Homeಮುಖಪುಟಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ 'ತಲಪತಿ' ವಿಜಯ್?

ಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ ‘ತಲಪತಿ’ ವಿಜಯ್?

- Advertisement -
- Advertisement -

ಪ್ರಸ್ತುತ ತಮಿಳುನಾಡಿನಲ್ಲಿ ಆಡಳಿತದಲ್ಲಿರುವ ಡಿಎಂಕೆ ಸೇರಿದಂತೆ ಹಿಂದೆ ಆಡಳಿತ ನಡೆಸಿದ ಎಐಎಡಿಎಂಕೆ ಪ್ರಾದೇಶಿಕ ಪಕ್ಷಗಳನ್ನು ಸಿನಿಮಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದವರು ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ. ನಟ ಕಮಲ್ ಹಾಸನ್ ಕೂಡ ‘ಮಕ್ಕಳ್‌ ನೀದಿ ಮೈಯಂ’ ಪಕ್ಷ ಸ್ಥಾಪಿಸಿದ್ದಾರೆ. ಇದೀಗ ಆ ಸಾಲಿಗೆ ಮತ್ತೋರ್ವ ತಮಿಳು ನಟ ವಿಜಯ್ ಸೇರಿಕೊಂಡಿದ್ದು, ತಮಿಳುನಾಡಿನಲ್ಲಿ ತಮ್ಮದೇ ರಾಜಕೀಯ ಪಕ್ಷ ಆರಂಭಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಎನ್‌ಡಿಟಿವಿ ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

‘ವಿಜಯ್ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾವು ಭಾರತೀಯ ಚುನಾವಣಾ ಆಯೋಗದಲ್ಲಿ ಪಕ್ಷವನ್ನು ನೋಂದಾಯಿಸುವ ಪ್ರಕ್ರಿಯೆಯಲ್ಲಿದ್ದೇವೆ’ ಎಂದು ನಟನ ತಂಡದ ಪ್ರಮುಖ ಸದಸ್ಯರು ಹೇಳಿದ್ದಾರೆ.

ನೋಂದಣಿಗೆ ಮುನ್ನ ನಡೆದ ಪಕ್ಷದ ಸಾಮಾನ್ಯ ಮಂಡಳಿಯ ಸಭೆಯಲ್ಲಿ ಸುಮಾರು 200 ಸದಸ್ಯರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿಯನ್ನೂ ನೇಮಿಸಲಾಗಿದೆ. ಕೇಂದ್ರ ಕಾರ್ಯಕಾರಿ ಸಮಿತಿಯನ್ನು ಸಹ ರಚಿಸಲಾಗಿದೆ. ಪಕ್ಷದ ಹೆಸರು ಮತ್ತು ನೋಂದಣಿಯನ್ನು ನಿರ್ಧರಿಸಲು ಮತ್ತು ಚುನಾವಣಾ ರಾಜಕೀಯಕ್ಕೆ ಧುಮುಕಲು ವಿಜಯ್ ಅವರಿಗೆ ಪರಿಷತ್ತು ಅಧಿಕಾರ ನೀಡಿದೆ ಎನ್ನಲಾಗಿದೆ.

ವಿಜಯ್ ಯಾವಾಗ ರಾಜಕೀಯಕ್ಕೆ ಧುಮುಕುತ್ತಾರೆ ಎಂಬುದರ ಕುರಿತು ನಿಖರವಾಗಿ ತಿಳಿದಿಲ್ಲವಾದರೂ, ತಮಿಳುನಾಡಿನಲ್ಲಿ 2026ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಅವರು ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ರಾಜಕೀಯ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಪಕ್ಷವೂ ಖಂಡಿತವಾಗಿಯೂ ‘ಕಳಗಂ’ ಅನ್ನು ಹೊಂದಿರುತ್ತದೆ ಎಂದು ವಿಜಯ್ ಆಪ್ತರು ಹೇಳಿದ್ದಾರೆ.

ತಮಿಳು ಚಿತ್ರರಂಗದ ಮುಂದಿನ ರಜನಿಕಾಂತ್ ಎಂದು ಹೇಳುವ ವಿಜಯ್ ಅವರು ಈವರೆಗೆ 68 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕಳೆದ ಒಂದು ದಶಕದಿಂದ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೋಷಿಸುತ್ತಿದ್ದಾರೆ ಎನ್ನಲಾಗಿದೆ. ಉಚಿತ ಆಹಾರ ಕಿಟ್ ವಿತರಣೆ, ಶೈಕ್ಷಣಿಕ ವಿದ್ಯಾರ್ಥಿವೇತನಗಳು, ಗ್ರಂಥಾಲಯಗಳು, ಸಂಜೆಯ ಟ್ಯೂಷನ್ ಮತ್ತು ಕಾನೂನು ಸಹಾಯ ಸೇರಿದಂತೆ ಹಲವಾರು ಚಾರಿಟಿ, ಕಲ್ಯಾಣ ಕ್ರಮಗಳಲ್ಲಿ ಅವರು ತಮ್ಮ ಅಭಿಮಾನಿ ಸಂಘಗಳನ್ನು ತೊಡಗಿಸಿದ್ದಾರೆ.

ಇತ್ತೀಚೆಗೆ ಅವರು ಪಬ್ಲಿಕ್ ಪರೀಕ್ಷೆಗಳಲ್ಲಿ ಟಾಪರ್ ಆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಕ್ಷೇತ್ರವಾರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆಗ ಅವರು ವಿದ್ಯಾರ್ಥಿಗಳಿಗೆ “ಅಂಬೇಡ್ಕರ್, ಪೆರಿಯಾರ್, ಕಾಮರಾಜ್ ಅವರಂತಹ ನಾಯಕರ ಬಗ್ಗೆ ಓದಿ, ಒಳ್ಳೆಯದನ್ನು ತೆಗೆದುಕೊಳ್ಳಿ ಮತ್ತು ಉಳಿದದ್ದನ್ನು ಬಿಡಿ” ಎಂದು ಸಲಹೆ ನೀಡಿದ್ದರು.

ವಿಜಯ್ ಅವರ ತಂದೆ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಚಂದ್ರಶೇಖರ್. ವಿಜಯ್ ಅವರ ಚಲನಚಿತ್ರಗಳು ಸಾಮಾನ್ಯವಾಗಿ ಸೂಕ್ಷ್ಮ ಮತ್ತು ಪ್ರಮುಖ ಸಾರ್ವಜನಿಕ ಹಿತಾಸಕ್ತಿ ವಿಷಯಗಳನ್ನು ಒಳಗೊಂಡಿರುತ್ತವೆ. ಅವರು ರಾಜ್ಯದಲ್ಲಿ ಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...