Homeಮುಖಪುಟಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ 'ತಲಪತಿ' ವಿಜಯ್?

ಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ ‘ತಲಪತಿ’ ವಿಜಯ್?

- Advertisement -
- Advertisement -

ಪ್ರಸ್ತುತ ತಮಿಳುನಾಡಿನಲ್ಲಿ ಆಡಳಿತದಲ್ಲಿರುವ ಡಿಎಂಕೆ ಸೇರಿದಂತೆ ಹಿಂದೆ ಆಡಳಿತ ನಡೆಸಿದ ಎಐಎಡಿಎಂಕೆ ಪ್ರಾದೇಶಿಕ ಪಕ್ಷಗಳನ್ನು ಸಿನಿಮಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದವರು ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ. ನಟ ಕಮಲ್ ಹಾಸನ್ ಕೂಡ ‘ಮಕ್ಕಳ್‌ ನೀದಿ ಮೈಯಂ’ ಪಕ್ಷ ಸ್ಥಾಪಿಸಿದ್ದಾರೆ. ಇದೀಗ ಆ ಸಾಲಿಗೆ ಮತ್ತೋರ್ವ ತಮಿಳು ನಟ ವಿಜಯ್ ಸೇರಿಕೊಂಡಿದ್ದು, ತಮಿಳುನಾಡಿನಲ್ಲಿ ತಮ್ಮದೇ ರಾಜಕೀಯ ಪಕ್ಷ ಆರಂಭಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಎನ್‌ಡಿಟಿವಿ ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

‘ವಿಜಯ್ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾವು ಭಾರತೀಯ ಚುನಾವಣಾ ಆಯೋಗದಲ್ಲಿ ಪಕ್ಷವನ್ನು ನೋಂದಾಯಿಸುವ ಪ್ರಕ್ರಿಯೆಯಲ್ಲಿದ್ದೇವೆ’ ಎಂದು ನಟನ ತಂಡದ ಪ್ರಮುಖ ಸದಸ್ಯರು ಹೇಳಿದ್ದಾರೆ.

ನೋಂದಣಿಗೆ ಮುನ್ನ ನಡೆದ ಪಕ್ಷದ ಸಾಮಾನ್ಯ ಮಂಡಳಿಯ ಸಭೆಯಲ್ಲಿ ಸುಮಾರು 200 ಸದಸ್ಯರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿಯನ್ನೂ ನೇಮಿಸಲಾಗಿದೆ. ಕೇಂದ್ರ ಕಾರ್ಯಕಾರಿ ಸಮಿತಿಯನ್ನು ಸಹ ರಚಿಸಲಾಗಿದೆ. ಪಕ್ಷದ ಹೆಸರು ಮತ್ತು ನೋಂದಣಿಯನ್ನು ನಿರ್ಧರಿಸಲು ಮತ್ತು ಚುನಾವಣಾ ರಾಜಕೀಯಕ್ಕೆ ಧುಮುಕಲು ವಿಜಯ್ ಅವರಿಗೆ ಪರಿಷತ್ತು ಅಧಿಕಾರ ನೀಡಿದೆ ಎನ್ನಲಾಗಿದೆ.

ವಿಜಯ್ ಯಾವಾಗ ರಾಜಕೀಯಕ್ಕೆ ಧುಮುಕುತ್ತಾರೆ ಎಂಬುದರ ಕುರಿತು ನಿಖರವಾಗಿ ತಿಳಿದಿಲ್ಲವಾದರೂ, ತಮಿಳುನಾಡಿನಲ್ಲಿ 2026ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಅವರು ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ರಾಜಕೀಯ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಪಕ್ಷವೂ ಖಂಡಿತವಾಗಿಯೂ ‘ಕಳಗಂ’ ಅನ್ನು ಹೊಂದಿರುತ್ತದೆ ಎಂದು ವಿಜಯ್ ಆಪ್ತರು ಹೇಳಿದ್ದಾರೆ.

ತಮಿಳು ಚಿತ್ರರಂಗದ ಮುಂದಿನ ರಜನಿಕಾಂತ್ ಎಂದು ಹೇಳುವ ವಿಜಯ್ ಅವರು ಈವರೆಗೆ 68 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕಳೆದ ಒಂದು ದಶಕದಿಂದ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೋಷಿಸುತ್ತಿದ್ದಾರೆ ಎನ್ನಲಾಗಿದೆ. ಉಚಿತ ಆಹಾರ ಕಿಟ್ ವಿತರಣೆ, ಶೈಕ್ಷಣಿಕ ವಿದ್ಯಾರ್ಥಿವೇತನಗಳು, ಗ್ರಂಥಾಲಯಗಳು, ಸಂಜೆಯ ಟ್ಯೂಷನ್ ಮತ್ತು ಕಾನೂನು ಸಹಾಯ ಸೇರಿದಂತೆ ಹಲವಾರು ಚಾರಿಟಿ, ಕಲ್ಯಾಣ ಕ್ರಮಗಳಲ್ಲಿ ಅವರು ತಮ್ಮ ಅಭಿಮಾನಿ ಸಂಘಗಳನ್ನು ತೊಡಗಿಸಿದ್ದಾರೆ.

ಇತ್ತೀಚೆಗೆ ಅವರು ಪಬ್ಲಿಕ್ ಪರೀಕ್ಷೆಗಳಲ್ಲಿ ಟಾಪರ್ ಆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಕ್ಷೇತ್ರವಾರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆಗ ಅವರು ವಿದ್ಯಾರ್ಥಿಗಳಿಗೆ “ಅಂಬೇಡ್ಕರ್, ಪೆರಿಯಾರ್, ಕಾಮರಾಜ್ ಅವರಂತಹ ನಾಯಕರ ಬಗ್ಗೆ ಓದಿ, ಒಳ್ಳೆಯದನ್ನು ತೆಗೆದುಕೊಳ್ಳಿ ಮತ್ತು ಉಳಿದದ್ದನ್ನು ಬಿಡಿ” ಎಂದು ಸಲಹೆ ನೀಡಿದ್ದರು.

ವಿಜಯ್ ಅವರ ತಂದೆ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಚಂದ್ರಶೇಖರ್. ವಿಜಯ್ ಅವರ ಚಲನಚಿತ್ರಗಳು ಸಾಮಾನ್ಯವಾಗಿ ಸೂಕ್ಷ್ಮ ಮತ್ತು ಪ್ರಮುಖ ಸಾರ್ವಜನಿಕ ಹಿತಾಸಕ್ತಿ ವಿಷಯಗಳನ್ನು ಒಳಗೊಂಡಿರುತ್ತವೆ. ಅವರು ರಾಜ್ಯದಲ್ಲಿ ಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...