಿಯಲ್ಲಿ ಕಸಿದುಕೊಂಡದ್ದನ್ನು ನಾವು ಮರಳಿ ಪಡೆಯಬೇಕಾಗಿದೆ. ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ನಮ್ಮ ಧೈರ್ಯ ಮತ್ತು ದೃಢನಿಶ್ಚಯ ನಮ್ಮನ್ನು ನಮ್ಮ ಗುರಿಯತ್ತ ಕರೆದೊಯ್ಯುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಕಳೆದ 14 ತಿಂಗಳುಗಳಿಂದ ಗೃಹ ಬಂಧನದಲ್ಲಿ ಇದ್ದ ಮುಫ್ತಿ ಅವರ ಬಂಧನದ ಅವಧಿಯನ್ನು ಪದೇ ಪದೇ ವಿಸ್ತರಣೆ ಮಾಡುವುದನ್ನು ಪ್ರಶ್ನಿಸಿ ಅವರ ಮಗಳು ಇಲ್ತಿಜಾ ಸುಪ್ರೀಂಕೋರ್ಟ್‌ನಲ್ಲಿ ಕಾಶ್ಮೀರ ಆಡಳಿತ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹೇಬಿಯಸ್‌ ಕಾರ್ಪಸ್‌ ರಿಟ್‌ ಅರ್ಜಿ ಸಲ್ಲಿಸಿದ್ದರು.

ಭಾರತೀಯ ಸಂವಿಧಾನದ 370 ನೇ ಪರಿಚ್ಛೇದದ ಅಡಿಯಲ್ಲಿ ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂಪೂರ್ಣ ಲಾಕ್‌ಡೌನ್ ವಿಧಿಸಿತ್ತು. ಅಂದಿನಿಂದ ಮೆಹಬೂಬಾ ಮುಫ್ತಿ ಬಂಧನದಲ್ಲಿದ್ದರು.

ಹಲವು ರಾಜಕೀಯ ನಾಯಕರು ಮುಫ್ತಿಯವರ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ.

 

“ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ನಂತರ ಮೆಹಬೂಬಾ ಮುಫ್ತಿ ಸಾಹಿಬಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂಬುದನ್ನು ಕೇಳಲು ನನಗೆ ಸಂತೋಷವಾಗಿದೆ” ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

 

 

ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮುಫ್ತಿ ಬಿಡುಗಡೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದಾರೆ. “ಧನ್ಯವಾದಗಳು ದೇವರೆ.  ಕೊನೆಗೂ 15 ತಿಂಗಳಿಗಿಂತ ಹೆಚ್ಚು ಸಮಯದ ನಂತರ ಮೆಹಬೂಬಾ ಮುಫ್ತಿ ಬಿಡುಗಡೆಯಾಗಿದೆ” ಎಂದು ಅವರು ಹೇಳಿದರು. “ಫಾರೂಕ್ ಸಾಹಿಬ್ ಮತ್ತು ಉಮರ್ ಅಬ್ದುಲ್ಲಾರಂತಹ ವ್ಯಕ್ತಿಗಳ ಈ ಬಂಧನ ನಮ್ಮ ದೇಶದಲ್ಲಿ ವಿಶಿಷ್ಟವಾಗಿದೆ. ಇವರ ಬಂಧನಕ್ಕೆ ಆದೇಶಿಸಿದ ಸರ್ಕಾರಕ್ಕೂ ಈ ಮೂವರು ನಾಯಕರು ಮಾಡಿದ ಅಪರಾಧ ತಿಳಿದಿಲ್ಲ. ಜೈ ಹೋ ಪ್ರಜಾಪ್ರಭುತ್ವ” ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...