Homeಮುಖಪುಟಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ 'ತಲಪತಿ' ವಿಜಯ್?

ಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ ‘ತಲಪತಿ’ ವಿಜಯ್?

- Advertisement -
- Advertisement -

ಪ್ರಸ್ತುತ ತಮಿಳುನಾಡಿನಲ್ಲಿ ಆಡಳಿತದಲ್ಲಿರುವ ಡಿಎಂಕೆ ಸೇರಿದಂತೆ ಹಿಂದೆ ಆಡಳಿತ ನಡೆಸಿದ ಎಐಎಡಿಎಂಕೆ ಪ್ರಾದೇಶಿಕ ಪಕ್ಷಗಳನ್ನು ಸಿನಿಮಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದವರು ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ. ನಟ ಕಮಲ್ ಹಾಸನ್ ಕೂಡ ‘ಮಕ್ಕಳ್‌ ನೀದಿ ಮೈಯಂ’ ಪಕ್ಷ ಸ್ಥಾಪಿಸಿದ್ದಾರೆ. ಇದೀಗ ಆ ಸಾಲಿಗೆ ಮತ್ತೋರ್ವ ತಮಿಳು ನಟ ವಿಜಯ್ ಸೇರಿಕೊಂಡಿದ್ದು, ತಮಿಳುನಾಡಿನಲ್ಲಿ ತಮ್ಮದೇ ರಾಜಕೀಯ ಪಕ್ಷ ಆರಂಭಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಎನ್‌ಡಿಟಿವಿ ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

‘ವಿಜಯ್ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾವು ಭಾರತೀಯ ಚುನಾವಣಾ ಆಯೋಗದಲ್ಲಿ ಪಕ್ಷವನ್ನು ನೋಂದಾಯಿಸುವ ಪ್ರಕ್ರಿಯೆಯಲ್ಲಿದ್ದೇವೆ’ ಎಂದು ನಟನ ತಂಡದ ಪ್ರಮುಖ ಸದಸ್ಯರು ಹೇಳಿದ್ದಾರೆ.

ನೋಂದಣಿಗೆ ಮುನ್ನ ನಡೆದ ಪಕ್ಷದ ಸಾಮಾನ್ಯ ಮಂಡಳಿಯ ಸಭೆಯಲ್ಲಿ ಸುಮಾರು 200 ಸದಸ್ಯರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿಯನ್ನೂ ನೇಮಿಸಲಾಗಿದೆ. ಕೇಂದ್ರ ಕಾರ್ಯಕಾರಿ ಸಮಿತಿಯನ್ನು ಸಹ ರಚಿಸಲಾಗಿದೆ. ಪಕ್ಷದ ಹೆಸರು ಮತ್ತು ನೋಂದಣಿಯನ್ನು ನಿರ್ಧರಿಸಲು ಮತ್ತು ಚುನಾವಣಾ ರಾಜಕೀಯಕ್ಕೆ ಧುಮುಕಲು ವಿಜಯ್ ಅವರಿಗೆ ಪರಿಷತ್ತು ಅಧಿಕಾರ ನೀಡಿದೆ ಎನ್ನಲಾಗಿದೆ.

ವಿಜಯ್ ಯಾವಾಗ ರಾಜಕೀಯಕ್ಕೆ ಧುಮುಕುತ್ತಾರೆ ಎಂಬುದರ ಕುರಿತು ನಿಖರವಾಗಿ ತಿಳಿದಿಲ್ಲವಾದರೂ, ತಮಿಳುನಾಡಿನಲ್ಲಿ 2026ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಅವರು ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ರಾಜಕೀಯ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಪಕ್ಷವೂ ಖಂಡಿತವಾಗಿಯೂ ‘ಕಳಗಂ’ ಅನ್ನು ಹೊಂದಿರುತ್ತದೆ ಎಂದು ವಿಜಯ್ ಆಪ್ತರು ಹೇಳಿದ್ದಾರೆ.

ತಮಿಳು ಚಿತ್ರರಂಗದ ಮುಂದಿನ ರಜನಿಕಾಂತ್ ಎಂದು ಹೇಳುವ ವಿಜಯ್ ಅವರು ಈವರೆಗೆ 68 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕಳೆದ ಒಂದು ದಶಕದಿಂದ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೋಷಿಸುತ್ತಿದ್ದಾರೆ ಎನ್ನಲಾಗಿದೆ. ಉಚಿತ ಆಹಾರ ಕಿಟ್ ವಿತರಣೆ, ಶೈಕ್ಷಣಿಕ ವಿದ್ಯಾರ್ಥಿವೇತನಗಳು, ಗ್ರಂಥಾಲಯಗಳು, ಸಂಜೆಯ ಟ್ಯೂಷನ್ ಮತ್ತು ಕಾನೂನು ಸಹಾಯ ಸೇರಿದಂತೆ ಹಲವಾರು ಚಾರಿಟಿ, ಕಲ್ಯಾಣ ಕ್ರಮಗಳಲ್ಲಿ ಅವರು ತಮ್ಮ ಅಭಿಮಾನಿ ಸಂಘಗಳನ್ನು ತೊಡಗಿಸಿದ್ದಾರೆ.

ಇತ್ತೀಚೆಗೆ ಅವರು ಪಬ್ಲಿಕ್ ಪರೀಕ್ಷೆಗಳಲ್ಲಿ ಟಾಪರ್ ಆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಕ್ಷೇತ್ರವಾರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆಗ ಅವರು ವಿದ್ಯಾರ್ಥಿಗಳಿಗೆ “ಅಂಬೇಡ್ಕರ್, ಪೆರಿಯಾರ್, ಕಾಮರಾಜ್ ಅವರಂತಹ ನಾಯಕರ ಬಗ್ಗೆ ಓದಿ, ಒಳ್ಳೆಯದನ್ನು ತೆಗೆದುಕೊಳ್ಳಿ ಮತ್ತು ಉಳಿದದ್ದನ್ನು ಬಿಡಿ” ಎಂದು ಸಲಹೆ ನೀಡಿದ್ದರು.

ವಿಜಯ್ ಅವರ ತಂದೆ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಚಂದ್ರಶೇಖರ್. ವಿಜಯ್ ಅವರ ಚಲನಚಿತ್ರಗಳು ಸಾಮಾನ್ಯವಾಗಿ ಸೂಕ್ಷ್ಮ ಮತ್ತು ಪ್ರಮುಖ ಸಾರ್ವಜನಿಕ ಹಿತಾಸಕ್ತಿ ವಿಷಯಗಳನ್ನು ಒಳಗೊಂಡಿರುತ್ತವೆ. ಅವರು ರಾಜ್ಯದಲ್ಲಿ ಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...